<?xml version="1.0" encoding="UTF-8"?>
<rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:media="http://search.yahoo.com/mrss/"
	>

<channel>
	<title>ನೆಲದ ಮಾತು</title>
	<atom:link href="http://neladamaatu.wordpress.com/feed/" rel="self" type="application/rss+xml" />
	<link>http://neladamaatu.wordpress.com</link>
	<description>ಹೊತ್ತವಳ ನಿಟ್ಟುಸಿರು...</description>
	<pubDate>Fri, 23 May 2008 11:51:59 +0000</pubDate>
	<generator>http://wordpress.org/?v=MU</generator>
	<language>kn</language>
			<item>
		<title>ಕ್ರಿಸ್ತ ಮತ್ತು ಭಾರತ- ಎರಡು ಅನುಮಾನಗಳು</title>
		<link>http://neladamaatu.wordpress.com/2008/05/23/%e0%b2%95%e0%b3%8d%e0%b2%b0%e0%b2%bf%e0%b2%b8%e0%b3%8d%e0%b2%a4-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%ad%e0%b2%be%e0%b2%b0%e0%b2%a4-%e0%b2%8e%e0%b2%b0%e0%b2%a1%e0%b3%81-%e0%b2%85/</link>
		<comments>http://neladamaatu.wordpress.com/2008/05/23/%e0%b2%95%e0%b3%8d%e0%b2%b0%e0%b2%bf%e0%b2%b8%e0%b3%8d%e0%b2%a4-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%ad%e0%b2%be%e0%b2%b0%e0%b2%a4-%e0%b2%8e%e0%b2%b0%e0%b2%a1%e0%b3%81-%e0%b2%85/#comments</comments>
		<pubDate>Fri, 23 May 2008 11:50:00 +0000</pubDate>
		<dc:creator>Chakravarty</dc:creator>
		
		<category><![CDATA[ನಮ್ಮ ನಮ್ಮ ನಡುವೆ]]></category>

		<guid isPermaLink="false">http://neladamaatu.wordpress.com/?p=36</guid>
		<description><![CDATA[ಟೀನಾ ಮತ್ತು ನೀಲಾಂಜನರು ‘ಕ್ರಿಸ್ತ ಮತ್ತು ಭಾರತ’ ಲೇಖನಕ್ಕೆ ಪ್ರತಿಕ್ರಿಯಿಸಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದಾರೆ.
ಪತ್ರಿಕೆಯಲ್ಲಿ ನಾನು ಬರೆದಿರೋದು ಏಸುಕ್ರಿಸ್ತನ ಬಗ್ಗೆ ನಡೆದ ಸಂಶೋಧನೆಯ ಕೇವಲ ಒಂದು ಭಾಗವಷ್ಟೇ. ಇದು ಪತ್ರಿಕೆಯ ಓದುಗರಿಂದಲೂ ಸಾಕಷ್ಟು ಉದ್ಗಾರ ಹೊರಡಿಸಿದೆ. ಆದರೆ ಇನ್ನೂ ಹೇಳಬೇಕಿರುವ ವಿಷಯಗಳು ಮತ್ತೆಷ್ಟು ಸಂಚಲನ ಉಂಟುಮಾಡಬಹುದೆಂದು ಯೋಚಿಸುತ್ತಿದ್ದೇನೆ.
ಇರಲಿ. ಗೆಳತಿ ಟೀನಾ ಹೇಳಿದ ಮೃತ ‘ಸಮುದ್ರದ ದಾಸ್ತಾವೆಜುಗಳು’ ಒಂದು ಕಾಲದಲ್ಲಿ ಜಗತ್ತನ್ನು ಅಲ್ಲಾಡಿಸಿದಂಥವು. ಅವುಗಳನ್ನಷ್ಟೆ ಆಧಾರವಾಗಿಟ್ಟುಕೊಂಡು ಅಧ್ಯಯನಕ್ಕೆ ಕುಳಿತರೆ ಏಸು ಎಂಬ ವ್ಯಕ್ತಿ ಅವತಾರವೆತ್ತಿದ್ದೇ ಸುಳ್ಳು ಎಂದಾಗುತ್ತದೆ. ಈ [...]]]></description>
			<content:encoded><![CDATA[<div class='snap_preview'><br /><h4>ಟೀನಾ ಮತ್ತು ನೀಲಾಂಜನರು ‘ಕ್ರಿಸ್ತ ಮತ್ತು ಭಾರತ’ ಲೇಖನಕ್ಕೆ ಪ್ರತಿಕ್ರಿಯಿಸಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದಾರೆ.<br />
ಪತ್ರಿಕೆಯಲ್ಲಿ ನಾನು ಬರೆದಿರೋದು ಏಸುಕ್ರಿಸ್ತನ ಬಗ್ಗೆ ನಡೆದ ಸಂಶೋಧನೆಯ ಕೇವಲ ಒಂದು ಭಾಗವಷ್ಟೇ. ಇದು ಪತ್ರಿಕೆಯ ಓದುಗರಿಂದಲೂ ಸಾಕಷ್ಟು ಉದ್ಗಾರ ಹೊರಡಿಸಿದೆ. ಆದರೆ ಇನ್ನೂ ಹೇಳಬೇಕಿರುವ ವಿಷಯಗಳು ಮತ್ತೆಷ್ಟು ಸಂಚಲನ ಉಂಟುಮಾಡಬಹುದೆಂದು ಯೋಚಿಸುತ್ತಿದ್ದೇನೆ.</h4>
<h4>ಇರಲಿ. ಗೆಳತಿ ಟೀನಾ ಹೇಳಿದ ಮೃತ ‘ಸಮುದ್ರದ ದಾಸ್ತಾವೆಜುಗಳು’ ಒಂದು ಕಾಲದಲ್ಲಿ ಜಗತ್ತನ್ನು ಅಲ್ಲಾಡಿಸಿದಂಥವು. ಅವುಗಳನ್ನಷ್ಟೆ ಆಧಾರವಾಗಿಟ್ಟುಕೊಂಡು ಅಧ್ಯಯನಕ್ಕೆ ಕುಳಿತರೆ ಏಸು ಎಂಬ ವ್ಯಕ್ತಿ ಅವತಾರವೆತ್ತಿದ್ದೇ ಸುಳ್ಳು ಎಂದಾಗುತ್ತದೆ. ಈ ಉತ್ಖನನದ ವರದಿ ಬರುವ ಮುನ್ನವೇ ವಿವೇಕಾನಂದರು ಈ ವಿಚಾರವಾಗಿ ಹೇಳಿರುವುದನ್ನು ಹೇಳುತ್ತೇನೆ.<br />
ಯುರೋಪಿನಿಂದ ಭಾರತದೆಡೆಗೆ ಸ್ವಾಮೀಜಿ ಹೊರಟಾಗ ಒಂದೆಡೆ ಹಡಗಿನಲ್ಲಿ ಅವರಿಗೆ ಕನಸಾಯ್ತಂತೆ. ಅದರಲ್ಲಿ ಒಂದಷ್ಟು ಮಂದಿ ಥೇರಾಪುತ್ತರು (ಥೆರಾಪುಟ್ಸ್) “ಎದುರಿಗೆ ಕಾಣುವ ಕ್ರೀಟ್ ದ್ವೀಪದಲ್ಲಿದ್ದವರು ನಾವು. ಇಲ್ಲಿನ ವಿಚಾರಗಳನ್ನು ಸ್ವೀಕರಿಸಿ ಕ್ರೈಸ್ತಮತ ಬೆಳೆಯಿತು. ಇಂದಿನವರು ಹೇಳುತ್ತಿರುವ ‘ಏಸು’ ಎಂಬ ವ್ಯಕ್ತಿ ಇರಲೇ ಇಲ್ಲ&#8221; ಎಂದರಂತೆ. ತಕ್ಷಣ ಗಾಬರಿಗೊಂಡ ಸ್ವಾಮೀಜಿ ಹತ್ತಿರದ ದ್ವೀಪಗಳ ಬಗ್ಗೆ ಪ್ರಶ್ನಿಸಿದಾಗ, ಆ ಅಧಿಕಾರಿ ಬೆರಳು ತೋರಿಸುತ್ತ “ಅದು ಕ್ರೀಟ್ ದ್ವೀಪ&#8221; ಎಂದರಂತೆ!<br />
(ಸ್ವಾಮಿ ಸೋಮನಾಥಾನಂದರು ಬರೆದಿರುವ ವಿವೇಕಾನಂದರ ಆತ್ಮ ಚರಿತ್ರೆ)<br />
ಮುಂದೆ ಅದೇಭಾಗದಲ್ಲಿ ನಡೆದ ಉತ್ಖನನಗಳು ವಿವೇಕಾನಂದರ ಕನಸನ್ನು ಖಾತ್ರಿಗೊಳಿಸಿದವು.</h4>
<h4>ಹಾಗೆ ನೋಡಿದರೆ, ಜಗತ್ತಿನ ಎಲ್ಲ ಮತಗಳಿಗೂ ಮೂಲ ಭಾರತದ ಚಿಂತನೆಗಳೇ ಎಂಬುದರಲ್ಲಿ ಸಂಶಯವೇ ಇಲ್ಲ. ಮತ್ಸ್ಯ ಪುರಾಣದಲ್ಲಿ ಮೀನಾಗಿ ಅವತಾರವೆತ್ತಿ ಮನುಕುಲವನ್ನು ಉಳಿಸಿದ ಮಹಾವಿಷ್ಣು, ‘ನೋವಾ’ ಆಗಿ ಪಾಶ್ಚಾತ್ಯ ಕೃತಿಗಳಲ್ಲಿ ಕಂಡುಬರುತ್ತಾನೆ. ಕ್ರಿಶ್ಚಿಯನ್ನರ ಹಳೆಯ ಒಡಂಬಡಿಕೆಗಳ ಮೂಲ ಎಂದು ಹೇಳಲಾಗುವ ‘ಜೆಂಡ್ ಅವೆಸ್ತಾ’ದಲ್ಲಿ ‘ರಾಮ್ ಯಶ್ತ್’ ಎಂಬ ಒಂದು ಅಧ್ಯಾಯವಿದೆ. ಅದು ರಾಮನ ಕಥೆ. ಅಲ್ಲಿ ಸಾಕಷ್ಟು ಪ್ಯಾರಗಳಲ್ಲಿ ನಮ್ಮ ‘ಹನುಮಾನ್ ಚಾಲೀಸಾ’ದ ನೇರ ಅನುವಾದ ಅನ್ನಿಸುವ ವಿವರಗಳಿವೆ. ಯಜ್ಞಗಳ ಮೂಲಕ ಅಗ್ನಿಯನ್ನು ಪೂಜಿಸುವ ನಮ್ಮ ಚಿಂತನೆ ಯಾವ ಮತದಲ್ಲಿಲ್ಲ ಹೇಳಿ!?</h4>
<h4>ಏಸು ನಮ್ಮ ಪಾಲಿಗೆ ಒಬ್ಬ ಶ್ರೇಷ್ಟ ಸಂತ. ಶಿರಡಿಯ ಸಾಯಿ ಬಾಬಾ ಇಂಥಹದೇ ಶ್ರೇಷ್ಟ ಸಂತರಲ್ಲವೇ? ಅನಾರೋಗ್ಯ ಪೀಡಿತರನ್ನು ಗುಣಪಡಿಸಿದ, ನೀರಿಂದಲೇ ಬೆಂಕಿ ಹೊತ್ತಿಸಿದ ಅವರ ಪವಾಡಗಳು ಗೊತ್ತಿಲ್ಲವೇ? ದೇಹತ್ಯಾಗ ಮಾಡಿ ಮೂರುದಿನಗಳ ನಂತರ ಅವರು ಮತ್ತೆ ಮರಳಿದ್ದು, ಅದನ್ನು ಬ್ರಿಟಿಶ್ ಅಧಿಕಾರಿಯೊಬ್ಬ ಸಾಕ್ಷಿಯಾಗಿ ನಿಂತು ನೋಡಿದ್ದು ಜನಜನಿತ.<br />
ಬಾಬಾ ಎಲ್ಲರಿಗೂ ಸತ್ಸಂಗ ದೊರಕಿಸಿಕೊಡಲು ಯತ್ನಿಸಿದರು. ಸದ್ವಿಚಾರಗಳನ್ನು, ಶಾಂತಿ- ಅಹಿಂಸೆಗಳನ್ನು ಬೋಧಿಸಿದರು.<br />
ಕ್ರಿಸ್ತನೂ ಹಾಗೆಯೇ ಅಲ್ಲವೇ?<br />
ಕಾಶ್ಮೀರದಲ್ಲಿ ಮಾರ್ತಾಂಡ ಮಂದಿರ ಎಂಬುದೊಂದಿದೆ. ಅಲ್ಲಿನ ಅವಶೇಷಗಳು ಕ್ರೈಸ್ತ ಧರ್ಮದ ಮೆಲೆ ಇಲ್ಲಿನ ತತ್ತ್ವಗಳ ಪ್ರಭಾವವನ್ನು ಸಾರಿಸಾರಿ ಹೇಳುತ್ತವೆ.</h4>
<h4>ಇನ್ನು, ಭವಿಷ್ಯ ಪುರಾಣದ ಬಗ್ಗೆ ಎತ್ತಿರುವ ಪ್ರಶ್ನೆಯೂ ಸಮಂಜಸವಾಗಿದೆ. ನನಗೂ ಮೊದಲು ಈ ಅನುಮಾನವಿತ್ತು. ಅದು ಮುಂದೆಂದೋ ಆಗಲಿದೆ ಎನ್ನುವುದನ್ನು ಹೇಳುವ ಕೃತಿಯಲ್ಲದೆ, ಆಗಿದ್ದನ್ನು ಹೇಳುವ ಕೃತಿಯೆಂದೇ ಇಟ್ಟುಕೊಳ್ಳಿ; ಆಗಲೂ ಏಸು ಭಾರತಕ್ಕೆ ಬಂದಿದ್ದುದು ಸತ್ಯ ಎಂದೇ ಸ್ಥಾಪಿತವಾಗುತ್ತದೆಯಲ್ಲವೆ?</h4>
<h4>ಸದ್ಯಕ್ಕೆ ನಾನು ಈ ನಿಟ್ಟಿನ ಅಧ್ಯಯನದಲ್ಲಿ ನಿರತನಾಗಿದ್ದೇನೆ. ಇನ್ನೆರಡು ತಿಂಗಳು ಅವಕಾಶ ಕೊಡಿ, ಸಮಗ್ರ ವಿವರಣೆಗಳೊಂದಿಗೆ ಒಂದು ಪುಸ್ತಕ ನಿಮ್ಮ ಕೈಲಿಡುತ್ತೇನೆ.</h4>
<h4>ವಂದೇ,<br />
ಚಕ್ರವರ್ತಿ, ಸೂಲಿಬೆಲೆ</h4>
<img alt="" border="0" src="http://feeds.wordpress.com/1.0/categories/neladamaatu.wordpress.com/36/" /> <img alt="" border="0" src="http://feeds.wordpress.com/1.0/tags/neladamaatu.wordpress.com/36/" /> <a rel="nofollow" href="http://feeds.wordpress.com/1.0/gocomments/neladamaatu.wordpress.com/36/"><img alt="" border="0" src="http://feeds.wordpress.com/1.0/comments/neladamaatu.wordpress.com/36/" /></a> <a rel="nofollow" href="http://feeds.wordpress.com/1.0/godelicious/neladamaatu.wordpress.com/36/"><img alt="" border="0" src="http://feeds.wordpress.com/1.0/delicious/neladamaatu.wordpress.com/36/" /></a> <a rel="nofollow" href="http://feeds.wordpress.com/1.0/gostumble/neladamaatu.wordpress.com/36/"><img alt="" border="0" src="http://feeds.wordpress.com/1.0/stumble/neladamaatu.wordpress.com/36/" /></a> <a rel="nofollow" href="http://feeds.wordpress.com/1.0/godigg/neladamaatu.wordpress.com/36/"><img alt="" border="0" src="http://feeds.wordpress.com/1.0/digg/neladamaatu.wordpress.com/36/" /></a> <a rel="nofollow" href="http://feeds.wordpress.com/1.0/goreddit/neladamaatu.wordpress.com/36/"><img alt="" border="0" src="http://feeds.wordpress.com/1.0/reddit/neladamaatu.wordpress.com/36/" /></a> <img alt="" border="0" src="http://stats.wordpress.com/b.gif?host=neladamaatu.wordpress.com&blog=2082898&post=36&subd=neladamaatu&ref=&feed=1" /></div>]]></content:encoded>
			<wfw:commentRss>http://neladamaatu.wordpress.com/2008/05/23/%e0%b2%95%e0%b3%8d%e0%b2%b0%e0%b2%bf%e0%b2%b8%e0%b3%8d%e0%b2%a4-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%ad%e0%b2%be%e0%b2%b0%e0%b2%a4-%e0%b2%8e%e0%b2%b0%e0%b2%a1%e0%b3%81-%e0%b2%85/feed/</wfw:commentRss>
	
		<media:content url="http://a.wordpress.com/avatar/bhoomitaayi-128.jpg" medium="image">
			<media:title type="html">Chakravarty</media:title>
		</media:content>
	</item>
		<item>
		<title>ಏಸು ಕ್ರಿಸ್ತ ಮತ್ತು ಭಾರತ&#8230;</title>
		<link>http://neladamaatu.wordpress.com/2008/05/16/%e0%b2%8f%e0%b2%b8%e0%b3%81-%e0%b2%95%e0%b3%8d%e0%b2%b0%e0%b2%bf%e0%b2%b8%e0%b3%8d%e0%b2%a4-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%ad%e0%b2%be%e0%b2%b0%e0%b2%a4/</link>
		<comments>http://neladamaatu.wordpress.com/2008/05/16/%e0%b2%8f%e0%b2%b8%e0%b3%81-%e0%b2%95%e0%b3%8d%e0%b2%b0%e0%b2%bf%e0%b2%b8%e0%b3%8d%e0%b2%a4-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%ad%e0%b2%be%e0%b2%b0%e0%b2%a4/#comments</comments>
		<pubDate>Fri, 16 May 2008 08:44:08 +0000</pubDate>
		<dc:creator>Chakravarty</dc:creator>
		
		<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>

		<category><![CDATA[ಏಸುಕ್ರಿಸ್ತ]]></category>

		<category><![CDATA[ಕ್ರೈಸ್ತ ಧರ್ಮ]]></category>

		<category><![CDATA[ಭಾರತ]]></category>

		<guid isPermaLink="false">http://neladamaatu.wordpress.com/?p=35</guid>
		<description><![CDATA[ಶಿಲುಬೆಗೇರಿಸಲಾಗಿದ್ದ ಏಸುಕ್ರಿಸ್ತರು ಮೃತರಾಗಲಿಲ್ಲ. ತಮ್ಮ ಅನುಯಾಯಿಗಳ ಸಹಾಯದಿಂದ ಬದುಕುಳಿದ ಅವರು ಗ್ರೇಟ್ ಬ್ರಿಟನ್ನಿನ ಕಡೆ ಹೊರಟರು. ಅಲ್ಲಿಂದ ಮೆಡಿಟರೇನಿಯನ್ ಪ್ರಾಂತ್ಯಕ್ಕೆ, ಅಲ್ಲಿಂದ ತಮ್ಮ ಗುರಿಯಾಗಿದ್ದ ಭಾರತಕ್ಕೆ!

ಮುಂದಿನ ಓದಿಗೆ ಇಲ್ಲಿ ಕ್ಲಿಕ್ ಮಾಡಿ
ಅಂದ ಹಾಗೆ, ಡಾವಿಂಚಿ ಕೋಡ್ ನೋಡಿರುವಿರಾ? ಸುಮ್ಮನೆ ಕೇಳಿದೆ.
- ವಂದೇ,
ಚಕ್ರವರ್ತಿ, ಸೂಲಿಬೆಲೆ
       ]]></description>
			<content:encoded><![CDATA[<div class='snap_preview'><br /><p>ಶಿಲುಬೆಗೇರಿಸಲಾಗಿದ್ದ ಏಸುಕ್ರಿಸ್ತರು ಮೃತರಾಗಲಿಲ್ಲ. ತಮ್ಮ ಅನುಯಾಯಿಗಳ ಸಹಾಯದಿಂದ ಬದುಕುಳಿದ ಅವರು ಗ್ರೇಟ್ ಬ್ರಿಟನ್ನಿನ ಕಡೆ ಹೊರಟರು. ಅಲ್ಲಿಂದ ಮೆಡಿಟರೇನಿಯನ್ ಪ್ರಾಂತ್ಯಕ್ಕೆ, ಅಲ್ಲಿಂದ ತಮ್ಮ ಗುರಿಯಾಗಿದ್ದ ಭಾರತಕ್ಕೆ!</p>
<p style="text-align:center;"><img class="aligncenter" style="vertical-align:middle;" src="http://imagecache2.allposters.com/images/pic/CLI/R40~Jesus-Christ-Posters.jpg" alt="" width="272" height="346" /></p>
<h3 style="text-align:center;"><a href="http://www.iskconbangalore.org/bvd/May2008/08-14%20cover%20story.pdf">ಮುಂದಿನ ಓದಿಗೆ ಇಲ್ಲಿ ಕ್ಲಿಕ್ ಮಾಡಿ</a></h3>
<p style="text-align:left;">ಅಂದ ಹಾಗೆ, ಡಾವಿಂಚಿ ಕೋಡ್ ನೋಡಿರುವಿರಾ? ಸುಮ್ಮನೆ ಕೇಳಿದೆ.</p>
<p style="text-align:left;">- ವಂದೇ,</p>
<p style="text-align:left;">ಚಕ್ರವರ್ತಿ, ಸೂಲಿಬೆಲೆ</p>
<img alt="" border="0" src="http://feeds.wordpress.com/1.0/categories/neladamaatu.wordpress.com/35/" /> <img alt="" border="0" src="http://feeds.wordpress.com/1.0/tags/neladamaatu.wordpress.com/35/" /> <a rel="nofollow" href="http://feeds.wordpress.com/1.0/gocomments/neladamaatu.wordpress.com/35/"><img alt="" border="0" src="http://feeds.wordpress.com/1.0/comments/neladamaatu.wordpress.com/35/" /></a> <a rel="nofollow" href="http://feeds.wordpress.com/1.0/godelicious/neladamaatu.wordpress.com/35/"><img alt="" border="0" src="http://feeds.wordpress.com/1.0/delicious/neladamaatu.wordpress.com/35/" /></a> <a rel="nofollow" href="http://feeds.wordpress.com/1.0/gostumble/neladamaatu.wordpress.com/35/"><img alt="" border="0" src="http://feeds.wordpress.com/1.0/stumble/neladamaatu.wordpress.com/35/" /></a> <a rel="nofollow" href="http://feeds.wordpress.com/1.0/godigg/neladamaatu.wordpress.com/35/"><img alt="" border="0" src="http://feeds.wordpress.com/1.0/digg/neladamaatu.wordpress.com/35/" /></a> <a rel="nofollow" href="http://feeds.wordpress.com/1.0/goreddit/neladamaatu.wordpress.com/35/"><img alt="" border="0" src="http://feeds.wordpress.com/1.0/reddit/neladamaatu.wordpress.com/35/" /></a> <img alt="" border="0" src="http://stats.wordpress.com/b.gif?host=neladamaatu.wordpress.com&blog=2082898&post=35&subd=neladamaatu&ref=&feed=1" /></div>]]></content:encoded>
			<wfw:commentRss>http://neladamaatu.wordpress.com/2008/05/16/%e0%b2%8f%e0%b2%b8%e0%b3%81-%e0%b2%95%e0%b3%8d%e0%b2%b0%e0%b2%bf%e0%b2%b8%e0%b3%8d%e0%b2%a4-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%ad%e0%b2%be%e0%b2%b0%e0%b2%a4/feed/</wfw:commentRss>
	
		<media:content url="http://a.wordpress.com/avatar/bhoomitaayi-128.jpg" medium="image">
			<media:title type="html">Chakravarty</media:title>
		</media:content>

		<media:content url="http://imagecache2.allposters.com/images/pic/CLI/R40~Jesus-Christ-Posters.jpg" medium="image" />
	</item>
		<item>
		<title>ಈ ತಿಂಗಳ ಕಾರ್ಯಕ್ರಮ</title>
		<link>http://neladamaatu.wordpress.com/2008/05/13/%e0%b2%88-%e0%b2%a4%e0%b2%bf%e0%b2%82%e0%b2%97%e0%b2%b3-%e0%b2%95%e0%b2%be%e0%b2%b0%e0%b3%8d%e0%b2%af%e0%b2%95%e0%b3%8d%e0%b2%b0%e0%b2%ae/</link>
		<comments>http://neladamaatu.wordpress.com/2008/05/13/%e0%b2%88-%e0%b2%a4%e0%b2%bf%e0%b2%82%e0%b2%97%e0%b2%b3-%e0%b2%95%e0%b2%be%e0%b2%b0%e0%b3%8d%e0%b2%af%e0%b2%95%e0%b3%8d%e0%b2%b0%e0%b2%ae/#comments</comments>
		<pubDate>Tue, 13 May 2008 08:57:24 +0000</pubDate>
		<dc:creator>Chakravarty</dc:creator>
		
