ಟ್ಯಾಗ್: ಜಾಗೋ ಭಾರತ್

ಭಿಕಾರಿ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದವರು!

ಭಿಕಾರಿ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದವರು!

ಪಾಕಿಸ್ತಾನಕ್ಕೆ ಜೈಕಾರದ ಘೋಷಣೆಗಳು ರಾಜ್ಯದೆಲ್ಲೆಡೆ ಮೊಳಗುತ್ತಿವೆ. ಕಾಂಗ್ರೆಸ್ಸಿನ ಗೆಲುವಿನ ಹಿನ್ನೆಲೆಯಲ್ಲಿ ಈ ಘೋಷಣೆಗಳು ಎನ್ನುವುದು ನಿಜವಾದರೂ ಒಂದಷ್ಟು ಮುಸಲ್ಮಾನರ ಮಾನಸಿಕ ಸ್ಥಿತಿ ಬಹಳ ಕಾಲದಿಂದಲೂ ಹೀಗೆಯೇ ಇದೆ ಎನ್ನುವುದು ತಿಳಿಯದ ಸಂಗತಿ ಏನಲ್ಲ. ಎಡಪಂಥೀಯ ಬುದ್ಧಿಜೀವಿಗಳು, ಮುಸಲ್ಮಾನ ಪರ ಕೆಲವು ಹಿಂದೂ ಸಂಘಟನೆಗಳು ಮತ್ತು ಸ್ವತಃ ಮುಸಲ್ಮಾನರೊಂದಷ್ಟು ಜನ ಈ ಚಿಂತನೆಯನ್ನು ಪೋಷಿಸಿಕೊಂಡು ಬಂದಿದ್ದಾರೆ. ಆದರೆ ಅವರಿಗೆ ಸದ್ಯದ ಪಾಕಿಸ್ತಾನದ ಪರಿಸ್ಥಿತಿ ಎಂಥದ್ದಿದೆ ಎಂಬುದರ ಅರಿವು ಇರಲಿಕ್ಕಿಲ್ಲ. ಅಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಜನ ಮತ್ತು ಸೇನೆಯ ನಡುವೆ ಕಾದಾಟ ಶುರುವಾಗಿದೆ. ಯಾವ ಸೇನೆಯ ವಿಶ್ವಾಸದಿಂದಲೇ ಭಾರತವನ್ನು ಎದುರಿಸುತ್ತೇವೆಂದು ಪಾಕಿಸ್ತಾನಿಗಳು ಹೇಳುತ್ತಿದ್ದರೋ ಇಂದು ಅದೇ ಸೇನೆಯ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಘರ್ಷಣೆ ಎಲ್ಲಿಗೆ ಹೋಗಿ ನಿಲ್ಲುವುದೋ ತಿಳಿದಿಲ್ಲ ನಿಜ. ಆದರೆ ಪಾಕಿಸ್ತಾನವೇ ಚೂರು-ಚೂರಾಗಿ ತನ್ನ ಅಸ್ತಿತ್ವವನ್ನು ಕಳೆದುಕೊಂಡರೂ ಅಚ್ಚರಿಯಿಲ್ಲ. 1971ರಲ್ಲಿ ಪಾಕಿಸ್ತಾನವನ್ನು ಎರಡು ತುಂಡು ಮಾಡಿ ಬಿಸಾಡಿದ ಇಂದಿರಾಗೆ ಸಿಕ್ಕ ಗೌರವದ ನೂರ್ಪಟ್ಟು ಪಾಕಿಸ್ತಾನವನ್ನು ನಾಲ್ಕು ಚೂರು ಮಾಡುವ ಮೋದಿಗೆ ಸಿಕ್ಕರೂ ಸಿಗಬಹುದು. ಪಾಕಿಸ್ತಾನವೇ ಬಲೂಚಿಸ್ತಾನ, ಸಿಂಧ್, ಪಂಜಾಬು, ಕಾಶ್ಮೀರವೆಂದು ನಾಲ್ಕು ಭಾಗಗಳಾಗಿ ವಿಭಜನೆಗೊಂಡರೆ ಇವರು ಜೈಕಾರ ಹಾಕುವ ಪಾಕಿಸ್ತಾನಕ್ಕೆ ಅಸ್ತಿತ್ವವೇ ಇರುವುದಿಲ್ಲ. ಮುಸಲ್ಮಾನರನ್ನು ಈ ದಿಕ್ಕಿನಲ್ಲಿ ಭಡಕಾಯಿಸಿ ಅವರಿಂದ ಜೈಕಾರ ಹೇಳಿಸುವ ಮಂದಿ, ನಾಳೆಯ ದಿನ ಅಸ್ತಿತ್ವವೇ ಇಲ್ಲದ ಪಾಕಿಸ್ತಾನದ ಕಾರಣಕ್ಕೆ ಇವರೆಲ್ಲ ಅತಂತ್ರರಾಗುವುದನ್ನು ನೋಡಿ ನಗಲಿರುವುದಂತೂ ಸತ್ಯ.

ಪಾಕಿಸ್ತಾನದ ದುರಂತ ಪರ್ವ ಆರಂಭವಾಗಿದ್ದು ಮೋದಿಯ ಆಗಮನದ ನಂತರವೇ. ಅಲ್ಲಿಯವರೆಗೂ ಭಾರತದಲ್ಲಿ ಎಲ್ಲೆಂದರಲ್ಲಿ ಬಾಂಬ್ ಸ್ಫೋಟಗಳನ್ನು ಮಾಡಿಸುತ್ತಿದ್ದ ಪಾಕಿಸ್ತಾನ ಏಕಾಕಿ ದಿಗ್ಬಂಧನಕ್ಕೆ ಒಳಗಾಯ್ತು. ಭಾರತೀಯ ಬೇಹುಗಾರಿಕೆ ಎಷ್ಟು ಚುರುಕಾಯ್ತೆಂದರೆ ಕಾಶ್ಮೀರದಲ್ಲಿ ಕಂಡ-ಕಂಡಲ್ಲಿ ಭಯೋತ್ಪಾದಕರನ್ನು ಗುಂಡಿಟ್ಟು ಕೊಲ್ಲಲಾಯ್ತು. ಭಯೋತ್ಪಾದನಾ ಕೃತ್ಯಕ್ಕೆ ತಮ್ಮ ತಾವು ಸಮರ್ಪಿಸಿಕೊಂಡ ಬುರ್ಹನ್ ವನಿಯಂಥವರನ್ನು ಹುಚ್ಚು ನಾಯಿಗಿಂತಲೂ ಕಡೆಯಾಗಿ ಕೊಲ್ಲಲಾಯ್ತು. ಅವನ ಶವವನ್ನು ಮನೆಯವರಿಗೆ ಕೊಟ್ಟು ಶವಯಾತ್ರೆಗೆಂದು ಬಂದಿದ್ದ ಮತ್ತಷ್ಟು ಭಯೋತ್ಪಾದಕ ನಾಯಕರನ್ನು ಹಿಂಬಾಲಿಸಿಕೊಂಡು ಹೋಗಿ ಕಾಶ್ಮೀರದ ಕೊಳ್ಳವನ್ನು ಇವರಿಂದ ಮುಕ್ತಗೊಳಿಸಲಾಯ್ತು. ಅತ್ತ ಬುರ್ಹನ್‌ವನಿಯ ಸಾವನ್ನು ಕಂಡು ಬೆದರಿದ ಹೊಸ ಪೀಳಿಗೆಯ ತರುಣರು ಭಯೋತ್ಪಾದನೆಯಿಂದ ದೂರ ಉಳಿಯಲು ನಿಶ್ಚಯಿಸಿದರು. ಪಾಕೀ ಸೇನೆಗೆ ಸಿಗಬಹುದಾಗಿದ್ದ ಕಚ್ಚಾ ವಸ್ತುಗಳೇ ಇಲ್ಲವಾಗಿ ಹೋದಮೇಲೆ ಸಂಕಟ ಎರಗಿದ್ದಂತೂ ನಿಜ. ನಿಧಾನವಾಗಿ ಕಾಶ್ಮೀರ ಶಾಂತವಾಯ್ತು, ದೇಶವೂ ಕೂಡ.

ಅತ್ತ ಪಾಕಿಸ್ತಾನದಲ್ಲಿ ನಿಧಾನವಾಗಿ ಅಸಹನೆ ಆರಂಭವಾಯ್ತು. ಭಾರತವನ್ನು ಅಶಾಂತವಾಗಿರಸಲೆಂದೇ ವಿದೇಶೀ ಹೂಡಿಕೆಯನ್ನು ಪಡೆಯುತ್ತಿದ್ದ ಪಾಕಿಸ್ತಾನಕ್ಕೆ ಈಗ ಬಲುದೊಡ್ಡ ಸಂಕಟ. ನೋಡ-ನೋಡುತ್ತಲೇ ಅವರ ವಿದೇಶೀ ವಿನಿಮಯ ಬರಿದಾಗುತ್ತಾ ಹೋಯ್ತು. ಮೋದಿ ಸರ್ಕಾರದ ನಿರಂತರ ಪ್ರಯಾಸದಿಂದಾಗಿ ಐಎಮ್ಎಫ್, ವಿಶ್ವಬ್ಯಾಂಕುಗಳು ಸಾಲ ಕೊಡುವುದನ್ನು ನಿಲ್ಲಿಸಿದವು. ಈ ಹೊತ್ತಿನಲ್ಲಿಯೇ ಭುಟ್ಟೋ ಮತ್ತು ಶರೀಫ್ ಕುಟುಂಬಗಳ ರಾಜಕಾರಣದಿಂದ ಬೇಸತ್ತಿದ್ದ ಸೇನೆಗೆ ಇವರಿಬ್ಬರನ್ನು ಬಿಟ್ಟು ಹೊಸಮುಖವೊಂದನ್ನು ಪಟ್ಟಕ್ಕೆ ಕೂರಿಸುವ ಆತುರವಿತ್ತು. ಆಗ ಕಣ್ಮುಂದೆ ಬಂದವನು ಇಮ್ರಾನ್ ಖಾನ್. ಪಾಕಿಸ್ತಾನ್ ತೆಹರೀಕ್-ಎ-ಇನ್ಸಾಫ್ ಪಕ್ಷವನ್ನು ಕಟ್ಟಿಕೊಂಡು ಓಡಾಟ ನಡೆಸುತ್ತಿದ್ದ ಆತ ಪರಿವಾರ ರಾಜಕಾರಣಕ್ಕೆ ಸಡ್ಡು ಹೊಡೆಯುವುದಾಗಿ ಸೇನೆಗೆ ಭರವಸೆ ಕೊಟ್ಟು ಮುನ್ನುಗ್ಗಿದ. 2018ರಲ್ಲಿ ಚುನಾವಣೆ ನಡೆದಾಗ ಇಮ್ರಾನ್ ಖಾನನಿಗೆ ಎಲ್ಲ ಬಗೆಯ ಸಹಕಾರವನ್ನು ಕೊಟ್ಟಿದ್ದು ಸೇನೆಯೇ. ಆತ ಚುನಾವಣೆಯನ್ನು ಗೆದ್ದು ಅಲ್ಪ ಬಹುಮತದೊಂದಿಗೆ ಪಾಕಿಸ್ತಾನದ ಚುಕ್ಕಾಣಿ ಹಿಡಿದುಬಿಟ್ಟ. ಆಗ ಸೇನೆಯ ಮುಖ್ಯಸ್ಥ ಕಾಶ್ಮೀರದ ವಿಚಾರದಲ್ಲಿ ವಿಶೇಷವಾದ ಪರಿಣಿತಿ ಹೊಂದಿದ್ದ ಜನರಲ್ ಕಮರ್ ಬಾಜ್ವಾ. ಇವರೀರ್ವರ ಸಂಬಂಧ ಎಷ್ಟು ಬಲವಾಗಿತ್ತೆಂದರೆ ನ್ಯೂಯಾರ್ಕ್ ಟೈಮ್ಸ್‌ಗೆ ನೀಡಿದ ಸಂದರ್ಶನವೊಂದರಲ್ಲಿ ಇಮ್ರಾನ್ ‘ನಾನು ಗೆಳೆತನವಿಟ್ಟುಕೊಂಡಿರೋದು ಪಾಕಿಸ್ತಾನೀ ಸೇನೆಯೊಂದಿಗೆ, ಶತ್ರು ಸೇನೆಯೊಂದಿಗಲ್ಲ. ನಾವು ಜೊತೆಗೂಡಿಯೇ ನಡೆಯುತ್ತೇವೆ’ ಎಂದಿದ್ದ. ಪಾಕಿಸ್ತಾನದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಸಲು ಬಾಜ್ವಾನೇ ಕಾರಣ ಎಂದು ಹೇಳುವುದಕ್ಕೆ ಆತ ಹಿಂಜರಿಯಲಿಲ್ಲ. ಅಧಿಕಾರ ಪಡೆದೊಡನೆ ಒಂದೇ ಪುಸ್ತಕದ ಒಂದೇ ಪುಟದಲ್ಲಿ ನಾವಿಬ್ಬರೂ ಇದ್ದೇವೆ ಎಂದೂ ತನ್ನ ಚಟುವಟಿಕೆಗಳನ್ನು ಸಮರ್ಥಿಸಿಕೊಂಡಿದ್ದ. 2020ರಲ್ಲಿ ಅಲ್‌ಜಝೀರಾದೊಂದಿಗೆ ಮಾತನಾಡುತ್ತಾ ಸೇನೆ ಮತ್ತು ಸರ್ಕಾರದ ಸಂಬಂಧಗಳು ಬಲು ಸೌಹಾರ್ದಯುತವಾಗಿದೆ ಎಂದಿದ್ದ. ಸೇನೆಯೂ ಈತನ ಕಾಲದಲ್ಲಿ ಎಲ್ಲ ಅಧಿಕಾರವನ್ನು ಮುಕ್ತವಾಗಿ ಅನುಭವಿಸಿತು. ಅನೇಕ ಸರ್ಕಾರಿ ನಿರ್ಣಯಗಳಲ್ಲೂ ಅವರು ಮೂಗು ತೂರಿಸುತ್ತಿದ್ದುದು ಸಾಮಾನ್ಯವಾಗಿತ್ತು. ಇದರ ಹಿಂದೆ ಬಿದ್ದ ಇಮ್ರಾನ್ ಆಡಳಿತವನ್ನು ಕಡೆಗಣಿಸಿದ. ಪರಿಣಾಮ ಕೊವಿಡ್‌ನ ಸಂದರ್ಭದಲ್ಲಿ ಜನ ಹಾಹಾಕರ ಪಡುವಂತಾಯ್ತು. ಪಾಕಿಸ್ತಾನದ ಆರ್ಥಿಕ ಸ್ಥಿತಿಯೂ ಹದಗೆಟ್ಟು ಅದನ್ನು ಹಳಿಗೆ ತರುವಲ್ಲಿ ಇಮ್ರಾನ್ ಸೋತುಹೋದ. ಜನರ ಅರಚಾಟ ಆರಂಭವಾಯ್ತು. ಇಮ್ರಾನನ ಮೇಲಿದ್ದ ಆಕ್ರೋಶವೆಲ್ಲ ಸ್ವಲ್ಪಮಟ್ಟಿಗೆ ಸೇನೆಯತ್ತಲೂ ತಿರುಗಿತು. ಪದವಿಯಲ್ಲಿ ಬೇರೆ-ಬೇರೆಯವರನ್ನು ತಾನೇ ಕೂರಿಸಿ ಹಿಂದಿನಿಂದ ಅಧಿಕಾರ ನಡೆಸುವ ಪಾಕೀ ಸೇನೆ ಎಂದೂ ಜನರ ಬೈಗುಳವನ್ನು ತಿಂದಿರಲಿಲ್ಲ. ಅದಕ್ಕೆ ಎದುರಿಗೆ ಅಧ್ಯಕ್ಷನೋ ಪ್ರಧಾನಿಯೋ ಇರುತ್ತಿದ್ದ. ಇಮ್ರಾನ್ ಥೇಟು ಕೇಜ್ರಿವಾಲನಂತೆ. ಎಷ್ಟು ಬೇಕಾದರೂ ನಾಟಕಗಳನ್ನು ಮಾಡಬಲ್ಲ, ಯಾರ ಮೇಲಾದರೂ ಗೂಬೆ ಕೂರಿಸಬಲ್ಲ, ಒಟ್ಟಿನಲ್ಲಿ ತಾನು ಗೆಲ್ಲಬೇಕಷ್ಟೇ! ಹೀಗಾಗಿಯೇ ಆತನ ಮೇಲಿದ್ದ ಆಕ್ರೋಶವೆಲ್ಲ ಸೇನೆಯ ವಿರುದ್ಧ ತಿರುಗಿತು. ತಡಮಾಡದೇ ಸೇನೆ ಇಮ್ರಾನನೊಂದಿಗಿದ್ದ ಸ್ನೇಹಕ್ಕೆ ಎಳ್ಳು-ನೀರು ಬಿಟ್ಟು ಕುಂಡಿ ಝಾಡಿಸಿಕೊಂಡು ಎದ್ದುಬಿಟ್ಟಿತು. ಅಲ್ಲಿಗೆ ಇಮ್ರಾನ್ ಮತ್ತು ಸೇನೆ ಯುದ್ಧಕ್ಕೆ ನಿಂತರು. ಈ ವೇಳೆಗೆ ಜನರಲ್ ಬಾಜ್ವಾ ನಂತರ ಫೈಜ್ ಹಮೀದ್‌ನನ್ನು ಆ ಸ್ಥಾನಕ್ಕೆ ತರಬೇಕೆಂದು ಇಮ್ರಾನ್ ನಿಶ್ಚಯಿಸಿಕೊಂಡಿದ್ದ. ಅದಕ್ಕಾಗಿ ಆತನನ್ನು ಐಎಸ್ಐನ ನಿರ್ದೇಶಕನಾಗಿ ಮುಂದುವರೆಸಬೇಕೆಂದೂ ಆಗ್ರಹಿಸಿದ್ದ. ಆದರೆ ಬಾಜ್ವಾ ಹಮೀದ್‌ನನ್ನು ಪಕ್ಕಕ್ಕೆ ಸರಿಸಿ ಲೆಫ್ಟಿನೆಂಟ್ ಜನರಲ್ ನದೀಮ್ ಅಂಜುಂನನ್ನು ಕೂರಿಸಿದ. ಇದು ಸೇನೆ ಮತ್ತು ಇಮ್ರಾನ್‌ನ ನಡುವಿನ ಕಾದಾಟವನ್ನು ತೀವ್ರಗೊಳಿಸಿತು. ಸಾಲದೆಂಬಂತೆ ರಷ್ಯಾ-ಉಕ್ರೇನ್ ಯುದ್ಧದ ಹೊತ್ತಲ್ಲಿ ಪಶ್ಚಿಮದ ಒತ್ತಡಕ್ಕೆ ಮಣಿದು ರಷ್ಯಾ ವಿರೋಧಿಸುವ ನಿರ್ಣಯ ಕೈಗೊಳ್ಳಲಾರೆನೆಂದು ಇಮ್ರಾನ್ ಹೇಳಿಕೆ ಕೊಟ್ಟರೆ, ಬಾಜ್ವಾ ಉಕ್ರೇನ್‌ನ ಪರವಾದ ಹೇಳಿಕೆಯನ್ನು ಕೊಟ್ಟು ಸರ್ಕಾರದ ವಿರುದ್ಧ ನಿಂತ. ಅಲ್ಲಿಗೆ ಇವರಿಬ್ಬರ ನಡುವಿನ ಕಂದಕ ಜಗಜ್ಜಾಹೀರಾಗುವಷ್ಟು ದೊಡ್ಡದಾಗಿತ್ತು.

ಪಾಕಿಸ್ತಾನದಲ್ಲಿ ಸೇನೆ ಮನಸ್ಸು ಮಾಡಿದರೆ ಏನು ಬೇಕಿದ್ದರೂ ಮಾಡಬಲ್ಲದು. 2022ರಲ್ಲಿ ಇಮ್ರಾನನ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲಾಯ್ತು. ಈ ಗೊತ್ತುವಳಿ ಕಾನೂನು ಬಾಹಿರವಾಗಿದೆ ಎಂದು ಇಮ್ರಾನ್ ವಾದಿಸುವ ಪ್ರಯತ್ನ ಮಾಡಿದರೂ ಅದು ಅರಣ್ಯ ರೋದನವಾಯ್ತು. ಮೊದಲೇ ಹೇಳಿದಂತೆ ನಾಟಕ ಮಾಡುವುದರಲ್ಲಿ ನಿಸ್ಸೀಮನಾಗಿರುವ ಇಮ್ರಾನ್ ಅವಿಶ್ವಾಸ ಗೊತ್ತುವಳಿಯನ್ನು ಹೈಡ್ರಾಮಾ ಆಗುವಂತೆ ನೋಡಿಕೊಂಡ. ಈತನದ್ದೇ ಪಾಕಿಸ್ತಾನ್ ತೆಹರೀಕ್-ಎ-ಇನ್ಸಾಫ್ ಪಕ್ಷದ ಕೆಲವು ಸದಸ್ಯರು ಇವನ ವಿರುದ್ಧ ತಿರುಗಿಬಿದ್ದು ಈತ ಅಧಿಕಾರದಿಂದ ಕೆಳಗಿಳಿಯುವಂತಾಯ್ತು. ಆನಂತರ ಇಮ್ರಾನ್ ತನಗನಿಸಿದ್ದನ್ನು ನೇರವಾಗಿ ಹೇಳುವ ಚಾಳಿ ಬೆಳೆಸಿಕೊಂಡುಬಿಟ್ಟ. ದಿನ ಬೆಳಗಾದರೆ ಆತ ಸೇನೆಯನ್ನು ವಾಚಾಮಗೋಚರವಾಗಿ ಬೈಯ್ಯುತ್ತಿದ್ದ. ಆತನ ಆರೋಪಗಳ ಕೇಂದ್ರಬಿಂದು ಸೇನಾಮುಖ್ಯಸ್ಥ ಬಾಜ್ವಾನೇ ಆಗಿರುತ್ತಿದ್ದ. ‘ಎಲ್ಲ ಬಗೆಯ ಕೆಟ್ಟ ಕೆಲಸಗಳನ್ನು ಮಾಡಿ ಅವನಿಗೆ ಅನುಭವವಿದೆ’, ‘ಸರ್ಕಾರದ ಹಿಂದೆನಿಂತು ಒತ್ತಡಹಾಕಿ ತಮಗೆ ಬೇಕಾದ ಕೆಲಸ ಮಾಡಿಸಿಕೊಳ್ಳುವವರು ಸೇನೆಯ ಮಂದಿ’ ಎಂದೆಲ್ಲ ಆರೋಪ ಮಾಡಿದ. ಈ ಹೊತ್ತಿಗೆ ಸರಿಯಾಗಿ ಪಾಕಿಸ್ತಾನದ ಪತ್ರಕರ್ತ ಅರ್ಷದ್ ಶರೀಫ್‌ನನ್ನು ಕೀನ್ಯಾದಲ್ಲಿ ಕೊಲೆ ಮಾಡಲಾಯ್ತು. ಆತ ಅವಿಶ್ವಾಸ ಗೊತ್ತುವಳಿಯ ಸಂದರ್ಭದಲ್ಲಿ ಸೇನೆಯ ವಿರುದ್ಧವಾಗಿ, ಇಮ್ರಾನನ ಪರವಾಗಿ ಸಾಕಷ್ಟು ವರದಿಗಳನ್ನು ಮಾಡಿದ್ದ. ಸೇನೆ ಅವನನ್ನು ಗುರಿಯಾಗಿಸಿಬಿಟ್ಟಿತ್ತು. ಬ್ರಿಗೇಡಿಯರ್ ಮೊಹಮ್ಮದ್ ಶಾಫಿಕ್, ಬ್ರಿಗೇಡಿಯರ್ ಫಹೀನ್ ರಜಾ ಮತ್ತು ಐಎಸ್ಐನ ಮೇಜರ್ ಜನರಲ್ ಫೈಜಲ್ ನಜೀರ್ ಇವರು ಆತನಿಗೆ ಬೆದರಿಕೆಯ ಕರೆ ಮಾಡಲಾರಂಭಿಸಿದರು. ಪತ್ರಕರ್ತ ಅರ್ಷದ್ ಶರೀಫ್ ಪಾಕಿಸ್ತಾನ ಬಿಟ್ಟು ಓಡಿದ. ಆತನ ಮಿತ್ರರೆಲ್ಲ ದುಬೈಯಲ್ಲೋ, ಲಂಡನ್ನಿನಲ್ಲೋ ಇದ್ದಾನೆ ಎಂದು ಭಾವಿಸಿಕೊಂಡಿದ್ದರೆ, ಕೀನ್ಯಾದಲ್ಲಿ ಹೆಣವಾಗಿದ್ದ. ನಿಸ್ಸಂಶಯವಾಗಿ ಇದು ಐಎಸ್ಐನ ಕೈವಾಡವೇ ಆಗಿತ್ತಲ್ಲದೇ ಫೈಜಲ್ ನಜೀರ್‌ನೇ ಇದರ ಹಿಂದಿದ್ದ ಎಂದು ಎಲ್ಲರೂ ನಂಬಿದರು. ಸ್ವತಃ ಶರೀಫ್ನ ತಾಯಿ ರಿಫಾತ್ ಅಲ್ವಿ ಪಾಕಿಸ್ತಾನದ ನ್ಯಾಯಾಧೀಶರಿಗೆ ಪತ್ರಬರೆದು ಅದರಲ್ಲಿ ಈ ವಿಚಾರವನ್ನು ಉಲ್ಲೇಖಿಸಿದರು. ಇಮ್ರಾನ್ ಇದನ್ನು ಬಲವಾಗಿ ಹಿಡಿದುಕೊಂಡ. ಆತ ಪದೇ-ಪದೇ ಡರ್ಟಿ ಹ್ಯಾರಿ ಎಂದು ಕರೆಯಲ್ಪಡುವ ಫೈಜಲ್ ನಜೀರ್‌ನ ವಿರುದ್ಧ ಮನಸೋ ಇಚ್ಛೆ ಮಾತನಾಡಲಾರಂಭಿಸಿದ. ಇದು ಐಎಸ್ಐಗೆ ಸರಿ ಕಾಣಲಿಲ್ಲ.


ಮತ್ತೊಂದೆಡೆ ತಾನು ಅಧಿಕಾರ ಕಳೆದುಕೊಂಡೊಡನೆ ಲಾಂಗ್‌ಮಾರ್ಚ್ ಆರಂಭಿಸಿದ ಇಮ್ರಾನ್ ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಗರನ್ನು ಸೆಳೆಯತೊಡಗಿದ. ತನ್ನ ನಾಟಕೀಯ ಭಾಷಣಗಳಿಂದ ಅವರನ್ನು ಆಕರ್ಷಿಸುತ್ತಾ ಸೇನೆಯ ವಿರುದ್ಧ ಎತ್ತಿಕಟ್ಟುವಲ್ಲಿ ಸಫಲನಾಗುತ್ತಿದ್ದ. ಇದರ ಪರಿಣಾಮವೇ ಪಂಜಾಬಿನಲ್ಲಿ ಉಪ ಚುನಾವಣೆಗಳು ನಡೆದಾಗ ಇಮ್ರಾನ್ ಖಾನನ ಪಕ್ಷ ಜಯಭೇರಿ ಬಾರಿಸಿತು. ಸಹಜವಾಗಿಯೇ ಇದು ಆತಂಕದ ವಿಚಾರವಾಗಿತ್ತು. ಸೇನೆ, ಇಮ್ರಾನ್ ತಮ್ಮಿಂದ ಅಧಿಕಾರವನ್ನು ಕಸಿಯುತ್ತಾನೆ ಎಂಬುದು ಖಾತ್ರಿಯಾಗುತ್ತಿದ್ದಂತೆ ಆತನ ಭ್ರಷ್ಟಾಚಾರದ ಪ್ರಕರಣಗಳನ್ನು ಮುಂದಿಟ್ಟು ನ್ಯಾಯಾಲಯದ ಮೂಲಕ ಆತ ಐದು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ನಿಯಮಗಳನ್ನು ಹೇರಿಬಿಟ್ಟಿತು. ಆತನ ಲಾಂಗ್ ಮಾರ್ಚ್ ಮತ್ತೆ ಮುಂದುವರಿಯಿತು. ಜನ ಮೊದಲಿಗಿಂತ ಹೆಚ್ಚಾದರೇ ಹೊರತು ಕಡಿಮೆಯಾಗಲಿಲ್ಲ. ಆತ ರ್ಯಾಲಿಯಲ್ಲಿ ಭಾಗವಹಿಸಿರುವಾಗಲೇ ಆತನ ಮೇಲೆ ಗುಂಡು ಹಾರಿಸಲಾಯ್ತು. ಕಾಲಿಗೆ ಮೂರು ಗುಂಡು ಹೊಕ್ಕಿದವೆಂದು ಇಮ್ರಾನನ ಬೆಂಬಲಿಗರು ಹೇಳಿದರು. ಆದರೆ ನೋಡುಗರಿಗೆ ಚುನಾವಣೆಯ ಹೊತ್ತಲ್ಲಿ ಪಶ್ಚಿಮ ಬಂಗಾಳದಲ್ಲಿ ದೀದಿ ಕಾಲಿಗೆ ಬ್ಯಾಂಡೇಜು ಕಟ್ಟಿಕೊಂಡಂತೆ ಕಾಣುತ್ತಿತ್ತು. ತನ್ನ ಭಿನ್ನ-ಭಿನ್ನ ಸ್ವರೂಪದ ನಾಟಕಗಳಿಂದ ಆತ ಜನರನ್ನು ಸೆಳೆಯುತ್ತಲೇ ಹೋದ. ಇನ್ನು ಈತನನ್ನು ತಡೆಯಲಾಗದು ಎಂದೇ ಆತನನ್ನು ಏಕಾಕಿ ಬಂಧಿಸುವ ನಿರ್ದೇಶನವನ್ನು ಸೇನೆ ಅಲ್ಲಿನ ಅರೆ ಸೈನಿಕಪಡೆಗೆ ಆದೇಶಿಸಿತು. ಇಮ್ರಾನನ ವಿರುದ್ಧ ಭ್ರಷ್ಟಾಚಾರದ ಪ್ರಕರಣವೊಂದಿದೆ. ಆತ ವಿದೇಶಗಳಿಗೆ ಹೋದಾಗಲೆಲ್ಲ ಅಲ್ಲಿ ಸಿಗುತ್ತಿದ್ದ ಉಡುಗೊರೆಗಳನ್ನು ಸರ್ಕಾರದ ತೋಷ್ಖಾನಗಳಿಗೆ ಕೊಟ್ಟು ಅಲ್ಲಿಂದ ಕಡಿಮೆ ಬೆಲೆಗೆ ಖರೀದಿಸಿ ತಾನು ಹೆಚ್ಚಿನ ಬೆಲೆಗೆ ಬೇರೆಯವರಿಗೆ ಮಾರುತ್ತಿದ್ದ. ಪಾಕಿಸ್ತಾನದ ಪ್ರಧಾನಿ ಎಂದು ಸಾಬೀತುಪಡಿಸಬೇಕಲ್ಲ, ಮತ್ತೇನಿದೆ ಮಾರ್ಗ? ರಾಷ್ಟ್ರಪತಿ ಪ್ರತಿಭಾ ಪಾಟಿಲ್ ತಾನು ಮರಳಿ ಮನೆಗೆ ಹೋಗುವಾಗ ತನಗೆ ಬಂದಿದ್ದ ಉಡುಗೊರೆಗಳನ್ನೆಲ್ಲ ಗಂಟುಮೂಟೆ ಕಟ್ಟಿಕೊಂಡು ಒಯ್ದಿದ್ದಳಲ್ಲ, ಇದು ಅಂಥದ್ದೇ ಮತ್ತೊಂದು ಕಥೆ ಅಷ್ಟೇ.