		<category><![CDATA[Uncategorized]]></category>

		<guid isPermaLink="false">http://neladamaatu.wordpress.com/?p=34</guid>
		<description><![CDATA[ನಮಸ್ತೇ.
ಚಕ್ರವರ್ತಿ ಅವರ ಬ್ಲಾಗಿಗೆ ಬರುವ ಕಮೆಂಟುಗಳಲ್ಲಿ ಬಹುಪಾಲು ಅವರ ಕಾರ್ಯಕ್ರಮಗಳ ಕುರಿತದ್ದಾಗಿದೆ. ಸಾಕಷ್ಟು ಜನ ಆ ಬಗ್ಗೆ ಪಟ್ಟಿ ನೀಡುವಂತೆ ಕೇಳಿದ್ದಾರೆ. ಇಂದಿನಿಂದ ನಿಯಮಿತವಾಗಿ ಅವರ ಬರಹಗಳನ್ನು ಪೋಸ್ಟ್ ಮಾಡಬೇಕೆಂಬ ಯೋಜನೆಯಿದೆ. ಜೊತೆಗೆ ಅವರ ಕಾರ್ಯಕ್ರಮ ಪಟ್ಟಿಯನ್ನೂ&#8230; ಆದರೆ ನಿಮ್ಮ ತಕರಾರು ತರ್ಕಗಳಿಗೆ ಮಾತ್ರ ಚಕ್ರವರ್ತಿಯೇ ಉತ್ತರ ನೀಡುವರು. ಸಹಕರಿಸಬೇಕಾಗಿ ವಿನಂತಿ.
ಚಕ್ರವರ್ತಿ ಸೂಲಿಬೆಲೆ ಅವರ ಮೇ ತಿಂಗಳ ಕಾರ್ಯಕ್ರಮಗಳು
ದಿನಾಂಕ: 14, ರಾಣಿ ಅಮ್ಮಣ್ಣಿ ಕಾಲೇಜ್. ಸಮಯ: ಮಧ್ಯಾಹ್ನ 4:00 ಗಂಟೆಯಿಂದ.
ದಿನಾಂಕ: 20, ಸುಳ್ಯ. ವಿಷಯ: ಸ್ವಾತಂತ್ರ್ಯ ವೀರ [...]]]></description>
			<content:encoded><![CDATA[<div class='snap_preview'><br /><p>ನಮಸ್ತೇ.</p>
<p>ಚಕ್ರವರ್ತಿ ಅವರ ಬ್ಲಾಗಿಗೆ ಬರುವ ಕಮೆಂಟುಗಳಲ್ಲಿ ಬಹುಪಾಲು ಅವರ ಕಾರ್ಯಕ್ರಮಗಳ ಕುರಿತದ್ದಾಗಿದೆ. ಸಾಕಷ್ಟು ಜನ ಆ ಬಗ್ಗೆ ಪಟ್ಟಿ ನೀಡುವಂತೆ ಕೇಳಿದ್ದಾರೆ. ಇಂದಿನಿಂದ ನಿಯಮಿತವಾಗಿ ಅವರ ಬರಹಗಳನ್ನು ಪೋಸ್ಟ್ ಮಾಡಬೇಕೆಂಬ ಯೋಜನೆಯಿದೆ. ಜೊತೆಗೆ ಅವರ ಕಾರ್ಯಕ್ರಮ ಪಟ್ಟಿಯನ್ನೂ&#8230; ಆದರೆ ನಿಮ್ಮ ತಕರಾರು ತರ್ಕಗಳಿಗೆ ಮಾತ್ರ ಚಕ್ರವರ್ತಿಯೇ ಉತ್ತರ ನೀಡುವರು. ಸಹಕರಿಸಬೇಕಾಗಿ ವಿನಂತಿ.</p>
<p style="text-align:center;"><strong><span style="color:#993300;">ಚಕ್ರವರ್ತಿ ಸೂಲಿಬೆಲೆ ಅವರ ಮೇ ತಿಂಗಳ ಕಾರ್ಯಕ್ರಮಗಳು</span></strong></p>
<p>ದಿನಾಂಕ: 14, ರಾಣಿ ಅಮ್ಮಣ್ಣಿ ಕಾಲೇಜ್. ಸಮಯ: ಮಧ್ಯಾಹ್ನ 4:00 ಗಂಟೆಯಿಂದ.</p>
<p>ದಿನಾಂಕ: 20, ಸುಳ್ಯ. ವಿಷಯ: ಸ್ವಾತಂತ್ರ್ಯ ವೀರ ಸಾವರ್ಕರ್.</p>
<img alt="" border="0" src="http://feeds.wordpress.com/1.0/categories/neladamaatu.wordpress.com/34/" /> <img alt="" border="0" src="http://feeds.wordpress.com/1.0/tags/neladamaatu.wordpress.com/34/" /> <a rel="nofollow" href="http://feeds.wordpress.com/1.0/gocomments/neladamaatu.wordpress.com/34/"><img alt="" border="0" src="http://feeds.wordpress.com/1.0/comments/neladamaatu.wordpress.com/34/" /></a> <a rel="nofollow" href="http://feeds.wordpress.com/1.0/godelicious/neladamaatu.wordpress.com/34/"><img alt="" border="0" src="http://feeds.wordpress.com/1.0/delicious/neladamaatu.wordpress.com/34/" /></a> <a rel="nofollow" href="http://feeds.wordpress.com/1.0/gostumble/neladamaatu.wordpress.com/34/"><img alt="" border="0" src="http://feeds.wordpress.com/1.0/stumble/neladamaatu.wordpress.com/34/" /></a> <a rel="nofollow" href="http://feeds.wordpress.com/1.0/godigg/neladamaatu.wordpress.com/34/"><img alt="" border="0" src="http://feeds.wordpress.com/1.0/digg/neladamaatu.wordpress.com/34/" /></a> <a rel="nofollow" href="http://feeds.wordpress.com/1.0/goreddit/neladamaatu.wordpress.com/34/"><img alt="" border="0" src="http://feeds.wordpress.com/1.0/reddit/neladamaatu.wordpress.com/34/" /></a> <img alt="" border="0" src="http://stats.wordpress.com/b.gif?host=neladamaatu.wordpress.com&blog=2082898&post=34&subd=neladamaatu&ref=&feed=1" /></div>]]></content:encoded>
			<wfw:commentRss>http://neladamaatu.wordpress.com/2008/05/13/%e0%b2%88-%e0%b2%a4%e0%b2%bf%e0%b2%82%e0%b2%97%e0%b2%b3-%e0%b2%95%e0%b2%be%e0%b2%b0%e0%b3%8d%e0%b2%af%e0%b2%95%e0%b3%8d%e0%b2%b0%e0%b2%ae/feed/</wfw:commentRss>
	
		<media:content url="http://a.wordpress.com/avatar/bhoomitaayi-128.jpg" medium="image">
			<media:title type="html">Chakravarty</media:title>
		</media:content>
	</item>
		<item>
		<title>ಕ್ರಾಂತಿಯೋಗಿ ಬಾಬಾ ರಾಮದೇವ್</title>
		<link>http://neladamaatu.wordpress.com/2008/05/08/%e0%b2%95%e0%b3%8d%e0%b2%b0%e0%b2%be%e0%b2%82%e0%b2%a4%e0%b2%bf%e0%b2%af%e0%b3%8b%e0%b2%97%e0%b2%bf-%e0%b2%ac%e0%b2%be%e0%b2%ac%e0%b2%be-%e0%b2%b0%e0%b2%be%e0%b2%ae%e0%b2%a6%e0%b3%87%e0%b2%b5%e0%b3%8d/</link>
		<comments>http://neladamaatu.wordpress.com/2008/05/08/%e0%b2%95%e0%b3%8d%e0%b2%b0%e0%b2%be%e0%b2%82%e0%b2%a4%e0%b2%bf%e0%b2%af%e0%b3%8b%e0%b2%97%e0%b2%bf-%e0%b2%ac%e0%b2%be%e0%b2%ac%e0%b2%be-%e0%b2%b0%e0%b2%be%e0%b2%ae%e0%b2%a6%e0%b3%87%e0%b2%b5%e0%b3%8d/#comments</comments>
		<pubDate>Thu, 08 May 2008 13:59:17 +0000</pubDate>
		<dc:creator>Chakravarty</dc:creator>
		
		<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>

		<guid isPermaLink="false">http://neladamaatu.wordpress.com/?p=30</guid>
		<description><![CDATA[ಅದು ಕ್ರಾಂತಿಯ ಹೊಸ ರೂಪ. ಸಹಸ್ರ ಸಹಸ್ರ ಸಂಖ್ಯೆಯ ಜನರನ್ನು ಒಂದೇ ದಿಕ್ಕಿನೆಡೆಗೆ ಮುನ್ನಡೆಸಿ, ಜಾಗೃತಗೊಳಿಸುವ ಕ್ರಾಂತಿ ಅದು. ಬಾಬಾ ರಾಮ್ ದೇವ್, ಆ ಕ್ರಾಂತಿಯ ಹೆಸರು. ಬಾಬಾ ರಾಮ್ ದೇವ್, ಸವಾಲುಗಳನ್ನು ಕೆಚ್ಚೆದೆಯಿಂದ ಸ್ವೀಕರಿಸುವ ಸಂಕೇತ. ಬಾಬಾ ರಾಮ್ ದೇವ್, ತಾನು ನಂಬಿದ ಸತ್ಯವನ್ನು ದೃಢವಾಗಿ ಪ್ರತಿಪಾದಿಸಬಲ್ಲ ಶ್ರದ್ಧಾ ಮೂರ್ತಿ.  ದೇಶದ ಯಾವ ಭಾಗಕ್ಕೆ ನದೆದರೂ ಇಂದು ಬೆಳಗಿನ ವೇಳೆ ‘ಆಸ್ಥಾ’ ಚಾನೆಲ್ ನಲ್ಲಿ ಬಾಬಾ ರಾಮದೇವರನ್ನು ನೋಡುತ್ತ, ಅವರ ಮಾತು ಕೇಳುತ್ತ, ಯೋಗ ಮಾಡುವವರ [...]]]></description>
			<content:encoded><![CDATA[<div class='snap_preview'><br /><h4>ಅದು ಕ್ರಾಂತಿಯ ಹೊಸ ರೂಪ. ಸಹಸ್ರ ಸಹಸ್ರ ಸಂಖ್ಯೆಯ ಜನರನ್ನು ಒಂದೇ ದಿಕ್ಕಿನೆಡೆಗೆ ಮುನ್ನಡೆಸಿ, ಜಾಗೃತಗೊಳಿಸುವ ಕ್ರಾಂತಿ ಅದು. ಬಾಬಾ ರಾಮ್ ದೇವ್, ಆ ಕ್ರಾಂತಿಯ ಹೆಸರು. ಬಾಬಾ ರಾಮ್ ದೇವ್, ಸವಾಲುಗಳನ್ನು ಕೆಚ್ಚೆದೆಯಿಂದ ಸ್ವೀಕರಿಸುವ ಸಂಕೇತ. ಬಾಬಾ ರಾಮ್ ದೇವ್, ತಾನು ನಂಬಿದ ಸತ್ಯವನ್ನು ದೃಢವಾಗಿ ಪ್ರತಿಪಾದಿಸಬಲ್ಲ ಶ್ರದ್ಧಾ ಮೂರ್ತಿ.  ದೇಶದ ಯಾವ ಭಾಗಕ್ಕೆ ನದೆದರೂ ಇಂದು ಬೆಳಗಿನ ವೇಳೆ ‘ಆಸ್ಥಾ’ ಚಾನೆಲ್ ನಲ್ಲಿ ಬಾಬಾ ರಾಮದೇವರನ್ನು ನೋಡುತ್ತ, ಅವರ ಮಾತು ಕೇಳುತ್ತ, ಯೋಗ ಮಾಡುವವರ ಸಂಖ್ಯೆ ಲೆಕ್ಕವಿಲ್ಲದಷ್ಟು!</h4>
<h4><img style="vertical-align:middle;" src="http://www.thehindubusinessline.com/2006/03/31/images/2006033101272001.jpg" alt="Baba ji" width="351" height="395" /></h4>
<h4>
ಇಂದು ಬಾಬಾ ರಾಮದೇವ್ ಎಂದು ಕರೆಸಿಕೊಳ್ಳುತ್ತಿರುವ ರಾಮಕೃಷ್ಣ ಯಾದವರು ಜನಿಸಿದ್ದು ಹರ್ಯಾಣದ ಮಹೇಂದ್ರ ಗಢ್ ಜಿಲ್ಲೆಯ ಅಲೀಪುರದಲ್ಲಿ. ಹಾಗೆ ನೋಡಿದರೆ, ಅಚ್ಚ ಕರೀಕೂದಲಿನ, ಬೆಳ್ಳಗೆ ಹೊಳೆಯುವ ಗಟ್ಟಿ ಹಲ್ಲಿನ, ಶಕ್ತಿ ಸಂಪನ್ನ ದೇಹ ಸೌಷ್ಟವದ ರಾಮದೇವರಿಗೆ ಹೆಚ್ಚುಕಡಿಮೆ ನಲವತ್ತೈದು ವರ್ಷ! ಹುಟ್ಟಿದ ಎರಡೂವರೆ ತಿಂಗಳಿಗೇ ಪಾರ್ಶ್ವ ವಾಯುವಿಗೆ ತುತ್ತಾಗಿ ಅವರ ದೇಹದ ಅರ್ಧ ಭಾಗ ಜರ್ಝರಿತವಾಗಿತ್ತು. ದೈವ ಕೃಪೆಯಿಂದ ಅಂದು ಸಾವಿನಿಂದ ಪಾರಾದರೂ ಮುಂದೆ ಮತ್ತೆ ಏಳು ಬಾರಿ ಸಾವಿನ ಮನೆ ಹೊಕ್ಕು ಮರಳಿಬಂದರು. ಹೀಗಾಗಿ ಲೌಕಿಕ ಓದಿಗಿಂತ ಅಂತರ್ಮುಖಿಯಾಗುವ ಚಿಂತನೆ ಅವರಿಗೆ ಬಹುಬೇ ಗ ಒಗ್ಗಿಕೊಂಡಿತು. ಎಂಟನೇ ತರಗತಿಯ ವರೆಗೆ ಅಧ್ಯಯನ ನಡೆಸಿದ ರಾಮಕೃಷ್ಣ ಯಾದವ್, ಆನಂತರ ಸೇರಿದ್ದು ಗುರುಕುಲಕ್ಕೆ. ಅಲ್ಲಿ ಸಂಸ್ಕೃತ ಮತ್ತು ಯೋಗದ ಅಭ್ಯಾಸ ನಡೆಸಿದರು. ಆನಂತರ ಸಂನ್ಯಾಸ ಸ್ವೀಕರಿಸಿ, ರಾಮದೇವ್ ಬಾಬಾ ಆದರು. ಅಲ್ಲಿಂದ ಜಿಂದ್ ಜಿಲ್ಲೆಯತ್ತ ಪ್ರಯಾಣ ಬೆಳೆಸಿ, ಹರ್ಯಾಣದ ಕಾಲ್ವಾ ಗುರುಕುಲದಲ್ಲಿ ಹಳ್ಳಿಯ ಜನರಿಗೆ ಯೋಗ ತರಬೇತಿ ಶುರುಮಾಡಿದರು.<br />
ಅಲ್ಲಿಂದಾಚೆಗೆ ಸತತ ಪರಿಶ್ರಮ ಮತ್ತು ಅಧ್ಯಯನಗಳಿಂದ ಯೋಗ ಕ್ಷೇತ್ರದಲ್ಲಿ ವಿಶೇಷ ಹಿಡಿತ ಸಾಧಿಸಿದ ಬಾಬಾ ಸಾಗಿದ ದಿಕ್ಕು ಅಭೂತಪೂರ್ವ.<br />
೧೯೯೫ರಲ್ಲಿ ಅವರು ಆಚಾರ್ಯ ಕರ್ಮವೀರ ಮತ್ತು ಆಚಾರ್ಯ ಬಾಲಕೃಷ್ಣರೊಂದಿಗೆ ಸೇರಿ ಕೃಷ್ಣ ಗಢ್, ಮಹೇಂದ್ರ ಗಢ್, ಮತ್ತು ಘಶೇರಾಗಳಲ್ಲಿ ಗುರುಕುಲಗಳನ್ನು ಸ್ಥಾಪಿಸಿದರು. ಆಗ ಅವರಿಗೆ ಬರಿಯ ಮೂವತ್ತು ವರ್ಷ!<br />
ಈ ಗುರುಕುಲವೂ ಸೇರಿದಂತೆ ಯೋಗ ಪ್ರಚಾರವನ್ನು ಮತ್ತಷ್ಟು ವ್ಯಾಪಕಗೊಳಿಸುವ ಚಿಂತನೆಯೊಂದಿಗೆ ರಾಮದೇವರು ‘ದಿವ್ಯ ಯೋಗ ಮಂದಿರ ಟ್ರಸ್ಟ್’ ಸ್ಥಾಪಿಸಿ, ಅದರ ಅಧ್ಯಕ್ಷರೂ ಆದರು. ಆಗಲೇ ಅವರ ಯೋಗ ಶಿಬಿರಗಳು ವಿಶ್ವದ್ಯಂತ ನಡೆಯಲು ಶುರುವಾಗಿದ್ದು. ಆ ಶಿಬಿರಗಳಲ್ಲಿ ಸಾರ್ವಜನಿಕವಾಗಿ ಯೋಗ ತರಬೇತಿ ನೀಡುತ್ತಿದ್ದ ಬಾಬಾ, ಇತರ ಚಿಕಿತ್ಸೆಗಳಿಂದ ಗುಣಪಡಿಸಲಾಗದ ಹಲವಾರು ರೋಗಗಳನ್ನು ಯೋಗದಿಂದ ಗುಣಪಡಿಸಲು ಸಾಧ್ಯ ಎಂಬುದನ್ನು ಸಾಧಿಸಿ ತೋರಿಸುತ್ತ, ಅದನ್ನು ಎಲ್ಲೆಡೆ ಪ್ರಚುರಪಡಿಸಲಾರಂಭಿಸಿದರು. ಅವರ ಯೋಗ ಶಿಬಿರಕ್ಕೆ ಬರುತ್ತಿದ್ದವರ ಸಂಖ್ಯೆ ನೂರರಿಂದ ಸಾವಿರಕ್ಕೇರಿತು. ಈಗಂತೂ ಪ್ರತಿದಿನ ಸುಮಾರು ಇಪ್ಪತ್ತು ಸಾವಿರದಷ್ಟು ಜನ ಶಿಬಿರಗಳಲ್ಲಿ ಭಗವಹಿಸಿ ಬಾಬಾರೊಂದಿಗೇ ಯೋಗ ಸಾಧನೆ ಮಾಡುತ್ತಿರುವುದೊಂದು ವೈಶಿಷ್ಟ್ಯ.<br />
ಇದರೊಂದಿಗೇ ಬಾಬಾ ರಾಮದೇವ್ ರಾಷ್ಟ್ರಪತಿ ಭವನದಲ್ಲಿ ಯೋಗ ಶಿಬಿರ ನಡೆಸಿ ಅನೇಕರ ಹುಬ್ಬು ಮೇಲೇರುವಂತೆ ಮಾಡಿದರು. ಲಂಡನ್ನಿನ ಹೌಸ್ ಆಫ್ ಕಾಮನ್ಸ್(ಅಲ್ಲಿನ ಸಂಸತ್ತು)ನಲ್ಲಿ ಯೋಗ ಶಿಬಿರ ನಡೆಸಿದ್ದಂತೂ ಜಾಗತಿಕ ಮಟ್ಟದಲ್ಲಿ ಅವರಿಗೆ ಸಿಕ್ಕ ಬಹುದೊಡ್ಡ ಮನ್ನಣೆ ಎನ್ನಬಹುದು.<br />
ಯೋಗ ಅನ್ನುವುದು ಸಣ್ಣಸಣ್ಣ ಕೇಂದ್ರಗಳಿಗೆ ಸೀಮಿತವಾಗಿದ್ದ ಕಾಲಕ್ಕೆ ಅದರ ಹಂದರವನ್ನು ವಿಶಾಲಗೊಳಿಸಿ, ಪ್ರತಿಯೊಬ್ಬರೂ ಯೋಗ- ಪ್ರಾಣಾಯಾಮದ ನಿತ್ಯ ಅಭ್ಯಾಸದಲ್ಲಿ ತೊಡಗುವಂತೆ ಪ್ರೇರೇಪಿಸಿದ ಕೀರ್ತಿ ಬಾಬಾ ರಾಮದೇವರಿಗೇ ಸಲ್ಲಬೇಕು. ಆಸ್ಥಾ ವಾಹಿನಿ ಅವರ ಯೋಗ ಕಾರ್ಯಕ್ರಮವನ್ನು ಪ್ರಸಾರ ಮಾಡಲು ಆರಂಭಿಸಿದಮೇಲಂತೂ ಶಿಬಿರಗಳಲ್ಲಿ ಪಾಲ್ಗೊಳ್ಳುವವರಷ್ಟೆ ಅಲ್ಲದೆ, ಟೀವಿ ನೋಡುತ್ತ, ಅವರನ್ನು ಅನುಸರಿಸುವವರ ಸಂಖ್ಯೆಯೂ ಬೆಳೆಯುತ್ತ ಸಾಗಿತು. ಈಗಂತೂ ಆಸ್ಥಾ ವಾಹಿನಿಯು ಆಫ್ರಿಕಾ, ಆಸ್ಟ್ರೇಲಿಯಾ, ಏಶಿಯಾದ ಬಹುತೇಕ ಎಲ್ಲ ರಾಷ್ಟ್ರಗಳು, ಯುರೋಪು ಮತ್ತು ಅಮೇರಿಕಾ- ಈ ಎಲ್ಲ ಕಡೆಗಳಲ್ಲೂ ರಾಮದೇವರ ಯೋಗ ಕಾರ್ಯಕ್ರಮಗಳನ್ನು ಬಿತ್ತರಗೊಳಿಸುತ್ತಿದೆ. ಮುಂಜಾನೆ ಐದರಿಂದ ಏಳೂವರೆಯವರೆಗೆ ಅವರ ಯೋಗ ಪಾಠದ ನೇರ ಪ್ರಸಾರವಿರುತ್ತದೆ. ಅದಕ್ಕಿರುವ ಜನಮನ್ನಣೆ ಕುರಿತಂತೆ ಆಸ್ಥಾ ಹೆಮ್ಮೆಯಿಂದ ಹೇಳಿಕೊಳ್ಳುತ್ತದೆ. ಜೊತೆಗೆ, ಈ ಕಾರ್ಯಕ್ರಮಕ್ಕೆ ವಿಶ್ವಾದ್ಯಂತ ಸುಮಾರು ಎರಡು ಕೋಟಿ ವೀಕ್ಷಕರಿದ್ದಾರೆ ಎನ್ನುವ ಅಂಕಿಅಂಶವನ್ನೂ ಬಿಚ್ಚಿಡುತ್ತದೆ.<br />
ನೀವು ನಂಬಲಾರಿರಿ. ಟಿವಿಯಲ್ಲಿ ಕಾರ್ಯಕ್ರಮ ನೋಡುತ್ತ, ರಾಮದೇವರ ಯೋಗ ಪಾಠಕ್ಕೆ ಶಿಷ್ಯರಾದವರು ತಾವು ರಕ್ತದೊತ್ತಡ, ಬೊಜ್ಜು, ಸಕ್ಕರೆ ಖಾಯಿಲೆ, ಹೆಪಟೈಟಿಸ್ ಇತ್ಯಾದಿ ರೋಗಗಳಿಂದ ಮುಕ್ತರಾಗಿರುವ ಬಗ್ಗೆ ದೃಢ ಧ್ವನಿಯಲ್ಲಿ ಹೇಳಿಕೊಳ್ಳುತ್ತಾರೆ. ಅಂದಮೇಲೆ, ಆರೋಗ್ಯ ಕ್ಷೇತ್ರದಲ್ಲಿ ಇದೊಂದು ಕ್ರಾಂತಿಯೆಂಬುದನ್ನು ಒಪ್ಪಲೇಬೇಕು ತಾನೆ?<br />
ಇತರರ ಯೋಗ ತರಗತಿಗಳಿಗೂ ರಾಮದೇವರ ಯೋಗ ತರಗತಿಗೂ ವ್ಯತ್ಯಾಸವೇನು? ಅವರೇಕೆ ಇಷ್ಟೊಂದು ಜನಪ್ರಿಯರು? ಈ ಪ್ರಶ್ನೆಗಳು ಸಹಜ. ರಾಮದೇವ್ ಬಾಬಾ, ಇತರರಂತೆ ಆಸನಗಳಿಗೇ ಹೆಚ್ಚು ಒತ್ತು ಕೊಟ್ಟು ಕೂರುವವರಲ್ಲ. ಅವರ ಯೋಗವೆಂದರೆ, ಬಹುತೇಕ ಪ್ರಾಣಾಯಾಮವೇ. ಉಸಿರಿನ ಮೇಲೆ ಹಿಡಿತ ಸಾಧಿಸುವುದರಿಂದ ದೇಹದ ಮೇಲೆ ಸುಲಭವಾಗಿ ಹಿಡಿತ ಸಾಧಿಸಬಹುದೆಂಬುದನ್ನು ಅವರು ಅನೇಕ ನಿದರ್ಶನಗಳ ಮೂಲಕ ಸಿದ್ಧಪಡಿಸಿದ್ದಾರೆ.  ಹೀಗಾಗಿಯೇ “ಭಾರತದಲ್ಲಿ ಯೋಗದ ಪುನರುತ್ಥಾನಕ್ಕೆ ಕಾರಣರಾದ ಒಬ್ಬ ವ್ಯಕ್ತಿಯನ್ನು ಹೆಸರಿಸಬೆಕೆಂದರೆ, ಅದು ನಿಸ್ಸಂಶಯವಾಗಿ ಬಾಬಾ ರಾಮದೇವರೇ. ಯೋಗದಿಂದ ಮಾರಕ ರೋಗಗಳನ್ನು ಗುಣಪಡಿಸಬಹುದೆಂದು ಅವರು ಮೇಲಿಂದಮೇಲೆ ನಿರೂಪಿಸುತ್ತ ಬಂದಿದ್ದಾರೆ. ಸ್ವಾಮಿ ರಾಮದೇವರು ಯೋಗವನ್ನು ಪ್ರಚುರಪಡಿಸುತ್ತಿರುವ ರೀತಿ ಹೇಗಿದೆಯೆಂದರೆ, ಆದಷ್ಟು ಬೇಗ ಪ್ರತಿಯೊಬ್ಬರಿಗೂ ಅದರ ಅರಿವು ಮೂಡಿ ಯೋಗವನ್ನು ಅಪ್ಪಿಕೊಳ್ಳುವ ದಿನ ದೂರವಿಲ್ಲ&#8221; ಎಂದು ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಉದ್ಗಾರವೆತ್ತಿದ್ದು!<br />
ಬಾಬಾ ರಾಮದೇವರದೊಂದು ಭವ್ಯ ಕನಸಿದೆ. ಅದು, ಪತಂಜಲಿ ಯೋಗ ಕೇಂದ್ರದ್ದು. ಸುಮಾರು ನೂರುಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಗ ಪೀಠ ಹರಿದ್ವಾರದಿಂದ ೨೦ ಕಿ.ಮೀ ದೂರದಲ್ಲಿ ಬಹದ್ರಾಬಾದಿನಲ್ಲಿ ನಿರ್ಮಾಣವಾಗಲಿದೆ. ಯೋಗ, ಆಯುರ್ವೇದಗಳನ್ನು ತುತ್ತತುದಿಗೊಯ್ದು ನಿಲ್ಲಿಸಿ, ಇಡಿ ಜಗತ್ತಿಗೆ ಅದರ್ ಬೆಳಕು ಹರಿಯುವಂತೆ ಮಾಡುವ ಇರಾದೆ ಬಾಬಾರದ್ದು.<br />
೨೦೦೬ರ ಆಗಸ್ಟ್ ೬ರಂದು ಈ ಯೋಜನೆಗೆ ಚಾಲನೆ ದೊರಕಿದೆ. ಬರಲಿರುವ ೨೦೦೯ರ ವೇಳೆಗೆ ಜಗತ್ತಿನ ಕಣ್ ಕುಕ್ಕುವ ಈ ಅದ್ಭುತ ಯೋಜನೆಯು ಲೋಕಾರ್ಪಣಗೊಳ್ಳಲಿದೆ. ಈ ಕೇಂಡ್ರದಲ್ಲಿ ಸಾವಿರ ರೋಗಿಗಳನ್ನು ಒಮ್ಮೆಗೇ ಗುಣಪಡಿಸಬಹುದಲ್ಲದೆ, ಐದು ಸಾವಿರ ಮಂದಿ ಒಟ್ಟಿಗೆ ಯೋಗ ನಿರತರಾಗಬಹುದಾದಷ್ಟು ಸ್ಥಳವಕಾಸವೂ ಇರಲಿದೆ. ದಿನವೊಂದಕ್ಕೆ ಒಟ್ಟಾರೆಯಾಗಿ ಐದು ಸಾವಿರ ರೋಗಿಗಳ ತಪಾಸಣೆ ಮಾಡಬಲ್ಲ ಜಗತ್ತಿನ ಅತಿ ದೊಡ್ಡ ಚಿಕಿತ್ಸಾಲಯವೂ ಇದಾಗಲಿದೆ.<br />
ಸ್ವಾಮಿ ರಾಮದೇವರ ಈ ಯೋಗ ಯಾತ್ರೆಯನ್ನು ಮೆಚ್ಚಿಯೇ ಒರಿಸ್ಸಾದ ಕಳಿಂಗ ಇನ್ಸ್ಟಿಟ್ಯೂಟ್  ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ, ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದು. ಈ ಕರ್ಯಕ್ರಮದಲ್ಲಿ ಭಾಗವಹಿಸಿದ್ದ ನೊಬೆಲ್ ಪುರಸ್ಕೃತ ರಸಾಯನ ಶಾಸ್ತ್ರ ವಿಜ್ಞಾನಿ ರಿಚರ್ಡ್ ಅರ್ನೆಸ್ಟ್, ಯೋಗ ಪದ್ಧತಿಯನ್ನೂ ಬಾಬಾರನ್ನೂ ಭಾವ ಪೂರ್ಣವಾಗಿ ಕೊಂಡಾಡಿದ್ದರು.<br />
ಬಾಬಾ ರಾಮದೇವರ ಸಾಧನೆಯ ಹಾದಿ ಹೂವಿನಿಂದಲೇ ಕೂಡಿದ್ದು ಎಂದೇನೂ ಭಾವಿಸಬೇಡಿ. ಯೋಗದ ವ್ಯಾಪಕ ಪ್ರಚಾರದಿಂದ ಹಿಂದುತ್ವದ - ಭಾರತೀಯತೆಯ ಪ್ರಚಾರವಾಗುತ್ತದೆಂದು ಕರುಬಿದ ಕಮ್ಯುನಿಸ್ಟ್ ಪಕ್ಷ ಅವರ ಮೇಲೆ ತಮ್ಮೆಲ್ಲ ಕುಯುಕ್ತಿಗಳನ್ನೂ ಪ್ರಯೋಗಿಸಿ ಗೋಳುಹೊಯ್ದುಕೊಂಡಿತು. ೨೦೦೫ರಲ್ಲಿ ೧೧೩ ಮಂದಿ ದಿವ್ಯ ಯೋಗ ಮಂದಿರದ ಉದ್ಯೋಗಿಗಳು ಪಕ್ಷದೊಂದಿಗೆ ಕೈ ಜೋಡಿಸಿ ಬಾಬಾ ವಿರುದ್ಧ ಸಮರ ಸಾರಿದರು. ಧೃತಿಗೆಡದ ರಾಮದೇವರು, ಜಿಲ್ಲಾಡಳಿತ, ಉದ್ಯೋಗಿಗಳು, ಮತ್ತು ಟ್ರಸ್ಟ್ ನ ಆಡಳಿತ ಮಂಡಳಿಯೊಂದಿಗೆ ಸೇರಿ ಒಪ್ಪಂದ ಮಾಡಿಕೊಂಡರು. ಆನಂತರ, ಉದ್ಯೋಗಿಗಳ ನಡುವೆಯಿದ್ದುಕೊಂಡು ಗಲಭೆ ಹುಟ್ಟುಹಾಕುತ್ತಿದ್ದವರನ್ನು ಗೂಂಡಾಗಿರಿಯ ಆರೋಪ ಹೊರೆಸಿ ಕೆಲಸದಿಂದು ಕಿತ್ತುಹಾಕಿದರು. ಬಾಲ ಸುಟ್ಟಂತಾದ ಪಕ್ಷ ಮತ್ತು ಅದರ ಬೆಂಬಲಿಗರು ಟ್ರೇಡ್ ಯೂನಿಯನ್ ಮೂಲಕ ಕೋರ್ಟ್ ಮೆಟ್ಟಿಲೇರಿತು. ಬಾಬಾ ಜಗ್ಗಲಿಲ್ಲ.<br />
ಕಮ್ಯುನಿಸ್ಟ್ ಪಕ್ಷದ ನಾಯಕಿ ಬೃಂದಾ ಕಾರಟ್ ದೆಹಲಿಯಲ್ಲಿ ಪತ್ರಕರ್ತರ ಸಭೆ ಕರೆದು, ಬಾಬಾ ರಾಮದೇವರ ಕಾರ್ಖಾನೆಯಲ್ಲಿ ತಯಾರಿಸಲಾಗುವ ಕೆಲವು ಔಷಧಗಳಿಗೆ ಪ್ರಾಣಿಗಳ ಮತ್ತು ಮಾನವರ ಮೂಳೆ ಪುಡಿಯನ್ನು ಬೆರೆಸಲಾಗುತ್ತಿದೆ ಎಂದು ಆರೋಪಿಸಿದರು. ಅಷ್ಟಕ್ಕೆ ಸುಮ್ಮನಾಗದೆ, ಮುಂದಿನ ಕೆಲವು ದಿನಗಳಲ್ಲಿ, ರಾಮದೇವರ ಸಂಸ್ಥೆಯಿಂದ ತಯಾರಾದ ಔಷಧಗಳನ್ನು ಔಷಧಿ ಅಂಗಡಿಗಳಿಂದ ಸಂಗ್ರಹಿಸಿ ಸರ್ಕಾರಿ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಲಾಗಿದೆಯೆಂದೂ ಅವುಗಳಲ್ಲಿ ಮೂಳೆಪುಡಿ ಬೆರೆತಿರುವುದು ಸಾಬೀತಾಗಿದೆಯೆಂದೂ ಮತ್ತೊಮ್ಮೆ ಕಾರಿಕೊಂಡರು.<br />
ಬಾಬಾ ಸುಮ್ಮನೆ ಕೂರಲಿಲ್ಲ. ತಾವೂ ಅದೇ ಔಷಧಾಲಯಗಳಿಂದ ಸ್ಯಾಂಪಲ್ ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟರು. ಅಲ್ಲಿ ಅವು ಶುದ್ಧ ಆಯುರ್ವೇದೀಯ ಮತ್ತು ಸಸ್ಯಾಹಾರಿ ಔಷಧಗಳು ಎಂದು ದೃಢವಾಯಿತು. ಬಾಬಾ, ಸುಳ್ಳು ಆರೋಪ ಮಾಡಿದ್ದನ್ನು ಪ್ರಶ್ನಿಸಿ ಬ್ರುಂದಾರನ್ನು ತರಾಟೆಗೆ ತೆಗೆದುಕೊಂಡರು. ಇದು ಯಾವ ಮಟ್ಟಕ್ಕೇರಿತೆಂದರೆ, ಮೊದಲ ಬಾರಿಗೆ ಅವರ ವಿರುದ್ಧ ವ್ಯಾಪಕ ಜನಾಭಿಪ್ರಾಯ ರೂಪಿಸುವುದು ಸಾಧ್ಯವಾಯಿತು. ಆಕೆಯಂತೂ ಇನ್ನೆಂದಿಗೂ ತಾನು ಇಂತಹ ಸಂಗತಿಗಳಲ್ಲಿ ಸಿಕ್ಕಿಬೀಳಲಾರೆ ಎಂದು ಸರ್ವಜನಿಕವಾಗಿ ಹೇಳಿಕೆ ಕೊಡಬೇಕಾಯ್ತು!<br />
ಆದರೇನು? ಬಾಬಾ ರಾಮದೇವರ ಮೇಲೆ ಈ ರೀತಿಯ ರಾಜಕೀಯ ಪ್ರೇರಿತ, ದುರುದ್ದೇಶ ಪೀಡಿತ ಆಕ್ರಮಣಗಳಾದಂತೆಲ್ಲ ಅವರ ಬಳಿ ಸಾರುವ ಜನರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಯೋಗ ಪದ್ಧತಿಯನ್ನು ಅಳವಡಿಸಿಕೊಂಡು, ಶಾಖಾಹಾರ, ಆಯುರ್ವೇದ ಚಿಕಿತ್ಸೆ ಇತ್ಯಾದಿ ಋಜು ಮಾರ್ಗಗಳನ್ನು ಅನುಸರಿಸುವವರು ಹೆಚ್ಚುತ್ತಲೇ ಇದ್ದಾರೆ.<br />
ಇರಲಿ. ಯೋಗ, ಪ್ರಾಣಯಾಮ, ಮನೆ ಮದ್ದು (ಹೋಮ್ ರೆಮಿಡಿ), ಯೋಗ ಮತ್ತು ಆರೋಗ್ಯ ವಿಜ್ಞಾನ ಎಂಬ ನಾಲ್ಕು ಪುಸ್ತಕಗಳನ್ನು ಬರೆದಿರುವ ರಾಮದೇವ್ ಬಾಬಾ, ತಮ್ಮ ಟ್ರಸ್ಟ್ ವತಿಯಿಂದ ಮಾಸಿಕ ಪತ್ರಿಕೆಯನ್ನೂ ಹೊರತರುತ್ತಿದ್ದಾರೆ. ಯೋಗ ಪ್ರದರ್ಶನ- ಪಾಠಗಳ ೪೪ ಸಿ.ಡಿ.ಗಳನ್ನೂ ಮಾರುಕಟ್ಟೆಯಲ್ಲಿರಿಸಿದ್ದಾರೆ.<br />
ತಮ್ಮ ಸಾಮರ್ಥ್ಯದ ಮೇಲಿನ ವಿಶ್ವಾಸದಿಂದಲೇ ‘ರೋಗ ಮುಕ್ತ ಭಾರತ ಮತ್ತು ವಿಶ್ವ’ದ ಕನಸು ಕಾಣುತ್ತಿರುವ ಬಾಬಾ, ಯೋಗದಿಂದಲೇ ಆರ್ಯಾವರ್ತ ದೇಶ (ಭಾರತ) ಮತ್ತೆ ಜಗದ್ಗುರುವಿನ ಪಟ್ಟವೇರಲಿದೆ ಎಂದು ಅಸೀಮ ವಿಶ್ವಾಸದಿಂದ ನುಡಿಯುತ್ತಾರೆ.<br />
ಅವರೊಂದಿಗೆ ನಾವು ಕೈ ಜೋಡಿಸಬೇಕಿದೆ, ಅಷ್ಟೇ!<br />
 <br />
 </h4>
<img alt="" border="0" src="http://feeds.wordpress.com/1.0/categories/neladamaatu.wordpress.com/30/" /> <img alt="" border="0" src="http://feeds.wordpress.com/1.0/tags/neladamaatu.wordpress.com/30/" /> <a rel="nofollow" href="http://feeds.wordpress.com/1.0/gocomments/neladamaatu.wordpress.com/30/"><img alt="" border="0" src="http://feeds.wordpress.com/1.0/comments/neladamaatu.wordpress.com/30/" /></a> <a rel="nofollow" href="http://feeds.wordpress.com/1.0/godelicious/neladamaatu.wordpress.com/30/"><img alt="" border="0" src="http://feeds.wordpress.com/1.0/delicious/neladamaatu.wordpress.com/30/" /></a> <a rel="nofollow" href="http://feeds.wordpress.com/1.0/gostumble/neladamaatu.wordpress.com/30/"><img alt="" border="0" src="http://feeds.wordpress.com/1.0/stumble/neladamaatu.wordpress.com/30/" /></a> <a rel="nofollow" href="http://feeds.wordpress.com/1.0/godigg/neladamaatu.wordpress.com/30/"><img alt="" border="0" src="http://feeds.wordpress.com/1.0/digg/neladamaatu.wordpress.com/30/" /></a> <a rel="nofollow" href="http://feeds.wordpress.com/1.0/goreddit/neladamaatu.wordpress.com/30/"><img alt="" border="0" src="http://feeds.wordpress.com/1.0/reddit/neladamaatu.wordpress.com/30/" /></a> <img alt="" border="0" src="http://stats.wordpress.com/b.gif?host=neladamaatu.wordpress.com&blog=2082898&post=30&subd=neladamaatu&ref=&feed=1" /></div>]]></content:encoded>
			<wfw:commentRss>http://neladamaatu.wordpress.com/2008/05/08/%e0%b2%95%e0%b3%8d%e0%b2%b0%e0%b2%be%e0%b2%82%e0%b2%a4%e0%b2%bf%e0%b2%af%e0%b3%8b%e0%b2%97%e0%b2%bf-%e0%b2%ac%e0%b2%be%e0%b2%ac%e0%b2%be-%e0%b2%b0%e0%b2%be%e0%b2%ae%e0%b2%a6%e0%b3%87%e0%b2%b5%e0%b3%8d/feed/</wfw:commentRss>
	
		<media:content url="http://a.wordpress.com/avatar/bhoomitaayi-128.jpg" medium="image">
			<media:title type="html">Chakravarty</media:title>
		</media:content>

		<media:content url="http://www.thehindubusinessline.com/2006/03/31/images/2006033101272001.jpg" medium="image">
			<media:title type="html">Baba ji</media:title>
		</media:content>
	</item>
		<item>
		<title>ಜರಾ ಯಾದ್ ಕರೋ ಕುರ್ಬಾನಿ&#8230;.</title>
		<link>http://neladamaatu.wordpress.com/2008/03/18/%e0%b2%9c%e0%b2%b0%e0%b2%be-%e0%b2%af%e0%b2%be%e0%b2%a6%e0%b3%8d-%e0%b2%95%e0%b2%b0%e0%b3%8b-%e0%b2%95%e0%b3%81%e0%b2%b0%e0%b3%8d%e0%b2%ac%e0%b2%be%e0%b2%a8%e0%b2%bf/</link>
		<comments>http://neladamaatu.wordpress.com/2008/03/18/%e0%b2%9c%e0%b2%b0%e0%b2%be-%e0%b2%af%e0%b2%be%e0%b2%a6%e0%b3%8d-%e0%b2%95%e0%b2%b0%e0%b3%8b-%e0%b2%95%e0%b3%81%e0%b2%b0%e0%b3%8d%e0%b2%ac%e0%b2%be%e0%b2%a8%e0%b2%bf/#comments</comments>
		<pubDate>Tue, 18 Mar 2008 15:34:40 +0000</pubDate>
		<dc:creator>Chakravarty</dc:creator>
		
		<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>

		<guid isPermaLink="false">http://neladamaatu.wordpress.com/?p=22</guid>
		<description><![CDATA[