ವಿಚಾರಣೆಗೆಂದು ಸಾಗುತ್ತಿರುವ ಇಮ್ರಾನ್ ಖಾನನ ಬಂಧನದೊಂದಿಗೆ ಪಾಕಿಸ್ತಾನದಲ್ಲಿ ಅಕ್ಷರಶಃ ಬೆಂಕಿ ಹೊತ್ತಿಕೊಂಡಿತು. ಜನ ಬೀದಿಗೆ ಬಂದರು. ಸೇನಾ ಮುಖ್ಯನೆಲೆಗಳನ್ನು ಗುರಿಯಾಗಿರಿಸಿಕೊಂಡು ದಾಳಿ ಮಾಡಿದರು. ಅಲ್ಲಿನ ರೇಡಿಯೊ ಕೇಂದ್ರ ಹೊತ್ತಿ ಉರಿಯಿತು. ಅನೇಕ ಸೇನಾ ನಾಯಕರ ಮನೆಗಳು ಲೂಟಿಯಾದವು. ಅದಕ್ಕೆ ಬೆಂಕಿ ಹಚ್ಚಿ ಜನ ಆನಂದಿಸಿದರು. ಲೂಟಿಗೈಯ್ಯುತ್ತಿರುವ ಜನರನ್ನು ಪ್ರಶ್ನಿಸಿದಾಗ,‌ ಇದು ನಮ್ಮದ್ದೇ ದುಡ್ಡು. ಅದಕ್ಕೇ ಒಯ್ಯುತ್ತಿದ್ದೇವೆ ಎಂದು ಹೇಳುವುದನ್ನು ಕಂಡಾಗ, ಅವರಲ್ಲಿದ್ದ ಆಕ್ರೋಶ ಎದ್ದು ಕಾಣುತ್ತಿತ್ತು. ಅಚ್ಚರಿ ಎಂದರೆ ಜನರ ಈ ಆಕ್ರೋಶವನ್ನು ತಡೆಯುವಲ್ಲಿ ಸೇನೆ ತೋರಿದ ದಿವ್ಯ ನಿರ್ಲಕ್ಷ್ಯ. ಕೆಲವು ಕಡೆಯಲ್ಲಂತೂ ನುಗ್ಗಿ ಬರುತ್ತಿರುವ ಜನರ ಮೇಲೆ ಗುಂಡು ಹಾರಿಸಲೆಂದು ಕೊಟ್ಟ ಆದೇಶವನ್ನೂ ಧಿಕ್ಕರಿಸಲಾಗಿತ್ತು. ಇದು ಸೇನೆಯೊಳಗಿನ ಕುರ್ಚಿಯ ಕಾರಣಕ್ಕಾಗಿ ಎಂದು ಕೆಲವರು ವಿಶ್ಲೇಷಿಸುತ್ತಿದ್ದಾರೆ. ಅಂದರೆ ಇಮ್ರಾನ್ ಹಚ್ಚಿದ ಬೆಂಕಿ ಸೇನೆಯನ್ನೂ ಸುಡುತ್ತಿದೆ. ಭಾರತವನ್ನು ನಾಶ ಮಾಡುತ್ತೇವೆಂದು ಬದುಕು ಆರಂಭಿಸಿದ ಪಾಕಿಸ್ತಾನ ಇಂದು ತನ್ನ ಅಂಗಡಿಯನ್ನು ಗಂಟು-ಮೂಟೆ ಕಟ್ಟಿಕೊಂಡು ಭಾರತದೆದುರು ಗೋಗರೆಯಬೇಕಾದ ಪರಿಸ್ಥಿತಿಗೆ ಬಂದಿದೆ. ಇವ್ಯಾವನ್ನೂ ಅರಿಯದ ಇಲ್ಲಿನ ಮುಸಲ್ಮಾನರು ಮಸೀದಿಯಲ್ಲಿ ಮೌಲ್ವಿಯ ಮಾತು ಕೇಳಿ, ಬೀದಿಗೆ ಬಂದು ಪಾಕಿಸ್ತಾನಕ್ಕೆ ಜಿಂದಾಬಾದ್ ಹೇಳುತ್ತಾರಲ್ಲ, ಅಯ್ಯೋ ಪಾಪ ಎನಿಸುತ್ತದೆ!

ಒಂದಂತೂ ಸತ್ಯ ಅಧಿಕಾರದಲ್ಲಿರುವ ಕಾಂಗ್ರೆಸ್ಸು ಬಿಟ್ಟಿ ಭಾಗ್ಯಗಳನ್ನು ಕೊಟ್ಟು, ಮೀಸಲಾತಿಯನ್ನೂ ವಿಸ್ತರಿಸಿ ಜಾತಿ-ಜಾತಿಗಳ ನಡುವಿನ ಕದನವನ್ನು ತೀವ್ರಗೊಳಿಸಿತೆಂದರೆ ಸುಭಿಕ್ಷವಾಗಿದ್ದ ಕರ್ನಾಟಕವೂ ಪಾಕಿಸ್ತಾನದಂತಾಗಲು ಐದು ವರ್ಷ ಸಾಕು! ಆಗ ಪಾಕಿಸ್ತಾನಕ್ಕೆ ಜಿಂದಾಬಾದ್ ಹೇಳುವ ಅಗತ್ಯವಿಲ್ಲ. ಮುಸಲ್ಮಾನರು ಕರ್ನಾಟಕವೂ ಪಾಕಿಸ್ತಾನವೇ ಎಂದು ಹೆಮ್ಮೆ ಪಡಬಹುದು!

ಸೋಲಿನ ಭೀತಿಯಿಂದ ಪತರಗುಟ್ಟಿದೆ ಕಾಂಗ್ರೆಸ್ಸು!

ಸೋಲಿನ ಭೀತಿಯಿಂದ ಪತರಗುಟ್ಟಿದೆ ಕಾಂಗ್ರೆಸ್ಸು!

ಮೋದಿಯ ಹವಾ ಶುರುವಾಗುತ್ತಿದೆ ಎಂದು ಎಲ್ಲರೂ ಭಾವಿಸಿಕೊಂಡಿದ್ದರು. ಆದರೆ ತಮ್ಮ ವಿಸ್ತಾರವಾದ ರ್ಯಾಲಿಯ ಮೂಲಕ ಅವರು ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದ್ದಾರೆ! ಅಣ್ಣಾಮಲೈಯವರು ಹೇಳಿದ್ದು ನಿಜ, ಮೋದಿ ಆಗಮನಕ್ಕಿಂತಲೂ ಮುಂಚೆ ಕಾಂಗ್ರೆಸ್ಸಿನ ಗೆಲುವು ಹೆಚ್ಚು-ಕಡಿಮೆ ನಿಶ್ಚಿತವಾಗಿತ್ತು. ಅವರು ತಮ್ಮದ್ದೇ ಆದ ಭಿನ್ನ-ಭಿನ್ನ ವಿಧಾನಗಳ ಮೂಲಕ ಜನರನ್ನು ಒಪ್ಪಿಸಿಬಿಟ್ಟಿದ್ದರು. ಮೋದಿಯ ಪ್ರಚಾರದ ಅಬ್ಬರ ಶುರುವಾಯ್ತು ನೋಡಿ, ದಿನೇ ದಿನೇ ಕಾಂಗ್ರೆಸ್ಸಿನ ಸಂಖ್ಯೆ ಕುಸಿಯುತ್ತಾ ಬಂದು, ಪ್ರಚಾರದ ಆರಂಭಕ್ಕೂ ಮುನ್ನ ಕಾಂಗ್ರೆಸ್ಸು ಯಾವ ಸ್ಥಿತಿಯಲ್ಲಿತ್ತೋ ಬಿಜೆಪಿ ಆ ಸ್ಥಿತಿಗೆ ತಲುಪಿತು ಮತ್ತು ನರೇಂದ್ರಮೋದಿ ಆಗಮನಕ್ಕೂ ಮುನ್ನ ಬಿಜೆಪಿಗೆ ಯಾವ ದೈನೇಸಿ ಸ್ಥಿತಿಯಿತ್ತೋ ಆ ಹಂತಕ್ಕೆ ಕಾಂಗ್ರೆಸ್ಸು ಇಳಿಯಿತು. ಬೆಂಗಳೂರಿನ ರ್ಯಾಲಿಯಂತೂ ಬಹುಶಃ ಈ ದೇಶದ ರಾಜಕಾರಣದ ಇತಿಹಾಸದಲ್ಲೇ ಅತ್ಯಂತ ಅದ್ದೂರಿಯಾದ್ದು ಮತ್ತು ಜಗತ್ತಿನ ರಾಜಕಾರಣವೇ ನೆನಪಿಟ್ಟುಕೊಳ್ಳುವಂಥದ್ದು. ನಾಡಿನಲ್ಲೆಲ್ಲ ಚರ್ಚೆ ರ್ಯಾಲಿಯದ್ದಷ್ಟೇ ಅಲ್ಲ, ಮೋದಿಗಿರುವ ಅಂತಃಶಕ್ತಿಯದ್ದೂ ಕೂಡ. ದಿನಕ್ಕೆ ಮೂರು ಕಾರ್ಯಕ್ರಮ, ರ್ಯಾಲಿಗಳು, ನಡು-ನಡುವೆ ಅತ್ಯಂತ ಪ್ರಮುಖವಾದ ಮೀಟಿಂಗುಗಳು, ರಾತ್ರಿ ಕಳೆದು ಬೆಳಿಗ್ಗೆ ಏಳುವಾಗ ಮತ್ತದೇ ಉತ್ಸಾಹ-ಉಲ್ಲಾಸ. ಈ ಮನುಷ್ಯ ದೇವಮಾನವನೇ ಸರಿ! ಕಾಂಗ್ರೆಸ್ಸು ಅನಿವಾರ್ಯವಾಗಿ ಸುಳ್ಳುಗಳನ್ನು ಹರಡಿಸುವ ಪರಿಸ್ಥಿತಿಗೆ ತಲುಪಿದೆ. ಬಿ.ಎಲ್ ಸಂತೋಷ್ ಅವರು ಲಿಂಗಾಯಿತರ ವಿರುದ್ಧ ಆಡಿದ್ದಾರೆ ಎನ್ನಲಾಗುವ ಮಾತಿನಿಂದ ಹಿಡಿದು ಮೋದಿಯ ಪರವಾಗಿ ಬ್ಯಾಟಿಂಗ್ ಮಾಡುವ ಭರದಲ್ಲಿ ನಾನು ಸಾಮಾನ್ಯ ನಾಗರೀಕರನ್ನು ಬೈದಿದ್ದೇನೆ ಎನ್ನುವವರೆಗೆ ಅವರು ಅತ್ಯಂತ ನೀಚಮಟ್ಟದ ಪ್ರಚಾರಕ್ಕೆ ಇಳಿದಿದ್ದಾರೆ. ಈ ಹತಾಶ ಮನೋಭಾವವೇ ಅವರ ಸೋಲಿಗೆ ಸಾಕ್ಷಿ ನೀಡುತ್ತಿದೆ. ಪ್ರತೀ ಹಂತದಲ್ಲೂ ಮೋದಿಗೆ ಮತ ಹಾಕುವುದೇ ಸರಿಯಾದ್ದು ಎಂದು ಜನರಲ್ಲಿ ವಿಶ್ವಾಸ ಮೂಡಿಸುತ್ತಿದೆ. 

ಆರಂಭದಿಂದಲೂ ಪ್ರಚಾರದ ವಿಚಾರದಲ್ಲಿ ಮೇಲುಗೈ ಇದ್ದದ್ದು ಕಾಂಗ್ರೆಸ್ಸಿನದ್ದೇ. ಭ್ರಷ್ಟಸರ್ಕಾರ ಎನ್ನುವ ವಿಚಾರವನ್ನು ಸಮಾಜದ ಮುಂದೆ ಯಾವ ಪುರಾವೆಯೂ ಇಲ್ಲದೇ ಒಪ್ಪಿಸಿಬಿಟ್ಟಿದ್ದರು. ಸರ್ಜಿಕಲ್ ಸ್ಟ್ರೈಕ್‌ಗೂ ಪ್ರೂಫ್ ಕೇಳುವ ಈ ಅಯೋಗ್ಯ ಕಾಂಗ್ರೆಸ್ಸಿಗರು ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವಾಗ ಪುರಾವೆ ಕೊಡಬೇಕೆಂಬ ಸಾಮಾನ್ಯಜ್ಞಾನವೂ ಇಟ್ಟುಕೊಳ್ಳದಿದ್ದುದು ಅಚ್ಚರಿಯೇ ಸರಿ. ಹೀಗಾಗಿ ಅವರ ಪ್ರಚಾರದ ಭರಾಟೆ ಜೋರಾಗಿದ್ದರೂ ಜನಕ್ಕೆ ಅದು ರುಚಿಸಲಿಲ್ಲ. ಆರಂಭದಲ್ಲಿ ಬಿಜೆಪಿ ಕಾರ್ಯಕರ್ತರು ಹತಪ್ರಭರೆನಿಸಿದರೂ ಬರು-ಬರುತ್ತಾ ಅದನ್ನು ಮೀರಿ ಬೆಳೆಯಲು ಸಾಧ್ಯವಾಯ್ತು. ಇಷ್ಟಕ್ಕೂ ಭ್ರಷ್ಟಾಚಾರದ ಆರೋಪ ಮಾಡಿದ ಕಾಂಗ್ರೆಸ್ಸಿಗರು ಶುದ್ಧರಾಗಿದ್ದರೇನು? ಯುಪಿಎ-2 ಅವಧಿಯಲ್ಲಿ ಮಾಡಿರುವ ಭ್ರಷ್ಟಾಚಾರಗಳು ಇನ್ನೂ ಕನಿಷ್ಠ ಎರಡು ಅವಧಿಯವರೆಗೂ ಮೋದಿಯವರಿಗೆ ಗೆಲುವು ತಂದುಕೊಡಬಲ್ಲಷ್ಟಿದೆ. ಹೀಗಿರುವಾಗ ಮೋದಿಯನ್ನು, ಅವರ ಸರ್ಕಾರವನ್ನು ಭ್ರಷ್ಟರೆನ್ನುವುದಕ್ಕೆ ಕಾಂಗ್ರೆಸ್ಸಿಗೆ ನೈತಿಕವಾದ ಯಾವ ಅರ್ಹತೆಯೂ ಇಲ್ಲ. ಅದೇ ಅವರಿಗಾದ ಬಲುದೊಡ್ಡ ಹಿನ್ನಡೆ. ಇಂದು ನೆಲಮಟ್ಟದಲ್ಲಿ ಬಿಜೆಪಿಯ ಭ್ರಷ್ಟಾಚಾರ ಚರ್ಚೆಯ ವಸ್ತುವೇ ಅಲ್ಲ, ಏಕೆಂದರೆ ಇಂಧನಖಾತೆ ಸಚಿವರಾಗಿ ಡಿ.ಕೆ ಶಿವಕುಮಾರ್ ನಡೆಸಿದ್ದ ಕಾರುಬಾರೇನೆಂಬುದು ಜನರ ಮನಸ್ಸಿನಲ್ಲಿ ಇನ್ನೂ ಹಸಿರಾಗಿಯೇ ಉಳಿದಿದೆ. ಈ ಕಾರಣದಿಂದಲೇ ಹಂತ-ಹಂತಕ್ಕೂ ಭಿನ್ನ ಭಿನ್ನ ಪ್ರಚಾರ ತಂತ್ರವನ್ನು ಬಳಸಿದ ಕಾಂಗ್ರೆಸ್ಸು ಕಾರ್ಯಕರ್ತರ ಸ್ಫೂರ್ತಿಗಾಗಿ ಭಾರತ್ ಜೊಡೊ ಯಾತ್ರೆಯಲ್ಲಿ ತನ್ನ ಸಂಪೂರ್ಣ ಶ್ರಮವನ್ನು ವ್ಯಯಿಸಿತು, ಹಣವನ್ನೂ ಕೂಡ. ಆಯಾ ಕ್ಷೇತ್ರಗಳಲ್ಲಿ ರಾಹುಲ್ ಬಾಬಾನನ್ನು ಸ್ವಾಗತಿಸುವ ಜವಾಬ್ದಾರಿಯನ್ನು ಟಿಕೆಟ್ ಆಕಾಂಕ್ಷಿಗಳಿಗೆ ನೀಡಲಾಯ್ತು. ಸಹಜವಾಗಿಯೇ ಟಿಕೆಟ್ ತಪ್ಪಿದ ನಂತರ ಕೈಸುಟ್ಟುಕೊಂಡಿದ್ದ ಇವರೆಲ್ಲ ತಿರುಗಿನಿಂತರು. ಇಷ್ಟಾದರೂ ಕಾಂಗ್ರೆಸ್ಸು ಜನರ ಮುಂದೆ ಒಗ್ಗಟ್ಟಿನ ಮಂತ್ರವನ್ನು ಪಠಿಸುವಲ್ಲಿ ಯಶಸ್ವಿಯಾಯ್ತು. ಒಳಗಿನ ಬೆಂಕಿ ಮಾತ್ರ ಆರಿರಲಿಲ್ಲ. ಇತ್ತೀಚೆಗೆ ಪತ್ರಕರ್ತೆಯೊಬ್ಬರು ಈ ಕಾದಾಟದ ಕುರಿತಂತಹ ಪ್ರತ್ಯಕ್ಷ ಅನುಭವವನ್ನು ಹೇಳಿಕೊಂಡಿದ್ದಾರೆ. ವೇದಿಕೆಯ ಮೇಲೆ ರಾಹುಲ್ ಸಿದ್ದರಾಮಯ್ಯ, ಡಿಕೆಶಿ ಕೈ-ಕೈ ಹಿಡಿದು ನಿಲ್ಲುವಂತೆ ಮಾಡಿದ ನಂತರ ಸಿದ್ದರಾಮಯ್ಯ ಜನಮೆಚ್ಚುವ ಭಾಷಣ ಮಾಡಿದರಂತೆ. ಒಳಗೊಳಗೇ ಕುದಿಯುತ್ತಿದ್ದ ಡಿಕೆಶಿ ಆ ಪತ್ರಕರ್ತೆ ಮಾತನಾಡಿಸತೊಡಗಿದಾಗ, ‘ಹೋದೆಡೆಯೆಲ್ಲಾ ಇದನ್ನೇ ಮಾತನಾಡುತ್ತಾನೆ, ಹೊಸತೇನಿದೆ?’ ಎಂದು ಮೂದಲಿಸಿದರಂತೆ. ಆಕೆ ‘ಜನರ ಮುಂದೆ ಕೈ-ಕೈ ಹಿಡಿದವರು ಹಿಂದೆ ಉರಕೊಂಡು ಹೇಗೆ ಕೈ-ಕೈ ಮಿಲಾಯಿಸುತ್ತಾರೆ ನೋಡಿ’ ಎಂದು ಕುಹಕವಾಡಿರುವುದು ಟ್ವಿಟರ್‌ನಲ್ಲಿ ಭಾರೀ ದೊಡ್ಡ ಸದ್ದು ಮಾಡಿತು. ಇಷ್ಟಾದರೂ ಬಿಜೆಪಿಯವರಿಗಿಂತ ಹೆಚ್ಚು ಬಲವಾದ ಏಕತೆಯನ್ನು ಪ್ರದರ್ಶಿಸಿದ್ದು ಕಾಂಗ್ರೆಸ್ಸೇ! ಆದರೆ ಅವರು ಎಡವಿದ್ದು ಎಲ್ಲಿ ಗೊತ್ತೇ? ಆರಂಭದ ಮೋದಿಯ ಹವಾ ಬಿರುಗಾಳಿಯಾಗಿ ಪರಿವರ್ತಿತಗೊಳ್ಳುತ್ತಿದೆ ಎಂದರಿವಾದಾಗ. 

ಇಡಿಯ ಮಾಧ್ಯಮವನ್ನು ಮೋದಿಯಿಂದ ಬೇರೆಡೆಗೆ ಸೆಳೆಯುವ ಪ್ರಯತ್ನಕ್ಕೆ ಕಾಂಗ್ರೆಸ್ಸು ಬಜರಂಗದಳವನ್ನು ಬಳಸಿಕೊಂಡಿತು. ಅದಾಗಲೇ ಬಜರಂಗದಳದ ಕಾರ್ಯಕರ್ತರು ಅನೇಕ ಕಡೆಗಳಲ್ಲಿ ಬಿಜೆಪಿಯ ವಿರುದ್ಧ ಕೂಗಾಡಿದ್ದರಲ್ಲದೇ ಬಂಡಾಯದ ಬಾವುಟ ಬೀಸಿದ್ದರು. ಹಳೆಯ ಕಾರ್ಯಕರ್ತರು ತಟಸ್ಥವಾಗಿ ಚುನಾವಣೆಯೇ ಬೇಡವೆಂದು ಬದಿಗೆ ಸರಿದುಬಿಟ್ಟಿದ್ದರು. ಹೀಗಾಗಿ ಈ ಹೊತ್ತಿನಲ್ಲಿ ಬಜರಂಗದಳದ ಕುರಿತು ಮಾತನಾಡಿದರೆ ಆ ಕಾರ್ಯಕರ್ತರೇನು ಮುಂದೆ ಬರುವುದಿಲ್ಲ, ಬದಲಿಗೆ ಮಾಧ್ಯಮದ ಚರ್ಚೆಯೆಲ್ಲಾ ಹಿಂದುತ್ವದ ಕುಕೃತ್ಯದ ಕಡೆಗೆ ತಿರುಗುತ್ತದೆ. ಮೋದಿ ಅದಕ್ಕೆ ಉತ್ತರಿಸುವಲ್ಲಿ ಹೈರಾಣಾಗುತ್ತಾರೆ ಎಂಬುದು ಕಾಂಗ್ರೆಸ್ಸಿನ ಲೆಕ್ಕಾಚಾರವಾಗಿತ್ತು. ಒಂದು ವೇಳೆ ಬಜರಂಗಿಗಳು ಪ್ರತಿಭಟನೆಗೆಂದು ಬಂದರೂ ಕಾಂಗ್ರೆಸ್ ನಾಯಕರ ಘೇರಾವ್ ಮಾಡುವುದು, ಗಾಡಿಗಳ ಮೇಲೆ ಕಲ್ಲೆಸೆಯುವುದು ಮಾಡಿ ಕಾಂಗ್ರೆಸ್ಸಿಗರನ್ನು ಮಾಧ್ಯಮಗಳ ಮುಂದೆ ಅಳುವುದಕ್ಕೆ ಪ್ರೇರೇಪಿಸುತ್ತದೆ. ಮೋದಿಯವರ ಬಿರುಗಾಳಿಗೆ ಇದು ಪ್ರತಿದಾಳವೆಂಬುದು ಅವರ ಲೆಕ್ಕಾಚಾರವಾಗಿತ್ತು. ಸದಾ ಉಗ್ರವಾಗಿರುವ ಚಿಂತನೆ ಹೊಂದಿರುವ ಬಜರಂಗದಳದ ಕಾರ್ಯಕರ್ತರು ಈ ಬಾರಿ ಶಾಂತ ಪ್ರತಿಭಟನೆಗೆ ಮುಂದಾದದ್ದು ಕಾಂಗ್ರೆಸ್ಸಿನ ಪಾಲಿಗೆ ಔಟ್ ಆಫ್ ಸಿಲಬಸ್ಸು. ಮಂದಿರ ಮಂದಿರಗಳಲ್ಲಿ ಹನಮಾನ್ ಚಾಲಿಸಾ ಪಠಣ ಬಜರಂಗಿಯನ್ನು, ಬಜರಂಗದಳವನ್ನು ಸಮೀಕರಿಸಿಬಿಟ್ಟಿತು. ಪಿಎಫ್ಐನೊಂದಿಗೆ ಬಜರಂಗದಳವನ್ನು ಸಮೀಕರಿಸಿದ ಕಾಂಗ್ರೆಸ್ಸು ನಾಳೆ ಮಂದಿರಕ್ಕೆ ಹೋಗುವ ಸಾಮಾನ್ಯ ಕಾರ್ಯಕರ್ತರನ್ನು ಭಯೋತ್ಪಾದಕರೆನ್ನಲು ಹಿಂಜರಿಯುವುದಿಲ್ಲ ಎಂದೆನಿಸಿಬಿಟ್ಟಿತ್ತು ಜನರಿಗೆ. ಹೀಗಾಗಿ ಮನೆ-ಮನೆಯಲ್ಲೂ ಜನ ಆಕ್ರೋಶದಿಂದ ಕುದಿಯಲಾರಂಭಿಸಿದರು. ತನ್ನ ದಾಳ ತನಗೇ ತಿರುಮಂತ್ರವಾಗಿದ್ದು ಕಂಡು ಬೆಚ್ಚಿದ ಡಿಕೆಶಿ ಆಂಜನೇಯನ ಪಾದಗಳಿಗೆ ಹಣೆಹಚ್ಚಿ ‘ನಾನೂ ಹನುಮ ಭಕ್ತನೇ’ ಎಂದಿದ್ದು ಅವರ ಮೊದಲ ಸೋಲು. ಕಾಂಗ್ರೆಸ್ಸು ಎಂದಾದರು ಹಿಂದೂಗಳ ಪರವಾಗಿ ನಿಂತಿದ್ದು ನೆನಪಿದೆಯೇನು? ರಾಮ ಹುಟ್ಟಿದ್ದೇ ಸುಳ್ಳು ಎಂದು ಅವನ ಅಸ್ತಿತ್ವ ಪ್ರಶ್ನಿಸಿದವರು ಇವರು, ನ್ಯಾಯಾಲಯಕ್ಕೆ ಹಾಗೊಂದು ಅಫಿಡವಿಟ್ ಸಲ್ಲಿಸಿದರೂ ಕೂಡ. ರಾಮಸೇತು ಉಳಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂಬುದು ಅವರ ಭಾವನೆಯಾಗಿತ್ತು. ರಾಮ ಯಾವ ಇಂಜಿನಿಯರಿಂಗ್ ಕಾಲೇಜಿನ ಡಿಗ್ರಿ ಪಡೆದಿದ್ದಾನೆ ಎಂದು ಕುಹಕವಾಡಿದ್ದರು ಇವರೆಲ್ಲ. ರಾಮಮಂದಿರದ ನಿರ್ಮಾಣಕ್ಕೆಂದು ಮುಂದಡಿಯಿಟ್ಟಿದ್ದ ಕರಸೇವಕರ ಮೇಲೆ ಗೋಲಿಬಾರ್ ಮಾಡಿಸಿದವರು ಇವರು. ಗೋದ್ರಾದಲ್ಲಿ ಕರಸೇವೆ ಮುಗಿಸಿ ಮರಳಿ ಬರುತ್ತಿದ್ದ ರಾಮಭಕ್ತರನ್ನು ಮುಸಲ್ಮಾನರು ರೈಲಿನಲ್ಲಿ ಜೀವಂತ ದಹಿಸಿದಾಗ ಅವರ ಬೆಂಬಲಕ್ಕೆ ನಿಂತಿದ್ದು ಇದೇ ಮಂದಿ. ರಾಮನ ಕುರಿತಂತೆ ಅವಹೇಳನಕಾರಿ ಮಾತುಗಳನ್ನು ಟಿವಿ ಡಿಬೆಟ್‌ಗಳಲ್ಲಿ ಆಡುತ್ತಾ ಹಿಂದೂಗಳನ್ನು ಮತ್ತೆ-ಮತ್ತೆ ನೋಯಿಸಿದರು. ರಾಮಮಂದಿರ ಅಯೋಧ್ಯೆಯಲ್ಲಿ ನಿರ್ಮಾಣವಾಗುವುದಕ್ಕೆ ಅಡ್ಡಗಾಲು ಹಾಕಿ, ಅದನ್ನು ವಿವಾದಿತ ಪ್ರದೇಶವಾಗಿ ಉಳಿಸಿದ್ದಲ್ಲದೇ 67 ಎಕರೆ ಜಮೀನಿಗೆ ಮತ್ತೊಬ್ಬ ಫಲಾನುಭವಿಯನ್ನು ಸೃಷ್ಟಿಸುವ ಪ್ರಯತ್ನ ಮಾಡಿದ್ದೂ ಅವರೇ. ಹಿಂದೂಗಳಲ್ಲಿ ಒಡಕು ತಂದು ಮುಸಲ್ಮಾನರಿಗೆ ಲಾಭ ಮಾಡಿಕೊಡುವ ಅವರ ಪ್ರಯತ್ನ ಒಂದೆರಡೇನು? ರಾಮಮಂದಿರಕ್ಕೇ ಇಷ್ಟೆಲ್ಲ ವಿರೋಧ ಮಾಡಿದ್ದ ಈ ಮಂದಿ ಆಂಜನೇಯನ ಪಾದಗಳಿಗೆ ಹಣೆ ಹಚ್ಚಿದ್ದಾರೆಂದರೆ ಅದು ನರೇಂದ್ರಮೋದಿಯವರ ಬಜರಂಗಬಲಿ ಘೋಷಣೆಗಲ್ಲದೇ ಮತ್ಯಾವುದಕ್ಕೆ ಹೇಳಿ? ನಾವೆಲ್ಲ ಹನುಮ ನಾಡಿನವರು ನಿಜ. ಆದರೆ ಕಾಂಗ್ರೆಸ್ಸಿಗರ ಬಾಯಲ್ಲೂ ಹನುಮನ ನಾಮ ಬರುವಂತೆ ಮಾಡಿದ ಮೋದಿ ನಿಜಕ್ಕೂ ಶ್ರೇಷ್ಠ ಹನುಮ ಸೇವಕ. ಹೀಗಾಗಿಯೇ ಜನ ಊರೂರಲ್ಲೂ ಅವರನ್ನು ಅಪ್ಪಿಕೊಳ್ಳಲು ಸಿದ್ಧವಾಗಿಬಿಟ್ಟಿದ್ದಾರೆ. 