ಅದು ೧೯೩೧ನೆ ಇಸವಿ, ಮಾರ್ಚ್ ೨೩. ಲಾಹೋರಿನ ಸೆರೆಮನೆಯ ಮುಂದೆ ಸಾವಿರಾರು ಜನ ಸೇರಿದ್ದರು. ‘ವಂದೇ ಮಾತರಂ’ ಘೋಷಣೆ ಮುಗಿಲು ಮುಟ್ಟಿತ್ತು. ಆ ಜನ ಸಂದಣಿಯಲ್ಲಿ ಎಲ್ಲರಿಗಿಂತ ವೃದ್ಧ ತಾಯ್ತಂದೆಯರು ನಿಂತಿದ್ದರು. ಅವರ ಕಂಗಳಲ್ಲಿ ಮುಂದೇನಾಗುವುದೋ ಎಂಬ ಕಾತರತೆ. ಪಾಪಿ ಬ್ರಿಟಿಷರು ತಮ್ಮ ಮಕ್ಕಳನ್ನು ನಿರ್ದಯವಾಗಿ ಗಲ್ಲಿಗೇರಿಸುತ್ತಾರಲ್ಲ ಅನ್ನುವ ದುಗುಡ. ಆದರೂ ಕಣ್ಣಲ್ಲಿ ಹನಿ ನೀರಿಲ್ಲ! ಅಂಥ ಧೀರತನ.
ಹ್ಹ್! ಆ ಎದೆಗಾರಿಕೆ ಬ್ರಿಟಿಷರಿಗಿರಬೇಕಲ್ಲ? ಹೊರಗೆ ನೆರೆದ ಜನ ಸಂದಣಿಯನ್ನು ಕಂಡೇ ನಡುಗಿಹೋಗಿದ್ದರು. ಅವರೆಲ್ಲಿ ಸೆರೆಮನೆಯ ಗೋಡೆ ಒಡೆದು [...]]]></description>
			<content:encoded><![CDATA[<div class='snap_preview'><br /><h4><a href="http://neladamaatu.files.wordpress.com/2008/03/kakoli_withloves-842-45257.jpg" title="kakoli_withloves-842-45257.jpg"></p>
<h4></h4>
<p></a></h4>
<p><a href="http://neladamaatu.files.wordpress.com/2008/03/bb.jpg" title="bb.jpg"></p>
<h4></h4>
<p></a></p>
<h4>ಅದು ೧೯೩೧ನೆ ಇಸವಿ, ಮಾರ್ಚ್ ೨೩. ಲಾಹೋರಿನ ಸೆರೆಮನೆಯ ಮುಂದೆ ಸಾವಿರಾರು ಜನ ಸೇರಿದ್ದರು. ‘ವಂದೇ ಮಾತರಂ’ ಘೋಷಣೆ ಮುಗಿಲು ಮುಟ್ಟಿತ್ತು. ಆ ಜನ ಸಂದಣಿಯಲ್ಲಿ ಎಲ್ಲರಿಗಿಂತ ವೃದ್ಧ ತಾಯ್ತಂದೆಯರು ನಿಂತಿದ್ದರು. ಅವರ ಕಂಗಳಲ್ಲಿ ಮುಂದೇನಾಗುವುದೋ ಎಂಬ ಕಾತರತೆ. ಪಾಪಿ ಬ್ರಿಟಿಷರು ತಮ್ಮ ಮಕ್ಕಳನ್ನು ನಿರ್ದಯವಾಗಿ ಗಲ್ಲಿಗೇರಿಸುತ್ತಾರಲ್ಲ ಅನ್ನುವ ದುಗುಡ. ಆದರೂ ಕಣ್ಣಲ್ಲಿ ಹನಿ ನೀರಿಲ್ಲ! ಅಂಥ ಧೀರತನ.</h4>
<h4>ಹ್ಹ್! ಆ ಎದೆಗಾರಿಕೆ ಬ್ರಿಟಿಷರಿಗಿರಬೇಕಲ್ಲ? ಹೊರಗೆ ನೆರೆದ ಜನ ಸಂದಣಿಯನ್ನು ಕಂಡೇ ನಡುಗಿಹೋಗಿದ್ದರು. ಅವರೆಲ್ಲಿ ಸೆರೆಮನೆಯ ಗೋಡೆ ಒಡೆದು ಒಳನುಗ್ಗಿ, ಯುವ ಕ್ರಾಂತಿಕಾರಿಗಳನ್ನು ಬಿಡಿಸಿ ಕರೆದೊಯ್ಯುವರೋ ಎಂಬ ಅಂಜಿಕೆ ಅವರಿಗೆ. ಅದಕ್ಕಾಗಿಯೇ ಅವರು ನಿಗದಿತ ದಿನಕ್ಕಿಂತ ಒಂದು ದಿನ ಮೊದಲೇ ತಮ್ಮ ಅಪರಾಧಿಗಳನ್ನು ಗಲ್ಲಿಗೇರಿಸುವ ತಯಾರಿಯಲ್ಲಿದ್ದರು.</h4>
<h4>ಇಷ್ಟಕ್ಕೂ ಆ ಅಪರಾಧಿಗಳು ಮಾಡಿದ್ದ ಅಪರಾಧ ಯಾವುದು ಗೊತ್ತೇ? ದೇಶದ ಸ್ವಾತಂತ್ರ್ಯಕ್ಕಾಗಿ ದನಿ ಎತ್ತಿದ್ದು. ಆ ದನಿ ಕಿವುಡು ಬ್ರಿಟಿಷ್ ಸತ್ತೆಗೆ ಕೇಳದಾದಾಗ ಬಾಂಬೆಸೆದು ಸದ್ದು ಮಾಡಿದ್ದರು ಅವರು!<br />
ಅವರೇ ದೇಶದಲ್ಲಿ ಕ್ರಾಂತಿ ದೀಪ ಮತ್ತಷ್ಟು ಜ್ವಾಜಲ್ಯಮನವಾಗಿ ಬೆಳಗುವಂತೆ ಮಾಡಲು ತಮ್ಮ ರಕ್ತವನ್ನೇ ಬಸಿದ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್!</h4>
<h4><img src="http://neladamaatu.files.wordpress.com/2008/03/bb.jpg" alt="bb.jpg" /></h4>
<h4>ಹಾಗೆ ಈ ಮೂವರು ಯುವ ಕ್ರಾಂತಿಕಾರಿಗಳನ್ನು ಗಲ್ಲಿಗೇರಿಸಲು ಅವರು ಕೊಟ್ಟ ಕಾರಣ ‘ರಾಜ ದ್ರೋಹ’. ಈ ಬಿಸಿ ರಕ್ತದ ಯುವಕರು ಅನ್ಯಾಯ ದರ್ಪಗಳ ಮುದ್ದೆಯಂತಿದ್ದ ಸ್ಯಾಂಡರ್ಸ್ ನ ಹತ್ಯೆ ಮಾಡಿದ್ದರು. ಅಸಲಿಗೆ ಅವರ ಗುರಿಯಾಗಿದ್ದಿದ್ದು ಸ್ಕಾಟ್. ಈತ ಲಾಲಾಜಿಯವರ ಸಾವಿಗೆ ಕಾರಣನಾಗಿದ್ದ. ಅದರ ಸೇಡು ತೀರಿಸಿಕೊಳ್ಳಲೆಂದೇ ಈ ಕ್ರಾಂತಿಕಾರಿಗಳು ಸ್ಕಾಟ್ ಹತ್ಯೆಯ ಯೋಜನೆ ರೂಪಿಸಿದ್ದರು. ಅದರ ಬದಲಿಗೆ ಮತ್ತೊಬ್ಬ ದುರಹಂಕಾರಿಯ ಸಂಹಾರವಾಗಿತ್ತು.</h4>
<h4>ಭಗತ್ ಸಿಂಗನ ಕಥೆ ಕೊನೆಯ ಪಕ್ಷ ಆ ಸಿನೆಮಾ ನೋಡಿದ ಹಲವು ಯುವಕರಿಗಾದರೂ ಗೊತ್ತಿರುತ್ತದೆ. ಹೌದು. ನಮ್ಮ ಪಠ್ಯಗಳಲ್ಲಿ ನಮ್ಮ ರಾಷ್ಟ್ರದ ಬಗ್ಗೆ ಹೆಮ್ಮೆ ಪಡುವಂಥ ನಮ್ಮ ಚರಿತ್ರೆಯನ್ನು ಹೇಳಿರುವುದು ಕದಿಮೆ. ಭಗತ್ ಸಿಂಗನದಾದರೂ ಕೊಂಚ ಕಂಡೀತೇನೋ, ರಾಜ ಗುರುವಿನಂಥ ಮರಾಠಾ ಕಲಿ, ಸುಖದೇವನಂತಹ ಸಮರ್ಪಣಾ ಭಾವದ ಕ್ರಾಂತಿವೀರರ ಬಗ್ಗೆ ಕೇಳುವುದೇ ಬೇಡ.</h4>
<h4>ಇರಲಿ. ಈ ಭಗತ್ ಸಿಂಗ್, ಬಾಲ್ಯದಲ್ಲಿ ಸ್ವಾತಂತ್ರ್ಯ ಹೋರಾಟದ ಕೆಚ್ಚು ಬೆಳೆಸಿಕೊಂಡಿದ್ದು ಜಲಿಯನ್ ವಾಲಾಭಾಗ್ ಹತ್ಯಾಕಾಂಡದ ದುರಂತದಿಂದ. ನಂತರ, ಗಾಂಧೀಜಿಯವರ ಅಸಹಕಾರ ಚಳುವಳಿ ಆತನ ಹೋರಾಟಕ್ಕೊಂದು ಮಾರ್ಗ ಹಾಕಿಕೊಟ್ಟಿತು. ಆದರೆ ಚೌರಿಚೌರಾದ ಘಟನೆಗೆ ಪ್ರತಿಕ್ರಿಯೆಯಾಗಿ ಗಾಂಧೀಜಿ ಚಳುವಳಿಯನ್ನು ಹಿಂಪಡೆದರು. ಇದರಿಂದ, ಶಾಲೆ ಬಿಟ್ಟು ಚಳುವಳಿಗೆ ಧುಮುಕಿದ್ದ ಭಗತನಿಗೆ ನಿರಾಸೆಯಾಯ್ತು. ಮುಂದೆ ಲಾಹೋರಿನ ನ್ಯಾಶನಲ್ ಕಾಲೇಜಿನಲ್ಲಿ ಓದು ಮುಂದುವರೆಸಿದ.<br />
ಕಾಲೇಜಿನ ದಿನಗಳಲ್ಲಿ ಸುಕದೇವನ ಜೊತೆಗೂಡಿ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬಿತ್ತುವ ಕೆಲಸ ಮಾಡುತ್ತಿದ್ದ ಭಗತ್, ಕ್ರಮೇಣ ಕ್ರಾಂತಿಕಾರಿಗಳೊಂದಿಗೆ ಸಂಪರ್ಕ ಪಡೆದ. ಪಂಡಿತ್ ಜೀ ಎಂದೇ ಖ್ಯಾತರಾಗಿದ್ದ ಚಂದ್ರ ಶೇಖರ ಆಜಾದರ ಸಹವಾಸಕ್ಕೆ ಬಂದಮೇಲಂತೂ ಅವನ ಕ್ರಾಂತಿ ಚಟುವಟಿಕೆಗಳು ಮತ್ತಷ್ಟು ತೀವ್ರಗೊಂಡವು. ಹಿರಿಯ ಕ್ರಾಂತಿಕಾರಿಗಳೊಡಗೂಡಿ ಕಾಕೋರಿ ಲೂಟಿಯಲ್ಲಿ ಪಾಲ್ಗೊಂಡ.</h4>
<h4>ಮುಂದೆ ಜೈಲಿನಲ್ಲಿ ಕೂಡ ಭಗತ್ ಸಿಂಗ್ ತನ್ನ ಸ್ವಾಭಿಮಾನ, ಸ್ವಾತಂತ್ರ್ಯ ಪ್ರಿಯತೆಯನ್ನು ಮೆರೆದ. ನಲವತ್ತು ದಿನಗಳ ಕಾಲ ಸಂಗಡಿಗರೊಂದಿಗೆ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ದೇಶ ಬಾಂಧವರಿಗೆ ಕ್ರಾಂತಿಕಾರಿಗಳ ಹೋರಾಟದ ಬಗ್ಗೆ ಇದ್ದ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸಿದ. ಆತ ಪ್ರತಿಪಾದಿಸಿದ ‘ಪೂರ್ಣ ಸ್ವರಾಜ್ಯ’ ಚಿಂತನೆಯು ಕಾಂಗ್ರೆಸ್ಸಿನ ತರುಣರನ್ನು ಸೆಳೆಯಿತು. ಆವರೆಗೂ ಡೊಮಿನಿಯನ್ ಸ್ಟೇಟಸ್ ಬಗ್ಗೆ ಮಾತಾಡುತ್ತಿದ್ದ ಕಾಂಗ್ರೆಸ್, ತಾನೂ ಪೂರ್ಣ ಸ್ವರಾಜ್ಯದ ಬಗ್ಗೆ ಘೋಷಣೆ ನೀಡಲಾರಂಭಿಸಿತು.</h4>
<h4>ಇನ್ನೂ ಮೂವತ್ತು ಮುಟ್ಟಿರದ ಮೂರು ರತ್ನಗಳು ಜಯಗೋಪಾಲ ಎನ್ನುವ ದ್ರೋಹಿಯ ಕಾರಣದಿಂದ ದೇಶಭಕ್ತಿಗೆ ಶಿಕ್ಷೆ ಅನುಭವಿಸಬೇಕಾಗಿ ಬಂದಿದ್ದು ನಮ್ಮ ಪಾಲಿನ ದುರಂತ. ಈ ಬಗೆಯ ದ್ರೋಹಿಗಳೇನು ಬಿಡಿ, ಸಿರಾಜುದ್ದೌಲನನ್ನು ನಂಬಿಸಿ ಕೇಡು ಬಗೆದ ಮೀರ್ ಜಾಫರನಿಂದ ಹಿಡಿದು, ಚಾಫೇಕರ್ ಸಹೋದರರ ನೇಣಿಗೆ ಕಾರಣನಾದ ದ್ರವಿಡನವರೆಗೂ ಇದ್ದೇ ಇದ್ದರು. ಯಾಕೆ? ಅಲೆಕ್ಸಾಂಡರನು ಭಾರತಕ್ಕೆ ಬಂದ ಕಾಲದಲ್ಲೇ ಪೌರವನಿಗೆ ದ್ರೋಹ ಬಗೆದ ಅಂಬಿಯೇ ಇರಲಿಲ್ಲವೇ? ನಮ್ಮ ಚೆನ್ನಮ್ಮ ಕೂಡ ಸೆರೆ ಸಿಕ್ಕಿದ್ದು ದ್ರೋಹಿಗಳ ಕಾರಣದಿಂದಲೇ. ಇಲ್ಲವಾದಲ್ಲಿ ನಮ್ಮ ಹೆಮ್ಮೆಯ ನಾಡಿನ ಕದನ ಕಲಿಗಳನ್ನು ಬಂದೂಕಿನ ತುದಿಯಿಂದ ಹೆದರಿಸಿ ಸೆರೆ ಹಿಡಿಯುವಷ್ಟು ತಾಖತ್ತು ಪರದೇಶೀಯರಿಗೆಲ್ಲಿಂದ ಬರಬೇಕು!?</h4>
<h4>ಇರಲಿ. ಅಂತೂ ನಮ್ಮ ಕ್ರಾಂತಿರತ್ನಗಳು ನಗುನಗುತ್ತ ಕುಣಿಕೆ ಚುಂಬಿಸಿ ‘ಇಂಕ್ವಿಲಾಬ್ ಜಿಂದಾಬಾದ್’ ಘೋಷಿಸುತ್ತ ಆತ್ಮಾಹುತಿಗೆ ಅಣಿಯಾದರು. ಕಟುಕನ ಕಾಯಕದ ಜೈಲರ್ ಕೂಡ ಇವರ ಕೆಚ್ಚು ಕಂಡು ಕಣ್ಣೀರ್ಗರೆದ. ಅಂತೂ ಇಂತೂ ಮಾರ್ಚ್ ೨೩ರ ಆ ದಿನ ಭಗತ್, ರಾಜ ಗುರು, ಸುಖದೇವರು ತಾಯಿ ಭಾರತಿಗಾಗಿ ತಮ್ಮ ಜೀವವನ್ನು ಧಾರೆ ಎರೆದರು. ಭಗತನಂತೂ ಆಜಾದರು ತಪ್ಪಿಸಿಕೊಳ್ಳುವ ಉಪಾಯ ಸೂಚಿಸಿದ್ದಾಗ ‘ನಾನು ಇದ್ದು ಮಾದುವುದಕ್ಕಿಂತ ಸತ್ತು ಇನ್ನೂ ಹೆಚ್ಚಿನದನ್ನು ಸಾಧಿಸಬಲ್ಲೆ’ ಎಂದು ದೃಢವಾಗಿ ನುಡಿದಿದ್ದ. ಅದರಂತೆ, ಲಕ್ಷಲಕ್ಷ ಭಾರತೀಯರು ದೇಶಕ್ಕಾಗಿ ಸಾಯುವ ಪಾಠವನ್ನು ಈ ನಗುಮೊಗದ ತರುಣರಿಂದ ಕಲಿತುಕೊಂಡರು. ಜೀವದ, ಸುರಕ್ಷತೆಯ, ಸ್ವಾರ್ಥದ ಹಂಗು ತೊರೆದು ಸ್ವಾತಂತ್ರ್ಯ ಪ್ರಾಪ್ತಿಯ ಮಾರ್ಗದಲ್ಲಿ ಮುಂದಡಿಯಿಟ್ಟರು.<br />
ಯುವಕರಲ್ಲಿ ಮೂಡಿದ ಈ ‘ಸಾಯುವ’ ಕೆಚ್ಚು ಮುಂದೆ ಸುಭಾಷರ ಆಜಾದ್ ಹಿಂದ್ ಫೌಜಿಗೆ  ಸಾಕಷ್ಟು ಬಲ ತಂದಿತು.</h4>
<h4>ಅಹಿಂಸಾಚಳುವಳಿಗೆ ಪೂರಕವಾಗಿ ನಡೆದ ಕ್ರಾಂತಿ ಚಳುವಳಿ, ನೇತಾಜಿಯ ಸೇನಾಬಲ ಮತ್ತು ಬ್ರಿಟಿಷರ ಕೆಳಗಿದ್ದ ಭಾರತೀಯ ಸೈನಿಕರು ನೇತಾಜಿಯವರತ್ತ ಬೆಳೆಸಿಕೊಳ್ಳತೊಡಗಿದ ಒಲವು, ಬ್ರಿಟಿಷರನ್ನು ಹೆದರಿಸಿತು. ಪಾಪ! ಅವರಿಗೆ ೧೮೫೭ರ ನೆನಪಾಗಿರಲೂ ಸಾಕು!! ಅಂತೂ ನಮಗೆ ಸ್ವಾತಂತ್ರ್ಯ ದಕ್ಕಿತು.</h4>
<h4>ಭಗತ್ ಸಿಂಗನಿಗೆ ಸ್ವಾತಂತ್ರ್ಯ ಪ್ರಾಪ್ತಿಯೊಂದೇ ಮುಖ್ಯವಾಗಿರಲಿಲ್ಲ. ಸ್ವಾತಂತ್ರ್ಯಾನಂತರದ ಭಾರತ ಹೇಗಿರಬೇಕೆನ್ನುವುದರ ಬಗ್ಗೆಯೂ ಸ್ಪಷ್ಟ ಕಲ್ಪನೆಗಳಿದ್ದವು. ಆದರೆ ಅವೆಲ್ಲವೂ ಆತನೊಂದಿಗೇ ಮಣ್ಣುಗೂಡಿ ಹೋದವು.</h4>
<h4>ಅಳಿದರೇನು ದೇಹವಂದು<br />
ಧ್ಯೇಯ ದೀಪ ಉರಿದಿದೆ<br />
ನವ ಜನಾಂಗ ನೆಗೆದು ಬಂದು<br />
ತೈಲವದಕೆ ಸುರಿದಿದೆ</h4>
<h4>- ಎಂದಿದೆ ಕವಿವಾಣಿ. ಆದರೆ ನಮ್ಮ ಯುವ ಪೀಳಿಗೆ ಅಂಥ ಯಾವ ಧ್ಯೇಯವನ್ನೂ ಕಾಯ್ದುಕೊಳ್ಳಲು ಮನಸ್ಸು ಮಾಡುತ್ತಿಲ್ಲ ಅನ್ನುವುದೇ ದುರಂತ.<br />
ಈಗಲೂ ಕಾಲ ಮಿಂಚಿಲ್ಲ. ಮಾರ್ಚ್ ೨೩ರ ಶಹೀದ್ ದಿನದಂದು ನಾವೆಲ್ಲರೂ ದೇಶಕ್ಕಾಗಿ ಪ್ರಾಣ ತೆತ್ತವರ ಹೆಸರಲ್ಲಿ ಅವರ ಹೋರಾಟವನ್ನು ಸಾರ್ಥಕಗೊಳಿಸುವ, ದೇಶದ ಸ್ವಾಭಿಮಾನ- ಸ್ವಾವಲಂಬಿತೆಗಳನ್ನು ಕಾಯ್ದಿಡುವ ದೀಕ್ಷೆ ತೊಡೋಣ. ಅವರ ಬಲಿದಾನವನ್ನು ಗೌರವಿಸೋಣ. ಆಗದೇ?<br />
 </h4>
<img alt="" border="0" src="http://feeds.wordpress.com/1.0/categories/neladamaatu.wordpress.com/22/" /> <img alt="" border="0" src="http://feeds.wordpress.com/1.0/tags/neladamaatu.wordpress.com/22/" /> <a rel="nofollow" href="http://feeds.wordpress.com/1.0/gocomments/neladamaatu.wordpress.com/22/"><img alt="" border="0" src="http://feeds.wordpress.com/1.0/comments/neladamaatu.wordpress.com/22/" /></a> <a rel="nofollow" href="http://feeds.wordpress.com/1.0/godelicious/neladamaatu.wordpress.com/22/"><img alt="" border="0" src="http://feeds.wordpress.com/1.0/delicious/neladamaatu.wordpress.com/22/" /></a> <a rel="nofollow" href="http://feeds.wordpress.com/1.0/gostumble/neladamaatu.wordpress.com/22/"><img alt="" border="0" src="http://feeds.wordpress.com/1.0/stumble/neladamaatu.wordpress.com/22/" /></a> <a rel="nofollow" href="http://feeds.wordpress.com/1.0/godigg/neladamaatu.wordpress.com/22/"><img alt="" border="0" src="http://feeds.wordpress.com/1.0/digg/neladamaatu.wordpress.com/22/" /></a> <a rel="nofollow" href="http://feeds.wordpress.com/1.0/goreddit/neladamaatu.wordpress.com/22/"><img alt="" border="0" src="http://feeds.wordpress.com/1.0/reddit/neladamaatu.wordpress.com/22/" /></a> <img alt="" border="0" src="http://stats.wordpress.com/b.gif?host=neladamaatu.wordpress.com&blog=2082898&post=22&subd=neladamaatu&ref=&feed=1" /></div>]]></content:encoded>
			<wfw:commentRss>http://neladamaatu.wordpress.com/2008/03/18/%e0%b2%9c%e0%b2%b0%e0%b2%be-%e0%b2%af%e0%b2%be%e0%b2%a6%e0%b3%8d-%e0%b2%95%e0%b2%b0%e0%b3%8b-%e0%b2%95%e0%b3%81%e0%b2%b0%e0%b3%8d%e0%b2%ac%e0%b2%be%e0%b2%a8%e0%b2%bf/feed/</wfw:commentRss>
	
		<media:content url="http://a.wordpress.com/avatar/bhoomitaayi-128.jpg" medium="image">
			<media:title type="html">Chakravarty</media:title>
		</media:content>

		<media:content url="http://neladamaatu.files.wordpress.com/2008/03/bb.jpg" medium="image">
			<media:title type="html">bb.jpg</media:title>
		</media:content>
	</item>
		<item>
		<title>ಭಾನುವಾರದ ಸುಂದರ ಸಂಜೆ&#8230;</title>
		<link>http://neladamaatu.wordpress.com/2008/02/18/21/</link>
		<comments>http://neladamaatu.wordpress.com/2008/02/18/21/#comments</comments>
		<pubDate>Mon, 18 Feb 2008 09:05:44 +0000</pubDate>
		<dc:creator>Chakravarty</dc:creator>
		