ತಾವು ಎಸೆದ ದಾಳ ಉಲ್ಟಾ ಹೊಡೆಯುತ್ತಿದೆ ಎಂದು ಗೊತ್ತಾದೊಡನೆ ಆಂಜನೇಯನಿಗೆ ಮಂದಿರ ಕಟ್ಟಿಕೊಡುವ, ಅಂಜನಾದ್ರಿಯನ್ನು ಅಭಿವೃದ್ಧಿಪಡಿಸುವ ಹಿಂದೂಗಳ ಓಲೈಕೆಯ ಮಂತ್ರವನ್ನು ಕಾಂಗ್ರೆಸ್ಸು ಪಠಿಸುತ್ತಿದ್ದಂತೆ ಮುಸಲ್ಮಾನರಿಗೆ ಅಸಮಾಧಾನವೂ ಅನುಮಾನವೂ ಶುರುವಾಯ್ತು. ಅವರೀಗ ಪೂರಾ ಗೊಂದಲದಲ್ಲಿದ್ದಾರೆ. ಅದಾಗಲೇ ಸತ್ತಿದ್ದ ಪಿಎಫ್ಐ ಅನ್ನು ಬ್ಯಾನ್ ಮಾಡುತ್ತೇನೆ ಎನ್ನುವುದು ಎಷ್ಟು ಮೂರ್ಖ ಸಂಗತಿಯಾಗಿತ್ತೋ, ಬಜರಂಗದಳ ಬ್ಯಾನ್ ಮಾಡುವುದು ಸ್ಥಳೀಯ ಸರ್ಕಾರಕ್ಕೆ ಅಸಾಧ್ಯವಾದ ಸಂಗತಿ ಎನ್ನುವುದು ಮುಸಲ್ಮಾನರಿಗೆ ತಿಳಿಯದುದೇನಾಗಿರಲಿಲ್ಲ. ಹೀಗಾಗಿ ಅವರೊಳಗೆ ಆಕ್ರೋಶದ ಬೀಜವಂತೂ ಬಿತ್ತಿದೆ. ಇತ್ತ ಹಿಂದೂ ಕಾರ್ಯಕರ್ತರು ಹಠಹಿಡಿದು ಅಖಾಡಕ್ಕೆ ಧುಮುಕಿದರೆ ಅತ್ತ ಮುಸಲ್ಮಾನರು ಕಾಂಗ್ರೆಸ್ಸಿನ ಪಲಾಯನವಾದಿ ರಾಜಕಾರಣ ಕಂಡು ಇವರಿಂದ ಒಂದು ಹೆಜ್ಜೆ ಹಿಂದೆ ಸರಿದಿರುವುದಂತೂ ಸ್ಪಷ್ಟ. ಈಗ ಕಾಂಗ್ರೆಸ್ಸಿಗೆ ಉಳಿದಿರುವುದು ಒಂದೇ ಮಾರ್ಗ. ಹಿಂದೂಗಳನ್ನು ಜಾತಿ-ಜಾತಿಗಳಲ್ಲಿ ಒಡೆದು ಬಿಸಾಡುವುದು ಮಾತ್ರ. ಹೀಗಾಗಿಯೇ ಬ್ರಾಹ್ಮಣ ಮತ್ತು ಲಿಂಗಾಯಿತರನ್ನು ಎತ್ತಿಕಟ್ಟುವ ಪ್ರಯತ್ನ ಆರಂಭಿಸಿದರು. ಬಿ.ಎಲ್ ಸಂತೋಷರನ್ನು ಇದಕ್ಕೆ ದಾಳವಾಗಿ ಉಪಯೋಗಿಸಬೇಕೆಂದು ಫೇಕ್ ಸುದ್ದಿಯನ್ನು ಸೃಷ್ಟಿಸಿದರು. ಇದ್ಯಾವುದಕ್ಕೂ ಎಂದಿಗೂ ತಲೆಕೆಡಿಸಿಕೊಳ್ಳದ ಅವರು ಈ ಬಾರಿ ಮಾತ್ರ ಹಠಕ್ಕೆ ಬಿದ್ದು ಸುದ್ದಿ ಹರಿದಾಡಿಸಿದವನ ವಿರುದ್ಧ ಕ್ರಮ ಕೈಗೊಂಡಿದ್ದಿದೆಯಲ್ಲ, ಇದು ಲಿಂಗಾಯಿತರ ಕಣ್ತೆರೆಸುವಂಥದ್ದು. ಹಾಗೆ ನೋಡಿದರೆ ವೀರಶೈವರನ್ನೂ ಲಿಂಗಾಯಿತರನ್ನೂ ಒಡೆದು ಮತಗಳನ್ನು ಬಾಚಿಕೊಳ್ಳಲು ಯತ್ನಿಸಿದ್ದು ಸಿದ್ದರಾಮಯ್ಯ ಮತ್ತವರ ತಂಡವೇ ಅಲ್ಲವೇನು? ಚುನಾವಣೆಯವರೆಗೂ ಹೋರಾಟಕ್ಕೆ ಕಾವು ತಂದುಕೊಡುವಲ್ಲಿ ದುಡಿದ ಈ ನಾಯಕರು ಆನಂತರ ಲಿಂಗಾಯಿತರ ಬಳಿಯೂ ಸುಳಿಯಲಿಲ್ಲವೆಂಬುದು ಸತ್ಯವಲ್ಲವೇನು? ಮೊದಲಾದರೆ ಜನ ಮರೆತುಬಿಡುತ್ತಿದ್ದರು. ಸಾಮಾಜಿಕ ಜಾಲತಾಣಗಳ ಯುಗದಲ್ಲಿ ಮತ್ತೆ ಮತ್ತೆ ನೆನಪಿಸುವ ವ್ಯವಸ್ಥೆ ಇರುವುದರಿಂದ ಕಾಂಗ್ರೆಸ್ಸು ಕಂಗಾಲಾಗಿರುವುದು ಕಾಣುತ್ತದೆ. ಜಾತಿ-ಜಾತಿಗಳು ಮೋದಿ ರ್ಯಾಲಿಯ ನಂತರ ಜಾತಿಯನ್ನೇ ಮರೆತು ಮೋದಿಯ ಮಾತಿಗೆ ಮತಹಾಕುವ ಹಂತಕ್ಕೆ ಬಂದಿರುವುದು ಕಾಂಗ್ರೆಸ್ಸಿಗರಿಗೆ ಸಹಿಸಲಾಗದ ಸುದ್ದಿ. 

ನರೇಂದ್ರಮೋದಿ ಈ ಬಾರಿ ಬಹುಮತದ ಸರ್ಕಾರ ಕೇಳಿಕೊಂಡಿದ್ದಾರೆ. 104ಕ್ಕೆ ಪ್ರತೀಬಾರಿ ನಿಲ್ಲಿಸುತ್ತೇವಲ್ಲ, ಅದು ಬಿಜೆಪಿಯನ್ನು ಅನಿವಾರ್ಯವಾಗಿ ಕೆಡುಕಿನತ್ತ ದೂಡುತ್ತದೆ. ಆಪರೇಶನ್ ಕಮಲಕ್ಕೆ ಪ್ರೇರೇಪಿಸುತ್ತದೆ. ಒಮ್ಮೆ ಪೂರ್ಣ ಬಹುಮತ ಕೊಟ್ಟರೆ ಉತ್ತರ ಪ್ರದೇಶದಲ್ಲಿ ನೀಡಿದಂತಹ ಸಮರ್ಥ ಆಡಳಿತವನ್ನು ಕರ್ನಾಟಕಕ್ಕೂ ನೀಡಬಹುದೆಂದು ಅವರ ಬಯಕೆ. ಹೀಗಿರುವಾಗ ಜವಾಬ್ದಾರಿಯುತವಾಗಿ ಮತ ಸಲ್ಲಿಸುವುದು ನಮ್ಮ ಹೊಣೆ. ಅಷ್ಟೇ ಅಲ್ಲ, ಬಿಜೆಪಿ ಈ ಬಾರಿ 70ಕ್ಕೂ ಹೆಚ್ಚು ಹೊಸಮುಖಗಳನ್ನು ಪರಿಚಯಿಸಿದೆ. ಇವರಲ್ಲಿ ಬಹುತೇಕರು ಸಾಮಾನ್ಯ ಕಾರ್ಯಕರ್ತರು, ಕೆರೆದರೂ ಅಕೌಂಟಿನಲ್ಲಿ ನಾಲ್ಕಾರು ಲಕ್ಷ ಸಿಗದವರು. ಈ ಬಾರಿ ಬಿಜೆಪಿಯ ಈ ಪ್ರಯೋಗಕ್ಕೆ ಸೋಲಾದರೆ ಇನ್ನೆಂದೂ ಯಾರೂ ಕಾರ್ಯಕರ್ತರಿಗೆ ಟಿಕೆಟ್ ಕೊಡುವ ಯತ್ನ ಮಾಡಲಾರರು. ಟಿಕೆಟ್ ಕೊಡುವ ಮುನ್ನ ಅಪ್ಪ ಶಾಸಕನಾಗಿದ್ದಾನಾ ಎಂದು ಗುರುತಿಸಿಕೊಳ್ಳುವುದು ಅನಿವಾರ್ಯವಾಗಿಬಿಡುತ್ತದೆ. ಅಲ್ಲಿಗೆ ಕಾರ್ಯಕರ್ತನ ಸಮಾಧಿ. ಕಾಂಗ್ರೆಸ್ಸಿನ ಕಾರ್ಯಕರ್ತರೂ ಈ ಕುರಿತಂತೆ ಗಂಭೀರವಾಗಿ ಯೋಚಿಸಬೇಕಿದೆ. ಸಾಯುವ ಕೊನೆ ಕ್ಷಣದಲ್ಲೂ ಕುರ್ಚಿಯ ಮೇಲಿರಬೇಕೆಂದು ಬಯಸುವ ಮಂದಿಯ ಜೀತ ಮಾಡಬಾರದೆಂದರೆ ಈ ಬಾರಿ ಅವರೂ ಬಿಜೆಪಿಗೆ ಮತಹಾಕಿ ಕಾರ್ಯಕರ್ತರಿಗೆ ಟಿಕೆಟ್ ಕೊಡುವ ಈ ವಿಚಾರಧಾರೆಯನ್ನು ಗೆಲ್ಲಿಸಬೇಕಿದೆ. ಆಗಮಾತ್ರ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಂದಿನ ಚುನಾವಣೆಯಲ್ಲಾದರೂ ಟಿಕೆಟ್ ಸಿಗುವ ಸಾಧ್ಯತೆ ಇದೆ. ಇಲ್ಲವಾದರೆ ಅಪ್ಪ, ಮಗ, ಮೊಮ್ಮಗ, ಮರಿಮಕ್ಕಳ ಪರಂಪರೆ ವರುಣಾದಲ್ಲಿ ಮುಂದುವರೆದಂತೆ ನಾಡಿನೆಲ್ಲೆಡೆಗೂ ಹಬ್ಬಲಿದೆ. 

ಈ ಕಾರಣಕ್ಕೇ ಮೇ 10 ಅತ್ಯಂತ ಪ್ರಮುಖವಾದ ದಿವಸ. ಮತ ಹಾಕಬೇಕೋ ಬೇಡವೋ ಎಂದು ಆಲೋಚಿಸುತ್ತಿರುವವರು ಮನೆಯಿಂದ ಹೊರಬನ್ನಿ. ಮೋದಿಯವರು ಕೇಳಿಕೊಂಡಂತೆ ಒಮ್ಮೆ ಅವರಿಗೆ ಬಹುಮತ ಕೊಡೋಣ. ಕರ್ನಾಟಕ ಅಭಿವೃದ್ಧಿಯ ಪಥದಲ್ಲಿ ಮೋದಿಗೆ ಬಲಗೈಯ್ಯಾಗಿ ಮುನ್ನುಗ್ಗಲೆಂದು ಪ್ರಾರ್ಥಿಸೋಣ ಮತ್ತು 2024ರ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿಯನ್ನು ಗೆಲ್ಲಿಸಲು ಈಗ ಅವರ ಗೆಲುವು ಮುಖ್ಯ ಎನ್ನುವುದನ್ನು ಮರೆಯದಿರೋಣ. ಹೌದಲ್ಲವೇ?

ಮೋದಿಗೆ ಮತ್ತೆಷ್ಟು ಬಾರಿ ಅಗ್ನಿಪರೀಕ್ಷೆ?!

ಮೋದಿಗೆ ಮತ್ತೆಷ್ಟು ಬಾರಿ ಅಗ್ನಿಪರೀಕ್ಷೆ?!

ಮೋದಿ ಇಪ್ಪತ್ತು ವರ್ಷಗಳ ನಂತರ ದೇಶದ ಸರ್ವೋಚ್ಚ ನ್ಯಾಯಾಲಯದಿಂದ ಕ್ಲೀನ್ ಚಿಟ್ ಪಡೆದುಕೊಂಡಿದ್ದಾರೆ. ಮೋದಿಯನ್ನು ರಕ್ಕಸನೆಂದು ಬಿಂಬಿಸಲು ಮಾಧ್ಯಮಗಳು, ರಾಜಕಾರಣಿಗಳು, ಅಧಿಕಾರಿಗಳು, ಕೆಲವು ಎನ್‌ಜಿಒಗಳು ಮಾಡಿದ ಪ್ರಯತ್ನ ಕೊನೆಗೂ ಮಣ್ಣುಗೂಡಿದೆ. ಪುಟವಿಟ್ಟ ಚಿನ್ನದಂತೆ ಮೋದಿ ಮತ್ತೊಮ್ಮೆ ಬೆಳಗಿದ್ದಾರೆ.

2002ರ ಫೆಬ್ರವರಿ 27. ಅಯೋಧ್ಯಾದಿಂದ ಬರುತ್ತಿದ್ದ ರೈಲೊಂದಕ್ಕೆ ಮುಸಲ್ಮಾನರು ಗುಜರಾತಿನ ಗೋದ್ರಾದಲ್ಲಿ ಬೆಂಕಿ ಹಚ್ಚಿದರು. ಇದು ಅಚಾನಕ್ಕಾಗಿ ನಡೆದ ದಾಳಿಯಲ್ಲ. ಎಂದಿನಂತೆ ಕೈಲಿ ಕಲ್ಲುಗಳನ್ನು ಹಿಡಿದು, ಪೆಟ್ರೋಲು ಬಾಂಬುಗಳನ್ನು ಹಿಡಿದು ಸಿದ್ಧವಾಗಿದ್ದ ಮುಸಲ್ಮಾನ ಪುಂಡರು ರೈಲು ನಿಂತೊಡನೆ ಏಕಾಕಿ ದಾಳಿ ಮಾಡಿದರು. ಕಲ್ಲೆಸೆದು ಜನರನ್ನು ರೈಲಿನಿಂದ ಹೊರಬರದಂತೆ ತಡೆದರು. ಪೆಟ್ರೋಲ್ ಬಾಂಬುಗಳನ್ನು ಎಸೆದು ಬೋಗಿಗಳು ಹೊತ್ತುರಿಯುವಂತೆ ಮಾಡಿದರು. ಬೇಗೆ ತಾಳಲಾರದೆ ತಪ್ಪಿಸಿಕೊಳ್ಳಲು ಯತ್ನಿಸಿದವರನ್ನು ಹೊರಗೆ ನಿಂತು ಕಲ್ಲಿನಲ್ಲಿ ಹೊಡೆಯಲಾಯ್ತು. ಇಡಿಯ ಬೋಗಿಗಳು ಸುಟ್ಟು ಕರಕಲಾದವಲ್ಲದೇ 59 ಜನ ಕರಸೇವಕರು ಬೆಂದುಹೋಗಿದ್ದರು. ಅವರ ದೇಹಗಳನ್ನು ಆಸ್ಪತ್ರೆಗೆ ಸಾಗಿಸುವಾಗ ಎಂಥವನ ರಕ್ತವೂ ಕುದಿಯುತ್ತಿತ್ತು. ಆದರೆ ಈ ದೇಶದ ಮಾಧ್ಯಮಗಳಲ್ಲಿದ್ದವರು ಅಂದೂ ಅದರ ಕುರಿತಂತೆ ತಲೆಕೆಡಿಸಿಕೊಳ್ಳಲಿಲ್ಲ, ಇಂದೂ ಕೂಡ! ಕಳೆದ ಮಾರ್ಚ್‌ನಲ್ಲಿ ಪ್ರೇಮ್ಶಂಕರ್ ಝಾ ಈ ಪ್ರಕರಣವನ್ನು ನೆನಪಿಸಿಕೊಳ್ಳುತ್ತಾ ವೈರ್ ಪತ್ರಿಕೆಗೆ ಬರೆದ ಲೇಖನದಲ್ಲಿ, 1100 ಜನ ಸಾಮಥ್ರ್ಯ ಹೊಂದಿದ್ದ ಆ ರೈಲು 2000ಕ್ಕೂ ಹೆಚ್ಚು ಜನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದುದೇ ಮೊದಲ ತಪ್ಪು ಎಂಬುದನ್ನು ಬರೆದುಕೊಂಡಿದ್ದಾರೆ. ಎಸ್6 ಬೋಗಿ ಬೆಂಕಿ ಹೊತ್ತಿಸಿಕೊಂಡು ಉರಿದು ಕರಸೇವಕರು ಸಾಯಲು ಕಾರಣವಾಗಿದ್ದು ಅದು ಅಗತ್ಯಕ್ಕಿಂತ ಹೆಚ್ಚು ತುಂಬಿದ್ದುದರಿಂದ ಎಂದು ವಾದಿಸುವ ಪ್ರಯತ್ನ ಮಾಡಿದ್ದಾರೆ. ಬೆಂಕಿ ಹಚ್ಚಿದ ಮುಸಲ್ಮಾನರದ್ದು ಯಾವ ತಪ್ಪೂ ಇಲ್ಲ. ರೈಲಿನಲ್ಲಿ ಹೆಚ್ಚು ಸಂಖ್ಯೆಯಲ್ಲಿ ಸೇರಿದ್ದ ಹಿಂದೂಗಳದ್ದೇ ತಪ್ಪು. ಅರುಂಧತಿ ರಾಯ್ ಅಂತೂ ಅಂದಿನ ದಿನಗಳಲ್ಲೇ ಬಾಬರಿ ಮಸೀದಿಯನ್ನು ಉರುಳಿಸಿ ಬರುತ್ತಿದ್ದ ಕರಸೇವಕರ ಮೇಲೆ ಮುಸಲ್ಮಾನರಿಗೆ ಆಕ್ರೋಶವಿತ್ತು, ಹೀಗಾಗಿ ಈ ರೀತಿ ಆಯ್ತು ಎಂದು ದಂಗೆಕೋರರಿಗೆ ಕವರಿಂಗ್ ಫೈರ್ ಕೊಡುವ ಪ್ರಯತ್ನ ಮಾಡಿದ್ದಳು! ಮಸೀದಿ ಉರುಳುವ ಮತ್ತು ಗೋದ್ರಾ ರೈಲಿಗೆ ಬೆಂಕಿ ಹಚ್ಚುವ ಘಟನೆಗಳ ನಡುವೆ ಹತ್ತು ವರ್ಷಗಳ ಅಂತರವಿತ್ತು ಎಂಬುದನ್ನು ಆಕೆ ಮರೆತೇ ಹೋಗಿದ್ದಳು. ಹತ್ತು ವರ್ಷಗಳ ಹಿಂದೆ ನಿರ್ಜೀವ ಕಟ್ಟಡವೊಂದನ್ನು ಉರುಳಿಸಿದ ಘಟನೆಗೆ ಮುಸಲ್ಮಾನರು 59 ಜನರ ಸಜೀವ ದಹನ ಮಾಡಿದ್ದು ಸಹಜ ಪ್ರತಿಕ್ರಿಯೆಯಾಗಬಹುದಾದರೆ, ಈ ರೈಲು ದಹನದ ನಂತರ ಹಿಂದೂಗಳು ಮುಸಲ್ಮಾನರ ವಿರುದ್ಧ ಆಕ್ರೋಶಗೊಂಡಿದ್ದು ಮಾತ್ರ ಅಸಹಜ ಹೇಗಾಯ್ತು? ಈ ಪ್ರಶ್ನೆಯನ್ನು ಆಗಲೂ ಯಾರೂ ಕೇಳಲಿಲ್ಲ, ಈಗಲೂ ಕೂಡ ವ್ಯವಸ್ಥಿತವಾಗಿ ಮರೆಯುತ್ತಾರೆ.

ಆದರೆ ಗೋದ್ರಾ ನಂತರದ ಘಟನೆಗಳನ್ನು, ಮೋದಿಯನ್ನು ಶಾಶ್ವತವಾಗಿ ಮುಗಿಸುವ ಪ್ರಯತ್ನಕ್ಕೆ ಎಲ್ಲರೂ ರಣಹದ್ದುಗಳಂತೆ ಬಳಸಿಕೊಂಡರು. ಮೋದಿ ಮುಖ್ಯಮಂತ್ರಿಯ ಪಟ್ಟಕ್ಕೆ ಬಂದು ಆಗಷ್ಟೇ ನಾಲ್ಕು ತಿಂಗಳು ಕಳೆದಿದ್ದವು. ಕಚ್‌ನ ಭೂಕಂಪವನ್ನು ಎದುರಿಸಿ ನಿಂತು ಅವರು ಜನರಲ್ಲಿ ಮೂಡಿಸಿದ ವಿಶ್ವಾಸ ಪ್ರತಿಪಕ್ಷಗಳಲ್ಲಿ ಆತಂಕ ಹುಟ್ಟಿಸಿತ್ತು. ಈ ಅವಕಾಶವನ್ನು ಎಲ್ಲರೂ ಬಳಸಿಕೊಂಡರು. ರಾಷ್ಟ್ರಮಟ್ಟದಲ್ಲಿ ಹಿಂದೂಗಳನ್ನು ಅವಮಾನಗೊಳಿಸಲು ದಂಗೆಗಳನ್ನು ವ್ಯವಸ್ಥಿತವಾಗಿ ಉಪಯೋಗಿಸಲಾಯ್ತು. ಆಗಷ್ಟೇ ಅಧಿಕಾರಕ್ಕೆ ಬಂದಿದ್ದ ಮೋದಿ ದಂಗೆಗಳು ಕೈಮೀರುತ್ತವೆಂದು ಗೊತ್ತಾದೊಡನೆ ಪಕ್ಕದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಧ್ಯಪ್ರದೇಶದ ದಿಗ್ವಿಜಯ್ ಸಿಂಗ್, ಮಹಾರಾಷ್ಟ್ರದ ವಿಲಾಸ್‌ರಾವ್ ದೇಶ್‌ಮುಖರಿಗೆ ಪತ್ರ ಬರೆದು ರಕ್ಷಣೆಯ ದೃಷ್ಟಿಯಿಂದ ಸಹಾಯ ಕೊಡುವಂತೆ ಕೇಳಿಕೊಂಡರು. ಕಾಂಗ್ರೆಸ್ಸಿಗೆ ಸೇರಿದ್ದ ಈ ಮೂರೂ ರಾಜ್ಯಗಳು ಅಂದು ಮೋದಿಯ ವಿನಂತಿಗೆ ಪ್ರತಿಕ್ರಿಯಿಸಲೇ ಇಲ್ಲ. ಇದಕ್ಕೆ ವಿಪರೀತವಾಗಿ ದಂಗೆ ನಿಯಂತ್ರಣ ಮಾಡುವಲ್ಲಿ ಮೋದಿ ಸೋತರೆಂದು ಅದೇ ಮುಖ್ಯಮಂತ್ರಿಗಳು ಆನಂತರ ಮಾತನಾಡಲಾರಂಭಿಸಿದರು. ಸುಳ್ಳು ಸುದ್ದಿ ಹಬ್ಬಿಸಿ ತಮಗೆ ಬೇಕಾದ ವಾತಾವರಣವನ್ನು ಸೃಷ್ಟಿಸುವಲ್ಲಿ ನಿಸ್ಸೀಮರಾದ ಎಡಪಂಥೀಯರು ಕೌಸರ್ ಬಾನೊ ಎಂಬ ಗರ್ಭಿಣಿ ಮುಸ್ಲೀಂ ಹೆಣ್ಣುಮಗಳ ಸಾವನ್ನೂ ಕೂಡ ತಮಗೆ ತಕ್ಕಂತೆ ಬಳಸಿಕೊಂಡರು. ಹಿಂದೂ ಪಡೆ ಆಕೆಯ ಮೇಲೆ ಅತ್ಯಾಚಾರ ಮಾಡಿ, ಆಕೆಯ ಹೊಟ್ಟೆಯನ್ನು ಸೀಳಿ, ಒಳಗಿದ್ದ ಮಗುವನ್ನು ಕತ್ತಿಯಿಂದ ಕತ್ತರಿಸಿದರು ಎಂದೆಲ್ಲ ಸುದ್ದಿ ಹಬ್ಬಿಸಿದರು. ಆ ಮೂಲಕ ಮುಸಲ್ಮಾನರನ್ನು ಮೋದಿ ಸರ್ಕಾರದಲ್ಲಿ ಹೇಗೆ ನಡೆಸಿಕೊಳ್ಳಲಾಗುತ್ತಿದೆ ಮತ್ತು ಹಿಂದೂಗಳು ಅದೆಷ್ಟು ಕ್ರೂರಿಗಳು ಎಂದು ಬಿಂಬಿಸುವ ಪ್ರಯತ್ನ ಅದಾಗಿತ್ತು. ಸಾಮಾಜಿಕ ಜಾಲತಾಣಗಳು ಈಗಿನಷ್ಟು ವ್ಯಾಪಕವಾಗಿಲ್ಲದ್ದಿದ್ದದ್ದರಿಂದ ಇದರ ಸತ್ಯಾಸತ್ಯತೆ ತಿಳಿಯಲು ಸಾಧ್ಯವಾಗಲೇ ಇಲ್ಲ. 2010ರಲ್ಲಿ ವಿಸ್ತಾರವಾದ ವರದಿ ಬಂದಾಗಲೇ ಇದೊಂದು ಸುಳ್ಳು ಪ್ರಕರಣ ಎಂಬುದು ಗೊತ್ತಾಗಿದ್ದು. ತೀರಿಕೊಂಡ ಗರ್ಭಿಣಿ ಹೆಣ್ಣುಮಗಳ ಮರಣೋತ್ತರ ಪರೀಕ್ಷೆ ನಡೆಸಿದ ಡಾಕ್ಟರ್ ಜೆ.ಎಸ್ ಕನೋರಿಯಾ ಮಗು ಹೊಟ್ಟೆಯೊಳಗೆ ಸುರಕ್ಷಿತವಾಗಿದ್ದುದನ್ನು, ಎರಡೂವರೆ ಕೆಜಿಯಷ್ಟು ತೂಕವಿದ್ದುದನ್ನು ದಾಖಲಿಸಿದ್ದರು. ಆದರೆ ಆ ವರದಿಯ ನಂತರವೂ ಕೌಸರ್ ಬಾನೊ ಕಥೆ ಮಾತ್ರ ಹಾಗೆಯೇ ಉಳಿಯಿತು!

ಈ ದಂಗೆಯ ಕ್ಷಣ-ಕ್ಷಣದ ಮಾಹಿತಿಗಳನ್ನು ಬಿತ್ತರಿಸುವ ಧಾವಂತಕ್ಕೆ ಬಿದ್ದ ಎಲೆಕ್ಟ್ರಾನಿಕ್ ಮಾಧ್ಯಮಗಳು ‘ನಮ್ಮಲ್ಲೇ ಮೊದಲು’ ಎಂದು ಹೇಳುತ್ತಾ ಸುಳ್ಳು ಸುದ್ದಿಗಳನ್ನೇ ವ್ಯಾಪಕವಾಗಿ ಪ್ರಚಾರ ಮಾಡಿ ದಂಗೆಗಳಿಗೆ ಪ್ರೇರಣೆಕೊಟ್ಟರು. ಬರ್ಖಾದತ್ ಸೂರತ್ತಿನ ವಜ್ರದ ಮಾರುಕಟ್ಟೆಯಲ್ಲಿ ನಿಂತು ‘ಇಲ್ಲಿ ಒಬ್ಬ ಪೊಲೀಸರೂ ಇಲ್ಲ. ಇಲ್ಲಿ ದಂಗೆ ವಿಸ್ತರಿಸಿದರೆ ಏನು ಕಥೆ?’ ಎಂದೆಲ್ಲಾ ವರದಿ ಮಾಡುತ್ತಿದ್ದಳು. ಕಚ್ ಭಾಗದಲ್ಲಿ ಹನುಮಾನ್ ಮಂದಿರವೊಂದನ್ನು ದುಷ್ಕರ್ಮಿಗಳು ಉರುಳಿಸಿದ್ದಾರೆ ಎಂಬ ಸುದ್ದಿಯನ್ನು ಆಕೆ ಜನರ ಮನಸ್ಸಿನಲ್ಲಿ ಬಿತ್ತುತ್ತಿದ್ದಳು. ಮುಖ್ಯಮಂತ್ರಿಯಾಗಿದ್ದ ಮೋದಿ ಆಕೆಗೆ ಕರೆಮಾಡಿ, ‘ವಜ್ರದ ಮಾರುಕಟ್ಟೆಯಲ್ಲಿ ಪೊಲೀಸರಿಲ್ಲ ಎಂದು ಹೇಳುವ ಮೂಲಕ ತಾವು ದಂಗೆಕೋರರನ್ನು ಆಹ್ವಾನಿಸುತ್ತಿದ್ದೀರಾ?’ ಎಂದು ಕೇಳಿದ್ದರಲ್ಲದೇ, ಕಚ್ ಭಾಗದಲ್ಲಿ ಆಕೆ ಹೇಳಿದ ಯಾವ ಮಂದಿರವೂ ಉರುಳಿರಲಿಲ್ಲವೆಂಬುದನ್ನು ಖಾತ್ರಿ ಪಡಿಸಿಕೊಂಡರು. ಅದರರ್ಥ ಹಿಂದೂ-ಮುಸಲ್ಮಾನರ ನಡುವಿನ ಕಂದಕವನ್ನು ವಿಸ್ತಾರಗೊಳಿಸಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಬೇಕೆಂಬುದೇ ಅವರೆಲ್ಲರ ಪ್ರಯತ್ನವಾಗಿತ್ತು. ಅವರ ಗುರಿ ಮೋದಿಯಷ್ಟೇ ಆಗಿರಲಿಲ್ಲ. ಏಕೆಂದರೆ ಬಿಜೆಪಿಯಲ್ಲೇ ಅನೇಕ ಗೊಂದಲಗಳುಂಟಾಗಿ ಮೋದಿ ಅನಿವಾರ್ಯಕ್ಕೆ ಅಧಿಕಾರಕ್ಕೆ ಬಂದಿದ್ದರು. ಜನಸಾಮಾನ್ಯರು ರೋಸಿಹೋಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ವಿರುದ್ಧ ಮತ ಚಲಾಯಿಸಿದರೂ ಅಚ್ಚರಿ ಪಡಬೇಕಿರಲಿಲ್ಲ! ಎಲ್ಲ ಇಂಗ್ಲೀಷ್ ಮಾಧ್ಯಮಗಳಿಗೆ ಕಣ್ಣಿದ್ದುದು ಹಿಂದೂಗಳ ಮೇಲೆ. ಹಿಂದೂಗಳು ಆತಂಕವಾದಿಗಳು, ಕ್ರೂರಿಗಳು ಎಂದು ಬಿಂಬಿಸುವ ಜರೂರತ್ತು ಅವರಿಗಿತ್ತು. ಅದಕ್ಕೆ ಈ ಅವಕಾಶವನ್ನು ಚೆನ್ನಾಗಿಯೇ ಬಳಸಿಕೊಂಡರು. ಮೋದಿ ಅನಿವಾರ್ಯವಾಗಿ ಎನ್ಡಿಟಿವಿಯನ್ನು ಗುಜರಾತಿನಲ್ಲಿ ತಡೆಹಿಡಿಯಬೇಕಾಯ್ತು. ಅಚ್ಚರಿ ಎಂದರೆ ಅಂದು ಅದೇ ಚಾನೆಲ್‌ನಲ್ಲಿದ್ದು ಈ ಇಡೀ ಸುಳ್ಳು ಸುದ್ದಿಯನ್ನು ಹರಡಿಸುವಲ್ಲಿ ನೇತಾರನಾಗಿದ್ದ ರಾಜ್‌ದೀಪ್ 17 ವರ್ಷಗಳ ನಂತರ 2019ರಲ್ಲಿ ಪತ್ರಕರ್ತ ಮನು ಜೋಸೆಫ್ ಕೇಳಿದ ಪ್ರಶ್ನೆಗೆ ‘ಈ ದಂಗೆಗೆ ಮೋದಿ ಕಾರಣರಲ್ಲವೇ ಅಲ್ಲ’ ಎಂದು ಉತ್ತರಿಸಿದ್ದ. ಹಾಗಿದ್ದರೆ ಅವತ್ತು ಹೇಳಿದ ಸುಳ್ಳುಗಳಿಗೆ ಯಾರು ಹೊಣೆ? ಅದರಿಂದಾಗಿ ಮೋದಿ ಸುದೀರ್ಘಕಾಲ ನರಕಯಾತನೆ ಅನುಭವಿಸಬೇಕಾಯ್ತಲ್ಲ, ಅದರ ಜವಾಬ್ದಾರಿ ಯಾರದ್ದು? ಈ ಪ್ರಶ್ನೆಗೆಲ್ಲ ಉತ್ತರಿಸಬೇಕಾದ್ದು ಯಾರು?


ಪತ್ರಕರ್ತರಷ್ಟೇ ಅಲ್ಲ, ಅಧಿಕಾರಿಗಳೂ ಇದರಲ್ಲಿ ಶಾಮೀಲಾಗಿದ್ದರು. ಐಪಿಎಸ್ ಅಧಿಕಾರಿಯಾಗಿದ್ದ ಸಂಜೀವ್ ಭಟ್ ಮೋದಿಯ ವಿರುದ್ಧ ತನ್ನೆಲ್ಲ ಆಕ್ರೋಶವನ್ನೂ ಹಂತ-ಹಂತವಾಗಿ ಹೊರಹಾಕಿದ. 2011ರಲ್ಲಿ ಆತ ಸ್ಫೋಟಕವಾದ ಮಾಹಿತಿಯೊಂದನ್ನು ಸಮಾಜದ ಮುಂದಿಟ್ಟ. ಕರಸೇವಕರನ್ನು ಸುಟ್ಟ ಪ್ರಕರಣದ ನಂತರ ಮೋದಿ ತುರ್ತು ಸಭೆಯೊಂದನ್ನು ಕರೆದು ಹಿಂದೂಗಳಿಗೆ ತಮ್ಮ ಆಕ್ರೋಶವನ್ನು ಹೊರಹಾಕಲು ಅವಕಾಶ ಮಾಡಿಕೊಡಬೇಕೆಂದೂ, ಈ ಬಾರಿ ಈ ಆಕ್ರೋಶ ಹೊರಹಾಕುವ ಪ್ರಕ್ರಿಯೆ ಹೇಗಿರಬೇಕೆಂದರೆ ಇನ್ನೆಂದೂ ಮುಸಲ್ಮಾನರು ಇಂತಹ ಕೃತ್ಯಕ್ಕೆ ಕೈ ಹಾಕದಂತಾಗಬೇಕೆಂದು ಹೇಳಿದ್ದರಂತೆ. ಅದಕ್ಕೆ ಪೂರಕವಾಗಿ ಆ ಸಭೆಯಲ್ಲಿ ಭಾಗವಹಿಸಲು ತನಗೂ ಆಹ್ವಾನವಿದ್ದ ಫ್ಯಾಕ್ಸ್ ಪ್ರತಿಯೊಂದನ್ನು ಆತ ಸಮಾಜದ ಮುಂದಿರಿಸಿದ. ಈ ಸಭೆಯಲ್ಲಿ ಎಂಟು ಜನ ಪ್ರಮುಖ ಪೊಲೀಸರಿದ್ದು ಅವರೆಲ್ಲರೂ ಈ ದಂಗೆ ನಿಲ್ಲದಂತೆ ನೋಡಿಕೊಂಡರು ಎಂದಿದ್ದ. ನಾನಾವತಿ ಮೆಹ್ತಾ ಕಮಿಷನ್ ಈ ಎಲ್ಲ ಆರೋಪಗಳನ್ನೂ ಅಲ್ಲಗಳೆಯಿತಲ್ಲದೇ ಆತ ಈ ಸಭೆಯಲ್ಲಿ ಭಾಗವಹಿಸಿರುವುದೇ ಸುಳ್ಳು ಎಂದಿತು. ಆತ ಹೇಳಿರುವ ಅಷ್ಟೂ ಹೇಳಿಕೆಯನ್ನು ಈ ಕಮಿಷನ್ ಸಾರಾಸಗಟಾಗಿ ತಿರಸ್ಕರಿಸಿತು. ಆತ ಮುಂದಿಟ್ಟಿರುವ ಫ್ಯಾಕ್ಸ್ ಪ್ರತಿಯೂ ಕೂಡ ಆ ಸಭೆಯದ್ದಲ್ಲವೆಂಬುದು ಇವರುಗಳ ತನಿಖೆಯ ಮೂಲಕ ಹೊರಬಂತು. ಮುಂದೆ ಇದೇ ಸಂಜೀವ್ ಭಟ್ ಸಾಮಾಜಿಕ ಜಾಲತಾಣಗಳಲ್ಲಿ ಮೋದಿಯನ್ನು ಟ್ರೋಲ್ ಮಾಡುತ್ತಾ ಮೋದಿ ವಿರೋಧಿಗಳ ಪಾಲಿನ ಹೀರೋ ಆಗಿ ಉಳಿದ.

ಇವರೆಲ್ಲರೂ ಸೇರಿ ವಾತಾವರಣವನ್ನು ಹೇಗೆ ರೂಪಿಸಿಬಿಟ್ಟಿದ್ದರೆಂದರೆ 72 ಗಂಟೆಗಳ ಕಾಲ ಮೋದಿ ಹಿಂದೂಗಳಿಗೆ ಪೂರ್ಣ ಅವಕಾಶವನ್ನು ಕೊಟ್ಟಿದ್ದರೆಂದು, ಅಷ್ಟರೊಳಗೆ ಮಾಡಬೇಕಾದ್ದೆಲ್ಲವನ್ನೂ ಮಾಡಿ ಮುಗಿಸಲು ಮುಕ್ತ ಪರವಾನಗಿ ನೀಡಿದ್ದರೆಂದು ನಂಬಿಸಿಬಿಟ್ಟಿದ್ದರು. ಹೀಗಾಗಿಯೇ ಮೋದಿ ಸೈನ್ಯವನ್ನು ಕರೆಸಲಿಲ್ಲ ಎಂಬುದು ಅವರ ಮೇಲಿದ್ದ ಅಪವಾದ. ಆದರೆ ದಂಗೆಗಳು ಆರಂಭವಾಗಿವೆ ಎಂದು ಗೊತ್ತಾದೊಡನೆ ಸೈನ್ಯದ ಸಹಕಾರ ಬೇಕೆಂದು ಮೋದಿ ಕೇಂದ್ರಸರ್ಕಾರಕ್ಕೆ ಪತ್ರ ಬರೆದಿದ್ದುದು ನಿಚ್ಚಳವಾಗಿತ್ತು. ಆದರೆ ಸೇನೆ ಗಡಿಭಾಗದಿಂದ ರಕ್ಷಣೆಗೆಂದು ಬರಲು ಕೆಲವು ಗಂಟೆಗಳ ಸಮಯವಾದರೂ ಹಿಡಿಯುತ್ತದೆಂಬುದು ಎಂಥವನಿಗೂ ಗೊತ್ತಿರಬೇಕಾದ ಸಂಗತಿ. ಮೂರು ಸಾವಿರ ಸೈನಿಕರ ಪಡೆ ಘಟನೆಯಾದ ಎರಡು ದಿನಗಳ ನಂತರ ಮಾರ್ಚ್ ಒಂದಕ್ಕೆ ಅಹ್ಮದಾಬಾದಿಗೆ ಬಂದಿಳಿದಿತ್ತು. ಮೋದಿ ದಂಗೆಗಳು ಆರಂಭವಾದ ದಿನ ಸಂಜೆಯೇ ಸೈನ್ಯದ ಸಹಾಯಕ್ಕಾಗಿ ಕರೆಮಾಡಿದ್ದು ದಾಖಲಾಗಿತ್ತು. ಆನಂತರದ ದಿನಗಳಲ್ಲಿ ಅನೇಕ ಪತ್ರಿಕೆಗಳು ಇದನ್ನು ವರದಿ ಮಾಡಿದವು. ಅಷ್ಟರವೇಳೆಗೆ ಮೋದಿಯ ಕುರಿತಂತೆ ಹಬ್ಬಿಸಬೇಕಾದ ಸುಳ್ಳುಗಳನ್ನೆಲ್ಲಾ ಹೇಳಿಯಾಗಿತ್ತು. ಈ ಅಯೋಗ್ಯರ ಸಾಮಥ್ರ್ಯ ಎಂಥದ್ದಿತ್ತೆಂದರೆ ಇಡಿಯ ಜಗತ್ತು ದಂಗೆಯ ಹಿಂದಿನ ಕಾರಣ ಮೋದಿ ಎಂಬುದನ್ನು ನಂಬಿತ್ತೆನ್ನುವುದನ್ನು ಬಿಡಿ, ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರೂ ಕೂಡ ಇದನ್ನು ಒಪ್ಪಿಕೊಂಡು ಮೋದಿಯವರನ್ನು ಬದಲಾಯಿಸಿಬಿಡುವ ತವಕದಲ್ಲಿದ್ದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಅಟಲ್ಜಿ ರಾಜ್ಯಧರ್ಮದ ಪಾಲನೆಯ ಕುರಿತಂತೆ ಮೋದಿಗೆ ಕಿವಿಮಾತು ಹೇಳಿದ್ದೇನೆ ಎಂಬುದಂತೂ ಮೋದಿಯವರ ಪಾಲಿಗೆ ಕಂಟಕಪ್ರಾಯವೇ ಆಗಿತ್ತು!

ಮುಂದಿನ ಕನಿಷ್ಠ 12 ವರ್ಷಗಳ ಕಾಲ ಮೋದಿಯ ಪಾಲಿಗೆ ಇದು ವನವಾಸವೇ. ಅವರು ವಿದೇಶಕ್ಕೆ ಹೋಗುವಾಗ ಅಲ್ಲಿನ ಪತ್ರಿಕೆಗಳಲ್ಲಿ ಗೋದ್ರಾ ದಂಗೆಯ ಕುರಿತಂತೆ ಬರೆಸಲಾಗುತ್ತಿತ್ತು. ಚುನಾವಣೆಗೆ ಹೋಗುವ ಮುನ್ನ ಗೋದ್ರಾ ದಂಗೆಗಳನ್ನು ನೆನಪಿಸಿಕೊಡಲಾಗುತ್ತಿತ್ತು. ಗುಜರಾತಿನಲ್ಲಿ ಹೂಡಿಕೆದಾರರ ಸಮಾವೇಶ ನಡೆದರೆ ಮೋದಿಯನ್ನು ದಂಗೆಕೋರ ಎಂದು ಬಿಂಬಿಸಿ ಹೂಡಿಕೆದಾರರನ್ನು ಹಿಂದೆ ಸರಿಸುವ ಪ್ರಯತ್ನ ಮಾಡಲಾಗುತ್ತಿತ್ತು. ಈ ಮನುಷ್ಯ ಎಲ್ಲವನ್ನೂ ಎದುರಿಸಿದ. 12 ವರ್ಷಗಳ ಕಾಲ ತನಗಾದ ಅವಮಾನವನ್ನು ನುಂಗಿಕೊಂಡ, ಜನರ ಮನಸ್ಸಿನಲ್ಲಿ ಗಟ್ಟಿಯಾಗಿ ಬೇರೂರಿದ. ಮತ್ತೆ-ಮತ್ತೆ ಚುನಾವಣೆಗಳನ್ನು ಗೆದ್ದು 2014ರಲ್ಲಿ ಯಾರೂ ಊಹಿಸದ ರೀತಿಯಲ್ಲಿ ಬಹುಮತ ಪಡೆದು ಪ್ರಧಾನಿಯೂ ಆದ. 2019ರಲ್ಲಿ ಮತ್ತೆ ಪ್ರಧಾನಿಯಾದ. ಈಗ ಅದೇ ನರೇಂದ್ರಮೋದಿ ಈ ಎಲ್ಲ ಆರೋಪಗಳಿಂದ ಮುಕ್ತರಾಗಿ ಬಂದಿದ್ದಾರೆ. ಒಮ್ಮೆ ಹಿಂದಿರುಗಿ ನೋಡಿದಾಗ ಎಲ್ಲ ಕಠಿಣ ಸಂದರ್ಭದಲ್ಲೂ ಜೊತೆಯಲ್ಲಿದ್ದ ನಿಜ ಭಾರತೀಯನನ್ನು ಕಂಡು ಸಂತೋಷ ಪಡಬಹುದು ಅಥವಾ ರಣಹದ್ದುಗಳಂತೆ ಹಿಂದೆ ಬಿದ್ದಿದ್ದವರನ್ನು ಕಂಡು ಅಸಹ್ಯವೆನಿಸಬಹುದು!

ಸ್ವಾಭಿಮಾನಿ ಕನ್ನಡಿಗ ‘ಕೈ’ ಚಾಚುವುದಿಲ್ಲ!

ಸ್ವಾಭಿಮಾನಿ ಕನ್ನಡಿಗ ‘ಕೈ’ ಚಾಚುವುದಿಲ್ಲ!

ರಾಮಾಯಣದಲ್ಲಿ ಎಲ್ಲೋ ಹೊರಗಿಂದ ನುಸುಳಿದ ಕಥೆಯಿದು. ಚೌಡೇಶ್ವರಿ ದೇವಿಯ ಬಳಿ ಭಾರತದ ಭವಿಷ್ಯದ ಕುರಿತಂತೆ ಕೆಲವಾರು ವರ್ಷಗಳ ಹಿಂದೆ ರಾಮಕೃಷ್ಣಾಶ್ರಮದ ಮಿತ್ರರೊಬ್ಬರು ಕೇಳಿದಾಗ ದೇವಿ ಹೇಳಿದ್ದಂತೆ, ‘ಇಂದ್ರಜಿತ್ ಸಾಯುವ ಮುನ್ನ ರಾಮನನ್ನು ಬಲು ದೈನ್ಯದಿಂದ ಕೇಳಿದನಂತೆ. ತಂದೆ ರಾವಣನಾದರೋ ತಪ್ಪಿತಸ್ಥ, ನಿಜ. ಆತ ಶಿವಭಕ್ತನಾದರೂ ರಾಕ್ಷಸನಂತೆ ವರ್ತಿಸಿದ್ದಾನೆ. ಸೀತೆಯನ್ನು ಅಪಹರಿಸಿಕೊಂಡು ಬಂದು ತಪ್ಪೆಸಗಿದ್ದಾನೆ. ಅವನಿಗೆ ಶಿಕ್ಷೆ ಕೊಡುವ ಭರದಲ್ಲಿ ಯಾವ ತಪ್ಪನ್ನೂ ಮಾಡದ ನನಗೇಕೆ ಈ ಶಿಕ್ಷೆ? ದೇವರ ದೇವ ನೀನೆನ್ನುತ್ತಾರೆ. ನಾನು ಒಂದು ದಿನವಾದರೂ ಲಂಕೆಯನ್ನು ಆಳದೇ ಪ್ರಾಣ ಬಿಡುತ್ತಿದ್ದೇನಲ್ಲ, ಇದು ನ್ಯಾಯವೇ? ಎಂದನಂತೆ. ರಾಮನ ಮನ ಕರಗಿತು. ಆತ ಮೈದಡವಿ ಕಲಿಯುಗದಲ್ಲಿ ನೂರು ವರ್ಷಗಳ ಕಾಲ ನೀನು ಮತ್ತು ನಿನ್ನ ಪರಿವಾರ ಭಾರತವನ್ನೇ ಆಳುವಂತಾಗಲಿ’ ಎಂದುಬಿಟ್ಟನಂತೆ. ಈ ಕಥೆಯನ್ನು ಕೇಳಿದೊಡನೆ ನಾನು ಅಚ್ಚರಿಯಿಂದ ಅತ್ತ ತಿರುಗಿ, ಹಾಗಾಯಿತೇನು? ಎಂದಾಗ, ಕಾಂಗ್ರೆಸ್ಸಿನ ಆಳ್ವಿಕೆಯ ಒಂದು ಕುಟುಂಬದ ಅಧಿಕಾರಕ್ಕೆ ನೂರು ವರ್ಷ ಕಳೆಯುತ್ತಾ ಬಂತಲ್ಲ, ಎಂದರು. ತಲೆಕೆರೆದುಕೊಂಡು ನೋಡಿದರೆ ಮೋತಿಲಾಲ್ ನೆಹರೂ ಕಾಂಗ್ರೆಸ್ಸಿನ ಅಧ್ಯಕ್ಷರಾದದ್ದು 1919ರಲ್ಲಿ. ಮತ್ತೀಗ ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂಬ ಸ್ಪಷ್ಟತೆ ಬಂದಿದ್ದು 2019ರಲ್ಲಿ. ಬರೋಬ್ಬರಿ ನೂರು ವರ್ಷ! ಹೇಳಿದ ಪುಣ್ಯಾತ್ಮನ ಕಪೋಲಕಲ್ಪಿತ ಕಥೆಯೋ ಅಥವಾ ನಿಜವಾಗಿಯೂ ದೇವಿಯೇ ಹೇಳಿದ್ದಳೋ ನನಗಂತೂ ಗೊತ್ತಿಲ್ಲ. ಆದರೆ ಅಕ್ಷರಶಃ ಹೊಂದಾಣಿಕೆಯಂತೂ ಆಗುತ್ತಿದೆ. ಬೀದಿ-ಬೀದಿಗಳಲ್ಲಿ ರಾಹುಲ್ ಪಾದಯಾತ್ರೆ ಮಾಡುತ್ತಾ ಭಾರತವನ್ನು ಜೋಡಿಸುತ್ತೇನೆ ಎನ್ನುವಾಗ ಕಾಂಗ್ರೆಸ್ಸಿಗರ ಉತ್ಸಾಹ ಮುಗಿಲು ಮುಟ್ಟಿತ್ತು. ಕಾರ್ಯಕರ್ತರ ಗಡಣ ಬೀದಿಗಿಳಿದು ಅರಚಾಡುವಾಗ ಮುಂದಿನ ಐದ್ಹತ್ತು ವರ್ಷ ಇವರನ್ನು ಅಲುಗಾಡಿಸಲು ಸಾಧ್ಯವೇ ಇಲ್ಲವೇನೋ ಎನಿಸುತ್ತಿತ್ತು. ಮೋದಿ ಬೀದರ್‌ಗೆ ಕಾಲಿಟ್ಟರು ನೋಡಿ, ಎಲ್ಲರೂ ಚಡಪಡಿಸಲಾರಂಭಿಸಿದ್ದಾರೆ. ರಾಹುಲ್‌ನ ಯಾತ್ರೆಗೆ ಜನರನ್ನು ಕಷ್ಟಪಟ್ಟು ಕರೆತರುವುದಕ್ಕೂ, ಮೋದಿಯ ರ್ಯಾಲಿಗೆ ಜನ ಇಷ್ಟಪಟ್ಟು ಬರುವುದಕ್ಕೂ ಅಜಗಜಾಂತರವಿದೆ. ನಿಸ್ಸಂಶಯವಾಗಿ ಮೋದಿ ಭಾರತದ ಜನರ ಪಾಲಿನ ಸೂಪರ್ ಸ್ಟಾರ್. ಬಹುಶಃ ಅಟಲ್ ಬಿಹಾರಿ ವಾಜಪೇಯಿಯ ನಂತರ ಇಷ್ಟು ಜನಾನುರಾಗಕ್ಕೆ ಪಾತ್ರರಾದ ಮತ್ತೊಬ್ಬ ವ್ಯಕ್ತಿ ಬಂದಿರಲಿಕ್ಕಿಲ್ಲ. ವಾಜಪೇಯಿ ತಮ್ಮ ಖ್ಯಾತಿಯನ್ನು ಮತವಾಗಿ ಪರಿವರ್ತಿಸಿಕೊಳ್ಳುವಲ್ಲಿ ಸೋತರು. ಮೋದಿಯ ಹೆಗ್ಗಳಿಕೆಯೇನು ಗೊತ್ತೇ? ಅವರು ರ್ಯಾಲಿಗೆ ಬಂದ ಪ್ರತಿಯೊಬ್ಬ ವ್ಯಕ್ತಿಯನ್ನೂ ರಾಷ್ಟ್ರಭಕ್ತನಾಗಿಬಿಡುವಂತೆ ಮಾಡಿಬಿಡುವರು, ಅಲ್ಲಿಗೆ ಬಿಜೆಪಿಗೆ ಮತ ಖಾತ್ರಿ.

ನೀವು ಯೋಜನೆಗಳನ್ನು ರೂಪಿಸಿ, ಒಂದಷ್ಟು ಉಚಿತಗಳ ಘೋಷಣೆಮಾಡಿ, ಒಮ್ಮೆಯೋ ಎರಡು ಬಾರಿಯೋ ಮತಗಳಿಸಿಬಿಡಬಹುದು. ಆದರೆ ನಿಮ್ಮ ಸಾನಿಧ್ಯ ಮಾತ್ರದಿಂದಲೇ ಜನರ ಒಲವನ್ನು ತಮ್ಮೆಡೆಗೆ ಸೆಳೆದುಕೊಳ್ಳಬೇಕೆಂದರೆ ಅದಕ್ಕೆ ದೈವೀಶಕ್ತಿಯೂ ಬೇಕು. ಕಾಂಗ್ರೆಸ್ಸು ಕೋಟಿಗಟ್ಟಲೆ ರೂಪಾಯಿ ಸುರಿದು ರಣನೀತಿ ರೂಪಿಸಲು ಜನರನ್ನು ಇಟ್ಟುಕೊಂಡಿದೆ. ಮೋದಿ ಸುಮ್ಮನೆ ನಾಲ್ಕು ಸುತ್ತು ತಿರುಗಾಡುತ್ತಾರೆ, ಜನ ಪ್ರೀತಿಯಿಂದ ಬಂದು ಮತಹಾಕಿ ಹೋಗುತ್ತಾರೆ. ಎಷ್ಟು ವಿಚಿತ್ರ ಅಲ್ಲವೇ?