		<category><![CDATA[ನಮ್ಮ ನಮ್ಮ ನಡುವೆ]]></category>

		<guid isPermaLink="false">http://neladamaatu.wordpress.com/2008/02/18/21/</guid>
		<description><![CDATA[ನಿಜಕ್ಕೂ ಫೆಬ್ರವರಿ ಹದಿನೇಳರ ಭಾನುವಾರದ ಸಂಜೆ ನನಗೆ ಅವಿಸ್ಮರಣೀಯವಾದ ಭಾವ ಜಾಗೃತಿಯ ಸಾರ್ಥಕ ಸಮಯವಾಗಿತ್ತು. ಅತ್ಯಂತ ಉಲ್ಲಾಸದಾಯಕವಾಗಿತ್ತು.
ಹೀಗೆ ನನ್ನನ್ನು ಆಳವಾಗಿ ತಟ್ಟಿದ ಕಾರ್ಯಕ್ರಮದ ಹೆಸರು- “ವಂದೇ ಮಾತರಂ ಗೀತ ಸಂಧ್ಯಾ&#8221;
ಮೈತ್ರಿ ಸಂಸ್ಕೃತಿ ಪ್ರತಿಷ್ಟಾನದ ಸಂಸ್ಕೃತೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮಕ್ಕೆ ‘ಭಾರತ ವೈಭವ’ ಶೀರ್ಷಿಕೆಯಡಿಯಲ್ಲಿ ನಿರೂಪಣೆ ಮಾಡುವ ಸೌಭಾಗ್ಯ ನನ್ನ ಪಾಲಿಗೆ ಬಂದಿತ್ತು. 
ವಂದೇ ಮಾತರಂ
‘ವಂದೇ ಮಾತರಂ&#8230;’ ಈ ಎರಡು ಪದಗಳು ಸಾಕು ಮಿಂಚಿನ ಸಂಚಾರಕ್ಕೆ. ಯಾವ ಎರಡು ಪದಗಳನ್ನು ಉಚ್ಚ ಕಂಠದಲ್ಲಿ ಮೊಳಗಿಸುತ್ತ ಸಾವಿರಾರು ರಾಷ್ಟ್ರ [...]]]></description>
			<content:encoded><![CDATA[<div class='snap_preview'><br /><h5 align="center"><font color="#ff9900">ನಿಜಕ್ಕೂ ಫೆಬ್ರವರಿ ಹದಿನೇಳರ ಭಾನುವಾರದ ಸಂಜೆ ನನಗೆ ಅವಿಸ್ಮರಣೀಯವಾದ ಭಾವ ಜಾಗೃತಿಯ ಸಾರ್ಥಕ ಸಮಯವಾಗಿತ್ತು. ಅತ್ಯಂತ ಉಲ್ಲಾಸದಾಯಕವಾಗಿತ್ತು.<br />
ಹೀಗೆ ನನ್ನನ್ನು ಆಳವಾಗಿ ತಟ್ಟಿದ ಕಾರ್ಯಕ್ರಮದ ಹೆಸರು- “ವಂದೇ ಮಾತರಂ ಗೀತ ಸಂಧ್ಯಾ&#8221;<br />
ಮೈತ್ರಿ ಸಂಸ್ಕೃತಿ ಪ್ರತಿಷ್ಟಾನದ ಸಂಸ್ಕೃತೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮಕ್ಕೆ ‘ಭಾರತ ವೈಭವ’ ಶೀರ್ಷಿಕೆಯಡಿಯಲ್ಲಿ ನಿರೂಪಣೆ ಮಾಡುವ ಸೌಭಾಗ್ಯ ನನ್ನ ಪಾಲಿಗೆ ಬಂದಿತ್ತು. </font></h5>
<h2 align="center">ವಂದೇ ಮಾತರಂ</h2>
<h4>‘ವಂದೇ ಮಾತರಂ&#8230;’ ಈ ಎರಡು ಪದಗಳು ಸಾಕು ಮಿಂಚಿನ ಸಂಚಾರಕ್ಕೆ. ಯಾವ ಎರಡು ಪದಗಳನ್ನು ಉಚ್ಚ ಕಂಠದಲ್ಲಿ ಮೊಳಗಿಸುತ್ತ ಸಾವಿರಾರು ರಾಷ್ಟ್ರ ಪ್ರೇಮಿಗಳು ಹುತಾತ್ಮರಾದರೋ, ಲಕ್ಶಾಂತರ ಜನರು ಸ್ವಾತಂತ್ರ್ಯ ಹೋರಾಟಕ್ಕೆ ಪಣ ತೊಟ್ಟೂ ನಿಂತರೋ ಅಂತಹ ಪ್ರೇರ್‍ಅಕ ರಣ ಮಂತ್ರ ಅದು!</h4>
<h4>ಬಹುಶಃ ನಿಮಗೆ ‘ವಂದೇ ಮಾತರಂ’ ಹುಟ್ಟಿದ ಬಗೆ ಗೊತ್ತಿರಬಹುದು.<br />
ಖ್ಯಾತ ಕವಿ ಶ್ರೀ ಬಂಕಿಮ ಚಂದ್ರ ಚಟರ್ಜಿಯವರು ಒಮ್ಮೆ ರೈಲಿನಲ್ಲಿ ಪ್ರಯಾಣಿಸುವಾಗ ತಾಯಿ ಭಾರತಿಯೊಡಲಿನ ನಿಸರ್ಗ ಸೌಂದರ್ಯಕ್ಕೆ ಮಾರುಹೋದರು. ಜೊತೆಜೊತೆಗೆ ಆಕೆಗೊದಗಿದ ದುರ್ಗತಿಯನ್ನೂ, ಅದಕ್ಕೆ ಪ್ರತಿಯಾಗಿ ಧೀರಭಾರತೀಯರ ಹೋರಾಟವನ್ನೂನೆನೆಯುತ್ತ ಸಾಗಿದರು. ಅದರ ಪರಿಣಾಮ, ರಾತ್ರಿಯ ನಿದ್ರೆಯಲ್ಲೂ ಅವೆಅವೇ ಚಿತ್ರಣಗಳು. ಕನವರಿಕೆಯಲ್ಲಿ ಮೂಡಿಬಂದಿದ್ದು ‘ವಂದೇ ಮಾತರಂ’ ದಿವ್ಯಗೀತೆ!<br />
ಬಂಕಿಮ ಚಂದ್ರರ ಸಂಬಂಧಿ ತರುಣನೊಬ್ಬ ಅವರು ಕನವರಿಸಿದ ಸಾಲುಗಳನ್ನು ಬರೆದುಕೊಂಡ. ಬಂಕಿಮ ಚಂದ್ರರು೮ ಎಚ್ಚರವಾದ ಬಳಿಕ ಅವರಿಗೆ ಅವನ್ನು ತೋರಿಸಿದ. ಸಂಭ್ರಾಂತರಾದ ಬಂಕಿಮಚಂದ್ರರು ಅದಕ್ಕೆ ಅಂತಿಮ ಸ್ಪರ್ಷ ನೀಡಿದರು. ಮುಂದೆ ಅವರ ಜನಪ್ರಿಯ ಕೃತಿ ‘ಆನಂದಮಠ’ದಲ್ಲಿ ಈ ಗೀತೆ ರಣ ಮಂತ್ರವಾಗಿ ಹರಿಯಿತು.</h4>
<h4>೧೯೦೫ರಲ್ಲಿ ಆಂಗ್ಲರು ಕೇಕು ಕತ್ತರಿಸಿದ ಹಾಗೆ ಬಂಗಾಳವಿಭಜನೆ ಮಾಡಹೊರಟಿದ್ದರಲ್ಲ, ಆಗ ಅದರ ವಿರುದ್ಧ ಹಿಂದೂ ಮುಸ್ಲಿಮರೆನ್ನದೆ ಎಲ್ಲರನ್ನೂ ಒಗ್ಗೂಡಿಸಿ ಹೋರಾಟಕ್ಕೆ ಹಚ್ಚಿದ್ದು ಈ ‘ವಂದೇ ಮಾತರಂ’ ಘೋಷ. ಬಂಗಾಳ ವಿಭಜನೆಯ ಮೂಲಕ ಯಾರ ನಡುವೆ ಬಿರುಕು ಮೂಡಿಸಬೇಕೆಂದು ಅವರು ಅಲೋಚಿಸಿದ್ದರೋ ಅದೇ ಹಿಂದೂ ಮುಸ್ಲಿಮರು ಜಾತಿ ಭೇದ ಮರೆತು ವಂದೇ ಮಾತರಂ ಘೋಷಣೇಯಡಿಯಲ್ಲಿ ಒಟ್ಟಾದರು, ಆಂಗ್ಲರ ಕುತಂತ್ರಕ್ಕೆ ಮಾರುತ್ತರ ನೀಡಿದರು!</h4>
<h4>ಬಿಡಿ. ಸ್ವಾತಂತ್ರ್ಯ ಹೋರಾಟದುದ್ದಕ್ಕೂ ಸ್ಫೂರ್ತಿ ವಾಕ್ಯವಾಗಿ ಹರಿದುಬಂದು ರಾಷ್ಟ್ರ ಗೀತೆಯಾಗಬೇಕಿದ್ದ ‘ವಂದೇ ಮಾತರಂ’ಆ ಸ್ಥಾನಕ್ಕೆ ಆಯ್ಕೆಯಾಗದೆಹೋಗಿದ್ದು, “ಅದು ಪಾಶ್ಚಾತ್ಯರ ಬ್ಯಾಂಡ್ ಸೆಟ್ಟಿಗೆ ಹೊಂದೋಲ್ಲ&#8221; ಅನ್ನುವ ಕಾರಣಕ್ಕೆ! ಈ ಬಾಲಿಶ, ಅಸಹ್ಯಕರ ಕಾರಣ ನೀಡಿದವರ್ಯಾರು ಗೊತ್ತಾ? ನಮ್ಮ ದೇಶದ ಮೊದಲ ಪ್ರಧಾನಿ ಜವಹರ ಲಾಲ ನೆಹರೂ!!</h4>
<h4>ಕ್ಷಮಿಸಿ. ಹೇಳಹೊರಟಿದ್ದು ವಂದೇ ಮಾತರಂ ‘ಕಾರ್ಯಕ್ರಮ’ದ ಬಗ್ಗೆ.ಏನು ಮಾಡಲಿ?  ಆ ದಿವ್ಯ ಮಂತ್ರ ಸ್ಮರಣೆಗೆ ಬಂದಾಗಲೆಲ್ಲ ಈ ವಿವರಗಳು ಹಿಂಬಾಲಿಸಿ ಬಂದುಬಿಡುತ್ತವೆ.</h4>
<h2 align="center">ಗೀತ ಸಂಧ್ಯಾ</h2>
<h4>ಶಂಕರ ಶಾನುಭಾಗ್ ಉತ್ತಮ ಸಂಸ್ಕಾರ ಹೊಂದಿರುವ ಸಹೃದಯಿ ಸಂಗೀತ ಕಲಾವಿದರು. ಅವರ ಕಂಠವನ್ನ ‘ಕಂಚಿನ ಕಂಠ’ ಎಂದರೆ ಕ್ಲೀಷೆಯಲ್ಲ ಅನ್ನೋದು, ಅವರ ವಿಶಿಷ್ಟ ಶೈಲಿಯ ವಂದೇ ಮಾತರಂ ಗೀತೆಯ ಗಾಯನದಲ್ಲೇ ಗೊತ್ತಾಗಿಹೋಗುತ್ತದೆ.<br />
ಭಾವಾವಿಶ್ಟರಾಗಿ ಶಾನುಭಾಗ್ ‘ಹೂ ಹರೆಯದ ಹೊಂಗನಸುಗಳೇ&#8230; ಏಳಿ ಏಳೀ ಏಳಿ ಎಚ್ಚರಾಗಿ ಕನಸುಕಂಗಳೇ’ ಹಾಡುವಾಗ ಶ್ರೋತೃಗಳ ಮುಖದಲ್ಲಿನ ಹುಮ್ಮಸ್ಸು ನೋದಬೇಕು ನೀವು!<br />
ಶಂಕರರ ತಂಡದಲ್ಲಿನ ಪ್ರತಿಯೊಬ್ಬ ಗಾಯಕ- ಗಾಯಕಿಯೂ ಹೀಗೇ. ಮನದುಂಬಿ, ಅಂತರಾಳದಿಂದ ಹಾಡುತ್ತರೆ. ರಾಷ್ಟ್ರಭಕ್ತಿಯ ಗೀತೆಗಳನ್ನು ಹಾಡುವಾಗ ಅಕ್ಷರಶಃ ಕಣ್ಣೀರುಮಿಡಿಯುತ್ತಾರೆ.</h4>
<h4>ಭಾನುವಾರದ ಸಂಜೆಯ ಈ ಸುಂದರ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಶಣೆಯಾಗಿದ್ದವರು ದಿವಂಗತ ಕರ್ನಲ್ ವಸಂತರ ತಾಯಿ ಮತ್ತು ಪತ್ನಿ. ಜೊತೆಗೆ, ವಯೋವೃದ್ಧರಾದ ನಿವೃತ್ತ ಕರ್ನಲ್ ಶ್ರೀ ಕಾತ್ಕರ್ ಅವರು.</h4>
<h4>“ನೀವೆಲ್ಲ ನಿಮ್ಮ ನಿಮ್ಮ ಕುಟುಂಬಕ್ಕಾಗಿ ದುಡಿಯುತ್ತೀರಿ. ಅಲ್ಲಿ ನಿಮ್ಮದೇ ಕುಟುಂಬದ ರಕ್ಷಣೆಗಾಗಿ ಯೋಧರು ಜೀವದ ಹಂಗು ತೊರೆದು ನಿಂತಿದ್ದಾರೆ. ಸದಾ ಇದನ್ನು ನೆನಪಿಡಿ. ದಯವಿಟ್ಟು ಯೋಧ ಕುಟುಂಬಗಳೊಡನೆ ಸಹಕರಿಸಿ ಮಾನವೀಯತೆ ತೋರಿ&#8221; ಎಂದು ವಿನಂತಿಸುತ್ತ ನಮಗೆ ನಮ್ಮ ಕರ್ತವ್ಯದ ಪಾಠ ಹೇಳಿದವರು ದಿ. ಕರ್ನಲ್ ವಸಂತರ ಪತ್ನಿ.</h4>
<h4>ಇನ್ನು, ಕರ್ನಲ್ ಕಾಟ್ಕರ್&#8230;<br />
ಅವರಂತೂ ಕಾರ್ಯಕ್ರಮದ ಭಾವುಕ ವಾತಾವರಣದಲ್ಲಿ ಸಂಪೂರ್ಣ ಅಮಿಮರೆತಿದ್ದರು.<br />
ಎಂಭತ್ತು ಮೀರಿದ ಈ ವಯಸ್ಸಿನಲ್ಲೂ ಅವರ ಚೀನಾ ಯುದ್ಧದ ಪ್ರತಿ ಕ್ಷಣಗಳು ತಾಜಾ ಆಗಿವೆ. ಅವುಗಳಾಲ್ಲಿ ಕೆಲವನ್ನು ಅವರು ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಹಂಚಿಕೊಂಡರು.</h4>
<h2 align="center">ಕರ್ನಲ್ ಹೇಳಿದ ಒಂದು ಘಟನೆ&#8230;</h2>
<h4>“ಲಡಾಖ್ ನಲ್ಲಿ ಶೂನ್ಯಕ್ಕಿಂತ ಅತ್ಯಂತ ಕೆಳಗಿನ ಉಷ್ಣಾಂಶದಲ್ಲಿ ಮಂಜುಗಟ್ಟಿದ ವಾತಾವರಣಾಲ್ಲಿ ಸೂಕ್ತ ಸೌಲಭ್ಯಗಳಿಲ್ಲದೆಯೂ  ನಾವು ಚೀನೀಯರ ವಿರುದ್ಧ ಸೆಟೆದು ನಿಂತಿದ್ದೆವು. ನಮಮ್ ಪ್ಲಟೂನ್ ನಲ್ಲಿ ಪ್ರಮೋದ್ ಎನ್ನುವ ತೀರ ಚಿಕ್ಕ ವಯಸ್ಸಿನ ತರುಣ ಸೈನಿಕನಿದ್ದ. ಸದಾಚಟುವಟಿಕೆಯ ಆತ, ವಿಧವೆ ತಾಯಿಯ ಏಕಮಾತ್ರ ಮಗನಾಗಿದ್ದ.<br />
ಅತ್ತ ನಾವು ಮರಗಟ್ಟಿಸುವ ಚಳಿಯಲ್ಲಿ ಹಗಲಿರುಳು ಬಂದೂಕು ಹಿಡಿದು ನಿಂತಿದ್ದಾಗ ಪ್ರಮೋದನ ತಾಯಿಯಿಂದ ಒಂದು ಪತ್ರ ಬಂದಿತು. ಪಾಪ, ಅವರು ಅದನ್ನು ಬರೆದು ಅದೆಷ್ಟು ದಿನವಗಿತ್ತೋ, ಹಿಮದ ಹಾದಿಯಲ್ಲಿ ನಡುಗುತ್ತ, ಕೊನೆಗೂ ಅದು ಅವನ ಕೈ ತಲುಪಿತ್ತು. ಆ ಹೊತ್ತಿಗಾಗಲೇ ಚೀನೀಯರು ನಮಗೆ ತೀರ ಹತ್ತಿರ ಬಂದುಬಿಟ್ಟಿದ್ದರು.<br />
ಅಂತಹ ಉತ್ಕಟ ಕ್ಷಣದಲ್ಲಿ ಆ ತಾಯಿ ಬರೆದ ಸಾಲುಗಳು ಎಂಥವಿತ್ತು ಗೊತ್ತೇ?<br />
“ಮಗೂ, ಚೀನೀಯರು ದೇಶದ ಗಡಿ ದಾಟಲಿದ್ದಾರೆಂದು ಸುದ್ದಿ ಇದೆ. ನೀನದಕ್ಕೆ ಬಿಡಕೂಡದು. ಹಾಗೇನಾದರೂ ಅವರು ದಾಟುವುದೇ ಆದರೆ, ಪ್ರಮೋದನ ಹೆಣದ ಮೇಲೆ ದಾಟಿಕೊಂಡು ಒಳಬರಬೇಕು!&#8221;<br />
ನಮ್ಮ ಕೆಚ್ಚು ಹೆಚ್ಚಲಿಕ್ಕೆ ಇನ್ನೇನು ಬೇಕಿತ್ತು? ಕೂಡಲೆ ನಾವೆಲ್ಲ ಸೇರಿ ಆ ತಾಯಿಗೆ ಪತ್ರ ಬರೆದೆವು. “ಅಮ್ಮಾ, ಹಾಗೇನಾದರೂ ಚೀನೀಯರು ದೇಶದೊಳಕ್ಕೆ ನುಗ್ಗುವರೆನ್ನುವುದೇ ಆದರೆ, ಒಬ್ಬನಲ್ಲ, ಆರು ಪ್ರಮೋದರ ಹೆಣ ದಾಟಿ ಬರಬೇಕು. ಹೆದರಬೇಡ, ನಾವು ಜೀವದ ಹಂಗು ತೊರೆದು ಕಾದುತ್ತೇವೆ!&#8221;</h4>
<p>~</p>
<h4>ಹ್ಹ್! ನಮ್ಮ ನಮಮ್ ಕಲ್ಪನೆಯ ಸುಖದ ದ್ವೀಪಗಳಲ್ಲಿ ಬದುಕುತ್ತಿರುವ ನಮಗೆ, ದೇಶಕ್ಕಾಗಿ ಸಾಯೋದು ಅಂದರೇನು ಗೊತ್ತೇ?<br />
ಬೇಡ. ದೇಶಕ್ಕಾಗಿ ಬದುಕಲಿಕ್ಕಾದರೂ&#8230;.?</h4>
<img alt="" border="0" src="http://feeds.wordpress.com/1.0/categories/neladamaatu.wordpress.com/21/" /> <img alt="" border="0" src="http://feeds.wordpress.com/1.0/tags/neladamaatu.wordpress.com/21/" /> <a rel="nofollow" href="http://feeds.wordpress.com/1.0/gocomments/neladamaatu.wordpress.com/21/"><img alt="" border="0" src="http://feeds.wordpress.com/1.0/comments/neladamaatu.wordpress.com/21/" /></a> <a rel="nofollow" href="http://feeds.wordpress.com/1.0/godelicious/neladamaatu.wordpress.com/21/"><img alt="" border="0" src="http://feeds.wordpress.com/1.0/delicious/neladamaatu.wordpress.com/21/" /></a> <a rel="nofollow" href="http://feeds.wordpress.com/1.0/gostumble/neladamaatu.wordpress.com/21/"><img alt="" border="0" src="http://feeds.wordpress.com/1.0/stumble/neladamaatu.wordpress.com/21/" /></a> <a rel="nofollow" href="http://feeds.wordpress.com/1.0/godigg/neladamaatu.wordpress.com/21/"><img alt="" border="0" src="http://feeds.wordpress.com/1.0/digg/neladamaatu.wordpress.com/21/" /></a> <a rel="nofollow" href="http://feeds.wordpress.com/1.0/goreddit/neladamaatu.wordpress.com/21/"><img alt="" border="0" src="http://feeds.wordpress.com/1.0/reddit/neladamaatu.wordpress.com/21/" /></a> <img alt="" border="0" src="http://stats.wordpress.com/b.gif?host=neladamaatu.wordpress.com&blog=2082898&post=21&subd=neladamaatu&ref=&feed=1" /></div>]]></content:encoded>
			<wfw:commentRss>http://neladamaatu.wordpress.com/2008/02/18/21/feed/</wfw:commentRss>
	
		<media:content url="http://a.wordpress.com/avatar/bhoomitaayi-128.jpg" medium="image">
			<media:title type="html">Chakravarty</media:title>
		</media:content>
	</item>
		<item>
		<title>ಇತಿಹಾಸದ ಪುಟಗಳಲ್ಲಿ ಮುಲಾಜಿನ ಗೋಜಲು</title>
		<link>http://neladamaatu.wordpress.com/2008/02/07/%e0%b2%87%e0%b2%a4%e0%b2%bf%e0%b2%b9%e0%b2%be%e0%b2%b8%e0%b2%a6-%e0%b2%aa%e0%b3%81%e0%b2%9f%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%ae%e0%b3%81%e0%b2%b2%e0%b2%be%e0%b2%9c%e0%b2%bf/</link>
		<comments>http://neladamaatu.wordpress.com/2008/02/07/%e0%b2%87%e0%b2%a4%e0%b2%bf%e0%b2%b9%e0%b2%be%e0%b2%b8%e0%b2%a6-%e0%b2%aa%e0%b3%81%e0%b2%9f%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%ae%e0%b3%81%e0%b2%b2%e0%b2%be%e0%b2%9c%e0%b2%bf/#comments</comments>
		<pubDate>Thu, 07 Feb 2008 03:01:31 +0000</pubDate>
		<dc:creator>Chakravarty</dc:creator>
		
		<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>

		<guid isPermaLink="false">http://neladamaatu.wordpress.com/?p=17</guid>
		<description><![CDATA[
ರಾಮಾಯಣದ ಅತ್ಯಂತ ಮಹತ್ವದ ತಿರುವ ಕಂಡ ಪ್ರಸಂಗ ಅದು. ದಶರಥ ತಾನು ಕೈಕೇಯಿಗೆ ಯಾವಗಲೋ ಕೊಟ್ಟ ಮಾತನ್ನು ಈಡೇರಿಸಲಿಕ್ಕಾಗಿ ಪಟ್ಟಾಭಿಷಕ್ತನಾಗಬೇಕಿದ್ದ ರಾಮನನ್ನು ಹದಿನಾಲ್ಕು ವರ್ಷ ವನವಾಸಕ್ಕೆ ತೆರಳುವಂತೆ ಕೇಳಿಕೊಳ್ಳುತ್ತಾನೆ. ರಾಮನೇನೋ ತಂದೆಯ ಆಜ್ಞಾಪಾಲನೆಗೆ ಸಿದ್ಧನಾಗಿಬಿಟ್ಟ. ಆದರೆ ಲಕ್ಷ್ಮಣನ ಮುಖ ಕೆಂಪುಕೆಂಪಾಯಿತು. &#8220;ಅಣ್ಣ, ಅಪ್ಪನನ್ನು ಕೊಂದು ರಾಜ್ಯ ವಶಪಡಿಸಿಕೊಳ್ಳೋಣ&#8221; ಎಂದ. ರಾಮ ತಮ್ಮನನ್ನು ಸಂತೈಸುತ್ತ, &#8221; ತಂದೆಯ ಮಾತನ್ನು ನಡೆಸಿಕೊದುವುದೆ ಪುತ್ರಧರ್ಮ. ಅದರಲ್ಲಿಯೆ ನಮಗೆ ಶ್ರೇಯಸ್ಸು&#8221; ಎಂದುಬಿಟ್ಟ. ತಂದೆಯ ಮಾತಿಗಾಗಿ ರಾಜ್ಯಬಿಟ್ಟು ತೆರಳಿದ ರಾಮ, ಮರಳಿ ಬರುವ ವೇಳೆಗೆ [...]]]></description>
			<content:encoded><![CDATA[<div class='snap_preview'><br /><h4><a href="http://neladamaatu.files.wordpress.com/2008/02/withnehru.gif" title="withnehru.gif"></a><a href="http://neladamaatu.files.wordpress.com/2008/02/ray_sirajuddaula.jpg" title="ray_sirajuddaula.jpg"></a><a href="http://neladamaatu.files.wordpress.com/2008/02/shri_ram-20050507-103342.jpg" title="shri_ram-20050507-103342.jpg"><img width="198" src="http://neladamaatu.files.wordpress.com/2008/02/shri_ram-20050507-103342.jpg?w=198&h=268" alt="shri_ram-20050507-103342.jpg" height="268" style="width:198px;height:255px;" /></a></h4>
<h4>ರಾಮಾಯಣದ ಅತ್ಯಂತ ಮಹತ್ವದ ತಿರುವ ಕಂಡ ಪ್ರಸಂಗ ಅದು. ದಶರಥ ತಾನು ಕೈಕೇಯಿಗೆ ಯಾವಗಲೋ ಕೊಟ್ಟ ಮಾತನ್ನು ಈಡೇರಿಸಲಿಕ್ಕಾಗಿ ಪಟ್ಟಾಭಿಷಕ್ತನಾಗಬೇಕಿದ್ದ ರಾಮನನ್ನು ಹದಿನಾಲ್ಕು ವರ್ಷ ವನವಾಸಕ್ಕೆ ತೆರಳುವಂತೆ ಕೇಳಿಕೊಳ್ಳುತ್ತಾನೆ. ರಾಮನೇನೋ ತಂದೆಯ ಆಜ್ಞಾಪಾಲನೆಗೆ ಸಿದ್ಧನಾಗಿಬಿಟ್ಟ. ಆದರೆ ಲಕ್ಷ್ಮಣನ ಮುಖ ಕೆಂಪುಕೆಂಪಾಯಿತು. &#8220;ಅಣ್ಣ, ಅಪ್ಪನನ್ನು ಕೊಂದು ರಾಜ್ಯ ವಶಪಡಿಸಿಕೊಳ್ಳೋಣ&#8221; ಎಂದ. ರಾಮ ತಮ್ಮನನ್ನು ಸಂತೈಸುತ್ತ, &#8221; ತಂದೆಯ ಮಾತನ್ನು ನಡೆಸಿಕೊದುವುದೆ ಪುತ್ರಧರ್ಮ. ಅದರಲ್ಲಿಯೆ ನಮಗೆ ಶ್ರೇಯಸ್ಸು&#8221; ಎಂದುಬಿಟ್ಟ. ತಂದೆಯ ಮಾತಿಗಾಗಿ ರಾಜ್ಯಬಿಟ್ಟು ತೆರಳಿದ ರಾಮ, ಮರಳಿ ಬರುವ ವೇಳೆಗೆ ಜಗ ಬೆಳಗುವ ರಾಮನಾಗಿ ಬಂದ. ಆದರೆ ಪತ್ನಿಯ ದಾಕ್ಷಿಣ್ಯಕ್ಕೆ ಒಳಗಾಗಿ ಮಗನನ್ನೇ ಕಾಡಿಗೆ ಅಟ್ಟಿದ ದಶರಥ, ಪುತ್ರವ್ಯಾಮೋಹದಲ್ಲಿಯೇ ಕೊನೆಯುಸಿರೆಳೆದ.</h4>
<p>~</p>
<h4>ಯಾರದೋ ಮರ್ಜಿಗೆ, ಮುಲಾಜಿಗೆ ಒಳಗಾಗಿ ಕೈಗೊಂಡ ನಿರ್ಣಯಗಳು ಮತ್ತೆಲ್ಲೋ ಒಳ್ಳೆಯ ಕೆಲಸ ಮಾಡಿದರೆ ಪುಣ್ಯ. ಅನೇಕ ವೇಳೆ ಅವು ಭವಿಷ್ಯವನ್ನೇ ಮೊಟಕುಗೊಳಿಸುವಂಥಹ ನಿರ್ಣಯಗಳಾಗಿಬಿಡುತ್ತವೆ.<br />
ಧೃತರಾಷ್ಟ್ರ ತನ್ನ ಮಕ್ಕಳಿಗೇ ರಾಜ್ಯ ಸಿಗಬೆಕೆಂದು ಹಟ ಹಿದಿದು ಪಾಂದವರಿಗೆ ಅನ್ಯಾಯ ಮಾಡಿದನಲ್ಲ, ಪರಿಣಾಮ ಏನಾಯ್ತು ಗೊತ್ತ? ಯುದ್ಧ ಮತ್ತು ಸರ್ವನಾಶ! ಧರ್ಮರಾಜ್ಯ ಸ್ಥಾಪನೆಯಾಗಲಿಕ್ಕೆ ಕೃಷ್ಣ ಕಾರಣನಾದ ಎನ್ನುವುದನ್ನು ಬಿಟ್ಟರೆ ಇಡಿಯ ಮಹಾಭಾರತ ಅನೇಕ ತುಮುಲಗಳ ಆಗರವಾಗಿ ಕಾಣುವುದಿಲ್ಲವೇ? ಅತ್ತ ಧೃತರಾಷ್ಟ್ರ ತನ್ನ ಪುತ್ರ ವ್ಯಾಮೋಹದ ಮುಲಾಜಿಗೆ ಒಳಗಾದರೆ, ಅವನ ಮಗ ದುರ್ಯೋಧನ ತನ್ನದೇ ಅಹಂಕಾರದ ದಾಕ್ಷಿಣ್ಯಕ್ಕೆ ಒಳಗಾಗಿದ್ದ. ಕೃಷ್ಣ ಬಂದು ಧರ್ಮೋಪದೇಶ ಮಾಡಿದರೆ,<br />
ಜಾನಾಮಿ ಧರ್ಮಂ ನ ಚ ಮೇ ಪ್ರವೃತ್ತಿಃ<br />
ಜಾನಾಮ್ಯಧರ್ಮಂ ನ ಚ ಮೇ ನಿವೃತ್ತಿಃ<br />
ಎಂದುಬಿಟ್ಟ.  &#8220;ಧರ್ಮ ಗೊತ್ತಿದ್ದರೂ ಆಚರಿಸುವ  ಮನಸಿಲ್ಲ, ಅಧರ್ಮವೆಮ್ದು ತಿಳಿದರೂ ಬಿಡಲು ಮನಸಿಲ್ಲ&#8221; ಎಂಡು ತನ್ನ ಅಹಂಕಾರಕ್ಕೆ ಶರಣಾಗಿಬಿಟ್ಟ! ಅಬ್ಬಬ್ಬ&#8230; ಈ ಪರಿಯ ದಾಸ್ಯ ಅದೆಷ್ಟು ಕಷ್ಟ, ನಿಕೃಷ್ಟ!?</h4>
<h4>ಹಲವು ಬಾರಿ ನಂಬಿಕೊಂಡ ಆದರ್ಶಗಳೂ ದಾಕ್ಷಿಣ್ಯವಾಗಿಯೇ ಕಾಡುತ್ತವೆ. ಬಹುಶಃ ಆದರ್ಶಗಳ ಮರ್ಜಿಗೆ ಒಳಗಾಗುವುದು ಅಂದರೆ ಅದೇ ಇರಬೇಕು.</h4>
<p>~</p>
<h4>
ಪೃಥ್ವಿರಾಜ್ ಚೌಹಾನನ ಮೇಲೆ ಮಹಮದ್ ಘೋರಿ ದಾಳಿ ಮಾಡಿದ್ದು ನೆನಪಿಸಿಕೊಳ್ಳಿ. ನಮ್ಮ ಇತಿಹಾಸದ ಅತ್ಯಂತ ಪ್ರಮುಖ ಘಟ್ಟ ಅದು. ತರೈನ್ ಎನ್ನುವ ಪ್ರದೇಶದಲ್ಲಿ ಅವರಿಬ್ಬರಿಗೂ ಮುಖಾಮುಖಿಯಾಯ್ತು. ಪೃಥ್ವಿರಾಜನ ಸೇನೆಯೆದುರು ಘೋರಿಯ ಸೇನೆ ಪತರಗುಟ್ಟಿ ಹೋಯಿತು. ಆಮೆಲೇನು?  ಘೋರಿ ಪೃಥ್ವಿರಾಜನ ಕಾಲಿಗೆ ಬಿದ್ದು ಕ್ಷಮೆ ಯಾಚಿಸಿದ. ಕ್ಷಮೆ ಯಾರಿಗೆ? ಅದನ್ನು ಪಾತ್ರರಿಗೆ ನೀಡಬೇಕು. ಘೋರಿಯಂತಹ ಅಪಾತ್ರರಿಗಲ್ಲ. ಆದರ್ಶಗಳ ಮುಲಾಜಿಗೆ ಬಿದ್ದ ಪೃಥ್ವಿರಾಜ್ ಚೌಹಾಣ್ ಘೋರಿಯನ್ನು ಕ್ಷಮಿಸಿದ್ದಷ್ಟೇ ಅಲ್ಲ, ಗೌರವಯುತವಾಗಿ ಮರಳಲು ಅನುವು ಮಾಡಿಕೊಟ್ಟ ಕೂಡ!<br />
ಮರು ವರ್ಷವೇ ತರೈನ್ ನಲ್ಲಿ ಮತ್ತೆ ದಾಳಿಯಾಯ್ತು. ಈ ಬಾರಿ ತನ್ನವರೇ ಮೋಸ ಮಾಡಿದುದರ ಫಲವಾಗಿ ಚೌಹಾನನ ಸೇನೆ ಸೋತಿತು. ಘೋರಿಯ ಕೈ ಮೇಲಾಯ್ತು. ಆತ ಚೌಹಾನನನ್ನು ಬಂಧಿಸಿ, ತನ್ನೂರಿಗೆ ಕರೆದೊಯ್ದ. ಅಲ್ಲಿ ಅವನ ಎರಡೂ ಕಣ್ಣೂಗಳನ್ನು ಕೀಳಿಸಿ ಬರ್ಬರ ಕೊಲೆ ಮಾಡಿಸಿದ.<br />
ಅದಕ್ಕೇ ಹೇಳೋದು. ಅಯೋಗ್ಯರಿಗೆ ಒಳ್ಳೆಯದನ್ನು ಮಾಡಬಾರದೆಂಬುದೂ ಒಂದು ಆದರ್ಶ. ಏನಂತೀರಿ?</h4>
<div style="text-align:center;"><img width="165" src="http://neladamaatu.files.wordpress.com/2008/02/ray_sirajuddaula.jpg?w=165&h=255" alt="ray_sirajuddaula.jpg" height="255" /></div>
<h4>೧೭೫೭ರಲ್ಲೂ ಹಾಗೇ ಆಯಿತು. ಸಿರಾಜುದ್ದೌಲ ಬಂಗಾಳಾದ ನವಾಬನಾಗಿದ್ದಾಗ ಆಂಗ್ಲರ ವಿರುದ್ಧ ತಿರುಗಿ ಬಿದ್ದ. ಪೋರ್ಟ್ ವಿಲಿಯಂ ಮೇಲೆ ಏರಿ ಹೋದ. ಪತರಗುಟ್ಟಿದ ರಾಬರ್ಟ್ ಕ್ಲೈವ್, ಸಿರಾಜುದ್ದೌಲನ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್  ಜಾಫರನನ್ನು ಒಲಿಸಿಕೊಂಡ. ರಾಜ್ಯದ ಆಮಿಷ ತೋರಿದ. ಈ ಬಾರಿ ಮೀರ್ ಜಾಫರ್ ಯುದ್ಧಕ್ಕೆ ಮುನ್ನ ನವಾಬನ ಬಳಿ ಹೋಗಿ, “ನನ್ನಂತಹ ಸೇನಾಪತಿ ಇರುವಾಗ ನವಾಬರೇ ಯುದ್ಧಕ್ಕೆ ಬರುವುದು ಸರಿಯಲ್ಲ, ಹಾಗೆ ಮಾಡಿದರೆ ಅದು ನನ್ನ ಸಾಮರ್ಥ್ಯಕ್ಕೆ ಅವಮಾನ ಮಾಡಿದಂತೆ. ಬೆರಳೆಣಿಕೆಯಷ್ಟಿರುವ ಆಂಗ್ಲರನ್ನು ಸೋಲಿಸಿ ಬರುತ್ತೇನೆ&#8221; ಎಂದ. ನವಾಬನಿಗೂ ಹೌದೆನ್ನಿಸಿತು. ತನ್ನ ಸೇನಾಪತಿಗೆ ಅವಮಾನ ಮಾಡುವುದು ಸರಿಯೇ ಅನ್ನುವ ದ್ವಂದ್ವ ಅವನನ್ನು ಕಾಡಿತು. ಮೀರ್ ಜಾಫರನ ಮುಲಾಜಿಗೆ ಒಳಗಾದ. ಭಾರತದ ಇತಿಹಾಸವೇ ಬದಲಾಯ್ತು. ರಾಬರ್ಟ್ ಕ್ಲೈವ್ ಕದನದಲ್ಲಿ ಸಲೀಸಾಗಿ ಗೆದ್ದ. ನವಾಬನನ್ನು ಪದಚ್ಯುತಗೊಳಿಸಿ ಮೀರ್ ಜಾಫರನನ್ನು ಪಟ್ಟಕ್ಕೇರಿಸಲಾಯ್ತು. ಬ್ರಿಟನ್ನಿನ ಪ್ರಭುತ್ವ ಭಾರತದಲ್ಲಿ ಸ್ಥಿರವಾಗಲು ಅದೊಂದು ಹೆದ್ದಾರಿಯಾಯ್ತು. ಒಂದು ನಿರ್ಧಾರ ಇತಿಹಾಸ ಬದಲಿಸುವ ಎಂತಹ ಕೆಲಸ ಮಾಡಿತು ನೋಡಿ!</h4>
<p>~</p>
<h4><a href="http://neladamaatu.files.wordpress.com/2008/02/withnehru.gif" title="withnehru.gif"></a></h4>
<h4>ಗಾಂಧೀಜಿಯೂ ಇಂತಹ, ಇತರರಿಂದ ಪ್ರಭಾವಿತರಾದ ನಿರ್ಣಯ ಕೈಗೊಳ್ಳುತ್ತಲೇ ಇದ್ದರು. ಅವರು ನೆಹರೂರನ್ನು ತಮ್ಮ ಉತ್ತರಾಧಿಕಾರಿ ಎಂದು ಕರೆದಿದ್ದು ಏಕೆ ಎಂಬ ಪ್ರಶ್ನೆ ಒಂದು ಹಂತದ ನಂತರ ಅವರನ್ನೇ ಕಾಡಿರಲಿಕ್ಕೆ ಸಾಕು. ಮೋತೀಲಾಲ ನೆಹರೂ ಕಾಂಗ್ರೆಸ್ ಪಾರ್ಟಿಗೆ ತುಂಬಾ ದುಡಿದಿದ್ದರು ಎಂಬ ದಾಕ್ಷಿಣ್ಯವ? ಅಥವಾ ಶೋಕೀಲಾಲನಾಗಿದ್ದ ಯುವಕ ತನ್ನ ಚಿಂತನೆಗಳಿಗೆ ಮನಸೋತು ಬಂದಿದ್ದಾನೆಂಬ ಮುಲಾಜಿಗೋ? ದೇವರೇ ಬಲ್ಲ. ಹಾಗೆ ನೋದಿದರೆ ಯಾವ ಕಾರಣಕ್ಕೂ ನೆಹರೂ ಗಾಂಧೀಜಿಯ ಉತ್ತರಾಧಿಕಾರಿಯಾಗುವ ಯೋಗ್ಯತೆ ಹೊಂದಿರಲಿಲ್ಲ. ಗಾಂಧೀಜಿಯ ಸ್ವದೇಶೀ ಚಿಂತನೆಗಳು ಯೋಚಿಸಲಿಕ್ಕೂ ಅನರ್ಹ ಎಂದವರು ನೆಹರೂ. ಗಾಂಧೀಜಿಯಷ್ಟು ಸತ್ಯಪರಾಯಣತೆ, ಆದರ್ಶಗಳಿಗೆ ಬದ್ಧತೆ, ಇವ್ಯಾವುವೂ ಅವರಿಗಿರಲಿಲ್ಲ. ಅಷ್ಟಾದರೂ ಗಾಂಧೀಜಿ ಮೈಮರೆತು ನೆಹರೂಗೆ ಅಷ್ಟು ಮಹತ್ವದ ಸ್ಥಾನ ಕೊಟ್ಟರು. “ನನ್ನ ನಂತರ ನೆಹರೂ ನನ್ನ ಮಾತಾಡುತ್ತಾರೆ&#8221; ಎಂದುಬಿಟ್ಟರು. ಕಾಂಗ್ರೆಸ್ಸಿನ ಸೆಂಟ್ರಲ್ ಕಮಿಟಿ ಪಟೇಲರೇ ದೇಶದ ಪ್ರಧಾನಿಯಾಗಲಿ ಎಂದು ಘಂಟಾಘೋಷವಾಗಿ ಹೇಳಿದರೂ ಗಾಂಧೀಜಿ ಮನಸ್ಸು ಮಾಡಲಿಲ್ಲ.</h4>
<h4>ಪ್ರಧಾನ ಮಂತ್ರಿಗಿರಿ ಪಡೆದು ಆಳುವ ಖುರ್ಚಿಯೇರಿದ ನೆಹರೂ, ಖುರ್ಚಿ ತಪ್ಪಿಸಿಕೊಂಡ ನೆಹರೂನಷ್ಟು ಅಪಾಯಕಾರಿಯಲ್ಲ ಅಂತ ಗಾಂಧೀಜಿಗೆ ಅನಿಸಿತ್ತಾ? ಅಥವಾ ಅವರಪ್ಪನಿಗೆ ಮಾತು ಕೊಟ್ಟಿದ್ದೇನೆಂಬ ಒಂದೇ ಕಾರಣಕ್ಕೆ, ಆ ದರ್ದಿಗೆ ಅವರನ್ನು ಪ್ರಧಾನಿಯಾಗಲು ಬಿಟ್ಟರಾ?<br />
ಏನೇ ಆಗಲಿ, ಆ ನಿರ್ಣಯ ರಾಷ್ಟ್ರದ ಪಾಲಿಗೆ ಭಯಾನಕವಾಗಿದ್ದನ್ನು ಮಾತ್ರ ಯಾರೂ ಅಲ್ಲಗಳೆಯಲಾರರು.</h4>
<h4><a href="http://neladamaatu.files.wordpress.com/2008/02/withnehru.gif" title="withnehru.gif"><img align="right" src="http://neladamaatu.files.wordpress.com/2008/02/withnehru.gif" alt="withnehru.gif" /></a></h4>
<h4>ಈ ನಡುವೆ ಪಟೇಲರಿಗೆ ಯಾವ ಮುಲಾಜಿತ್ತು ಎಂಬುದೂ ಪ್ರಶ್ನೆಯೇ. ಉಗ್ರ ಪ್ರತಾಪಿಯಾಗಿದ್ದ ಪಟೇಲರು ಗಾಂಧೀಜಿಯನ್ನು ಧಿಕ್ಕರಿಸದೆ ಉಳಿದ ಕಾಅರ್ಣವೆನು? ಗಾಂಧೀಜಿಯ ಸಮಸ್ಯೆಗಳ ಅರಿವು ಪಟೇಲರಿಗಿತ್ತಾ? ಪಟೇಲರೂ ಗಾಂಧೀಜಿಯ ದಾಕ್ಷಿಣ್ಯಕ್ಕೆ ಒಳಗಾಗಿದ್ದರಾ? ಪ್ರಶ್ನೆ ಆಳಕ್ಕಿಳಿಯುತ್ತಲೇ ಹೋಗುತ್ತದೆ. ಅಲ್ಲವೇ?</h4>
<h4>ಈ ಕಾರಣಗಳಿಂದಾಗಿ ದೇಶ ದಾರಿ ತಪ್ಪಿತೆಂದಷ್ಟೇ ಹೇಳಬಹುದು. ದೇಶ ವಿಭಜನೆಯ ಸಂದರ್ಭದಲ್ಲಿ ಲಕ್ಷಾಂತರ ಜನರ ಆಹುತಿಯಾಯ್ತು. ಆನಂತರದ ಪಂಚವಾರ್ಷಿಕ ಯೋಜನೆಗಳ ಭಾರದಲ್ಲಿ ದೇಶ ನಲುಗಿತು. ಹಳಿ ತಪ್ಪಿದ್ದ ಶಿಕ್ಷಣ ವ್ಯವಸ್ಥೆ, ನ್ಯಾಯ ವ್ಯವಸ್ಥೆ, ಕೃಷಿ ವ್ಯವಸ್ಥೆ, ಯಾವುವೂ ಮತ್ತೆ ಸರಿದಾರಿಗೆ ಬರಲೇ ಇಲ್ಲ. ಒಂದು ತಪ್ಪು ನಿರ್ಣಯ ಭಾರತವನ್ನು ಎರಡನೇ ಬಾರಿಗೆ  ಗುಲಾಮಗಿರಿಗೆ ನೂಕಿತೆಂದರೆ ತಪ್ಪಿಲ್ಲ.</h4>
<h4>ದಾಕ್ಷಿಣ್ಯಕ್ಕೆ ಬಸಿರಾಗುವ ಈ ಪ್ರಕ್ರಿಯೆ ಸ್ವಾತಂತ್ರ್ಯಾನಂತರವೂ ನಿಲ್ಲಲಿಲ್ಲ. ನಮ್ಮ ಮೇಲೆ ದಾಳಿ ಮಾಡಿ ನಮ್ಮ ಭೂಮಿಯನ್ನೇ ವಶಪಡಿಸಿಕೊಂಡ ಚೀನಾದ ವಿರುದ್ಧ ನಾವು ಮಾತಾಡಲೂ ಇಲ್ಲ. ದೇಸದೊಳಗಿನ ಚೀನಾ ನಿಷ್ಠ ಕಮ್ಯುನಿಸ್ಟರು ಬೇಸರಗೊಂಡರೆ!? ಎಂಬ ನೋವು ನಮಗೆ.</h4>
<p>~</p>
<h4>ಕಳೆದ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನ ಸೇನೆಯನ್ನು ಬಡಿದೆವಲ್ಲ, ಆಗಲೂ ನಮ್ಮದು ದಾಕ್ಷಿಣ್ಯವೇ. ಆರಂಭದಲ್ಲಿ ನಾವು ಕೆಳಗಿದ್ದೆವು, ಉಗ್ರರು ಮೇಲಿದ್ದರು. ಆಗ ಸಂಧಾನದ ಮಾತಿರಲಿಲ್ಲ. ನಮ್ಮ ಸೈನಿಕರು ಸಾಹಸಗೈದು ಮೇಲೇರುತ್ತಿದ್ದಂತೆ ಪಾಕ್ ಸೈನ್ಯ ತತ್ತರಿಸಿಬಿಟ್ಟಿತು. ಎಂದಿನಂತೆ ನಮ್ಮ ಸರ್ಕಾರ ಅಮೆರಿಕದ ಮುಲಾಜಿಗೆ ಒಳಗಾಗಿ ಪಾಕ್ ಸೈನಿಕರಿಗೆ ಮುಕ್ತಮಾರ್ಗ ತೋರಿಸಿತು. ನಮಮ್ ಸೈನಿಕರೇ ಅವರ ರಕ್ಷಣೆಗೆ ನಿಂತು ಅವರನ್ನು ಅವರ ದೇಶಕ್ಕೆ ಕಲೀಸಬೇಕಾಯ್ತು! ಇದಕ್ಕಿಂತ ಹೀನ ಸ್ಥಿತಿ ಯಾವುದೂ ಇಲ್ಲ ಅಂದ್ಕೊಂಡ್ರಾ?</h4>
<h4>ಖಂಡಿತ ಇದೆ. ಮೌಲಾನಾ ಮಸೂದ್ ಅಜರ್ ಬಿಡುಗಡೆಗೆಂದು ಉಗ್ರರು ವಿಮಾನಾಪಹರಣ ಮಾಡಿದ್ದು ನೆನಪಿಸಿಕೊಳ್ಳಿ. ಅವತ್ತು ವಿಮಾನದಲ್ಲಿದ್ದ ಆ ಪ್ರಯಾಣಿಕರ ಮನೆಯವರು ಗಲಾಟೆ ಮಾಡಿದರೆಂಬ ಕಾರಣಕ್ಕೆ ಈ ದೇಶದ ವಿದೇಶಾಂಗ ಸಚಿವರು ವಿಮಾನದಲ್ಲಿ ಆ ಉಗ್ರಗಾಮಿಯನ್ನು ತಮ್ಮೊಂದಿಗೆ ಕುಳ್ಳರಿಸಿಕೊಂಡು ಬಿಟ್ಟು ಬಂದರಲ್ಲ, ಅದು ಯಾವ ಮಟ್ಟದ ಕೃತ್ಯ, ನೀವೇ ಹೇಳಿ&#8230;  ಪ್ರತಿ ಬಾರಿಯೂ ಹೀಗೇ ಆದರೆ?</h4>
<h4>ಇವೆಲ್ಲಕ್ಕೂ ಕಿರೀಟಪ್ರಾಯವಾದಂಥದ್ದು, ಸಂಸತ್ತಿನ ಮೇಲೆ ದಾಳಿ ಮಾಡಿದ ಅಫ್ಜಲ್ ಗುರುವಿನ ಕಥೆ. ಬರಿಯ ಓಟಿನ ದಾಕ್ಷಿಣ್ಯಕ್ಕೆ ಬಿದ್ದು ಅವನನ್ನು ನೇಣಿಗೇರಿಸದೆ ಕುಳಿತಿದ್ದಾರಲ್ಲ, ಈ ನಿರ್ಣಯ ಸರಿಯಾ?</h4>
<h4>ಹುಡುಕುತ್ತ ಹೋದರೆ ಅಸಂಖ್ಯ ಘಟನೆಗಳಿವೆ. ಯಾವುದೇ ನಿರ್ಧಾರದ ಹಿಂದೆ ದೂರಾಲೋಚನೆ ಇರಬೇಕು. ಹಾಗಾಗಬೇಕೆಂದರೆ ಆ ನಿರ್ಧಾರಕ್ಕೆ ದಾಕ್ಷಿಣ್ಯದ ಸೋಂಕು ತಾಕಬಾರದು. ಯಾರದೋ ಮುಲಾಜಿಗೆ, ಮರ್ಜಿಗೆ, ದರ್ದಿಗೆ ಒಳಗಾದರೆ ಅಂದುಕೊಂಡ ಕಾರ್ಯ ಯಶಸ್ವಿಯಾಗಲಾರದು. ಅಲ್ಲವೇ?<br />
 </h4>
<img alt="" border="0" src="http://feeds.wordpress.com/1.0/categories/neladamaatu.wordpress.com/17/" /> <img alt="" border="0" src="http://feeds.wordpress.com/1.0/tags/neladamaatu.wordpress.com/17/" /> <a rel="nofollow" href="http://feeds.wordpress.com/1.0/gocomments/neladamaatu.wordpress.com/17/"><img alt="" border="0" src="http://feeds.wordpress.com/1.0/comments/neladamaatu.wordpress.com/17/" /></a> <a rel="nofollow" href="http://feeds.wordpress.com/1.0/godelicious/neladamaatu.wordpress.com/17/"><img alt="" border="0" src="http://feeds.wordpress.com/1.0/delicious/neladamaatu.wordpress.com/17/" /></a> <a rel="nofollow" href="http://feeds.wordpress.com/1.0/gostumble/neladamaatu.wordpress.com/17/"><img alt="" border="0" src="http://feeds.wordpress.com/1.0/stumble/neladamaatu.wordpress.com/17/" /></a> <a rel="nofollow" href="http://feeds.wordpress.com/1.0/godigg/neladamaatu.wordpress.com/17/"><img alt="" border="0" src="http://feeds.wordpress.com/1.0/digg/neladamaatu.wordpress.com/17/" /></a> <a rel="nofollow" href="http://feeds.wordpress.com/1.0/goreddit/neladamaatu.wordpress.com/17/"><img alt="" border="0" src="http://feeds.wordpress.com/1.0/reddit/neladamaatu.wordpress.com/17/" /></a> <img alt="" border="0" src="http://stats.wordpress.com/b.gif?host=neladamaatu.wordpress.com&blog=2082898&post=17&subd=neladamaatu&ref=&feed=1" /></div>]]></content:encoded>
			<wfw:commentRss>http://neladamaatu.wordpress.com/2008/02/07/%e0%b2%87%e0%b2%a4%e0%b2%bf%e0%b2%b9%e0%b2%be%e0%b2%b8%e0%b2%a6-%e0%b2%aa%e0%b3%81%e0%b2%9f%e0%b2%97%e0%b2%b3%e0%b2%b2%e0%b3%8d%e0%b2%b2%e0%b2%bf-%e0%b2%ae%e0%b3%81%e0%b2%b2%e0%b2%be%e0%b2%9c%e0%b2%bf/feed/</wfw:commentRss>
	
		<media:content url="http://a.wordpress.com/avatar/bhoomitaayi-128.jpg" medium="image">
			<media:title type="html">Chakravarty</media:title>
		</media:content>

		<media:content url="http://neladamaatu.files.wordpress.com/2008/02/shri_ram-20050507-103342.jpg" medium="image">
			<media:title type="html">shri_ram-20050507-103342.jpg</media:title>
		</media:content>

		<media:content url="http://neladamaatu.files.wordpress.com/2008/02/ray_sirajuddaula.jpg" medium="image">
			<media:title type="html">ray_sirajuddaula.jpg</media:title>
		</media:content>