ಮೋದಿಗಿರುವ ಶಕ್ತಿಯೇ ಅದು. ಅವರು ಜನರ ಹೃದಯದೊಂದಿಗೆ ನೇರವಾಗಿ ಮಾತನಾಡಬಲ್ಲರು. ಅವರು ಏನೇ ಮಾಡಿದರೂ ಅದು ನಾಟಕವೆನಿಸುವುದಿಲ್ಲ. ರಾಹುಲ್ ಅಪರೂಪಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದರೂ ಅದು ಸತ್ಯವೆನಿಸುವುದಿಲ್ಲ. ಮೋದಿಯನ್ನು ಶಾಲೆಗೇ ಹೋಗದವರೆಂದು ಇವರೆಲ್ಲ ಜರಿದರೂ ಮೋದಿ ಬುದ್ಧಿವಂತರೆಂಬುದನ್ನು ಇಡಿಯ ಜಗತ್ತು ಒಪ್ಪುತ್ತದೆ. ರಾಹುಲ್ ಕೇಂಬ್ರಿಡ್ಜ್ ನಿಂದಲೇ ಬಂದಿದ್ದಾರೆ ಎಂದು ಇವರೆಲ್ಲ ಬಡಾಯಿ ಕೊಚ್ಚಿಕೊಂಡರೂ ಆತ ಏನೂ ಅರಿಯದ ಮುಗ್ದನೆಂಬುದು ಪ್ರತಿಯೊಬ್ಬರಿಗೂ ಗೊತ್ತಿದೆ, ಸ್ವತಃ ಕಾಂಗ್ರೆಸ್ಸಿಗರಿಗೂ! ಮೋದಿ ಈ ದೇಶದ ಜನರ ಮೇಲಿನ ತಮ್ಮ ನಿಷ್ಕಳಂಕ ಪ್ರೀತಿಯಿಂದಲೇ ಗೆಲುವು ಸಾಧಿಸಿಬಿಟ್ಟರು. ಬಡತನವನ್ನು ಅನುಭವಿಸಿಯೇ ಮೇಲಕ್ಕೆ ಬಂದ ಆ ಪುಣ್ಯಾತ್ಮ ಅವರ ಬದುಕನ್ನು ಸುಂದರಗೊಳಿಸಲೆಂದೇ ಯೋಜನೆಗಳನ್ನು ರೂಪಿಸಿದರು. ಅದನ್ನು ಜಾರಿಗೆ ತರಲು ಹಗಲು-ರಾತ್ರಿ ಶ್ರಮಿಸಿದರು. ಹೀಗಾಗಿ ಪ್ರತೀ ಊರಿನ, ಪ್ರತಿ ವ್ಯಕ್ತಿಯೂ ಒಂದಲ್ಲ ಒಂದು ರೀತಿಯಲ್ಲಿ ಮೋದಿ ಯೋಜನೆಯಿಂದ ಉಪಕೃತನಾದವನೇ. ಬೇರೆಲ್ಲವನ್ನು ಬದಿಗಿಟ್ಟು ಕರೋನಾ ಕಾಲದ ಮೋದಿಯನ್ನು ಒಮ್ಮೆ ನೆನಪಿಸಿಕೊಳ್ಳಿ. ಗಡ್ಡ ಬಿಟ್ಟು, ಋಷಿಯಂತಾಗಿಬಿಟ್ಟಿದ್ದರು ಅವರು. ಅನೇಕ ರಾತ್ರಿಗಳನ್ನು ನಿದ್ದೆಮಾಡದೇ ಕಳೆಯುತ್ತಿದ್ದ ಅವರು ಸಭೆಗಳಿಗೆಂದು ಬಂದಾಗ ಕಣ್ಣು ಸೊರಗಿ ಹೋಗಿರುತ್ತಿತ್ತು. ತನ್ನವರನ್ನು ಕಳೆದುಕೊಳ್ಳುವ ಆತಂಕ ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು. ಸದಾಕಾಲ ಉತ್ಸಾಹದ ಚಿಲುಮೆಯಂತಿರುತ್ತಿದ್ದ ಮೋದಿ ಆ ಸಂದರ್ಭದಲ್ಲಿ ಮಾತ್ರ ಸೋತು ಸುಣ್ಣವಾದವರಂತೆ ಕಾಣುತ್ತಿದ್ದರು. ದೀರ್ಘಕಾಲದಿಂದ ಕಾಡುತ್ತಿದ್ದ ಯಾವುದೋ ರೋಗ ಉಲ್ಬಣವಾದರೆ ನಮ್ಮ ಸ್ಥಿತಿ ಹೇಗಿರುತ್ತದೆಯೋ ಹಾಗೆ. ಆದರೆ ಮೋದಿ ಎಲ್ಲ ಭಾರವನ್ನೂ ತಾನೇ ಹೊತ್ತರು, ತನ್ನ ಶಿಲುಬೆಯನ್ನು ತಾನೇ ಹೊತ್ತ ಏಸುವಿಗಿಂತ ಕೆಟ್ಟದ್ದಾಗಿ. ಕಾಂಗ್ರೆಸ್ಸಿಗರಾದಿಯಾಗಿ ಬುದ್ಧಿಜೀವಿಗಳೂ ಸೇರಿದಂತೆ ಕೆಲವು ಮುಂಚೂಣಿಯ ನಾಯಕರು ವಿದೇಶೀ ವ್ಯಾಕ್ಸಿನ್‌ಗಳನ್ನು ಕೊಂಡುಕೊಳ್ಳುವುದೊಳಿತು ಎಂದು ಮುಗಿಬಿದ್ದಾಗ ಮೋದಿ ಎಲ್ಲ ನೋವನ್ನೂ ಸಹಿಸಿಕೊಂಡರು. ಎಲ್ಲವನ್ನೂ ಮೈಮೇಲೆಳೆದುಕೊಂಡು ಸಂಕಟ ಜನಸಾಮಾನ್ಯರಿಗೆ ತಲುಪದಂತೆ ತಾವೇ ನುಂಗಿದರು, ವಿಷಕಂಠನಂತೆ. ಅವರ ಈ ಸಾಹಸದ ಪ್ರತಿಫಲವಾಗಿಯೇ ಭಾರತದಲ್ಲಿ ವ್ಯಾಕ್ಸಿನ್‌ಗಳು ತಯಾರಾಗಿದ್ದು. ನಿಮಗೆ ನೆನಪಿರಬೇಕು, ಈ ವ್ಯಾಕ್ಸಿನ್ ಮೇಲೆ ವಿಶ್ವಾಸವಿಲ್ಲ ಎಂದಿದ್ದರು ಕಾಂಗ್ರೆಸ್ಸಿಗರು. ನಂಬಿಕಸ್ಥ ಅಮೇರಿಕನ್ ವ್ಯಾಕ್ಸಿನ್ ಬಳಸುವುದು ದೇಸೀ ವ್ಯಾಕ್ಸಿನ್ ಬಳಕೆಗಿಂತ ಉತ್ತಮ ಎಂದಿದ್ದರೂ ಕೂಡ. ಮೋದಿ ತಲೆಕೆಡಿಸಿಕೊಳ್ಳಲಿಲ್ಲ. ಈ ನಾಡಿನ ವಿಜ್ಞಾನಿಗಳ ಮೇಲೆ ಅಪಾರವಾದ ಭರವಸೆಯನ್ನಿಟ್ಟು ವ್ಯಾಕ್ಸಿನ್ ಅನ್ನು ಮಾರುಕಟ್ಟೆಗೆ ತರಲು ಶ್ರಮಿಸಿದರು. ಅತ್ತ ಅಮೇರಿಕಾದ ವ್ಯಾಕ್ಸಿನ್ಗಳು ಈಗ ಜನರ ಮೇಲೆ ವಿಪರೀತ ಪರಿಣಾಮವನ್ನು ಉಂಟುಮಾಡುತ್ತಿದ್ದರೆ ಭಾರತದ ವ್ಯಾಕ್ಸಿನ್‌ಗಳು ಕರೋನಾಕ್ಕೆ ಇತಿಶ್ರೀ ಹಾಡಿ, ಜಗತ್ತಿನ ಹುಬ್ಬೇರುವಂತೆ ಮಾಡಿವೆ. ಹಾಗೆ ಸುಮ್ಮನೆ ಕರೋನಾ ಕಾಲದಲ್ಲಿ ಮೋದಿಯ ಜಾಗದಲ್ಲಿ ರಾಹುಲ್ ಇದ್ದಿದ್ದರೆ ಏನಾಗುತ್ತಿತ್ತೆಂಬುದನ್ನು ಊಹಿಸಿ ನೋಡಿ, ಗಾಬರಿಯಾಯ್ತಲ್ಲವೇ? ಮೋದಿ ಅಂಥದ್ದೊಂದು ಬಲವಾದ ಛಾಪನ್ನು ಭಾರತೀಯರ ಹೃದಯದೊಳಗೆ ಒತ್ತಿಬಿಟ್ಟಿದ್ದಾರೆ.

ಕಾಂಗ್ರೆಸ್ಸಿಗೆ ಬಡವರ ಕುರಿತಂತೆ ಮಾತನಾಡುವುದೆಂದರೆ ಆನಂದವೋ ಆನಂದ. ದೇಶದಲ್ಲಿ ಹೆಚ್ಚು-ಹೆಚ್ಚು ಬಡವರಿದ್ದಷ್ಟೂ ಅವರ ಮತಗಳಿಗೆ ಹೆಚ್ಚುತ್ತದೆ. ಬಡತನ ಎನ್ನುವುದು ಸಂಪತ್ತಿನ ಕೊರತೆಯಿಂದ ಉಂಟಾಗುವಂಥದ್ದಲ್ಲ. ಅದೊಂದು ಅತೃಪ್ತ ಮಾನಸಿಕತೆ. ದಿನಕ್ಕೆ ಒಂದು ಹೊತ್ತು ಊಟ ಮಾಡುವವನು ತನ್ನ ತಾನು ಸುಖಿ ಎಂದು ಭಾವಿಸಿ ಆನಂದದಿಂದ ಕಾಲ ಕಳೆದುಬಿಡುತ್ತಾನೆ. ಅದೇ ವೇಳೆಗೆ ತಿಂಗಳಿಗೆ ಎರಡು ಲಕ್ಷ ಸಂಪಾದಿಸುವ ವ್ಯಕ್ತಿಯೂ ತನಗೆ ಸಾಕಾದಷ್ಟು ಸಿಗುತ್ತಿಲ್ಲವೆಂದು ಗೋಳಾಡುತ್ತಲೇ ಇರುತ್ತಾನೆ. ಕಾಂಗ್ರೆಸ್ಸು ಬಿಟ್ಟಿ ಭಾಗ್ಯಗಳನ್ನು ಕೊಡುವ ನೆಪದಲ್ಲಿ ಹೀಗೆ ಗೋಳಾಡುವವರ ಸಂಖ್ಯೆಯನ್ನು ಹೆಚ್ಚಿಸುತ್ತಲೇ ಹೋಗುತ್ತದೆ. ಬಡವರು ಹೆಚ್ಚಾದಷ್ಟು ಅವರ ಬೇಳೆ ಚೆನ್ನಾಗಿ ಬೇಯುತ್ತದೆ. ಮುಸಲ್ಮಾನರು ಹೆಚ್ಚಾದಷ್ಟು ಏಕತ್ರಗೊಂಡ ಹಿಂದೂಗಳ ಭೀತಿಯನ್ನು ಅವರ ಹೃದಯದೊಳಗೆ ತುಂಬಿ ಮತ ಪಡೆಯಲು ಅವರಿಗೆ ಅನುಕೂಲವಾಗುತ್ತದೆ. ಒಟ್ಟಿನಲ್ಲಿ ಸಮಾಜ ಮೇಲು-ಕೀಳು, ಬಡವ-ಸಿರಿವಂತ, ಹಿಂದೂ-ಮುಸ್ಲೀಂ ಎಂದು ಒಡೆದಂತೆಲ್ಲ ಆನಂದವಾಗೋದು ಕಾಂಗ್ರೆಸ್ಸಿಗೇ. ಆದರೆ ಮೋದಿ ಇದನ್ನು ಪೂರ್ಣ ಬದಲಾಯಿಸಿದರು. ಅವರು ಬಡವರೆನಿಸಿಕೊಂಡವರ ಆತ್ಮಗೌರವವನ್ನು ಯಾವ ಮಟ್ಟಕ್ಕೊಯ್ದರೆಂದರೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವಂತೆ. ಜನವರಿ 26ಕ್ಕೆ ವಿಶ್ವವಿಖ್ಯಾತ ಪರೇಡ್ ನಡೆಯುತ್ತಲ್ಲ, ಪ್ರತಿವರ್ಷ ಅದನ್ನು ನೋಡಲು ವಿಐಪಿಗಳೆಲ್ಲ ಮುಂದಿನ ಸಾಲಿನಲ್ಲಿ ಕುಳಿತಿರುತ್ತಾರೆ. ಈ ವರ್ಷ ಮೋದಿ ಅಲ್ಲಿ ಕೂರಲು ಜಾಗಮಾಡಿಕೊಟ್ಟದ್ದು ಯಾರಿಗೆ ಗೊತ್ತೇನು? ಸೆಂಟ್ರಲ್ ವಿಸ್ತಾ ಯೋಜನೆಯಲ್ಲಿ ಕೆಲಸ ಮಾಡಿದ, ಕಾಶಿ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಿದ ಕಾರಕೂನರ ಕುಟುಂಬಗಳಿಗೆ. ಇಂದು ಕಾರ್ಮಿಕರ ದಿನ ಬೇರೆ. ವರ್ಷಗಟ್ಟಲೆ ಕಾರ್ಮಿಕರ ಹೆಸರು ಹೇಳುತ್ತಾ ಪ್ರತಿಭಟನೆಗೆ ಬೀದಿಗೆ ಬಂದು ನಿಲ್ಲುವ ಕಮ್ಯುನಿಸ್ಟ್ ಮಂದಿಯೂ ಅಧಿಕಾರದಲ್ಲಿದ್ದಾಗ ಇಂಥದ್ದೊಂದು ಆಲೋಚನೆ ಮಾಡಿರಲಿಲ್ಲ. ಕೈಯ್ಯಲ್ಲಿ ಕರಣಿ ಹಿಡಿದ ಪ್ರತಿಯೊಬ್ಬ ಕಾರ್ಮಿಕನಿಗೂ ತಾನು ಈ ಕೆಲಸ ಮಾಡುತ್ತಿರುವುದಕ್ಕೆ ಈಗ ಬೇಸರವೂ ಇಲ್ಲ, ಅವಮಾನ ಎನಿಸುವುದೂ ಇಲ್ಲ. ಏಕೆಂದರೆ ತಮ್ಮದ್ದೇ ಸಂಕುಲದ ಮಂದಿ ವಿಐಪಿಗಳಂತೆ ಗಣರಾಜ್ಯೋತ್ಸವದ ಪರೇಡ್ ನೋಡಲು ಕುಳಿತಿದ್ದಾರಲ್ಲ. ಇಂದು ಯಾರನ್ನು ಕಾರಕೂನರೆಂದು ಕರೆಯುತ್ತೇವಲ್ಲ, ಅವರು ಕಡಿಮೆ ದುಡಿಯುತ್ತಿಲ್ಲ. ನೀವು ಕೊಡುವ ಉಚಿತ ಕೊಡುಗೆ ಅವರಿಗೆ ಬೇಕೇ ಇಲ್ಲ. ಅವರ ವೃತ್ತಿಯನ್ನು ಜನ ಆಯ್ದುಕೊಳ್ಳದಿರುವುದಕ್ಕೆ ಆತ್ಮಗೌರವದ ಕೊರತೆಯ ಕಾರಣವಿದೆಯಲ್ಲ, ಅದನ್ನು ಸರಿಪಡಿಸಬೇಕಷ್ಟೇ. ಮೋದಿ ಅದನ್ನು ಮಾಡುತ್ತಿರುವುದರಿಂದಲೇ ಅವರೆಲ್ಲರಿಗೂ ಮೋದಿಯನ್ನು ಕಂಡಾಗ ದೇವರನ್ನು ಕಂಡಂತೆ ಆಗೋದು!

ಕಾಂಗ್ರೆಸ್ಸಿಗರ ಪಾಲಿಗೆ ಬಡವರು ಎಂದರೆ ದಡ್ಡರು ಎಂದರ್ಥ. ಹೀಗಾಗಿಯೇ ನೋಟ್‌ಬ್ಯಾನ್ ಮಾಡಿ ಜನರ ಕೈಗೆ ಡಿಜಿಟಲ್ ಮನಿ ಕೊಡುತ್ತೇವೆ ಎಂದು ಮೋದಿ ಹೇಳಿದಾಗ, ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಕುಹಕ ಮಾಡಿದ್ದರು. ಈ ದೇಶದ ಹಳ್ಳಿಗನಿಗೆ ಮೊಬೈಲ್ ಬಳಸಲು ಬರುವುದಿಲ್ಲ, ಆಧುನಿಕ ತಂತ್ರಜ್ಞಾನದ ಅರಿವಿಲ್ಲ, ಅಂಥವನಿಂದ ಏನನ್ನು ನಿರೀಕ್ಷಿಸುತ್ತೀರಿ ಎಂದಿದ್ದರು. ಮೋದಿ ಅಂದಿನ ದಿನ ಏನೂ ಮಾತನಾಡಲಿಲ್ಲ. ಆದರೆ ಇಂದು ಜಗತ್ತಿನ ಹೆಚ್ಚು ಡಿಜಿಟಲ್ ವಹಿವಾಟನ್ನು ಭಾರತವೇ ನಡೆಸುತ್ತಿದೆ ಎಂಬುದು ಅರಿವಾದಾಗ ಕಾಂಗ್ರೆಸ್ಸಿಗರಿಗೆ ನಡುಕ ಹುಟ್ಟಿದೆ. ಯಾವ ಹಳ್ಳಿಯ ಜನರನ್ನು ದಡ್ಡರೆಂದು ಕರೆದು ಸುಮಾರು 65 ವರ್ಷಗಳ ಕಾಲ ಇವರು ಆಳ್ವಿಕೆ ನಡೆಸಿದ್ದರೋ ಅದೇ ಹಳ್ಳಿಗರು ಇಂದು ಭಾರತದ ಆರ್ಥಿಕತೆ ಸದೃಢಗೊಳ್ಳಲು ಬಲವಾದ ಬೆನ್ನೆಲುಬಾಗಿಬಿಟ್ಟಿದ್ದಾರೆ. ಮೋದಿ ಇಟ್ಟ ಈ ವಿಶ್ವಾಸವನ್ನು ಹಳ್ಳಿಯಲ್ಲಿರುವ ಆ ಬಡಮಂದಿ ಮರೆಯುವುದಾದರೂ ಹೇಗೆ? ಅದಕ್ಕೆ ಮೋದಿ ತಮ್ಮೂರಿನ ಬಳಿ ಬರುತ್ತಿದ್ದಾರೆಂದರೆ ಆ ಜನ ಯಾವ ಪ್ರಶ್ನೆಯನ್ನೂ ಕೇಳದೇ ಧಾವಿಸಿಬರುತ್ತಾರೆ. ಅವರಿಗೆ ಕಾರ್ಯಕ್ರಮಕ್ಕೆ ಬರಲು ದುಡ್ಡು ಬೇಕಾಗುವುದಿಲ್ಲ, ಏಕೆಂದರೆ ತಮ್ಮ ಆತ್ಮವಿಶ್ವಾಸವನ್ನು ವೃದ್ಧಿಸಿದ ತಮ್ಮ ಪಾಲಿನ ದೇವರನ್ನು ಅವರಲ್ಲಿ ನೋಡುತ್ತಾರೆ.

ಕಾಂಗ್ರೆಸ್ಸು ಇಷ್ಟಕ್ಕೇ ನಿಲ್ಲಲಿಲ್ಲ. ಬಡವರು ಸದಾ ತಮ್ಮ ದಾಸರಾಗಿರಬೇಕೆಂದು ಅವರು ಆಲೋಚಿಸಿದರು. ಹೀಗಾಗಿಯೇ ಒಬ್ಬ ಒಮ್ಮೆ ಅಧಿಕಾರಕ್ಕೆ ಬಂದನೆಂದರೆ ಅವನ ಮಕ್ಕಳು, ಮೊಮ್ಮಕ್ಕಳೇ ಅಲ್ಲಿ ಕುಳಿತುಕೊಂಡು ಉಳಿದವರನ್ನೆಲ್ಲ ಕಾಲಡಿ ಕಸದಂತೆ ಕಂಡರು. ಸ್ವಲ್ಪ ಎಡವಟ್ಟಾಗಿದ್ದರೆ ಬಿಜೆಪಿ ಅದೇ ದಿಕ್ಕಿಗೆ ಹೋಗಿರುತ್ತಿತ್ತು. ನರೇಂದ್ರಮೋದಿ ಸಾಧ್ಯವಾದಷ್ಟು ಬದಲಾವಣೆಗೆ ಕೈಹಾಕಿದರು. ಅನೇಕ ಕಡೆಗಳಲ್ಲಿ ಯಾರೂ ಊಹಿಸದಿದ್ದ ಕಾರ್ಯಕರ್ತರಿಗೆ ಅವಕಾಶಕೊಟ್ಟರು. ಆರೇಳು ಬಾರಿ ಗೆದ್ದು ಅಧಿಕಾರಕ್ಕೆ ಅಂಟಿಕೊಂಡು ಕುಳಿತಿದ್ದವರನ್ನು, ಪಕ್ಷಕ್ಕೆ ತೊಂದರೆ ಉಂಟುಮಾಡಬಹುದೆಂದು ಗೊತ್ತಿದ್ದರೂ ಮುಲಾಜಿಲ್ಲದೇ ಮನೆಗೆ ಕಳಿಸಿದರು. ಕಾಂಗ್ರೆಸ್ಸಿನಲ್ಲಿ ಕಾರ್ಯಕರ್ತನಾಗಿರುವುದೆಂದರೆ ಜೀವನಪರ್ಯಂತ ಪರಿವಾರದ ಗುಲಾಮನಾಗಿರುವುದೆಂದರ್ಥ. ಬಿಜೆಪಿಯಲ್ಲಿ ಕಾರ್ಯಕರ್ತನಾಗಿ ದುಡಿಯುವುದೆಂದರೆ ಒಂದಲ್ಲ ಒಂದು ದಿನ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯುವುದೆಂದರ್ಥ. ಕಾಂಗ್ರೆಸ್ಸು ತನ್ನ ಅವಧಿಯುದ್ದಕ್ಕೂ ಹೆಚ್ಚು ‘ದೊಡ್ಡ ಮನುಷ್ಯ’ರನ್ನು ಸೃಷ್ಟಿಸಿದೆ. ಒಂದು ಚುನಾವಣೆಯಿಂದ ಮತ್ತೊಂದು ಚುನಾವಣೆಗೆ ಸಾವಿರಾರು ಕೋಟಿ ರೂಪಾಯಿ ಮಾಡಿಕೊಂಡ ದೊಡ್ಡವರು. ಇವರನ್ನು ಹತಾಶೆಯ ಕಂಗಳಿಂದ ನೋಡುತ್ತಾ ನಿಂತ ಆ ಬಡ-ಮಧ್ಯಮ ವರ್ಗದವರು ಈ ದೇಶದ ಕಥೆಯಿಷ್ಟೇ ಎಂದುಕೊಳ್ಳುತ್ತಾ ತಮ್ಮ ವ್ಯಾಪ್ತಿಯಲ್ಲಿ ಒಂದಷ್ಟು ಹಣ ಮಾಡಿಟ್ಟುಕೊಂಡು ಸುಮ್ಮನಾಗಿಬಿಡುತ್ತಿದ್ದರು. ಮೋದಿ ಮುಲಾಜಿಲ್ಲದೇ ಈ ದೊಡ್ಡವರ ಬಾಲ ಕತ್ತರಿಸಿಬಿಟ್ಟರು. ಅನೇಕರನ್ನು ಜೈಲಿಗೂ ತಳ್ಳಿದರು. ಮೊದಲೆಲ್ಲ ವಿಮಾನದಲ್ಲಿ ಈ ದೊಡ್ಡ ಮನುಷ್ಯರು ಮಾತ್ರ ತಿರುಗಾಡುತ್ತಿದ್ದರು. ಮೋದಿ ಹವಾಯಿ ಚಪ್ಪಲಿಯವರನ್ನೂ ವಿಮಾನ ಹತ್ತಿಸಿದರು. ಬಡವರ ಓಟಾಟದ ರೈಲುಗಳೆಂದರೆ ಕೊಳಕು, ಸಮಯ ಮೀರಿದ್ದು, ರೈಲ್ವೇ ನಿಲ್ದಾಣಗಳಂತೂ ಕೇಳಲೇಬೇಡಿ. ಮೋದಿ ಬಡವರು ಹೆಚ್ಚಾಗಿ ಬಳಸುವ ಈ ವ್ಯವಸ್ಥೆಯನ್ನು ಅತ್ಯುತ್ಕೃಷ್ಟ ಮಟ್ಟಕ್ಕೇರಿಸಲು ಪ್ರಯತ್ನ ಹಾಕಿದರು. ಇಂದು ಅನೇಕ ರೈಲ್ವೆ ನಿಲ್ದಾಣಗಳು ವಿಮಾನ ನಿಲ್ದಾಣಗಳಂತೆ ರೂಪಿಸಲ್ಪಟ್ಟಿವೆ. ಅಂದರೆ ಉಚಿತವಾಗಿ ಏನೂ ಕೊಡಬೇಕಾಗಿಲ್ಲ, ಅವನ ಬದುಕಿನ ಮಟ್ಟವನ್ನು ಏರಿಸಲು ಏನು ಬೇಕೋ ಅದನ್ನು ಮಾಡಿದರಾಯ್ತು ಎಂಬುದು ಮೋದಿಯವರ ಸಿದ್ಧಾಂತ.

ಇಷ್ಟಾದರೂ ನಮಗೆ ನಮ್ಮ ಬದುಕಿನ ಮಟ್ಟ ಏರುವುದು ಬೇಕಾಗಿಲ್ಲ, ತುತ್ತು ಕೂಳಿಗೆ ಕೈಚಾಚಿಕೊಂಡು ಬದುಕುವುದೇ ಬೇಸೆನಿಸಿದರೆ ಕಾಂಗ್ರೆಸ್ಸಿಗೇ ಮತ ಹಾಕಬೇಕಷ್ಟೇ. ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಕೊಂಡಿರುವ ಸ್ವಾಭಿಮಾನಿ ಕನ್ನಡಿಗ ಎಂದೆನಿಸಿದರೆ ನಿಸ್ಸಂಶಯವಾಗಿ ಮೋದಿಯ ಹಿಂದೆ ನಿಲ್ಲಬೇಕು. ಈ ಬಾರಿ ಮೋದಿಗೆ ಬಹುಮತ ಕೊಟ್ಟುಬಿಡೋಣ. ಪ್ರತೀಬಾರಿ ನಮ್ಮ ಜಾತಿಯ ಮಂತ್ರಿ-ಮುಖ್ಯಮಂತ್ರಿ ಎಂದೆಲ್ಲ ಬಡಿದಾಡುತ್ತೇವಲ್ಲ, ಈ ಒಂದು ಬಾರಿ ನಾಡುಕಟ್ಟಿದ ಮೈಸೂರಿನ ಮಹಾರಾಜರಂತಹ ದೂರದೃಷ್ಟಿಯ ನಾಯಕನೊಬ್ಬ ಅಧಿಕಾರಕ್ಕೇರಲೆಂದು ಪ್ರಾರ್ಥಿಸೋಣ. ಒಮ್ಮೆ ಮೋದಿಯನ್ನು ನಂಬೋಣ, ರಾಜ್ಯದಲ್ಲಿ ಅವರು ಕೇಳಿಕೊಂಡಂತೆ ಬಹುಮತದ ಸರ್ಕಾರ ತರೋಣ. ಏನಂತೀರಿ?

ಮೋದಿ ಬರೋವರ್ಗೂ ನಿಮ್ದೇ ಹವಾ!

ಮೋದಿ ಬರೋವರ್ಗೂ ನಿಮ್ದೇ ಹವಾ!

ಚುನಾವಣೆಗಳು ಎದುರಿಗಿವೆ. ಆದರೆ ಸದ್ದೇ ಇಲ್ಲ. ಇನ್ನು ಹದಿನೈದಿಪ್ಪತ್ತು ದಿನಗಳಲ್ಲಿ ಈ ರಾಜ್ಯದ ಐದು ವರ್ಷಗಳ ಭವಿಷ್ಯ ನಿರ್ಧಾರವಾಗಲಿದೆ ಎಂಬ ಯಾವ ಮುನ್ಸೂಚನೆಯೂ ಕಾಣುತ್ತಿಲ್ಲ. ಬಿಸಿಲ ಝಳ ಒಂದೆಡೆಯಾದರೆ, ಮತ್ತೊಂದೆಡೆ ಎಲ್ಲ ಪಕ್ಷಗಳ ನಾಯಕರಲ್ಲೂ ಮನೆಮಾಡಿರುವ ಆತಂಕ. ಎಲ್ಲಾ ಪಕ್ಷಗಳೂ ಬಹುಮತ ತಮಗೇ ಅಂತ ಮೇಲ್ನೋಟಕ್ಕೆ ಬೀಗುತ್ತಿವೆಯಾದರೂ ಮೈದಡವಿ ಮಾತನಾಡಿಸಿದಾಗ, ಸ್ವಲ್ಪ ಕಷ್ಟವಿದೆ ಎನ್ನುವುದನ್ನು ಒಪ್ಪುತ್ತಾರೆ. ಏಕೊ ಈ ಬಾರಿ ಜನ ಬೂತಿಗೆ ಬಂದು ವೋಟ್ ಮಾಡುವುದೇ ಅನುಮಾನ ಅನ್ನಿಸುತ್ತಿದೆ. ಉರಿಬಿಸಿಲು ಒಂದು ಕಾರಣವಾದರೆ, ಎಲ್ಲಾ ಪಕ್ಷಗಳು ಒಂದೇ ಎನ್ನುವ ತಾತ್ಸಾರ ಮನೋಭಾವ ಮತ್ತೊಂದು.

ಇಡೀ ಚುನಾವಣೆಯ ಪ್ರಮುಖ ಬೇಸರದ ಸಂಗತಿ ಏನು ಗೊತ್ತೇ? ಜಾತಿಯ ಕಾರ್ಡನ್ನು ಪಕ್ಷಗಳು ಬಳಸುತ್ತಿರುವಂತಹ ರೀತಿ. ಲಿಂಗಾಯತನೇ ಮುಖ್ಯಮಂತ್ರಿ ಎನ್ನುವ ಬಿಜೆಪಿ, ಗೌಡರನ್ನು ಮುಂದಿಟ್ಟುಕೊಂಡು ಕಾಳಗ ನಡೆಸುತ್ತಿರುವ ಕಾಂಗ್ರೆಸ್ಸು. ಜಾತಿ-ಜಾತಿಗಳನ್ನು ಇವರು ಸೆಳೆಯಲು ನಡೆಸುತ್ತಿರುವ ಕಸರತ್ತು, ಗಿರಾಕಿಯನ್ನು ಆಕರ್ಷಿಸುವ ಕೆಂಪುದೀಪ ಪ್ರದೇಶದ ಬೆಲೆವೆಣ್ಣುಗಳ ಸರ್ಕಸ್ಸಿನಂತಿದೆ. ಸ್ವಲ್ಪ ಕಟುವೆನಿಸಿದರೂ ಸತ್ಯವೇ. ತಾನು ಬ್ರಾಹ್ಮಣ ಪಕ್ಷವಲ್ಲವೆಂದು ಸಾಬೀತುಪಡಿಸಿಕೊಳ್ಳಲು ಬಿಜೆಪಿ ಜಾತಿವಾರು ಟಿಕೆಟ್ ಹಂಚಿಕೆ ಪಟ್ಟಿ ಪ್ರಕಟಿಸಿದರೆ, ಅತ್ತ ಕಾಂಗ್ರೆಸ್ಸು ಲಿಂಗಾಯತರನ್ನು ಸೆಳೆಯಲು ಒಡಕಿನ ಎಲ್ಲ ಪ್ರಯೋಗವನ್ನೂ ಮಾಡಿಯಾಗಿದೆ. ಅಲ್ಲದೇ ಮತ್ತೇನು? ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿರೋದು ಸರಿ, ಆದರೆ ಅವರನ್ನು ತಮ್ಮತ್ತ ಸೆಳೆದ ಕಾಂಗ್ರೆಸ್ಸು ಲಿಂಗಾಯತರಿಗಾದ ಅವಮಾನವೆಂಬಂತೆ ಬಿಂಬಿಸಿತಲ್ಲ! ಶೆಟ್ಟರ್ ಕೂಡ ತಮ್ಮನ್ನು ಹೊರದಬ್ಬುವ ಪ್ರಕ್ರಿಯೆಯ ನಾಯಕರಾಗಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್‌ರನ್ನು ಬಿಂಬಿಸಿ, ಉರಿವ ಬೆಂಕಿಗೆ ತುಪ್ಪ ಸುರಿದರು. ಅವರದ್ದು ತಪ್ಪು ಎಂದು ಹೇಳಲಾಗದು. ರಾಜಕೀಯವಾಗಿ ತಾನು ಜೀವಂತವಾಗಿರಬೇಕೆಂದರೆ ಇಂಥದ್ದೊಂದು ಕಸರತ್ತು ಅವರಿಗೆ ಅಗತ್ಯವಿತ್ತು. ಅಚ್ಚರಿಯೇನು ಗೊತ್ತೇ? ಜಗದೀಶ್ ಶೆಟ್ಟರ್‌ಗೆ ಟಿಕೆಟ್ ನಿರಾಕರಿಸಿ ಬಿಜೆಪಿ ಆಯ್ಕೆಮಾಡಿದ ಮತ್ತೊಬ್ಬ ವ್ಯಕ್ತಿಯೂ ಲಿಂಗಾಯತರೇ! ಹಾಗಿದ್ದಮೇಲೆ ಲಿಂಗಾಯತರಿಗೆ ಮೋಸವಾಗಿದ್ದೆಲ್ಲಿ? ಇನ್ನು ಎಲ್ಲಾ ಅನಿಷ್ಟಗಳಿಗೂ ಸಂತೋಷರನ್ನೇ ಕಾರಣವೆನ್ನುವ ಮಂದಿ ಮೋದಿ-ಅಮಿತ್‌ ಶಾರನ್ನು ಅಷ್ಟು ದಡ್ಡರೆಂದುಕೊಂಡಿದ್ದಾರೋ ಅಥವಾ ಟಿಕೆಟ್ ಹಂಚಿಕೆಯಲ್ಲಿ ಅವರ ಪಾತ್ರವೇ ಇಲ್ಲ ಎಂದು ಭಾವಿಸಿದ್ದಾರೋ, ನಾನಂತೂ ಅರಿಯೆ. ಸಮಿತಿಯೊಳಗೆ ಘಟಾನುಘಟಿಗಳ್ಯಾರ್ಯಾರಿಗೆ ಟಿಕೆಟ್ ನಿರಾಕರಿಸಬೇಕು ಎಂಬ ಚರ್ಚೆ ಮೇಲ್ಮಟ್ಟದಲ್ಲಿ ನಡೆದಮೇಲೆಯೇ ನಿರ್ಣಯವಾಗಿರುತ್ತಲ್ಲ. ಅಂದಮೇಲೆ ಒಬ್ಬರದ್ದೇ ಜವಾಬ್ದಾರಿ ಹೇಗೆ? ಹಾಗೆ ಒಬ್ಬರ ಹೆಗಲಿಗೇ ಎಲ್ಲವನ್ನೂ ವರ್ಗಾಯಿಸುವುದಾದರೆ, ಟಿಕೆಟ್ ಹಂಚಿಕೆಯಲ್ಲಿ ಹಿಂದೆಂದೂ ಕಾಣದಷ್ಟು ಹೊಸಮುಖಗಳನ್ನು ತಂದಿರುವ ಶ್ರೇಯವೂ ಸಂತೋಷ್ ಅವರಿಗೇ ಸಲ್ಲಬೇಕಲ್ಲ! ಬಿಜೆಪಿಯವರಿಗೆಲ್ಲ ನೆನಪಿರಬೇಕಾದ ಒಂದು ಸಂಗತಿ ಎಂದರೆ ಬಿಜೆಪಿ ಸಂಘದ ಅಂಗಸಂಸ್ಥೆಯಷ್ಟೆ. ಸಂಘ ಅದರ ಬಾಲವಲ್ಲ. ಹೀಗಾಗಿ ಭಾಜಪದೊಂದಿಗೆ ಎಷ್ಟಾದರೂ ಕಿತ್ತಾಡಿಕೊಳ್ಳಿ, ಸ್ವಯಂಸೇವಕರು ನಿಮ್ಮ ಮೇಲೆ ಪ್ರೀತಿ ಇಟ್ಟಿರುತ್ತಾರೆ. ಸಂಘದ ತಂಟೆಗೆ ಬಂದರೆ ನಿಮ್ಮನ್ನು ಸದ್ದಿಲ್ಲದೇ ಪಕ್ಕಕ್ಕೆ ಸರಿಸಿಬಿಡ್ತಾರೆ. ಶೆಟ್ಟರ್ ವಿಷಯದಲ್ಲಿ ಆದದ್ದೂ ಅದೇ. ಅವರು ಸ್ವಯಂ ಸೇವಕರ ಅನುಕಂಪವನ್ನು ಕಳಕೊಂಡರು. ಅತ್ತ ಕಾಂಗ್ರೆಸ್ಸಿಗರೂ ನಂಬಲಾಗದ ಸ್ಥಿತಿಯನ್ನು ತಲುಪಿಬಿಟ್ಟರು. ಅವರದ್ದೀಗ ಇಬ್ಬಂದಿ. ಹಾಗಂತ ಜಗದೀಶ್ ಶೆಟ್ಟರ್‌ರ ರಾಜಕೀಯ ಚಾಣಾಕ್ಷಮತಿಯನ್ನು ಅನುಮಾನಿಸಬೇಡಿ. ಅವರಿಗೆ ಗೆಲ್ಲುವ ತಂತ್ರಗಾರಿಕೆ ಗೊತ್ತಿದೆ. ಆದರೆ ಈ ಧಾವಂತದಲ್ಲಿ ಸೊರಗಿದ್ದು ಮಾತ್ರ ಲಿಂಗಾಯತ ಸಮುದಾಯ. ಬ್ರಾಹ್ಮಣ ಮತ್ತು ಲಿಂಗಾಯತರ ನಡುವಿನ ಕಂದಕವನ್ನು ಅವರು ಇನ್ನಷ್ಟು ದೊಡ್ಡದು ಮಾಡಿಬಿಟ್ಟರು. ಬಿಜೆಪಿಯಲ್ಲಿದ್ದಷ್ಟೂ ದಿನ ಎಲ್ಲರನ್ನೂ ಬೆಸೆಯುವ ಪ್ರಯತ್ನ ಮಾಡುತ್ತಿದ್ದವರು, ಕಾಂಗ್ರೆಸ್ಸಿಗೆ ಕಾಲಿಟ್ಟೊಡನೆ ಬೆಂಕಿಹಚ್ಚಲು ಸಿದ್ಧವಾಗಿಬಿಟ್ಟರು. ಬಹುಶಃ ಒಡಕು ತರೋದು ಕಾಂಗ್ರೆಸ್ಸಿನ ಹುಟ್ಟುಗುಣವೇನೋ! ಕಾಂಗ್ರೆಸ್ಸಿಗರು ಆತ್ಮೀಯತೆ ತೋರುತ್ತಿದ್ದಾರೆಂದರೆ ಏನೊ ಅವಘಡ ಕಾದಿದೆ ಎಂದೇ ಅರ್ಥ. ಮುಖದಲ್ಲಿ ನಗು, ಬಗಲಲ್ಲಿ ಚೂರಿ ಅನ್ನೋದು ಕಾಂಗ್ರೆಸ್ಸಿಗರನ್ನು ನೋಡಿಯೇ ಹುಟ್ಟಿರಬೇಕು! ಒಂದಂತೂ ಸತ್ಯ. ನಾಟಕ ಮಾಡಿದರೆ ಬಹಳ ಕಾಲ ಉಳಿಯುವುದಿಲ್ಲ. ಲಿಂಗಾಯತರ ಮೇಲೆ ವಿಶೇಷ ಪ್ರೀತಿ ತೋರಿದ ಸಿದ್ದರಾಮಯ್ಯ, ‘ಲಿಂಗಾಯತರೆಲ್ಲ ಭ್ರಷ್ಟರು. ಅವರನ್ನು ಮುಖ್ಯಮಂತ್ರಿ ಮಾಡಲಾರೆವು’ ಎಂದಿದ್ದು ಅಂತರಂಗದ ಮಾತನ್ನು ಹೊರಹಾಕಿದೆ. ಜಾತಿಯನ್ನೇ ನೆಚ್ಚಿಕೊಂಡು ಚುನಾವಣೆಗೆ ಹೋದರೆ ಅನುಭವಿಸಲೇಬೇಕಾದ್ದು ಇದು.

ಒಡಕು ಜಾತಿಯ ವಿಚಾರದಲ್ಲಷ್ಟೇ ಅಲ್ಲ. ಅಮೂಲ್, ನಂದಿನಿ ಗಲಾಟೆಯಲ್ಲೂ ಕೂಡ. ಗುಜರಾತಿನ ಅಮೂಲ್‌ಗೆ ಕರ್ನಾಟಕಕ್ಕೆ ಬರಲು ಅವಕಾಶ ಕೊಟ್ಟಿದ್ದೇ ಸಿದ್ದರಾಮಯ್ಯ. ಈಗ ಗಲಾಟೆ ಮಾಡುತ್ತಾ ಇರೋದೂ ಅವರೇ. ತಮ್ಮ ಮತಗಳಿಕೆಗಾಗಿ ರಾಜ್ಯ-ರಾಜ್ಯಗಳ ನಡುವೆ ಕದನ ಹಚ್ಚಿಸಲು ಯತ್ನಿಸುತ್ತಿರುವ ಈ ಮಂದಿ ವಿಕಾಸ ಮಾಡೋದು ಸಾಧ್ಯವೇನು? ಈ ರೀತಿಯಲ್ಲೇ ಈ ರಾಜಕಾರಣಿಗಳು ಕರ್ನಾಟಕ-ತಮಿಳುನಾಡುಗಳ ನಡುವೆ ವಿಷಬೀಜ ಬಿತ್ತಿದ್ದು. ಇವರು ಹಚ್ಚಿದ್ದ ಬೆಂಕಿ ಆರಿಸಲು ಯಡಿಯೂರಪ್ಪನವರೇ ಬರಬೇಕಾಯ್ತು. ಕಂಠಮಟ್ಟ ನಂದಿನಿಗಾಗಿ ಕಿತ್ತಾಡಿದ ಸಿದ್ದರಾಮಯ್ಯ ರಾಜ್‌ದೀಪ್ ಸರ್‌ದೇಸಾಯಿಗೆ ನೀಡಿದ ಸಂದರ್ಶನದಲ್ಲಿ, ತಾನೇ ಅಧಿಕಾರಕ್ಕೆ ಬಂದರೂ ಅಮೂಲ್ ನಿಷೇಧಿಸುವುದಿಲ್ಲ. ಆದರೆ ಜನರಿಗೆ ಅದನ್ನು ಕೊಂಡುಕೊಳ್ಳದಿರುವಂತೆ ಕೇಳಿಕೊಳ್ಳುವೆ ಎಂದಿರುವುದಂತೂ ಇಬ್ಬಂದಿತನದ ದ್ಯೋತಕವೇ. ಜಗತ್ತು ಆರ್ಥಿಕವಾಗಿ ಬೆಳವಣಿಗೆಗೆ ಎಲ್ಲ ಸಭ್ಯಮಾರ್ಗಗಳ ಮೊರೆ ಹೋಗುತ್ತಿರುವಾಗ ಒಂದು ರಾಜ್ಯದ ವಸ್ತು ಮಾರಲು ಬಿಡೆವು ಎಂದು ಇನ್ನೊಂದು ರಾಜ್ಯದಲ್ಲಿ ಹಠಹಿಡಿದು ಕುಳಿತ ಪಕ್ಷ ರಾಷ್ಟ್ರೀಯ ಪಕ್ಷವೆನಿಸಿಕೊಳ್ಳಲು ಯೋಗ್ಯವಲ್ಲ. ಅಲ್ಲವೇನು!?

ಇನ್ನು ಮುಸಲ್ಮಾನರ ಮೇಲಿನ ಕಾಂಗ್ರೆಸ್ ಪಕ್ಷದ ಹಿಡಿತ ಮೆಚ್ಚಬೇಕಾದ್ದೇ‌. ಕೆಮ್ಮಿದ್ದಕ್ಕೂ, ಕ್ಯಾಕರಿಸಿದ್ದಕ್ಕೂ ಬೀದಿಗೆ ಬಂದು ನಿಲ್ಲುವ ಮುಸಲ್ಮಾನರು, ಆತಿಕ್ ಮೊಹಮ್ಮದನ ಸಾವಿಗೆ ಪ್ರತಿಕ್ರಿಯೆಯನ್ನೇ ಕೊಡಲಿಲ್ಲ ನೋಡಿದಿರಾ? ದೇಶದ ಮೂಲೆ-ಮೂಲೆಯಲ್ಲಿ ಸದ್ದುಮಾಡಿದ ಈ ಮಂದಿ ಕರ್ನಾಟಕದಲ್ಲಿ ಇಷ್ಟು ಮುಗುಮ್ಮಾಗಿರೋದು ಏಕೆ? ತಮ್ಮ ಗಲಾಟೆಯಿಂದ ಹಿಂದೂಗಳು ಒಗ್ಗಟ್ಟಾಗಿಬಿಡುವರೇನೋ ಎನ್ನುವ ಭಯ. ಮುಸಲ್ಮಾನರಿಂದ ಅವೈಜ್ಞಾನಿಕವಾದ ಮೀಸಲಾತಿಯನ್ನು ಕಿತ್ತುಕೊಂಡು ಗೌಡರು, ಪಂಚಮಸಾಲಿಗಳಿಗೆ ಬಿಜೆಪಿ ಹಂಚಿದಾಗಲೂ ಅವರು ತುಟಿಪಿಟಿಕ್ ಎನ್ನಲಿಲ್ಲ. ಏಕಿರಬಹುದು? ಈಗ ಗಲಾಟೆ ಮಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಕಾರಣವಾಗುವ ಬದಲು ಸಂಯಮ ಕಾಯ್ದುಕೊಂಡು ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತಂದು, ಆನಂತರ ಬೇಕಾದ ಆಟ ಆಡಿದರಾಯ್ತು ಎಂಬ ಉದ್ದೇಶವೇ ತಾನೇ? ದೇಶದಾದ್ಯಂತ ಮುಸಲ್ಮಾನರನ್ನು ಈ ರೀತಿ ನಿಯಂತ್ರಣದಲ್ಲಿರಿಸಿಕೊಳ್ಳುವ ಸಾಮರ್ಥ್ಯ ಇರೋದು ಕಾಂಗ್ರೆಸ್ಸಿಗೆ ಮಾತ್ರ. ಅಂದರೆ ಮುಸಲ್ಮಾನರು ನಡೆಸುವ ಅನೇಕ ದಂಗೆಗಳ ಹಿಂದೆ ಕೈವಾಡ ಯಾರದ್ದಿರಬೇಕು ಹೇಳಿ? ಇಲ್ಲವಾದರೆ ಅಖಂಡ ಶ್ರೀನಿವಾಸರಿಗೆ ಟಿಕೆಟ್ ತಪ್ಪಿಸಿ, ‘ಮುಸಲ್ಮಾನ ಮುಖಂಡರ ವಿರೋಧ ಇದ್ದದ್ದರಿಂದ’ ಅಂತ ಡಿಕೆಶಿ ಏಕೆ ಹೇಳುತ್ತಿದ್ದರು? ಒಂದೇ ಮಾತಿನಲ್ಲಿ ಹೇಳಬೇಕು ಅಂದರೆ ಕಾಂಗ್ರೆಸ್ಸಿಗೆ ವೋಟು ನೀಡುವುದು ಅಂದರೆ ಮತ್ತೊಮ್ಮೆ ಮುಸಲ್ಮಾನರು ಅಟ್ಟಹಾಸ ನಡೆಸಿ ಬೀದಿಗಿಳಿಯುವುದು ಎಂದರ್ಥ, ಟಿಪ್ಪು ಜಯಂತಿಯ ವೈಭವ ರಾಜ್ಯದ ಮೂಲೆ-ಮೂಲೆಯಲ್ಲೂ ಕಾಣುವುದು ಎಂದರ್ಥ, ಸಾಲು-ಸಾಲು ಹಿಂದೂ ಕಾರ್ಯಕರ್ತರ ಕಗ್ಗೊಲೆಗಳಾಗುವುದು ಎಂದರ್ಥ.

ಈ ಬಾರಿ ಹಣ ಚುನಾವಣೆಯಲ್ಲಿ ಕಾವೇರಿ ನೀರಿಗಿಂತ ಜೋರಾಗಿ ಹರಿಯಲಿದೆ. ಚುನಾವಣೆಗೂ ಮುಂಚಿನ ಮೂರ್ನಾಲ್ಕು ದಿನ ಮತದಾರರಿಗೆ ಹಬ್ಬ. ನಾಯಕರಿಂದ ಹಂಚಲೆಂದು ಹಣ ಪಡೆದವರ ಕಥೆಯನ್ನು ಕೇಳಲೇಬೇಡಿ. ಕಾಂಗ್ರೆಸ್ಸು ದುಡ್ಡಿರುವವರನ್ನು ಹುಡು-ಹುಡುಕಿ ಆರಿಸಿಕೊಂಡಿದೆ. ಅವರು ಆಕಾಂಕ್ಷಿಗಳಿಂದಲೇ ಎರಡೆರಡು ಲಕ್ಷ ಪೀಕಿ ಹತ್ತಾರು ಕೋಟಿ ಮಾಡಿಕೊಂಡವರಲ್ಲವೇ! ಬಿಜೆಪಿ ಟಿಕೆಟ್ ಹಂಚುವಾಗ ಬಹುತೇಕ ಬ್ಯಾಂಕ್ ಬ್ಯಾಲೆನ್ಸ್ ನೋಡಲಿಲ್ಲವೆಂಬುದು ಸುವಿದಿತ. ಹೀಗಾಗಿ ಇಲ್ಲಿನ ಬಹುತೇಕ ಹೊರೆ ಬೊಮ್ಮಾಯಿಯವರೇ ಹೊರಬೇಕೇನೋ! ಪ್ರಜಾಪ್ರಭುತ್ವವಾದ್ದರಿಂದ ಚುನಾವಣೆಯ ನೆಪದಲ್ಲಿ ಪ್ರತಿಯೊಬ್ಬರೂ ಅಧಿಕಾರದಲ್ಲಿದ್ದಾಗ ಗಳಿಸಿದ್ದನ್ನು ಕಕ್ಕಲೇಬೇಕು. ಮೊದಲೆಲ್ಲ ಸ್ವಲ್ಪ ಕೊಟ್ಟರೆ ಸಾಕಿತ್ತು. ಈಗ ಇತರೆಲ್ಲ ಕ್ಷೇತ್ರಗಳಂತೆ ಇಲ್ಲೂ ಸಾಕಷ್ಟು ಸ್ಪರ್ಧೆ ಏರ್ಪಟ್ಟಿರುವುದರಿಂದ ಸಣ್ಣ-ಪುಟ್ಟ ಮೊತ್ತಕ್ಕೆ ಮತದಾರನೂ ಬಾಗಲಾರ. ಎಂತಹ ದುರಂತ ಅಲ್ಲವೇ! ಈ ಲೇಖನದ ಮುಕ್ಕಾಲುಭಾಗ ಜಾತಿ, ಹಣ, ಹೆಂಡಗಳೆಂಬ ಕೊಳಕು ಸಂಗತಿಯದ್ದೇ ಚರ್ಚೆಯಾಯ್ತು.

ವಾಸ್ತವವಾಗಿ, ಚುನಾವಣೆಯ ವಿಚಾರದಲ್ಲಿ ಆಮೂಲಾಗ್ರ ಬದಲಾವಣೆಗೆ ನಾವೂ ಸಿದ್ಧವಾಗಬೇಕು. ಯಾವ ವ್ಯಕ್ತಿಗೂ ಸತತ ಎರಡನೇ ಬಾರಿ ಗೆದ್ದನಂತರ, ಮೂರನೇ ಬಾರಿ ಟಿಕೆಟ್ ನೀಡಬಾರದು. ಹತ್ತು ವರ್ಷ ಶಾಸಕನಾಗಿಯೂ ಏನನ್ನೂ ಕಡಿದು ಗುಡ್ಡೆ ಹಾಕದವ, ಮುಂದಿನ ಹತ್ತು ವರ್ಷದಲ್ಲಿ ಅದೇನು ಮಹಾ ಸಾಧಿಸಬಲ್ಲ ಹೇಳಿ? ಸತತ ಐದು ಬಾರಿ ಶಾಸಕ ಎನ್ನುವುದು ಹೆಗ್ಗಳಿಕೆಯಲ್ಲ. ಐದಾರು ಬಾರಿ ಶಾಸಕನಾದರೂ ಕ್ಷೇತ್ರವಿನ್ನೂ ಹಾಗೆಯೇ ಇದೆಯಲ್ಲ ಎಂಬ ಕಾರಣಕ್ಕೆ ಆ ಪ್ರತಿನಿಧಿ ಆತ್ಮಹತ್ಯೆ ಮಾಡಿಕೊಳ್ಳಬೇಕು, ಅಲ್ಲವೇನು? ಜಾತಿಯ ಆಧಾರದ ಮೇಲೆ ಟಿಕೆಟ್ ಹಂಚುವುದಾದರೆ ಸಣ್ಣ-ಪುಟ್ಟ ಜಾತಿಗಳ ಪ್ರತಿಭಾವಂತರು ಎಂದೂ ರಾಜಕೀಯಕ್ಕೆ ಬರಲೇಬಾರದೇನು? ಅವರು ನೇತೃತ್ವವಹಿಸಿ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ನಡೆಸುವ ಕನಸು ಕಾಣಲೇಬಾರದೇನು? ಇದು ಮತದಾರರಾಗಿ ನಮ್ಮಲ್ಲೇ ನಾವು ಕೇಳಿಕೊಳ್ಳಬೇಕಾದ ಪ್ರಶ್ನೆ. ಪ್ರತಿಭಾವಂತನಿಗೆದುರಾಗಿ ನನ್ನ ಜಾತಿಯ ದಡ್ಡನನ್ನೂ, ನಿರ್ಣಯ ತೆಗೆದುಕೊಳ್ಳುವ ಸಾಮರ್ಥ್ಯವಿಲ್ಲದವನನ್ನೂ, ಪರಮಭ್ರಷ್ಟನನ್ನೂ ಆಯ್ದುಕೊಳ್ಳುತ್ತೇನೆಂದರೆ ಅದಕ್ಕಿಂತ ಹೇಸಿಗೆ ಯಾವುದಿದೆ! ದುರಂತ ಏನು ಗೊತ್ತೇ? ಹೀಗೆ ಜಾತಿಯವರನ್ನು ಆರಿಸಿಕೊಳ್ಳೋದು ಸಮಾಜದ ದಡ್ಡರೆಂದುಕೊಳ್ಳಬೇಡಿ, ಬುದ್ಧಿವಂತರೂ ಕೂಡ. ಎಲ್ಲವನ್ನೂ ತ್ಯಾಗ ಮಾಡಿ ಸನ್ಯಾಸ ಸ್ವೀಕರಿಸಿದ ಸ್ವಾಮಿಗಳೂ ತಮ್ಮ ಜಾತಿಗಾಗಿ ಲಾಬಿ ಮಾಡುವುದನ್ನು ನೋಡಿದಾಗ ತ್ಯಾಗವೆಂಬ ಪದ ಅದೆಷ್ಟು ಮೌಲ್ಯ ಕಳಕೊಂಡಿದೆ ಎಂದು ಅರಿವಾಗುತ್ತದೆ.

ಆದರೆ ಕಾರ್ಮೋಡದ ನಡುವೆಯೂ ಒಂದು ಬೆಳ್ಳಿರೇಖೆ ಯಾವುದು ಗೊತ್ತೇ? ಅದು ನರೇಂದ್ರಮೋದಿಯೇ‌. ಅವರು ಯಾವ ಜಾತಿಯವರೆಂದು ಅನೇಕರಿಗೆ ಗೊತ್ತಿಲ್ಲ. ಅವರು ತಮ್ಮ ಜಾತಿಯವರೆಂದು ಯಾರನ್ನೂ ಮಂತ್ರಿ ಮಾಡಿದ ಉದಾಹರಣೆ ಇಲ್ಲ. ಅವರೆಂದಿಗೂ ತಮ್ಮ ಜಾತಿಯ ಮಠಾಧೀಶನಿಗೆ ಮತ್ತೆ-ಮತ್ತೆ ಹೋಗಿ ಅಡ್ಡಬಿದ್ದುದನ್ನು ಕಂಡವರಿಲ್ಲ. ತಥಾಕಥಿತ ಮೇಲ್ವರ್ಗದ ಮಠಾಧೀಶರಿರಲಿ, ಕೆಳವರ್ಗದವರೇ ಇರಲಿ ಮೋದಿ ಎದುರು ನಿಂತಾಗ ಗೌರವದಿಂದ ನಮಿಸುತ್ತಾರೆ. ಜನರೂ ಅಷ್ಟೇ, ಮೋದಿಯ ಭಾವಚಿತ್ರ ಕೊಳಕಾಗಿದ್ದರೆ ತಮ್ಮ ಬಟ್ಟೆಯಿಂದಲೇ ಅದನ್ನು ಒರೆಸಿ, ‘ದೇವರಪ್ಪಾ’ ಅಂತಾರೆ. ಅವರು ಜಾತಿಯ ವಿಷಯ ತೆಗೆಯಲಿಲ್ಲ, ಹಣದ ಮಾತೆತ್ತಲಿಲ್ಲ. ಭಾರತದ ಮೌಲ್ಯಗಳಿಗೆ ತಕ್ಕಂತೆ ಬದುಕಿದರು. ಭೂಮಿಗೆ ಹತ್ತಿರವಾಗಿ ಬದುಕಿದರು. ಹೀಗಾಗಿಯೇ ಅವರು ಪ್ರಧಾನಿಯಾಗಿರುವುದನ್ನು ಎಲ್ಲ ಜಾತಿಯ, ಎಲ್ಲ ವರ್ಗದ ಮತ್ತು ಎಲ್ಲ ಪಕ್ಷದ ಜನ ಸಂಭ್ರಮಿಸುತ್ತಾರೆ. ಜಾತಿಯ ಕಾರಣಕ್ಕೆ ಮುಖ್ಯಮಂತ್ರಿಯ ಪಟ್ಟದಲ್ಲಿ ಕುಳಿತುಕೊಳ್ಳಬೇಕು ಎನ್ನುವವರಿಗೆ ಇವೆಲ್ಲ ಅರ್ಥವಾಗೋದು ಬಹಳ ಕಷ್ಟ.

ಮೋದಿ ಕರ್ನಾಟಕಕ್ಕೆ ಬರಲಿದ್ದಾರೆ. ಇನ್ನು ಕೆಲವು ದಿನ ಮತ್ತೆ ಮತ್ತೆ ಬರಲಿದ್ದಾರೆ. ಅವರು ಬರುವವರೆಗೆ ಅಷ್ಟೇ ಉಳಿದವರ ಹವಾ. ಅವರು ಬಂದಮೇಲೆ ಅವರದ್ದೇ ಹವಾ. ಆ ತಣ್ಣನೆ ಗಾಳಿ ಜೋರಾಗಿ ಬೀಸಲಿ, ಬಿಸಿಲ ಬೇಗೆಯನ್ನು ಕಡಿಮೆ ಮಾಡಿ ರಾಜ್ಯಕ್ಕೆ ತಂಪು ತರುವವರನ್ನು ಅಧಿಕಾರಕ್ಕೆ ಕೂಡಿಸಲಿ. ಏನಂತೀರಿ?