		<media:content url="http://neladamaatu.files.wordpress.com/2008/02/withnehru.gif" medium="image">
			<media:title type="html">withnehru.gif</media:title>
		</media:content>
	</item>
		<item>
		<title>ಗಾಂಧಿ ಎಂಬ ‘ಮಹಾತ್ಮ’</title>
		<link>http://neladamaatu.wordpress.com/2008/02/02/%e0%b2%97%e0%b2%be%e0%b2%82%e0%b2%a7%e0%b2%bf-%e0%b2%8e%e0%b2%82%e0%b2%ac-%e2%80%98%e0%b2%ae%e0%b2%b9%e0%b2%be%e0%b2%a4%e0%b3%8d%e0%b2%ae%e2%80%99/</link>
		<comments>http://neladamaatu.wordpress.com/2008/02/02/%e0%b2%97%e0%b2%be%e0%b2%82%e0%b2%a7%e0%b2%bf-%e0%b2%8e%e0%b2%82%e0%b2%ac-%e2%80%98%e0%b2%ae%e0%b2%b9%e0%b2%be%e0%b2%a4%e0%b3%8d%e0%b2%ae%e2%80%99/#comments</comments>
		<pubDate>Sat, 02 Feb 2008 17:35:07 +0000</pubDate>
		<dc:creator>Chakravarty</dc:creator>
		
		<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>

		<guid isPermaLink="false">http://neladamaatu.wordpress.com/?p=16</guid>
		<description><![CDATA[ಸೋಮನಾಥ ದೇವಾಲಯ ಹಿಂದೂಗಳ ಮೇಲಿನ ಅತ್ಯಾಚಾರದ ಪ್ರತೀಕವಾಗಿ ನಿಂತಿತ್ತು. ಅದನ್ನು ಮತ್ತೆ ನಿರ್ಮಣ ಮಡಿ, ದಾಳಿಕೋರರ ಅತ್ಯಾಚಾರದ ನೆನಪುಗಳನ್ನು ಮೆಟ್ಟಿನಿಲ್ಲುವ ಕೆಲಸ ಆಗಬೇಕಿತ್ತು. ವಿಷಯ ಪ್ರಧಾನಿ ನೆಹರೂ ಬಳಿ ಬಂದಾಗ, ಸರ್ಕಾರ ಒಂದು ಪೈಸೆ ಕೊಡಲಾರದು ಎಂದುಬಿಟ್ಟರು. ಸೋಮನಾಥ ಮಂದಿರ ಕಟ್ಟುವುದರಿಂದ ಮುಸಲ್ಮಾನರಿಗೆ ನೋವಾದೀತೆಂಬ ಭಯ ಅವರಿಗಿತ್ತು. ಗೃಹ ಮಂತ್ರಿ ಪಟೇಲರು ಕಂಗಾಲಾದರು, ಗಾಂಧೀಜಿ ಬಳಿ ಓಡಿದರು. ನೆಹರೂಗೆ ಬುದ್ಧಿ ಹೇಳುವಂತೆ ಗೋಗರೆದರು. ಆಗ ‘ಸೋಮನಾಥ ದೇವಾಲಯ ಹಿಂದೂಗಳ ಶ್ರದ್ಧೆಯ ತಾಣ. ಅದರ ನಿರ್ಮಾಣಕ್ಕೆ ಸರ್ಕಾರ ಹಣ [...]]]></description>
			<content:encoded><![CDATA[<div class='snap_preview'><br /><h4>ಸೋಮನಾಥ ದೇವಾಲಯ ಹಿಂದೂಗಳ ಮೇಲಿನ ಅತ್ಯಾಚಾರದ ಪ್ರತೀಕವಾಗಿ ನಿಂತಿತ್ತು. ಅದನ್ನು ಮತ್ತೆ ನಿರ್ಮಣ ಮಡಿ, ದಾಳಿಕೋರರ ಅತ್ಯಾಚಾರದ ನೆನಪುಗಳನ್ನು ಮೆಟ್ಟಿನಿಲ್ಲುವ ಕೆಲಸ ಆಗಬೇಕಿತ್ತು. ವಿಷಯ ಪ್ರಧಾನಿ ನೆಹರೂ ಬಳಿ ಬಂದಾಗ, ಸರ್ಕಾರ ಒಂದು ಪೈಸೆ ಕೊಡಲಾರದು ಎಂದುಬಿಟ್ಟರು. ಸೋಮನಾಥ ಮಂದಿರ ಕಟ್ಟುವುದರಿಂದ ಮುಸಲ್ಮಾನರಿಗೆ ನೋವಾದೀತೆಂಬ ಭಯ ಅವರಿಗಿತ್ತು. ಗೃಹ ಮಂತ್ರಿ ಪಟೇಲರು ಕಂಗಾಲಾದರು, ಗಾಂಧೀಜಿ ಬಳಿ ಓಡಿದರು. ನೆಹರೂಗೆ ಬುದ್ಧಿ ಹೇಳುವಂತೆ ಗೋಗರೆದರು. ಆಗ ‘ಸೋಮನಾಥ ದೇವಾಲಯ ಹಿಂದೂಗಳ ಶ್ರದ್ಧೆಯ ತಾಣ. ಅದರ ನಿರ್ಮಾಣಕ್ಕೆ ಸರ್ಕಾರ ಹಣ ಕೊಡಲಾರದೆಂದರೆ ತಿರಸ್ಕರಿಸೋಣ. ಒಬ್ಬೊಬ್ಬ ಹಿಂದೂವಿನಿಂದಲೂ ಹಣ ಸಂಗ್ರಹಿಸೋಣ. ಅಲ್ಲಿನ ಒಂದೊಂದು ಇಟ್ಟಿಗೆಯೂ ಹಿಂದೂವಿನದೇ ಆಗಿರಲಿ’ ಎಂದವರು ಗಾಂಧೀಜಿ! ಪಟೇಲರ ಶಕ್ತಿ ನೂರ್ಮಡಿಯಾಯಿತು. ಸೋಮನಾಥ ದೇವಾಲಯದ ನಿರ್ಮಾಣಕ್ಕೆ ಮುಂದಡಿಯಿಟ್ಟರು.</h4>
<h4>ಸ್ವಾತಂತ್ರ್ಯ ಹೋರಾಟದ ಅಂತಿಮ ಹಂತದ ಸಮಯ. ನೌಖಾಲಿಯಲ್ಲಿ ಇದ್ದಕ್ಕಿದ್ದ ಹಾಗೆ ದೊಂಬಿಗಳು ಶುರುವಿಟ್ಟವು. ಮುಸಲ್ಮಾನರು ಹಿಂದೂಗಳ ಮೇಲೆ ಆಘಾತಕಾರಿ ದಾಳಿ ನಡೆಸಿದರು. ಅದಕ್ಕೆ ಪ್ರತಿಯಾಗಿ ಹಿಂದೂಗಳು ತಿರುಗಿಬೀಳುವ ಹೊತ್ತಿಗೆ ಸರಿಯಾಗಿ ಈಗಿನ ಬಾಂಗ್ಲಾ ಪ್ರಾಂತ್ಯದಲ್ಲಿ ಬಹು ಸಂಖ್ಯಾತ ಮುಸಲ್ಮಾನರು ಹಿಂದೂಗಳನ್ನು ಕೊಲ್ಲತೊಡಗಿದರು. ಮೌಂಟ್ ಬ್ಯಾಟನ್ ೧೫ ಸಾವಿರ ಸೈನಿಕರನ್ನು ಅತ್ತ ಕಳಿಸಿಕೊಟ್ಟ. ನೌಖಾಲಿಗೆ ಗಾಂಧೀಜಿ ಒಬ್ಬಂಟಿ ಹೊರಟರು. “ಅಲ್ಲಿನ ಹಿಂದೂಗಳನ್ನು ನೀವು ರಕ್ಷಿಸಿ, ಇಲ್ಲಿನ ಮುಸಲ್ಮಾನರನ್ನು ರಕ್ಷಿಸುವ ಹೊಣೆ ನನಗಿರಲಿ&#8221; ಎಂದರು. ರಕ್ತಪಾತ ನಿಲ್ಲುವವರೆಗೆ ಉಪವಾಸ ಕುಳೀತುಕೊಳ್ಳುತ್ತೇನೆ ಎಂದರು. ಸೇಡಿನ ಕಿಚ್ಚಿನಿಂದ ಹಪಹಪಿಸುತ್ತಿದ್ದವರೂ ಗಾಂಧೀಜಿಯ ಮುಂದೆ ಮಂಡಿಯೂರಿ ಕುಳಿತರು. ಮೌಂಟ್ ಬ್ಯಾಟನ್ ಉದ್ಗರಿಸಿದ. “ದಂಗೆ ನಿಯಂತ್ರಿಸಿದ್ದು ಎರಡು ಸೇನೆಗಳು. ಒಂದೆಡೆ ೧೫ಸಾವಿರ ಸೈನಿಕರ ಸಮೂಹ, ಇನ್ನೊಂದೆಡೆ ಸಿಂಗಲ್ ಮ್ಯಾನ್ ಆರ್ಮಿ- ಗಾಂಧೀ!!&#8221;</h4>
<h4><img border="0" width="492" src="http://www.unityofthevalley.org/Gandhi.jpg" height="534" style="width:278px;height:307px;" /></h4>
<h4> ಇವು ಅಷ್ಟಾಗಿ ಚರ್ಚೆಗೆ ಬರದ ಗಾಂಧೀಜಿಯವರ ಚಿತ್ರಣಗಳು. ಗಾಂಧೀಜಿಗೆ ಹಿಂದೂ ಧರ್ಮ ಗ್ರಂಥಗಳ ಬಗ್ಗೆ ಅಪಾರ ಗೌರವ. ಗೀತೆಯ ಬಗ್ಗೆ ಅವರು ಸೊಗಸಾಗಿ ಬರೆದಿದ್ದಾರೆ. ರಾಷ್ಟ್ರದ ಸಮಸ್ಯೆಗಳಿಗೆ ಅದರಿಂದಲೇ ಪರಿಹಾರ ಹೇಳುತ್ತಾರೆ. ಇಷ್ಟಾಗಿಯೂ ಹಿಂದೂಗಳು ಅವರನ್ನು ತಮ್ಮ ನಾಯಕರೆಂದು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಅತ್ತ ಮುಸಲ್ಮಾನರು ಗಾಂಧೀಜಿಯನ್ನು ಹಿಂದೂಗಳ ನಾಯಕರೆಂದು ದೂರೀಕರಿಸುತ್ತಾರೆ. ಯಾವ ಹರಿಜನರ ಉದ್ಧಾರಕ್ಕಾಗಿ ತಮ್ಮ ಬದುಕಿನ ಪ್ರತಿಯೊಂದು ಹನಿ ಬೆವರನ್ನೂ ಸುರಿಸಿದರೋ, ಅದೇ ಹರಿಜನರ ಪಾಲಿಗೆ ಗಾಂಧೀಜಿ ಮೆಚ್ಚಿನ ನಾಯಕರಲ್ಲ. ಇತ್ತ ಮೇಲ್ವರ್ಗದ ಜನ ಕೂಡ ಅವರನ್ನು ಆರಾಧಿಸುವುದಿಲ್ಲ. ಸಮಾಜದ ಎಲ್ಲ ವರ್ಗದವರಿಗೂ ಗಾಂಧೀಜಿಯೇ ಅಸ್ಪೃಶ್ಯರಾಗಿಬಿಟ್ಟರು!</h4>
<h4>ದೇಶ- ಧರ್ಮಗಳ ಚಿಂತನೆ ಮಾಡದೇ, ಅನ್ಯಾಯವನ್ನು ಪ್ರತಿಭಟಿಸದೇ ಎಲ್ಲರಂತೆ ಇದ್ದುಬಿಟ್ಟಿದ್ದರೆ ಅವರೊಬ್ಬ ಶ್ರೀಮಂತ ಬ್ಯಾರಿಸ್ಟರ್ ಆಗಿರುತ್ತಿದ್ದರು. ಹಾಗಾಗಲಿಲ್ಲ. ಶ್ರೀಮಂತಿಕೆಯ ಬದುಕಿಗೊಂದು ಸಲಾಮು ಹೊಡೆದು, ತುಂಡು ಧೋತಿ ಧರಿಸಿ ರಾಷ್ಟ್ರ ಸೇವೆಗೆ ಧುಮುಕಿದರು. ಯಾವ ವರ್ಗವನ್ನು ವಿವೇಕಾನಂದರ ನಂತರ ಯಾರೂ ಪ್ರತಿನಿಧಿಸಿರಲಿಲ್ಲವೋ ಅಂಥಹ ಬಡ- ದರಿದ್ರರ ದನಿಯಾದರು. ವಿದೇಶದಲ್ಲಿರುವಾಗಲೇ ಬಿಳಿಯರು ಕರಿಯರ ಮೇಲೆ ನಡೆಸುತ್ತಿದ್ದ ದಬ್ಬಾಳಿಕೆಯನ್ನು ವಿರೋಧಿಸಿದರು. “ಹೊಡೆದರೆ ಹೊಡೆಸಿಕೊಳ್ಳಿ. ಬಡಿದರೆ ಬಡಿಸಿಕೊಳ್ಳಿ. ಬಡಿಯುವವರು ಎಷ್ಟೂಂತ ಬಡಿದಾರು? &#8221; ಎಂಬ ಸಿದ್ಧಾಂತವನ್ನು ಹೋರಾಟಗಾರರ ಕೈಗಿತ್ತರು. ದಬ್ಬಾಳಿಕೆಗೆ ಒಳಗಾದವರೂ ಮೊದಲು ಇವರನ್ನು ವಿರೋಧಿಸಿದರು. ಆಮೇಲೆ ಅಪಹಾಸ್ಯಗೈದರು. ಇಷ್ಟಾದರೂ ಆಸಾಮಿ ಜಗ್ಗದಿದ್ದಾಗ ಅವರನ್ನೇ ಅನುಸರಿಸಿದರು! ತಮ್ಮ ನಾಯಕನಾಗಿ ಸ್ವೀಕರಿಸಿದರು. ದೂರ ದೇಶದಿಂಡ ಬಂದವನೊಬ್ಬ ನೊಂದವರ ಕಣ್ಣೀರೊರೆಸುವುದು ತಮಾಷೆಯ ಕೆಲಸವಲ್ಲ. ಇಡೀ ಬ್ರಿಟಿಷ್ ಸಮುದಾಯ ಹೋರಾಟಾದ ಈ ಹೊಸ ಅಸ್ತ್ರಕ್ಕೆ ಬೆದರಿತು. ಇಂಗ್ಲೆಂಡಿನ ಪತ್ರಿಕೆಗಳೂ ಅವರನ್ನು ಹಾಡಿ ಹೊಗಳಿದವು. ನೋಡನೋಡುತ್ತಿದ್ದಂತೆಯೇ ಗಾಂಧೀಜಿ ಕಣ್ಣೂಕೋರೈಸುವಷ್ಟು ಎತ್ತರಕ್ಕೆ ಬೆಳೆದುಬಿಟ್ಟಿದ್ದರು.</h4>
<h4>ಇದೇ ಜಾಗತಿಕ ಖ್ಯಾತಿಯೊಂದಿಗೆ ಅವರು ಭಾರತಕ್ಕೆ ಬಂದಾಗ ಇಲ್ಲಿನ ಎಲ್ಲ ವರ್ಗಗಳೂ ಆಸಕ್ತಿಯಿಂದ ಕಾದಿದ್ದವು. ಗಾಂಧೀಜಿ ಅದ್ಭುತ ವಾಗ್ಮಿಯೇನಲ್ಲ. ಆದರೂ ಅವರು ಮಾತಾಡಲಿಕ್ಕೆ ನಿಂತರೆ ಜನಸ್ತೋಮವಿಡೀ ನಿಶ್ಶಬ್ದವಾಗುತ್ತಿತ್ತು. ಗಾಂಧೀಜಿಯವರ ಒಂದೊಂದು ಮಾತನ್ನೂ ವ್ಯರ್ಥವಾಗಲು ಬಿಡದೆ ಕೇಳಿಸಿಕೊಳ್ಳುವ ಶ್ರದ್ಧೆಯಿರುತ್ತಿತ್ತು. ಅದು, ಗಾಂಧೀಜಿ ವ್ಯಕ್ತಿತ್ವದ ತಾಖತ್ತು.</h4>
<h4>ಕ್ರಾಂತಿಕಾರಿಗಳ ಹೋರಾಟ ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿದ್ದಾಗ, ಗಾಂಧೀಜಿ ರಾಷ್ಟ್ರೀಯ ಚಳುವಳಿಯನ್ನು ಅತಿ ಕೆಳ ವ್ಯಕ್ತಿಯವರೆಗೂ ಕೊಂಡೊಯ್ದಿದ್ದರು. ಅಸಹಕಾರ ಚಳುವಳಿಗೆಂದು ಗಾಂಧೀಜಿ ನೀದಿದ ಒಂದೇ ಕರೆಗೆ ದೇಶದ ಎಲ್ಲ ವರ್ಗದ ಜನ ಸೆಟೆದು ನಿಂತಿದ್ದರು. ತಿಲಕರು ಸ್ವರಾಜ್- ಸ್ವದೇಶ್ ಪದಗಳನ್ನು ಹುಟ್ಟುಹಾಕಿದರು. ನಿಜ. ಗಾಂಧೀಜಿ ಅವುಗಳ ಕಲ್ಪನೆಯನ್ನು ಸಾಕಾರಗೊಳಿಸುವ ಮಾರ್ಗವನ್ನು ಜನರ ಮುಂದಿಟ್ಟರು.</h4>
<h4>ಗಾಂಧೀಜಿ ಮತ್ತು ಸುಭಾಷರ ಬಾಂಧವ್ಯದ ಬಗ್ಗೆಯೂ ಒಂದಷ್ಟು ವಿಷಯಗಳನ್ನು ಬೇಕೆಂದೇ ಮುಚ್ಚಿಡಲಾಗುತ್ತದೆ. ಅವರಿಬ್ಬರ ಸಂಬಂಧ ತಂದೆ- ಮಗನಂತಿತ್ತು ಅನ್ನೋದು ಬಹಳ ಜನರಿಗೆ ಗೊತ್ತೇ ಇಲ್ಲ. ಪತ್ರ ಬರೆವಾಗಲೆಲ್ಲ ಗಾಂಧೀಜಿ “ನಮ್ಮಲ್ಲಿನ ವೈಚಾರಿಕ ಭೇದ ನಮ್ಮ ಸಂಬಂಧಕ್ಕೆ ಧಕ್ಕೆ ತರಬಾರದು&#8221; ಎನ್ನುತ್ತಿದ್ದರು. ಒಮ್ಮೆಯಂತೂ ಪತ್ರದಲ್ಲಿ “ನನ್ನ ನಿನ್ನ ವಿಚಾರಗಳು ವಿಮುಖವಾದವು. ನಾನು ಮುದುಕ, ನೀನು ತರುಣ. ನಿನ್ನ ಚಿಂತನೆ- ವಾದಗಳೇ ಸರಿಯಾಗಿರಲಿ ಎಂದು ಆಶಿಸುತ್ತೆನೆ. ನಿನ್ನ ವಾದದಿಂದಲೇ ದೇಶಕ್ಕೆ ಲಾಭ ಎನ್ನುವುದಾದರೆ ನಾನು ಮಾಜಿ ಸತ್ಯಾಗ್ರಹಿಯಾಗಿ ನಿಷ್ಠೆಯಿಂದ ನಿನ್ನನ್ನು ಅನುಸರಿಸುತ್ತೇನೆ&#8221; ಎಂದಿದ್ದರು. ನಮ್ಮ ಸುಭಾಷ್ ದೇಶಭಕ್ತರ ಗುಂಪಿನಲ್ಲಿ ಮಿಂಚುವ ವೀರ ಎಂದು ಹೆಮ್ಮೆಪಡುತ್ತಿದ್ದರು. ಇನ್ನೊಂದೆಡೆ ಸುಭಾಷರು ಗಾಂಧೀಜಿ ರಾಷ್ಟ್ರಕ್ಕೇ ತಂದೆಯಿದ್ದಂತೆ, ಅವರೇ ‘ರಾಷ್ಟ್ರ ಪಿತ’ ಎಂದು ಹೇಳಿದ್ದರು!</h4>
<h4>ನಮ್ಮ ಕ್ರಾಂತಿಕಾರಿಗಳೆಲ್ಲ ಫ್ರಾನ್ಸು, ಅಮೆರಿಕ, ಜರ್ಮನಿ, ಇಟಲಿಗಳಿಂದ ಸ್ಫೂರ್ತಿಪಡೆದವರು, ಅಲ್ಲಿನ ಹೋರಾಟ ಕ್ರಮವನ್ನು ಅನುಸರಿಸಿದವರು. ಆದರೆ ಗಾಂಧೀಜಿ ಮಾತ್ರ ಈ ದೇಶದ ಸಂಸ್ಕೃತಿಯ ಆಳದಿಂದೆದ್ದು ಬಂದ ಸತ್ಯ- ಅಹಿಂಸೆಗಳೊಂದಿಗೆ ಹೋರಾಟ ಸಂಘಟಿಸಿದವರು. ಅದನ್ನು ಜಗತ್ತಿಗೆ ತೋರಿಸಿಕೊಟ್ಟವರು!</h4>
<h4>ಅವರ ಆತ್ಮ ಕಥೆಯಲ್ಲಿ ಗಾಂಧೀಜಿ ಬರೆದುಕೊಂಡಿದ್ದಾರೆ, “ತಂದೆಸಾವಿನ ಜೊತೆ ಸೆಣಸುತ್ತಿದ್ದಾಗ, ನಾನು ಅವರ ಕಾಲು ಒತ್ತುವುದು ಬಿಟ್ಟು ಹೆಂಡತಿಯೊಡನೆ ಸರಸದಲ್ಲಿದ್ದೆ. ತಂದೆ ಸತ್ತ ವಿಷಯ ತಿಳಿದಿದ್ದೂ ಆಗಲೇ! ನನಗೆ ಅಂದು ನನ್ನ ಮೇಲೇ ಅಸಹ್ಯವಾಗಿತ್ತು&#8221; ಅಂತ. ಆ ಪರಿ ಎತ್ತರಕ್ಕೇರಿರುವ ಮನುಷ್ಯ ಈ ಪರಿಯ ಸತ್ಯಗಳನ್ನು ಹೇಳಬಹುದು ಅನ್ನಿಸುತ್ತಾ? ಯೋಚಿಸಿ. ಅದು ಗಾಂಧೀಜಿಗೆ ಮಾತ್ರ ಸಾಧ್ಯ. ಅದಕ್ಕೇ, ಅವರು ‘ಮಹಾತ್ಮ’!</h4>
<img alt="" border="0" src="http://feeds.wordpress.com/1.0/categories/neladamaatu.wordpress.com/16/" /> <img alt="" border="0" src="http://feeds.wordpress.com/1.0/tags/neladamaatu.wordpress.com/16/" /> <a rel="nofollow" href="http://feeds.wordpress.com/1.0/gocomments/neladamaatu.wordpress.com/16/"><img alt="" border="0" src="http://feeds.wordpress.com/1.0/comments/neladamaatu.wordpress.com/16/" /></a> <a rel="nofollow" href="http://feeds.wordpress.com/1.0/godelicious/neladamaatu.wordpress.com/16/"><img alt="" border="0" src="http://feeds.wordpress.com/1.0/delicious/neladamaatu.wordpress.com/16/" /></a> <a rel="nofollow" href="http://feeds.wordpress.com/1.0/gostumble/neladamaatu.wordpress.com/16/"><img alt="" border="0" src="http://feeds.wordpress.com/1.0/stumble/neladamaatu.wordpress.com/16/" /></a> <a rel="nofollow" href="http://feeds.wordpress.com/1.0/godigg/neladamaatu.wordpress.com/16/"><img alt="" border="0" src="http://feeds.wordpress.com/1.0/digg/neladamaatu.wordpress.com/16/" /></a> <a rel="nofollow" href="http://feeds.wordpress.com/1.0/goreddit/neladamaatu.wordpress.com/16/"><img alt="" border="0" src="http://feeds.wordpress.com/1.0/reddit/neladamaatu.wordpress.com/16/" /></a> <img alt="" border="0" src="http://stats.wordpress.com/b.gif?host=neladamaatu.wordpress.com&blog=2082898&post=16&subd=neladamaatu&ref=&feed=1" /></div>]]></content:encoded>
			<wfw:commentRss>http://neladamaatu.wordpress.com/2008/02/02/%e0%b2%97%e0%b2%be%e0%b2%82%e0%b2%a7%e0%b2%bf-%e0%b2%8e%e0%b2%82%e0%b2%ac-%e2%80%98%e0%b2%ae%e0%b2%b9%e0%b2%be%e0%b2%a4%e0%b3%8d%e0%b2%ae%e2%80%99/feed/</wfw:commentRss>
	
		<media:content url="http://a.wordpress.com/avatar/bhoomitaayi-128.jpg" medium="image">
			<media:title type="html">Chakravarty</media:title>
		</media:content>