‘ಕೈ’ಗೇ ಬಿಟ್ಟಿದ್ದರೆ ಆತಿಕ್ ಇಲ್ಲೂ ಇರುತ್ತಿದ್ದ!

‘ಕೈ’ಗೇ ಬಿಟ್ಟಿದ್ದರೆ ಆತಿಕ್ ಇಲ್ಲೂ ಇರುತ್ತಿದ್ದ!

ಅಸದ್ ಅಹ್ಮದ್ ಮತ್ತು ಗುಲಾಮ್ ಮೊಹಮ್ಮದ್ ಇವರಿಬ್ಬರ ಎನ್ಕೌಂಟರ್ ಉತ್ತರ ಪ್ರದೇಶದಲ್ಲಿ ಆಗುತ್ತಿದ್ದಂತೆ ದೇಶದೆಲ್ಲೆಡೆ ಸಂಚಲನ ಮೂಡಿತ್ತು. ಅದರ ಕುರಿತಂತೆ ಲೇಖನ ಬರೆಯಬೇಕು ಎನ್ನುವಷ್ಟರಲ್ಲಿ ಅವರಪ್ಪ ಆತಿಕ್ ಅಹಮ್ಮದ್‌ನ ಹೆಣ ಬಿದ್ದಿದೆ. ಮೇಲ್ನೋಟಕ್ಕೆ ಇದು ಬಾಡಿಗೆ ಹಂತಕರು ಮಾಡಿರುವ ಹತ್ಯೆ ಎಂಬುದು ಗೋಚರವಾಗುತ್ತದಾದರೂ ಅನೇಕ ಮಾಧ್ಯಮಮಂದಿ ಮತ್ತು ಭಯೋತ್ಪಾದಕರ ಕುರಿತಂತೆ ಅನುಕಂಪ ಹೊಂದಿರುವ ಮಂದಿ ಯೋಗಿ ಆದಿತ್ಯನಾಥರ ಕೈವಾಡವೆಂದು ಶಂಕಿಸುತ್ತಿದ್ದಾರೆ. ಆದರೆ ಒಂದಂತೂ ನಿಜ. ಆತಿಕ್‌ನ ಸಾವು ಬರಲಿರುವ ಘೋರ ವಿಪತ್ತಿನ ಸಣ್ಣ ಮುನ್ಸೂಚನೆ ಎಂದೆನಿಸುತ್ತದೆ. ಲೇಖನದುದ್ದಕ್ಕೂ ಅದು ಹೇಗೆಂದು ವಿವರಿಸಲು ಯತ್ನಿಸುವೆ. 

ಹಾಗೆ ನೋಡಿದರೆ ಆತಿಕ್ ಸಂತನೇನೂ ಅಲ್ಲ. ಪಾಲ್ಘರ್‌ನಲ್ಲಿ ಸಾಧುಗಳ ಹತ್ಯೆಯಾದಾಗ ಮಿಸುಕಾಡದ ಮಂದಿಯೆಲ್ಲ ಆತಿಕ್‌ನ ಹತ್ಯೆಯ ಕುರಿತಂತೆ ವ್ಯಕ್ತಪಡಿಸುತ್ತಿರುವ ಅನುಕಂಪದ ಪ್ರಮಾಣವನ್ನು ನೋಡಿದರೆ, ಅವರೆಲ್ಲರ ಪಾಲಿಗೆ ಆತ ಮಹಾತ್ಮಾ ಗಾಂಧೀಯೇನೊ ಎನಿಸುತ್ತಿದೆ. 43 ವರ್ಷಗಳಲ್ಲಿ ಆತಿಕ್‌ನ ಮೇಲೆ ನೂರಕ್ಕೂ ಹೆಚ್ಚು ಕೇಸುಗಳು ದಾಖಲಾಗಿವೆ. ಇದರಲ್ಲಿ ಅಪಹರಣ, ಮಾನಭಂಗ, ದರೋಡೆಯಂಥವಲ್ಲದೇ ಕೊಲೆ ಪ್ರಕರಣಗಳೂ ಇವೆ. ಈ 43 ವರ್ಷಗಳಲ್ಲಿ ಅವನನ್ನು ಒಂದೇ ಒಂದು ಕೇಸಿನಲ್ಲಿ ಜೈಲಿಗೆ ತಳ್ಳುವುದು ಸಾಧ್ಯವಾಗಿರಲಿಲ್ಲ. ಆತನ ಕೇಸನ್ನು ಕೈಗೆತ್ತಿಕೊಳ್ಳುವುದಿಲ್ಲವೆಂದು ಅನೇಕ ಬಾರಿ ನ್ಯಾಯಾಧೀಶರುಗಳೇ ಕೈಚೆಲ್ಲಿ ಎದ್ದುಹೋದ ಉದಾಹರಣೆಯಿದೆ. ಯಾವುದಾದರೂ ಒಬ್ಬ ನ್ಯಾಯಾಧೀಶರು ಧೈರ್ಯ ಮಾಡಿ ವಿಚಾರಣೆಗೆ ನಿಂತರೆ ಅವನಿಗೆ ಜಾಮೀನು ಕೊಟ್ಟು ಮನೆಗೆ ಕಳಿಸುವುದಷ್ಟೇ ಅಲ್ಲದೇ ಬೇರೇನೂ ಮಾಡುತ್ತಿರಲಿಲ್ಲ. ನಿಮಗೆ ಅಚ್ಚರಿಯಾಗಬಹುದು. ಈ ಕೊಲೆಗಡುಕ ಐದು ಬಾರಿ ಶಾಸಕನಾಗಿದ್ದ! ಮೂರು ಬಾರಿ ಪಕ್ಷೇತರನಾಗಿ, ಒಮ್ಮೆ ಸಮಾಜವಾದಿ ಪಾರ್ಟಿಯಿಂದ, ಮತ್ತೊಮ್ಮೆ ಅಪ್ನಾದಲ್ ಪಾರ್ಟಿಯಿಂದ ಆಯ್ಕೆಯಾಗಿದ್ದ. 2004ರಲ್ಲಿ ಸಮಾಜವಾದಿ ಪಕ್ಷದಿಂದಲೇ ಸಂಸತ್ ಸದಸ್ಯನಾಗಿದ್ದ ಈತ ಪಾರ್ಟಿ ಹೊರಹಾಕಿದ ಮೇಲೆ 2009ರಲ್ಲಿ ಅಪ್ನಾದಲ್‌ನಿಂದ ಆಯ್ಕೆಯಾಗಿದ್ದ. 2012ರಲ್ಲಿ ಜೈಲಿನಿಂದಲೇ ಸ್ಪರ್ಧಿಸಿ 2005ರಲ್ಲಿ ತಾನೇ ಕೊಂದಿದ್ದ ರಾಜು ಪಾಲ್‌ ಪತ್ನಿಯ ಎದುರು ಸೋತಿದ್ದ. 2014ರಲ್ಲಿ ಸಮಾಜವಾದಿ ಪಕ್ಷ ಇಂತಹ ಕೊಲೆಗಡುಕ ಕ್ರಿಮಿನಲ್‌ನನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡು ಸಂಸತ್ ಸದಸ್ಯನನ್ನಾಗಿಸುವ ಪ್ರಯತ್ನ ಮಾಡಿತ್ತು. ಮೋದಿ ಸುನಾಮಿಯಲ್ಲಿ ಅನೇಕ ಆತಿಕ್‌ಗಳು ಕೊಚ್ಚಿಹೋದರು. 

ಈಗ ಆತಿಕ್ ಸುದ್ದಿಯಾಗುತ್ತಿರುವುದೇಕೆಂದರೆ 2005ರಲ್ಲಿ ತನ್ನ ತಮ್ಮನ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದ ರಾಜುಪಾಲ್‌ನನ್ನು ಈತ ಶೂಟ್ಔಟ್‌ನಲ್ಲಿ ಕೊಂದಿದ್ದ. ಪ್ರತ್ಯಕ್ಷವಾಗಿ ಇದನ್ನು ನೋಡಿದ್ದ ಉಮೇಶ್ ಪಾಲ್ ಪೊಲೀಸರಿಗೆ ಎಲ್ಲ ವಿವರಗಳನ್ನೂ ಕೊಟ್ಟಮೇಲೆ, ಅಂದಿನ ಡಿಜಿಪಿ ಓಪಿಸಿಂಗ್ ಇವನ ಠಾಣ್ಯವನ್ನು ಹುಡುಕಿ ತನ್ನ ಪಡೆಯೊಂದಿಗೆ ಸುತ್ತುವರೆದು ನಿಂತಿದ್ದರು. ಕೆಲವೇ ನಿಮಿಷಗಳಲ್ಲಿ ಪೊಲೀಸರ ಸುತ್ತಲೂ ಆತಿಕ್ನ ಪಡೆ ಆಧುನಿಕ ಶಸ್ತ್ರಾಸ್ತ್ರಗಳೊಂದಿಗೆ ತೊಡೆ ತಟ್ಟಿಕೊಂಡು ನಿಂತುಬಿಟ್ಟಿತು. ಓಪಿಸಿಂಗ್ ನೇರವಾಗಿ ಆತಿಕ್‌ನನ್ನೇ ಹಿಡಿದು, ಪೊಲೀಸರ ಮೈಗೆ ಕೆರೆದ ಗಾಯವಾದರೂ ಇವನನ್ನು ಉಡಾಯಿಸಿಬಿಡುತ್ತೇನೆ ಎಂದಿದ್ದರು. ಎಲ್ಲವೂ ಥೇಟು ಸಿನಿಮಾದಂತೆಯೇ. ಆತನನ್ನು ಬಂಧಿಸಿ ಎಳೆದು ತರಬೇಕೆನ್ನುವಷ್ಟರಲ್ಲಿ ಸರ್ಕಾರದ ಪ್ರಮುಖ ಹುದ್ದೆಯಲ್ಲಿರುವ ಮಂದಿ ಒತ್ತಡ ತಂದು ಆತಿಕ್‌ನನ್ನು ಬಿಡಿಸಿಕೊಂಡರು! ಇತ್ತೀಚೆಗೆ ಓಪಿಸಿಂಗ್ ಇವೆಲ್ಲವನ್ನೂ ವಿವರವಾಗಿ ಹೇಳಿದ್ದಾರೆ. ತನ್ನ ವಿರುದ್ಧ ಇರಬಹುದಾಗಿದ್ದ ಸಾಕ್ಷಿ ಉಮೇಶ್ ಪಾಲ್‌ನನ್ನು ಮರುಕ್ಷಣವೇ ಅಪಹರಿಸಿ ತಂದ ಆತಿಕ್ ಹೊಡೆದು-ಬಡಿದು ಪೊಲೀಸರಿಗೆ ಆತ ಕೊಟ್ಟ ಹೇಳಿಕೆಗೆ ವಿರುದ್ಧವಾದ ಹೇಳಿಕೆಯನ್ನು ಬರೆಸಿಕೊಂಡ. ಉಮೇಶ್ ಪಾಲ್ ಕೂಡ ಕಡಿಮೆ ಆಸಾಮಿಯಲ್ಲ. ಅವರಿಂದ ಬಿಡುಗಡೆಯಾಗಿ ಬಂದವನೇ ನೇರ ಪೊಲೀಸರ ಬಳಿಸಾರಿ ನಡೆದುದೆಲ್ಲವನ್ನೂ ಹೇಳಿ ಆತಿಕ್‌ನ ಕೊರಳಿಗೆ ಉರುಳನ್ನು ಗಟ್ಟಿಯಾಗಿಯೇ ಬಿಗಿದ. 

ಕಳೆದ ಫೆಬ್ರವರಿ ತಿಂಗಳಲ್ಲಿ ಉಮೇಶ್ ಪಾಲ್‌ನ ಹೇಳಿಕೆಯಿಂದಾಗಿ ಅತ್ಯಂತ ಕಠಿಣ ಶಿಕ್ಷೆಗೆ ಗುರಿಯಾಗಿರುವ ಆತಿಕ್‌ನ ಇಂದಿನ ಪರಿಸ್ಥಿತಿಗೆ ಪ್ರತೀಕಾರವಾಗಿ ಅವನ ಮಗ ಅಸದ್ ಉಮೇಶ್‌ನನ್ನು ಮುಗಿಸುವ ಸಂಚು ರೂಪಿಸಿದ. ಪೊಲೀಸರು ಆನಂತರ ಇವರೆಲ್ಲರನ್ನೂ ಬಂಧಿಸಿದಾಗ ಇವರ ಯೋಜನೆಯ ಒಟ್ಟಾರೆ ರೂಪುರೇಷೆಗಳು ಹೊರಬಂದಿದೆ. 12 ಐಫೋನ್‌ಗಳನ್ನು ಆತಿಕ್‌ನ ಹೆಂಡತಿ ಯೋಜನೆಯಲ್ಲಿ ಭಾಗಿಯಾದವರಿಗೆಲ್ಲ ಕೊಡಿಸಿದ್ದಳು. ಪ್ರತಿಯೊಬ್ಬರೂ ತಮಗೆ ಪ್ರತ್ಯೇಕ ಗುಪ್ತನಾಮ ಕೊಟ್ಟುಕೊಂಡಿದ್ದರು. ಸಲ್ಮಾನ್ ಖಾನನ ಆರಾಧಿಸುತ್ತಿದ್ದ ಅಸದ್ ತನ್ನ ಹೆಸರನ್ನು ರಾಧೆ ಎಂದಿಟ್ಟುಕೊಂಡಿದ್ದನಂತೆ. ಸಲ್ಮಾನನ ಇತ್ತೀಚಿನ ಸಿನಿಮಾದ ಹೆಸರು ಅದು. ಇವರೆಲ್ಲರೂ ಐ ಮೆಸೇಜ್‌ಗಳ ಮೂಲಕ ಮಾತ್ರ ಚರ್ಚೆ ನಡೆಸುತ್ತಿದ್ದರು. ಗುಂಡು ಹೊಡೆಯುವವ, ಬಾಂಬ್ ಎಸೆಯುವವ, ಚಲನ-ವಲನಗಳ ಮಾಹಿತಿ ನೀಡುವವ, ಹೀಗೆ ಎಲ್ಲರಿಗೂ ಪ್ರತ್ಯೇಕವಾದ ಜವಾಬ್ದಾರಿ ನೀಡಲಾಗಿತ್ತು. ಉಮೇಶ್‌ಪಾಲ್‌ನ ಮೇಲೆ ಇವರು ದಾಳಿ ಮಾಡುವಾಗ ಎಲ್ಲ ಎಚ್ಚರಿಕೆಯನ್ನೂ ಇಟ್ಟುಕೊಂಡಿದ್ದರಾದರೂ ಸಿಕ್ಕ ಸಿಸಿಟಿವಿ ಕಡತಗಳ ಆಧಾರದ ಮೇಲೆ ಪೊಲೀಸರು ಇವರ ವಿರುದ್ಧ ಬಲೆ ಬೀಸಿದರು. ಸದನದಲ್ಲಿ ಈ ಕುರಿತಂತೆ ಕೋಲಾಹಲವೆದ್ದಿತು. ಮಾಫಿಯಾ ಡಾನ್‌ಗಳನ್ನು ಸಾಕಿ ಸಲಹಿದ ಸಮಾಜವಾದಿ ಪಕ್ಷಕ್ಕೆ ಸರಿಯಾಗಿಯೇ ತಪರಾಕಿ ಕೊಟ್ಟ ಯೋಗಿ, ಪ್ರತಿಯೊಬ್ಬ ಗೂಂಡಾನನ್ನು ಹುಡುಹುಡುಕಿ ಕೊಲ್ಲಲಾಗುವುದು ಎಂದಿದ್ದರು. ಆದಷ್ಟು ಬೇಗ ಈ ಸಾವಿಗೆ ಕಾರಣರಾದ ಗೂಂಡಾಗಳನ್ನು ಹಿಡಿಯುವುದು, ಅಗತ್ಯವಿದ್ದರೆ ಮುಗಿಸಿಬಿಡುವುದು ಅತ್ಯವಶ್ಯಕವಾಗಿತ್ತು. ಪೊಲೀಸರು ಚುರುಕಾದರು. ಭಿನ್ನ-ಭಿನ್ನ ತಂಡಗಳನ್ನು ರಚಿಸಿಕೊಂಡು 40 ದಿನಗಳ ಕಾಲ ಈ ಗೂಂಡಾಗಳನ್ನು ಅಟ್ಟಿಸಿಕೊಂಡು ಹೋದರು. ಇತರರನ್ನು ಕೊಲ್ಲುವಾಗ ಮೆರೆದಾಡುತ್ತಿದ್ದ ಅಸದ್ ಮತ್ತವನ ಸಹಚರರು ಪೊಲೀಸರು ಅಟ್ಟಿಸಿಕೊಂಡು ಬಂದಾಗ ನೀರಲ್ಲದ್ದಿದ ಬೆಕ್ಕಿನಂತಾಗಿಬಿಟ್ಟಿದ್ದರು. ಈ ತಂಡದ ಸದಸ್ಯರನೇಕರ ಮನೆಗಳನ್ನು ಬುಲ್ಡೋಜ್ ಮಾಡಿದ ಬಾಬಾ ಗೂಂಡಾಗಳ ಎದೆಯಲ್ಲಿ ಭಯ ಅವತರಿಸುವಂತೆ ಮಾಡಿಬಿಟ್ಟರು. ಈ ವೇಳೆಗಾಗಲೇ ಆತಿಕ್‌ನ ಅನೇಕ ಸೋದರ ಸಂಬಂಧಿಗಳು ಜೈಲು ಸೇರಿಯಾಗಿತ್ತು. ಆತಿಕ್‌ನ ಹೆಂಡತಿ ಮತ್ತು ತಮ್ಮನ ಹೆಂಡತಿಯರು ಉಟ್ಟಬಟ್ಟೆಯಲ್ಲಿ ಊರುಬಿಟ್ಟು ಓಡಿ ಹೋಗಿದ್ದರು. ಒಂದು ಕಾಲದಲ್ಲಿ ಉತ್ತರಪ್ರದೇಶವೇ ತಮ್ಮದೆಂದು ಮೆರೆದಾಡುತ್ತಿದ್ದವರೆಲ್ಲ ಈಗ ಬದುಕಿದೆಯಾ ಬಡಜೀವವೇ ಎಂಬಂತಾಗಿದ್ದರು. ಇಂತಹ ಒಂದು ಹೊತ್ತಲ್ಲಿಯೇ ಪೊಲೀಸರ ಕೈಗೆ ಸಿಕ್ಕುಬಿದ್ದ ಅಸದ್ ಎರ್ರಾಬಿರ್ರಿ ಗುಂಡು ಹಾರಿಸತೊಡಗಿದ. ಪೊಲೀಸರು ಮುಲಾಜು ನೋಡದೇ ಅಸದ್ ಮತ್ತು ಗುಲಾಮ್ ಇಬ್ಬರನ್ನೂ ನಡುರಸ್ತೆಯಲ್ಲಿಯೇ ಹೆಣವಾಗಿಸಿಬಿಟ್ಟರು! ಇತ್ತ ಜೈಲಿನಲ್ಲಿದ್ದ ಆತಿಕ್, ‘ಈ ಕೃತ್ಯದಲ್ಲಿ ಭಾಗಿಯಾದ ಪೊಲೀಸರನ್ನು ನಾನು ಬಿಡುವುದಿಲ್ಲ. ಒಮ್ಮೆ ಜೈಲಿನಿಂದ ಹೊರಬಂದಮೇಲೆ ಗದ್ದಿಜಾತಿಯ ತಾಕತ್ತನ್ನು ತೋರಿಸುತ್ತೇನೆ’ ಎಂದಿದ್ದ. ಗಮನಿಸಬೇಕಾದ ಸಂಗತಿ ಇದು. ಸ್ವತಃ ವೈರ್ನ ಸಂಪಾದಕಿ ಅರ್ಫಾ ಖನ್ನುಂ ಆತಿಕ್ ಅಹ್ಮದ್‌ನನ್ನು ನಡೆಸಿಕೊಳ್ಳುತ್ತಿರುವ ರೀತಿ ಮುಸಲ್ಮಾನರಲ್ಲಿಯೇ ಹಿಂದುಳಿದ ಜಾತಿಯಾದ ಗದ್ದಿ ಜನಾಂಗದವರಿಗೆ ಮಾಡುತ್ತಿರುವ ಅವಮಾನ ಎಂದಿದ್ದಳು. ‘ನಾವೆಲ್ಲ ಒಂದೆ ಜಾತಿ, ಒಂದೆ ಕುಲ’ ಎನ್ನುವ ಮುಸಲ್ಮಾನರು ಇಂತಹ ಸಂದರ್ಭಗಳಲ್ಲಿ ಜಾತಿಯ ಕಾರ್ಡ್ ಬಳಸಲು ಹಿಂದೆ-ಮುಂದೆ ನೋಡುವುದಿಲ್ಲ. ಕೆಲವು ಪತ್ರಕರ್ತರು ಅದೆಷ್ಟು ಲಜ್ಜೆಗೆಟ್ಟವರೆಂದರೆ, ರಾಜ್‌ದೀಪ್ ಸರ್‌ದೇಸಾಯಿ ಲಲ್ಲನ್‌ಟಾಪ್‌ನ ಸಂದರ್ಶನವೊಂದರಲ್ಲಿ ಆತಿಕ್ ಮನೆಯಲ್ಲಿ ತಿಂದ ತಂದೂರಿ ಎಷ್ಟು ಚೆನ್ನಾಗಿತ್ತು ಎಂದು ವರ್ಣಿಸಿದ್ದ. ಮಾಫಿಯಾ ಡಾನ್‌ಗೂ ಒಂದೊಳ್ಳೆ ಮುಖವಿದೆ ಎಂದು ಹೇಳುವ ಪ್ರಯತ್ನ ಅದು. 

ಇಲ್ಲಿಯವರೆಗೂ ಎಲ್ಲವೂ ಸರಿಯೇ. ಆದರೆ ಆತಿಕ್‌ನ ಹತ್ಯೆಯಾದದ್ದು ಮಾತ್ರ ಗಾಬರಿ ಹುಟ್ಟಿಸುವಂಥದ್ದು. ಮಾಧ್ಯಮದ ಎದುರಿಗೆ, ಪೊಲೀಸರ ನಡುವೆಯೇ ಅತ್ಯಾಧುನಿಕ ಶಸ್ತ್ರ ಹಿಡಿದುಬಂದು ಆಕ್ರಮಣ ಮಾಡುತ್ತಾರೆಂದರೆ ಇದರ ಹಿಂದೆ ದೊಡ್ಡದೊಂದು ಪಿತೂರಿ ಇರಲೇಬೇಕು. ಇಷ್ಟಕ್ಕೂ ಭಾರತದಲ್ಲಿ ನಾಯಕತ್ವ ಬದಲಾವಣೆಗೆ ಅನೇಕ ರಾಷ್ಟ್ರಗಳು ಪ್ರಯತ್ನಿಸುತ್ತಿವೆ. ಇದಕ್ಕೆ ಪೂರ್ವಭಾವಿಯಾಗಿ ಅಮೇರಿಕಾ ಎರಿಕ್ ಗಾರ್ಸಿಟಿಯನ್ನು ರಾಯಭಾರಿಯಾಗಿ ಭಾರತಕ್ಕೆ ಕಳಿಸಿತು. ಆತನನ್ನು ಈ ಹುದ್ದೆನೀಡಿ ಕಳಿಸಬೇಕೆಂದು 2021ರ ಮಧ್ಯಭಾಗದಲ್ಲಿಯೇ ನಿಶ್ಚಯಿಸಲಾಗಿತ್ತು. ಆದರೆ ಅಮೇರಿಕಾದ ಸೆನೆಟ್‌ನಲ್ಲಿ ಬಹುಮತವಿರದಿದ್ದುದರಿಂದ ಬೈಡನ್ ತಡೆ ಹಿಡಿದಿದ್ದ. ಬಹುಮತ ಖಾತ್ರಿಯಾದೊಡನೆ ಭಾರತಕ್ಕೆ ಕಳಿಸುವ ನಿಶ್ಚಯ ಮಾಡಿದ. ಈ ಎರಿಕ್ ಲಾಸ್ ಏಂಜಲೀಸ್‌ನ ಮೇಯರ್ ಆಗಿದ್ದವ ಮತ್ತು ಅಲ್ಲಿನ ಬುದ್ಧಿಜೀವಿಗಳ ಕಣ್ಮಣಿ. ಆತನ ಪತ್ನಿಯೊಂದಿಗೆ ಸೇರಿ ಅನೇಕ ಪ್ರತಿಭಟನೆಗಳಲ್ಲಿ ಆತ ಪಾಲ್ಗೊಂಡಿದ್ದಾನೆ. ಸಿಎಎ ವಿರುದ್ಧ ಭಾರತದಲ್ಲಿ ಪ್ರತಿಭಟನೆ ನಡೆಯುವಾಗ ಗಂಡ-ಹೆಂಡತಿ ಇಬ್ಬರೂ ಪ್ರತ್ಯಕ್ಷ-ಪರೋಕ್ಷವಾಗಿ ಅದರಲ್ಲಿ ಭಾಗಿಯಾಗಿದ್ದರು. ಆತನನ್ನು ರಾಯಭಾರಿ ಎಂದು ಘೋಷಿಸಿದೊಡನೆ ಆತ ಹೇಳಿದ್ದೇನು ಗೊತ್ತೇ? ‘ನನ್ನ ಅತ್ಯಂತ ಪ್ರಮುಖವಾದ ಕೆಲಸವೇ ಸಿಎಎ ಬಗೆಯ ಕಾನೂನುಗಳನ್ನು ವಿರೋಧಿಸಿ ಭಾರತದಲ್ಲಿ ಮಾನವ ಹಕ್ಕುಗಳ ಸ್ಥಾಪನೆ ಮಾಡುವುದು. ಯಾರು ಮಾನವ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೋ ಅಂಥವರೊಡನೆ ನೇರವಾಗಿ ಮಾತುಕತೆಯಲ್ಲಿ ತೊಡಗುವುದು’ ಎಂದಿದ್ದ. ಇದರರ್ಥ ನೇರವಾಗಿ ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಮತ್ತು ಮೋದಿ ವಿರೋಧಿಗಳನ್ನೆಲ್ಲ ತನ್ನ ದೂತಾವಾಸದ ಛತ್ರಛಾಯೆಯಲ್ಲಿ ಒಂದುಗೂಡಿಸುವುದು ಅಂತ! ಉಕ್ರೇನ್‌ನಲ್ಲಿ ಅಮೇರಿಕಾ ತನ್ನ ಪ್ರಭಾವ ಬಳಸಿ ಅಲ್ಲಿನ ರಾಷ್ಟ್ರೀಯವಾದಿ ಅಧ್ಯಕ್ಷನನ್ನು ಅಧಿಕಾರದಿಂದ ಕೆಳಗಿಳಿಸಿ ಕೈಗೊಂಬೆಯಾಗಿರುವ ಶತಮೂರ್ಖ ಜೆಲ್ಸೆಂಕಿಯನ್ನು ಕೂರಿಸಿತಲ್ಲ, ಭಾರತದಲ್ಲೂ ಹಾಗೆ ಮಾಡುವ ಯೋಜನೆ ಅದರದ್ದು. ಮೋದಿಯನ್ನು ಕೆಳಗಿಳಿಸಿದ ನಂತರ ಜೆಲ್ಸೆಂಕಿಯಷ್ಟೇ ಮೂರ್ಖನೂ ಮತ್ತು ಕೈಗೊಂಬೆಯೂ ಆಗಬಲ್ಲ ನಾಯಕ ಯಾರಿರಬಹುದು ಹೇಳಿ?

ಅಮೇರಿಕಾ ಭಾರತದಲ್ಲಿ ದೊಡ್ಡ ತಳಮಳವನ್ನು ಸೃಷ್ಟಿಸುವ ಧಾವಂತದಲ್ಲಿದೆ. ಸಿಎಎ ವಿರುದ್ಧದ ಹೋರಾಟ ಅದಕ್ಕೊಂದು ಅಸ್ತ್ರವಾಗಿ ದೊರಕಿತ್ತು. ಸರ್ಕಾರ ಅದನ್ನು ನಿಭಾಯಿಸಿದ ರೀತಿ ಮತ್ತು ಅದನ್ನು ಜಾರಿಗೆ ತರುವಲ್ಲಿ ಅನುಸರಿಸುತ್ತಿರುವ ವಿಳಂಬ ನೀತಿಯಿಂದಾಗಿ ಅಮೇರಿಕಾ ಪತರಗುಟ್ಟಿದೆ. ಹೀಗಾಗಿಯೇ ಅನವಶ್ಯಕವಾಗಿ ರಾಮನವಮಿಯ ಮೆರವಣಿಗೆಯ ಮೇಲೆ ಕಲ್ಲೆಸೆದು ಹಿಂದೂಗಳನ್ನು ಭಡಕಾಯಿಸುವ ಯೋಜನೆ ರೂಪಿಸುತ್ತಿರೋದು. ಪಿಎಫ್ಐ ನಿಷೇಧದ ನಂತರ ಈ ಯೋಜನೆಗಳನ್ನೆಲ್ಲ ನೇರವಾಗಿ ಕಾರ್ಯರೂಪಕ್ಕೆ ತರುವ ಒಂದು ಸಂಸ್ಥೆ ಇಲ್ಲವಾಗಿ ಅಮೇರಿಕಾ ಚಡಪಡಿಸುತ್ತಿದೆ. ಹೀಗಾಗಿಯೇ ಮೂರ್ಖರಂತಿರುವ ಈ ಮಂದಿಯನ್ನು ಭಡಕಾಯಿಸಲು ಭಿನ್ನ-ಭಿನ್ನ ಪ್ರಯತ್ನಗಳನ್ನು ಮಾಡುತ್ತಿರೋದು. ಅದರ ಒಂದು ಭಾಗವೇ ಆತಿಕ್‌ನ ಹತ್ಯೆ! 