		<media:content url="http://www.unityofthevalley.org/Gandhi.jpg" medium="image" />
	</item>
		<item>
		<title>ಮಗೂ, ಶ್ವೇತಕೇತೂ&#8230;.</title>
		<link>http://neladamaatu.wordpress.com/2008/01/20/%e0%b2%ae%e0%b2%97%e0%b3%82-%e0%b2%b6%e0%b3%8d%e0%b2%b5%e0%b3%87%e0%b2%a4%e0%b2%95%e0%b3%87%e0%b2%a4%e0%b3%82/</link>
		<comments>http://neladamaatu.wordpress.com/2008/01/20/%e0%b2%ae%e0%b2%97%e0%b3%82-%e0%b2%b6%e0%b3%8d%e0%b2%b5%e0%b3%87%e0%b2%a4%e0%b2%95%e0%b3%87%e0%b2%a4%e0%b3%82/#comments</comments>
		<pubDate>Sun, 20 Jan 2008 14:15:09 +0000</pubDate>
		<dc:creator>Chakravarty</dc:creator>
		
		<category><![CDATA[ಕವಿತೆಯಂತೆ...]]></category>

		<guid isPermaLink="false">http://neladamaatu.wordpress.com/2008/01/20/%e0%b2%ae%e0%b2%97%e0%b3%82-%e0%b2%b6%e0%b3%8d%e0%b2%b5%e0%b3%87%e0%b2%a4%e0%b2%95%e0%b3%87%e0%b2%a4%e0%b3%82/</guid>
		<description><![CDATA[
ಅಹಂಕಾರದಿಂದ ಬೀಗಿದ ಮಗ
ಅಪ್ಪನೆದುರು ನಿಂತ.
“ತಂದೆ, ನಾ ಎಲ್ಲ ಕಲಿತಿರುವೆ 
ನಿನಗಿಂತ ನಾ ತಿಳಿದವನೀಗ”
ಎಂದ.
ಅಪ್ಪ ನಕ್ಕ,
“ಓಹೋ! ಯಾವುದನರಿತು
ಮತ್ತೇನೂ ಕಲಿಯಬೇಕಿಲ್ಲವೋ ಅದನ್ನೂ&#8230;.
ಅದನ್ನೂ ಅರಿತುಬಿಟ್ಟೆಯಾ!?”
ಮಗ ತಬ್ಬಿಬ್ಬು.
ಅಪ್ಪ ಕೇಳುತ್ತಲೇ ಹೋದ,
ಯಾರು ನೀನು?
ನೀನು ಯಾರು?
ದೇಹ ನೀನಾದರೆ, ನಿನ್ನ ಶವ ನೀನಾ?
ಮನವು ನೀನಾದರೆ, ಬುದ್ಧಿ ಯಾರದು?
ಬುದ್ಧಿ ನೀನಾದರೆ, ಚೈತನ್ಯವದೆಲ್ಲಿ?
ತಿಳಿಯಲಿರುವುದದೆಷ್ಟು?
ಇದನರಿತರೆ ಉಳಿಯುವುದು ಇನ್ನೆಷ್ಟು!?
ಮಗೂ ಶ್ವೇತಕೇತು,
ನಿನ್ನನರಿ.
ನಿನ್ನನರಿ, ನಿನ್ನನರಿ.
ಅದಕ್ಕಾಗಿ ‘ನಿನ್ನ’ ಮರಿ!
       ]]></description>
			<content:encoded><![CDATA[<div class='snap_preview'><br /><p><img border="0" align="right" width="1" src="http://images.google.co.in/imgres?imgurl=http://www.iloveulove.com/images/A07-Sahasrara%2520Chakra.jpg&amp;imgrefurl=http://www.iloveulove.com/spirituality/hindu/chakrasahasrara.htm&amp;h=600&amp;w=511&amp;sz=44&amp;hl=en&amp;start=7&amp;sig2=SYvXQVi6Uy1QbVesCUBI7g&amp;um=1&amp;tbnid=OHuqAe2dyzC11M:&amp;tbnh=135&amp;tbnw=115&amp;ei=oVOTR4KqNqay-ALe3dyxDg&amp;prev=/images%3Fq%3Dsahasrara%26svnum%3D10%26um%3D1%26hl%3Den" height="1" /><img border="0" width="1" src="http://neladamaatu.wordpress.com/wp-admin/" height="1" /></p>
<h4>ಅಹಂಕಾರದಿಂದ ಬೀಗಿದ ಮಗ<br />
ಅಪ್ಪನೆದುರು ನಿಂತ.<br />
“ತಂದೆ, ನಾ ಎಲ್ಲ ಕಲಿತಿರುವೆ <img border="0" align="right" width="1" src="http://images.google.co.in/imgres?imgurl=http://www.iloveulove.com/images/A07-Sahasrara%2520Chakra.jpg&amp;imgrefurl=http://www.iloveulove.com/spirituality/hindu/chakrasahasrara.htm&amp;h=600&amp;w=511&amp;sz=44&amp;hl=en&amp;start=7&amp;sig2=SYvXQVi6Uy1QbVesCUBI7g&amp;um=1&amp;tbnid=OHuqAe2dyzC11M:&amp;tbnh=135&amp;tbnw=115&amp;ei=oVOTR4KqNqay-ALe3dyxDg&amp;prev=/images%3Fq%3Dsahasrara%26svnum%3D10%26um%3D1%26hl%3Den" height="1" /><img border="0" align="right" width="1" src="http://images.google.co.in/imgres?imgurl=http://nyaya.darsana.org/templates/subSilver/images/sahasrara.jpg&amp;imgrefurl=http://nyaya.darsana.org/forum4.html&amp;h=239&amp;w=175&amp;sz=13&amp;hl=en&amp;start=63&amp;sig2=Wpdim-dFQtvYMabn8fiJcQ&amp;um=1&amp;tbnid=LitoL7jNJeXaLM:&amp;tbnh=109&amp;tbnw=80&amp;ei=fFWTR4y2NKCo-QLpjq2yDg&amp;prev=/images%3Fq%3Dsahasrara%26start%3D60%26ndsp%3D20%26svnum%3D10%26um%3D1%26hl%3Den%26sa%3DN" height="1" /><br />
ನಿನಗಿಂತ ನಾ ತಿಳಿದವನೀಗ”<br />
ಎಂದ.</h4>
<h4>ಅಪ್ಪ ನಕ್ಕ,<img border="0" align="right" width="359" src="http://www.yogadanceoflife.com/sahasrara_chakra.jpg" height="414" style="width:236px;height:247px;" /><br />
“ಓಹೋ! ಯಾವುದನರಿತು<br />
ಮತ್ತೇನೂ ಕಲಿಯಬೇಕಿಲ್ಲವೋ ಅದನ್ನೂ&#8230;.<br />
ಅದನ್ನೂ ಅರಿತುಬಿಟ್ಟೆಯಾ!?”<br />
ಮಗ ತಬ್ಬಿಬ್ಬು.</h4>
<h4>ಅಪ್ಪ ಕೇಳುತ್ತಲೇ ಹೋದ,<br />
ಯಾರು ನೀನು?<br />
ನೀನು ಯಾರು?<br />
ದೇಹ ನೀನಾದರೆ, ನಿನ್ನ ಶವ ನೀನಾ?<br />
ಮನವು ನೀನಾದರೆ, ಬುದ್ಧಿ ಯಾರದು?<br />
ಬುದ್ಧಿ ನೀನಾದರೆ, ಚೈತನ್ಯವದೆಲ್ಲಿ?<br />
ತಿಳಿಯಲಿರುವುದದೆಷ್ಟು?<br />
ಇದನರಿತರೆ ಉಳಿಯುವುದು ಇನ್ನೆಷ್ಟು!?</h4>
<h4>ಮಗೂ ಶ್ವೇತಕೇತು,<br />
ನಿನ್ನನರಿ.<br />
ನಿನ್ನನರಿ, ನಿನ್ನನರಿ.<br />
ಅದಕ್ಕಾಗಿ ‘ನಿನ್ನ’ ಮರಿ!</h4>
<img alt="" border="0" src="http://feeds.wordpress.com/1.0/categories/neladamaatu.wordpress.com/14/" /> <img alt="" border="0" src="http://feeds.wordpress.com/1.0/tags/neladamaatu.wordpress.com/14/" /> <a rel="nofollow" href="http://feeds.wordpress.com/1.0/gocomments/neladamaatu.wordpress.com/14/"><img alt="" border="0" src="http://feeds.wordpress.com/1.0/comments/neladamaatu.wordpress.com/14/" /></a> <a rel="nofollow" href="http://feeds.wordpress.com/1.0/godelicious/neladamaatu.wordpress.com/14/"><img alt="" border="0" src="http://feeds.wordpress.com/1.0/delicious/neladamaatu.wordpress.com/14/" /></a> <a rel="nofollow" href="http://feeds.wordpress.com/1.0/gostumble/neladamaatu.wordpress.com/14/"><img alt="" border="0" src="http://feeds.wordpress.com/1.0/stumble/neladamaatu.wordpress.com/14/" /></a> <a rel="nofollow" href="http://feeds.wordpress.com/1.0/godigg/neladamaatu.wordpress.com/14/"><img alt="" border="0" src="http://feeds.wordpress.com/1.0/digg/neladamaatu.wordpress.com/14/" /></a> <a rel="nofollow" href="http://feeds.wordpress.com/1.0/goreddit/neladamaatu.wordpress.com/14/"><img alt="" border="0" src="http://feeds.wordpress.com/1.0/reddit/neladamaatu.wordpress.com/14/" /></a> <img alt="" border="0" src="http://stats.wordpress.com/b.gif?host=neladamaatu.wordpress.com&blog=2082898&post=14&subd=neladamaatu&ref=&feed=1" /></div>]]></content:encoded>
			<wfw:commentRss>http://neladamaatu.wordpress.com/2008/01/20/%e0%b2%ae%e0%b2%97%e0%b3%82-%e0%b2%b6%e0%b3%8d%e0%b2%b5%e0%b3%87%e0%b2%a4%e0%b2%95%e0%b3%87%e0%b2%a4%e0%b3%82/feed/</wfw:commentRss>
	
		<media:content url="http://a.wordpress.com/avatar/bhoomitaayi-128.jpg" medium="image">
			<media:title type="html">Chakravarty</media:title>
		</media:content>

		<media:content url="http://images.google.co.in/imgres?imgurl=http://www.iloveulove.com/images/A07-Sahasrara%2520Chakra.jpg&#38;imgrefurl=http://www.iloveulove.com/spirituality/hindu/chakrasahasrara.htm&#38;h=600&#38;w=511&#38;sz=44&#38;hl=en&#38;start=7&#38;sig2=SYvXQVi6Uy1QbVesCUBI7g&#38;um=1&#38;tbnid=OHuqAe2dyzC11M:&#38;tbnh=135&#38;tbnw=115&#38;ei=oVOTR4KqNqay-ALe3dyxDg&#38;prev=/images%3Fq%3Dsahasrara%26svnum%3D10%26um%3D1%26hl%3Den" medium="image" />

		<media:content url="http://neladamaatu.wordpress.com/wp-admin/" medium="image" />

		<media:content url="http://images.google.co.in/imgres?imgurl=http://www.iloveulove.com/images/A07-Sahasrara%2520Chakra.jpg&#38;imgrefurl=http://www.iloveulove.com/spirituality/hindu/chakrasahasrara.htm&#38;h=600&#38;w=511&#38;sz=44&#38;hl=en&#38;start=7&#38;sig2=SYvXQVi6Uy1QbVesCUBI7g&#38;um=1&#38;tbnid=OHuqAe2dyzC11M:&#38;tbnh=135&#38;tbnw=115&#38;ei=oVOTR4KqNqay-ALe3dyxDg&#38;prev=/images%3Fq%3Dsahasrara%26svnum%3D10%26um%3D1%26hl%3Den" medium="image" />

		<media:content url="http://images.google.co.in/imgres?imgurl=http://nyaya.darsana.org/templates/subSilver/images/sahasrara.jpg&#38;imgrefurl=http://nyaya.darsana.org/forum4.html&#38;h=239&#38;w=175&#38;sz=13&#38;hl=en&#38;start=63&#38;sig2=Wpdim-dFQtvYMabn8fiJcQ&#38;um=1&#38;tbnid=LitoL7jNJeXaLM:&#38;tbnh=109&#38;tbnw=80&#38;ei=fFWTR4y2NKCo-QLpjq2yDg&#38;prev=/images%3Fq%3Dsahasrara%26start%3D60%26ndsp%3D20%26svnum%3D10%26um%3D1%26hl%3Den%26sa%3DN" medium="image" />

		<media:content url="http://www.yogadanceoflife.com/sahasrara_chakra.jpg" medium="image" />
	</item>
		<item>
		<title>ವಾಲ್ ಮಾರ್ಟ್ ಮತ್ತು ಇತಿಹಾಸದ ಪಾಠ&#8230;</title>
		<link>http://neladamaatu.wordpress.com/2008/01/11/%e0%b2%b5%e0%b2%be%e0%b2%b2%e0%b3%8d-%e0%b2%ae%e0%b2%be%e0%b2%b0%e0%b3%8d%e0%b2%9f%e0%b3%8d-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%87%e0%b2%a4%e0%b2%bf%e0%b2%b9%e0%b2%be%e0%b2%b8/</link>
		<comments>http://neladamaatu.wordpress.com/2008/01/11/%e0%b2%b5%e0%b2%be%e0%b2%b2%e0%b3%8d-%e0%b2%ae%e0%b2%be%e0%b2%b0%e0%b3%8d%e0%b2%9f%e0%b3%8d-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%87%e0%b2%a4%e0%b2%bf%e0%b2%b9%e0%b2%be%e0%b2%b8/#comments</comments>
		<pubDate>Fri, 11 Jan 2008 17:24:04 +0000</pubDate>
		<dc:creator>Chakravarty</dc:creator>
		
		<category><![CDATA[ದಿಲ್ ಹೈ ಹಿಂದೂಸ್ಥಾನಿ]]></category>

		<guid isPermaLink="false">http://neladamaatu.wordpress.com/2008/01/11/%e0%b2%b5%e0%b2%be%e0%b2%b2%e0%b3%8d-%e0%b2%ae%e0%b2%be%e0%b2%b0%e0%b3%8d%e0%b2%9f%e0%b3%8d-%e0%b2%ae%e0%b2%a4%e0%b3%8d%e0%b2%a4%e0%b3%81-%e0%b2%87%e0%b2%a4%e0%b2%bf%e0%b2%b9%e0%b2%be%e0%b2%b8/</guid>
		<description><![CDATA[ಎಲ್ಲರಿಗೂ ನಮಸ್ತೇ.
ವಿಕ್ರಮ್ ಹತ್ವಾರ್ ಅವರು ತಮ್ಮ ಕಮೆಂಟಿನಲ್ಲಿ ವಾಲ್ ಮಾರ್ಟ್ ಬಗ್ಗೆ ಮಾತನಾಡಿದ್ದರು. ಹೀಗೆ ವಾಲ್ ಮಾರ್ಟ್ ವಿಷಯ ಬಂದಾಗ ನಾನು ಹೇಳಲೇಬೇಕಾದ ಒಂದಷ್ಟಿದೆ. ಅದನ್ನೀಗ ಇಲ್ಲಿ ನಿಮ್ಮೆದುರಿಡುವೆ.
ನಿಮ್ಮಲ್ಲಿ ಬಹುತೇಕರಿಗೆ ಶೂ ಕಂಪೆನಿಯ ಸೇಲ್ಸ್ ಮನ್ ಗಳಿಬ್ಬರು ಆಫ್ರಿಕಾಕ್ಕೆ ಹೋದ ಹಳೆಯ ಕಥೆ ಗೊತ್ತಿರಬಹುದು.
ಹಾಗೆ ಹೋದ ಇಬ್ಬರಲ್ಲಿ ಒಬ್ಬ ವಾಪಸು ಬಂದು ಮ್ಯಾನೇಜರನ ಬಳಿ ದೂರಿದ. &#8220;ಅಲ್ಲಿನ ಜನರಿಗೆ ಶೂ ಅಂದರೇನೆಂದೇ ಗೊತ್ತಿಲ್ಲ, ಅಲ್ಲಿ ವ್ಯಾಪಾರ ಕಷ್ಟ!&#8221; ಸ್ವಲ್ಪ ಹೊತ್ತಿನಲ್ಲೇ ಮತ್ತೊಬ್ಬ ಏದುಸಿರು ಬಿಡುತ್ತಾ ಬಂದು ಹೇಳಿದ, [...]]]></description>
			<content:encoded><![CDATA[<div class='snap_preview'><br /><h4><img border="0" width="1" src="http://neladamaatu.wordpress.com/wp-admin/" height="1" />ಎಲ್ಲರಿಗೂ ನಮಸ್ತೇ.</h4>
<h4>ವಿಕ್ರಮ್ ಹತ್ವಾರ್ ಅವರು ತಮ್ಮ ಕಮೆಂಟಿನಲ್ಲಿ ವಾಲ್ ಮಾರ್ಟ್ ಬಗ್ಗೆ ಮಾತನಾಡಿದ್ದರು. ಹೀಗೆ ವಾಲ್ ಮಾರ್ಟ್ ವಿಷಯ ಬಂದಾಗ ನಾನು ಹೇಳಲೇಬೇಕಾದ ಒಂದಷ್ಟಿದೆ. ಅದನ್ನೀಗ ಇಲ್ಲಿ ನಿಮ್ಮೆದುರಿಡುವೆ.</h4>
<h4>ನಿಮ್ಮಲ್ಲಿ ಬಹುತೇಕರಿಗೆ ಶೂ ಕಂಪೆನಿಯ ಸೇಲ್ಸ್ ಮನ್ ಗಳಿಬ್ಬರು ಆಫ್ರಿಕಾಕ್ಕೆ ಹೋದ ಹಳೆಯ ಕಥೆ ಗೊತ್ತಿರಬಹುದು.<br />
ಹಾಗೆ ಹೋದ ಇಬ್ಬರಲ್ಲಿ ಒಬ್ಬ ವಾಪಸು ಬಂದು ಮ್ಯಾನೇಜರನ ಬಳಿ ದೂರಿದ. &#8220;ಅಲ್ಲಿನ ಜನರಿಗೆ ಶೂ ಅಂದರೇನೆಂದೇ ಗೊತ್ತಿಲ್ಲ, ಅಲ್ಲಿ ವ್ಯಾಪಾರ ಕಷ್ಟ!&#8221; ಸ್ವಲ್ಪ ಹೊತ್ತಿನಲ್ಲೇ ಮತ್ತೊಬ್ಬ ಏದುಸಿರು ಬಿಡುತ್ತಾ ಬಂದು ಹೇಳಿದ, &#8221; ನಮ್ಮ ಪುಣ್ಯ! ಅಲ್ಲಿ ಯಾವುದೇ ಶೂ ಕಂಪೆನಿ ಇಲ್ಲ. ನಾವೇ ಮೊದಲು. ಭರ್ಜರಿ ಸೇಲು!!&#8221; ಎಂದ&#8230;</h4>
<h4>ಅದು ಅಂತಾರಾಶ್ಟ್ರೀಯ ಮಾರುಕಟ್ಟೆಯ ನೀತಿ. ಜನ ವಸ್ತುಗಳನ್ನು ಬೇಕಾಬಿಟ್ಟಿ ಕೊಳ್ಳುವಂತೆ ಮಾಡಬೇಕು. ಹಾಗಾದಾಗಲೇ ದೊಡ್ಡ ಕಂಪೆನಿಗಳ ಮಾಲೀಕರಿಗೆ ಸಮಾಧಾನ. ಈ ಕೊಳ್ಳುಬಾಕತನ ನಮ್ಮಲ್ಲಿ ಅದೆಷ್ಟು ಹೆಚ್ಚಾಗಿದೆಯೆಂದರೆ, ಮೊದಮೊದಲು ಪ್ರತಿಷ್ಠೆಯ, ಶ್ರೀಮಂತಿಕೆಯ ಸಂಕೇತವೆನಿಸಿದ್ದ ವಸ್ತುಗಳೂ ಈಗ ದೈನಂದಿನ ಅಗತ್ಯದ ವಸ್ತುಗಳೆನಿಸಿ, ಅದೇ ನೆವದಲ್ಲಿ ಸಾಲ ಮಾದಿಯಾದರೂ ತರಲೇಬೇಕೆನ್ನುವ ಅನಿವಾರ್ಯತೆ ಸೃಷ್ಟಿಸಿಕೊಂಡು, ಮನೆ ತುಂಬಿಬಿದ್ದಿವೆ. ಈಗ ವಾಲ್ ಮಾರ್ಟ್ ಭಾರತಕ್ಕೆ ಕಾಲಿಡುತ್ತಿರುವುದು, ಈ ಬೇಕುಗಳಿಗೆಲ್ಲ ಹೊಸ ಆಯಾಮ ನೀಡಲೆಂದೇ.</h4>
<h4><img border="0" align="middle" width="1" src="www.thirdwayblog.com" height="1" /><img border="0" align="right" width="640" src="http://www.thirdwayblog.com/wp-content/uploads/2006/07/walmart.jpeg" height="480" style="width:346px;height:302px;" />ವಾಲ್ ಮಾರ್ಟ್ ಗಳೆಂದರೆ, ನಮ್ಮ ಸೂಪರ್ ಮಾರ್ಕೆಟ್, ಬಿಗ್ ಬಜಾರ್ ಗಳಿಗಿಂತ ಐವತ್ತು ಪಟ್ಟು, ನೂರು ಪಟ್ಟು ದೊಡ್ಡದಾಗಿರುವ ಅಂಗಡಿಗಳು- ಶಾಪಿಂಗ್ ಮಾಲ್ ಗಳು.</h4>
<h4>ನಿಮಗೆ ನೆನಪಿರಬಹುದು. ಈ ಹಿಂದೆ ಮೆಟ್ರೋ ಬೆಂಗಳೂರಿಗೆ ಬಂದಾಗ ಸಾವಿರಾರು ಸಣ್ಣ ಸಣ್ಣ ವ್ಯಪಾರಿಗಳು ಮುಷ್ಕರ ಹೂಡಿದ್ದರು. ಅವತ್ತು ಸರ್ಕಾರದ ಸೆರಗು ಹಿಡಿದ ಮೆಟ್ರೋ, ನಾವು ಹೋಲ್ ಸೇಲ್ ಮಾರಾಟಗಾರರೆಂದು ಕಣ್ಣೊರೆಸಿತ್ತು. ಅನಂತರ ಇಲ್ಲಿ ತಳವೂರಿದ ಮೇಲೆ ರೀಟೇಲ್ ದಂಧೆಗಿಳಿದು, ಕೆಲ ಕಾಲ ಅಕ್ಕಪಕ್ಕದ ವ್ಯಾಪಾರಿಗಳು ನೀರು ಕುಡಿಯುವಂತೆ ಮಾಡಿತ್ತು.</h4>
<h4>ಎಲ್ಲಾ ಸರಿ. ಆದರೆ ಆಮೇಲಿನ ಮಜಾ ನೋಡಿ&#8230; ವಾಲ್ ಮಾರ್ಟ್ ಭಾರತಕ್ಕೆ ಬರುವ ಸುದ್ದಿ ಕೇಳಿ ಮೆಟ್ರೋ ಅದುರಿ ಬಿತ್ತು. ಬರಲು ಬಿಡಬೇಡಿ ಎಂದು ಸರಕಾರಕ್ಕೆ ಒತ್ತಡ ತಂದಿತು. ವಾಲ್ ಮಾರ್ಟ್ ಭಾರತಕ್ಕೆ ಬಂದರೆ ನಾವು ಸತ್ತೇ ಹೋಗಿಬಿಡುತ್ತೇವೆಂದು ಆತಂಕ ಅದಕ್ಕೆ! ಅಂದ ಮೇಲೆ ಅದರ ವ್ಯಾಪಾರ ಪರಿಧಿ ಅದೆಷ್ಟು ದೊಡ್ಡದು ಊಹಿಸಿಕೊಳ್ಳಿ.</h4>
<h4>&#8220;ಅಗ್ಗದ ಬೆಲೆಗೆ ವಸ್ತುಗಳ ಮಾರಾಟ, ಹೆಚ್ಚು ಪ್ರಮಾಣದಲ್ಲಿ ಮಾರಾಟ&#8221; ಇದು ವಾಲ್ ಮಾರ್ಟ್ ವ್ಯಾಪಾರ ನೀತಿ. ಸಾವಿರಾರು ಎಕರೆಗಳಲ್ಲಿ ಹರಡಿಕೊಂಡ ಮಳಿಗೆಗಳಲ್ಲಿ ಸಿಗದೇ ಇರುವುದು ಏನೂ ಇ