ಅದಾಗಲೇ ಓವೈಸಿ, ಸರ್ಕಾರ ಬೇಕಂತಲೇ ಈ ಕೆಲಸವನ್ನು ಮಾಡಿಸಿದೆ ಎಂದು ಹೇಳಿಕೆ ನೀಡಿಬಿಟ್ಟಿದ್ದಾನೆ. ಮುಸಲ್ಮಾನರ ಪರವಾಗಿ ಸದಾ ನಿಲ್ಲುತ್ತಿದ್ದ ಆತಿಕ್‌ನಂಥವನನ್ನು ಪರಿವಾರ ಸಮೇತವಾಗಿಯೇ ಮುಗಿಸುತ್ತಾರೆಂದರೆ ಇನ್ನು ಸಾಮಾನ್ಯ ಮುಸಲ್ಮಾನನ ಕಥೆಯೇನು? ಎಂಬ ಪ್ರಶ್ನೆಯನ್ನು ಹಿಂಸೆ ತುರುಕುವ ಮಸೀದಿಗಳಲ್ಲಿ ಕೇಳಲಾಗುತ್ತದೆ. ಉತ್ತರ ಪ್ರದೇಶದಲ್ಲಿ ಈ ಕೋಮು ಶಾಂತಿಯಿಂದ ಕೂಡಿರಬಹುದೇನೊ. ಆದರೆ ಇತರೆ ರಾಜ್ಯಗಳಲ್ಲಿ ಇದು ತೀವ್ರಸ್ವರೂಪ ಪಡೆದುಕೊಳ್ಳುತ್ತದೆ, 2024ರ ವೇಳೆಗೆ ಸಾಕಪ್ಪ, ಸಾಕು ಎನಿಸುವಷ್ಟರಮಟ್ಟಿಗೆ. ಇದಕ್ಕೆ ಪೂರಕವಾಗಿ ನ್ಯಾಯ ವ್ಯವಸ್ಥೆಯನ್ನೂ ಕೂಡ ಇವರು ಬಳಸಿಕೊಳ್ಳುತ್ತಿದ್ದಾರೆ. ಅದಾನಿಯ ವಿರುದ್ಧ ಅನವಶ್ಯಕವಾಗಿ ಸುಪ್ರೀಂಕೋರ್ಟು ರೂಪಿಸಿರುವ ತಂಡವನ್ನು ನೋಡಿದರೆ ಗೊತ್ತಾಗುತ್ತದೆ. ಇತ್ತೀಚೆಗೆ ನ್ಯಾಯಾಧೀಶರೊಬ್ಬರು ಪ್ರಧಾನಿಯ ವಿರುದ್ಧ ಕ್ರಮ ತೆಗೆದುಕೊಳ್ಳುವ ಶಕ್ತಿ ನಮಗೆ ಬೇಕು ಎಂದು ಕೇಳಿಕೊಂಡಿದ್ದು ಗಮನಿಸಬೇಕಾದ್ದೇ. ಮುಖ್ಯ ನ್ಯಾಯಾಧೀಶರು ‘ಇನ್ನು ಮುಂದೆ ಯಾರಾದರೂ, ಯಾವ ಕ್ಷಣದಲ್ಲಾದರೂ ಮನೆ ಉರುಳಿಸುವ, ಸರ್ಕಾರ ತೊಂದರೆ ಕೊಡುವ ವಿಚಾರದ ಕುರಿತಂತೆ ನೇರವಾಗಿ ನಮ್ಮ ಬಾಗಿಲು ಬಡಿಯಬಹುದು’ ಎಂದು ಹೇಳಿಕೆ ಕೊಟ್ಟಿರುವುದು ಸ್ಪಷ್ಟವಾಗಿ ಈ ಪ್ರತ್ಯೇಕತಾವಾದಿಗಳಿಗೆ ಶಕ್ತಿ ತುಂಬುವ ಪ್ರಕ್ರಿಯೆಯೇ. ಮುಸಲ್ಮಾನರನ್ನೇ ಮುಂದಿಟ್ಟುಕೊಂಡರೆ ಹಿಂದೂಗಳು ಒಟ್ಟಾಗಿ ನರೇಂದ್ರಮೋದಿಗೆ ವೋಟು ಹಾಕುವ ಸಂಭವವಿರುವುದರಿಂದ ಖಾಲಿಸ್ತಾನಿಗಳಿಗೆ ವಿಶೇಷ ಬೆಂಬಲವನ್ನು ಕೊಟ್ಟಿದ್ದು ಅಮೇರಿಕಾ-ಯುರೋಪುಗಳು. ಆದರೆ ಸರ್ಕಾರ ಅದನ್ನು ಸಂಭಾಳಿಸಿದ ರೀತಿ ಮಾತ್ರ ಮೆಚ್ಚಬೇಕಾದ್ದು. ಓಡಿ ಹೋದ ಖಾಲಿಸ್ತಾನೀ ನಾಯಕ ಅಮೃತ್‌ಪಾಲ್‌ಸಿಂಗ್ ತನ್ನ ತಾನು ಜನರ ನಡುವಿನ ಶ್ರೇಷ್ಠ ನಾಯಕ ಎಂದು ಬೊಗಳೆ ಕೊಚ್ಚಿಕೊಳ್ಳುತ್ತಿದ್ದ. ಅವನು ಕಾಣೆಯಾಗಿ ಇಷ್ಟು ದಿನ ಕಳೆದರೂ ಪಂಜಾಬಿನಲ್ಲಿ ಆತನ ಕುರಿತಂತೆ ನಯಾಪೈಸೆ ಚರ್ಚೆಯಿಲ್ಲ ಎಂದಾಗಲೇ ಇವನ ಯೋಗ್ಯತೆ ಅರಿವಾಗಿರಬೇಕು. 

ಆತಿಕ್ ಅಹ್ಮದ್ ತನ್ನ ಬಳಿ ಆಯುಧಗಳಿಗೆ ಬರವಿಲ್ಲವೆಂದೂ ಪಾಕಿಸ್ತಾನ ಡ್ರೋಣ್ ಮೂಲಕ ಪಂಜಾಬ್ ಗಡಿಗೆ ಅದನ್ನು ತಲುಪಿಸುವುದೆಂದೂ, ಕಾಶ್ಮೀರಿಗಳು ಅದನ್ನೇ ಬಳಸುತ್ತಾರೆ ಎಂದೂ ಹೇಳಿಕೆ ಕೊಟ್ಟಿದ್ದ. ಶತಾಯ-ಗತಾಯ ಪಂಜಾಬಿನಲ್ಲಿ ಅಧಿಕಾರ ನಡೆಸಬೇಕೆಂದು ಕೇಜ್ರಿವಾಲ್ ಪಣತೊಟ್ಟಿದ್ದೇಕೆಂದು ಅರ್ಥವಾಯ್ತೇನು? ಇನ್ನು ಕರ್ನಾಟಕದಲ್ಲೂ ಕಾಂಗ್ರೆಸ್ ಅಧಿಕಾರ ಹಿಡಿಯಲು ಹಾತೊರೆಯುತ್ತಿದೆ. ಒಂದೇ ಮಾತಿನಲ್ಲಿ ಹೇಳಬೇಕೆಂದರೆ ಸಿದ್ದರಾಮಯ್ಯನವರ ಐದು ವರ್ಷದ ಸರ್ಕಾರದ ನಂತರ ಭಾಜಪ ಅಧಿಕಾರಕ್ಕೆ ಬರದೇ ಹೋಗಿದ್ದರೆ, ಸಿದ್ದರಾಮಯ್ಯನವರೇ ಮತ್ತೊಮ್ಮೆ ಕುರ್ಚಿಯ ಮೇಲೆ ಕುಳಿತಿದ್ದರೆ, ಪಿಎಫ್ಐ ಇಲ್ಲೂ ಕೆಲವು ಆತಿಕ್ ಅಹ್ಮದ್‌ರನ್ನು ಸೃಷ್ಟಿಸುತ್ತಿತ್ತು! 

ಮತದಾನ ಮಾಡುವ ಮುನ್ನ ಇಡೀ ರಾಷ್ಟ್ರವನ್ನು ಕಣ್ಮುಂದೆ ತಂದುಕೊಳ್ಳಿ.

ಜಗತ್ತು ಗೆಲ್ಲಲು ಪ್ರೇರಣೆ ಕೊಟ್ಟಿದ್ದು ಆ ಬಂಡೆ! 

ಜಗತ್ತು ಗೆಲ್ಲಲು ಪ್ರೇರಣೆ ಕೊಟ್ಟಿದ್ದು ಆ ಬಂಡೆ! 

ಡಿಸೆಂಬರ್ 25. ಅತ್ಯಂತ ಸಾಮಾನ್ಯ ಸಂತನೊಬ್ಬ ಈ ದೇಶ ಎದುರಿಸುತ್ತಿರುವ ಕಷ್ಟ-ನಷ್ಟಗಳನ್ನು ನೋಡಿ, ನೊಂದು, ಬಸವಳಿದು ತನ್ನ ತಾನು ರಾಷ್ಟ್ರದ ಒಳಿತಿಗೆ ಸಮರ್ಪಿಸಬೇಕೆಂದು ನಿಶ್ಚಯಿಸಿಕೊಂಡ. ಇಡಿಯ ರಾಷ್ಟ್ರವನ್ನು ಪರಿವ್ರಾಜಕನಾಗಿ ಸುತ್ತಾಡಿದ ಆತ ಕೊನೆಗೊಮ್ಮೆ ಕನ್ಯಾಕುಮಾರಿಯ ಬಂಡೆಯನ್ನು ನೋಡಿ ಸಮುದ್ರವನ್ನು ಸೀಳಿಕೊಂಡು ಬಂಡೆಯತ್ತ ಧಾವಿಸಿದ. ಸುತ್ತಲೂ ನಿಂತು ನೋಡುತ್ತಿದ್ದ ಮಂದಿಗೆ ಆತ ಹುಚ್ಚನೆನಿಸಿರಲಿಕ್ಕೆ ಸಾಕು. ಇನ್ನೂ ಕೆಲವರಿಗೆ ಆತನ ಸಾಹಸ ಮೆಚ್ಚುಗೆಯಾಗಿರಲೂ ಸಾಕು. ಸನ್ಯಾಸಿಗೆ ಮಾತ್ರ ಇವ್ಯಾವುದರ ಪರಿವೆಯೂ ಇರಲಿಲ್ಲ. ಆತನ ಹೃದಯವನ್ನೆಲ್ಲ ಆವರಿಸಿಕೊಂಡಿದ್ದು ತಾಯಿ ಭಾರತಿಯ ಕಷ್ಟಗಳು ಮಾತ್ರ. ಅದಕ್ಕೆ ಪರಿಹಾರವನ್ನು ಅರಸುವ ಧಾವಂತದಲ್ಲಿ ಆತ ತನ್ನದೆಲ್ಲವನ್ನೂ ಅರ್ಪಿಸಲು ಸಿದ್ಧವಾಗಿದ್ದಾನೆ. ತನ್ನ ಪ್ರಾಣ ಸಮರ್ಪಣೆಯಿಂದ ರಾಷ್ಟ್ರಕ್ಕೆ ಒಳಿತಾಗುವುದಾದರೆ ಅದಕ್ಕೂ ಕೂಡ. ಹೌದು, ನೀವು ಸರಿಯಾಗಿಯೇ ಗ್ರಹಿಸಿದಿರಿ. ಆ ಸನ್ಯಾಸಿ ಸ್ವಾಮಿ ವಿವೇಕಾನಂದರೇ.

ಅಂದು ಆ ಬಂಡೆಗಲ್ಲಿನ ಮೇಲೆ ಕುಳಿತು ಧ್ಯಾನಸ್ಥನಾದ ಆತ ತನಗರಿವಿಲ್ಲದಂತೆ ಕಣ್ಣೀರು ಸುರಿಸುತ್ತಲೇ ಹೋದ. ಭಾರತದ ಭವ್ಯ ಪರಂಪರೆಯನ್ನು ಕಣ್ಮುಂದೆ ತಂದುಕೊಂಡ. ಬ್ರಿಟೀಷರ ದಬ್ಬಾಳಿಕೆಯನ್ನು ನೆನೆಸಿಕೊಂಡ. ಒಂದು ಕಾಲದ ಶ್ರೇಷ್ಠ ಭಾರತ ಹೀಗೇಕಾಯ್ತು ಎಂದು ಯೋಚಿಸುತ್ತಾ ಮಮ್ಮಲ ಮರುಗಿದ. ಹಾಗೆ ಒಂದಲ್ಲ, ಎರಡಲ್ಲ, ಮೂರು ದಿನಗಳು ಕಳೆದೇ ಹೋದವು. ಕೊನೆಯ ದಿನ ಆತನಿಗೊಂದು ದರ್ಶನವಾಯ್ತು. ದರ್ಶನಗಳ ನಾಡಲ್ಲವೇ ಇದು. ಗಾಯತ್ರಿ ಮಂತ್ರದ ದರ್ಶನವನ್ನು ಪಡೆದುಕೊಂಡ ವಿಶ್ವಾಮಿತ್ರರಿಂದ ಹಿಡಿದು ನಮ್ಮ ಕಾಲದ ಋಷಿ ವಿವೇಕಾನಂದರವರೆಗೆ ಎಷ್ಟೊಂದು ಮಂದಿ ದರ್ಶನಕಾರರು! ಆದರೆ ಈ ಬಾರಿಯ ದರ್ಶನ ಹಿಂದಿನ ಎಲ್ಲವುಗಳಿಗಿಂತಲೂ ಭಿನ್ನ. ತಾಯಿ ಭಾರತಿ ವಿವೇಕಾನಂದರ ಮುಂದೆ ವೈಭವದಿಂದ ಕಂಗೊಳಿಸಿದಳು. ಕಾಶ್ಮೀರದ ರೂಪದಲ್ಲಿ ಆಕೆಯ ಕಿರೀಟ, ಎರಡು ವೈಭವದ ಬಾಹುಗಳು, ವಿಂಧ್ಯವೆಂಬ ಸೊಂಟ, ಕನ್ಯಾಕುಮಾರಿಯಲ್ಲಿ ಆಕೆಯ ಪಾದಯುಗ್ಮ ಮತ್ತು ಆಕೆಯ ಚರಣ ಪೂಜೆಗೆ ಸಿದ್ಧನಾಗಿ ಕುಳಿತಿರುವ ಈ ಸನ್ಯಾಸಿ. ಇವಿಷ್ಟೂ ಆ ದರ್ಶನದ ಸಾರಾಂಶ. ತನ್ನಿಂದ ಬೃಹತ್ತಾದ ಕೆಲಸವೊಂದಾಗಲಿಕ್ಕಿದೆ ಎಂದು ಅಂದೇ ಆತನಿಗೆ ಅರಿವಾಯ್ತು. ಗುರುದೇವ ರಾಮಕೃಷ್ಣರು ಸಮುದ್ರದ ಮೇಲೆ ನಡೆದುಕೊಂಡು ಬಂದು ಪಶ್ಚಿಮದಿಂದ ಕೈಬೀಸಿ ಕರೆಯುತ್ತಿರುವುದೂ ಕಂಡಿತು. ಮುಂದೇನು? ಅಂದುಕೊಂಡಿದ್ದು ಇನ್ನು ಮಾಡಬೇಕಷ್ಟೇ. ಈಜಿಕೊಂಡು ಹೋದ ಈ ಸನ್ಯಾಸಿಯನ್ನು ಕರೆತರಲೆಂದು ಊರಿನ ದೋಣಿ ಬಂತು. ಮೂರು ದಿನಗಳ ಕಾಲ ಮರಳಿ ಬರದಿದ್ದ ಈತನ ಯೋಗಕ್ಷೇಮ ವಿಚಾರಿಸಲು ಊರಿನ ಹಿರಿಯರು ಬಂದಿದ್ದರು. ತಮ್ಮೊಂದಿಗೆ ಮತ್ತೆ ಊರಿಗೆ ಕರೆದೊಯ್ದರು. ಆನಂತರವೇ ಸ್ವಾಮಿ ವಿವೇಕಾನಂದರು ಜಗತ್ತಿನ ವೇದಿಕೆಯ ಮೇಲೆ ದಿಗ್ವಿಜಯ ಸಾಧಿಸಲು ಸಾಧ್ಯವಾಗಿದ್ದು. ಇಂದಿಗೂ ಅದಕ್ಕೆ ಸಮನಾದ ಮತ್ತೊಂದು ಸಾಧನೆ ಇಲ್ಲ. ಗುಲಾಮೀ ರಾಷ್ಟ್ರವೊಂದರ ಪ್ರತಿನಿಧಿ ಜಗತ್ತಿನ ಪರಮ ಸ್ವಾತಂತ್ರ್ಯಪ್ರಿಯ ಅಮೇರಿಕಾದ ವೇದಿಕೆಯ ಮೇಲೆ ನಿಂತು ಹಿಂದೂಧರ್ಮವನ್ನು ಹೀಗಳೆಯುತ್ತಿದ್ದವರ ಮುಂದೆ ಎದೆಯೆತ್ತಿ ತನ್ನ ಧರ್ಮವನ್ನು ಸಮರ್ಥಿಸಿಕೊಳ್ಳುವ ಕಾರ್ಯ ಮಾಡಿದನಲ್ಲದೇ ಜಗತ್ತೆಲ್ಲ ಅದಕ್ಕೆ ತಲೆಬಾಗುವಂತೆ ಮಾಡಿದ್ದಿದೆಯಲ್ಲ ಅದು ಸಾಮಾನ್ಯವಾದ ಸಂಗತಿಯಲ್ಲ. ಗುಲಾಮೀ ಭಾವವನ್ನು ಆವಾಹಿಸಿಕೊಂಡಿದ್ದ ಭಾರತೀಯ ಸಮಾಜಕ್ಕೆ ಅದೊಂದು ಶಕ್ತಿಮದ್ದಾಯ್ತು. ಹೊಸದೊಂದು ರಾಷ್ಟ್ರೀಯತೆಯ ಉದಯವಾಯ್ತು. ಜಗತ್ತು ಭಾರತವನ್ನು ನೋಡುವ ದೃಷ್ಟಿಕೋನದ ಬದಲಾವಣೆಯ ಮೊದಲ ಪರ್ವ ಆರಂಭವಾಗಿದ್ದು ಅಲ್ಲಿಂದಲೇ. ಆದರೆ ಇಷ್ಟೆಲ್ಲ ಸಾಹಸಕ್ಕೆ ಕಾರಣವಾಗಿ ವಿವೇಕಾನಂದರಿಗೆ ಶಕ್ತಿಯ ಗಣಿಯನ್ನೇ ಉಡುಗೊರೆಯಾಗಿ ಕೊಟ್ಟಿದ್ದು ಡಿಸೆಂಬರ್ 25ರ ಸಮುದ್ರವನ್ನು ಸೀಳಿದ ಆ ಸಾಹಸವೇ. ಹೀಗಾಗಿಯೇ ವಿವೇಕಾನಂದರ ಆರಾಧಕರ ಪಾಲಿಗೆಲ್ಲ ಈ ದಿನ ಬಲುವಿಶಿಷ್ಟವಾದ್ದು.

ಜಗತ್ತಿನ ಬಹುತೇಕ ಮತಗಳು ಅನ್ಯರಾಷ್ಟ್ರಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಸಾಕಷ್ಟು ಶ್ರಮಿಸಿವೆ. ಕತ್ತಿ-ಬಂದೂಕುಗಳನ್ನು ಹಿಡಿದು ಸಾವಿನ ಹೆದರಿಕೆ ತೋರಿ ತಮ್ಮ ಪುಸ್ತಕವನ್ನು ಒಪ್ಪಿಕೊಳ್ಳುವ ಒತ್ತಾಯ ಹೇರಿದ ಮಂದಿ ಇಂದು ಮೆರೆದಾಡುತ್ತಿದ್ದಾರೆ. ಆದರೆ ನಾವು ಮಾತ್ರ ಹಾಗಲ್ಲ. ಕೇವಲ ಜ್ಞಾನ ಪರಂಪರೆಯೊಂದರಿಂದಲೇ ಜಗತ್ತಿನ ಮೂಲೆ-ಮೂಲೆಯನ್ನೂ ತಮ್ಮ ತೆಕ್ಕೆಗೆ ಹಾಕಿಕೊಂಡವರು. ಕತ್ತಿ ಹಿಡಿದು ಯಾರ ಮೇಲೂ ಏರಿ ಹೋದವರಲ್ಲ. ಹೀಗಾಗಿ ಭಯ ತೋರಿಸಿ ನಮ್ಮ ಸಂಸ್ಕೃತಿಯನ್ನು ಹೇರುವ ಅಗತ್ಯವೂ ನಮಗಿರಲಿಲ್ಲ. ದಾರಾ ಶಿಕೊ ಔರಂಗಜೇಬನ ಸಹೋದರ. ಉಪನಿಷತ್ತುಗಳನ್ನು ಓದಿದ ಆತ ಭಾರತೀಯ ಸಂಸ್ಕೃತಿಗೆ ತನ್ನ ತಾನು ಸಮರ್ಪಿಸಿಕೊಂಡೇಬಿಟ್ಟ. ಅದಕ್ಕೆ ಪ್ರತಿಫಲವಾಗಿಯೇ ಔರಂಗಜೇಬನ ಕೈಲಿ ಸಾವನ್ನೂ ಕಂಡ. ಸಾಕ್ರಟಿಸ್, ಅರಿಸ್ಟಾಟಲ್‌ನಿಂದ ಹಿಡಿದು ಡೆವಿಡ್ ಫ್ರಾಲಿ, ಮಿಷೆಲ್ ಡ್ಯಾನಿನೊವರೆಗೆ ಅಸಂಖ್ಯ ಮಂದಿ ಭಾರತೀಯ ಪರಂಪರೆಯನ್ನು ಅರಿತು ಗೌರವ ಬೆಳೆಸಿಕೊಂಡಿರುವುದು ಇದರ ಜ್ಞಾನಮಾರ್ಗದ ಕಾರಣದಿಂದಾಗಿ. ನಾವು ದಾರಿಯೇ ತಪ್ಪಿಲ್ಲವೆಂದೇನೂ ಅಲ್ಲ. ಉಪನಿಷತ್ತುಗಳ ಸಂದೇಶದಿಂದ ಆಗಾಗ ದೂರ ಸರಿಯುತ್ತಿರುತ್ತೇವೆ. ಆದರೆ ಹೀಗೆ ಪಥವಿಮುಖರಾದಾಗಲೆಲ್ಲ ಮತ್ತೆ ನಮ್ಮನ್ನು ಸರಿದಾರಿಗೆ ತರುವ ಪ್ರಯತ್ನಕ್ಕೆಂದೇ ಅನೇಕ ಮಹಾನುಭಾವರು ಅವತರಿಸಿದ್ದಾರೆ. ರಾಮ, ಕೃಷ್ಣರಿರಲಿ, ಬುದ್ಧ, ಮಧ್ವ, ಶಂಕರ, ರಾಮಾನುಜರಿರಲಿ ಅಥವಾ ನಮ್ಮ ಕಾಲದ ರಾಮಕೃಷ್ಣರೇ ಇರಲಿ ಇವರೆಲ್ಲರೂ ಇಂತಹ ಹಂತಗಳಲ್ಲಿ ಬಂದು ಮತ್ತೆ ಭಾರತವೆಂಬ ಉಗಿಬಂಡಿಯನ್ನು ಹಳಿಗೆ ತಂದು ನಿಲ್ಲಿಸಿದವರು. ಇದರಿಂದಾಗಿಯೇ ಉಪನಿಷತ್ತುಗಳು ಅವತೀರ್ಣಗೊಂಡು ಸಹಸ್ರಾರು ವರ್ಷಗಳು ಕಳೆದರೂ ಭಾರತದ ಅಂತಃಸತ್ವ ಮಾತ್ರ ಬದಲಾಗಲೇ ಇಲ್ಲ. ಇಷ್ಟಕ್ಕೂ ಭಾರತದಲ್ಲಿ ಸಂತರಾಗೋದು, ಋಷಿಯಾಗೋದು ಸತ್ತಮೇಲೆ ಪವಾಡಗಳು ಎಷ್ಟು ಮಾಡಿದರು ಎಂಬ ಆಧಾರದ ಮೇಲಲ್ಲ. ಬದುಕಿರುವಾಗ ಅವರೆಷ್ಟು ತ್ಯಾಗ ಮಾಡಿದರು ಮತ್ತು ಎಷ್ಟು ಪ್ರೇಮವನ್ನು ಜಗತ್ತಿಗೆ ಹರಿಸಿದರು ಎಂಬ ಆಧಾರದ ಮೇಲೆ. ಆದ್ದರಿಂದ ಭಾರತದಲ್ಲಿ ಋಷಿತ್ವ ಎಂಬುವುದು ಹೃದಯ ನೀಡುವ ಗೌರವವೇ ಹೊರತು, ಇತರ ಮತಗಳಂತೆ ಆಡಳಿತದಲ್ಲಿ ಕುಳಿತವರು ಕೊಡುವಂಥದ್ದಲ್ಲ. ಸ್ವತಃ ವಿವೇಕಾನಂದರು ರಾಮಕೃಷ್ಣರ ಶಿಷ್ಯರಾಗಿ ಜಗತ್ತಿಗೆ ಉಪನಿಷತ್ತುಗಳ ಸಂದೇಶವನ್ನು ಮತ್ತೊಮ್ಮೆ ಒಯ್ಯುವಾಗಲೂ ಅವರು ತ್ಯಾಗ ಮತ್ತು ಪ್ರೇಮದ ಮೂರ್ತಿಯಾಗಿಯೇ ನಡೆದವರು. ತಮ್ಮ ಬದುಕಿಗೆ ಸಾಕಾಗುವಂತಹ ಎರಡು ಪ್ರಮುಖ ನಿರ್ದೇಶನಗಳನ್ನು ಅವರು ಗುರುಗಳಿಂದ ಪಡೆದರು. ಒಂದು ನೇರವಾಗಿ ಮತ್ತೊಂದು ಪರೋಕ್ಷವಾಗಿ. ಒಮ್ಮೆ ರಾಮಕೃಷ್ಣರ ಕೊಠಡಿಯಲ್ಲಿ ಧಾರ್ಮಿಕ ಕೃತಿಯೊಂದರ ಅಧ್ಯಯನ ನಡೆಯುತ್ತಿತ್ತು. ಅಲ್ಲಿ ಜೀವದಯೆ ಎನ್ನುವ ಉಲ್ಲೇಖ ಬಂತು. ತಕ್ಷಣವೇ ಶ್ರೀರಾಮಕೃಷ್ಣರು ಜೀವದಯೆ ಎನ್ನುವುದು ಸರಿಯಲ್ಲ. ದಯೆ ತೋರಿಸಲು ನಾವಾರು? ಭಗವಂತನೊಬ್ಬನೇ ದಯೆ ತೋರಿಸಬಲ್ಲ. ನಾವು ಜೀವಸೇವೆ ಮಾಡಲಷ್ಟೇ ಯೋಗ್ಯರು ಎಂದುಬಿಟ್ಟರು. ಆ ಹೊತ್ತಲ್ಲಿ ಕೊಠಡಿಯಲ್ಲಿ ಸಾಕಷ್ಟು ಜನರಿದ್ದರೂ ಈ ಸಂದೇಶವನ್ನು ಸ್ವೀಕಾರ ಮಾಡಿದ್ದು ಮಾತ್ರ ಸ್ವಾಮಿ ವಿವೇಕಾನಂದರೇ. ಅಲ್ಲಿಂದ ಹೊರ ಬಂದೊಡನೆ ವಿವೇಕಾನಂದರು ಉದ್ಗರಿಸಿದ್ದರು ‘ನನಗಿಂದು ಶ್ರೇಷ್ಠ ಮಾರ್ಗದರ್ಶನ ದೊರೆತಿದೆ. ಈ ಬದುಕನ್ನು ಜೀವಸೇವೆಯಲ್ಲಿ ಸವೆಸಿಬಿಡುತ್ತೇನೆ’ ಅಂತ. ಅವರಿಗೆ ಸಿಕ್ಕ ಪರೋಕ್ಷ ಸಂದೇಶವನ್ನು ಜೀವನದ ಉದ್ದೇಶವಾಗಿ ರೂಪಿಸಿಕೊಂಡುಬಿಟ್ಟಿದ್ದರು. ಇಂಥದ್ದೇ ಮತ್ತೊಂದು ಘಟನೆ ರಾಮಕೃಷ್ಣರ ಲೀಲಾಂತ್ಯದ ಕಾಲದಲ್ಲಿ ನಡೆಯಿತು. ಮರಣಶಯ್ಯೆಯಲ್ಲಿದ್ದ ರಾಮಕೃಷ್ಣರು ನರೇನ್‌ನನ್ನು ಬಳಿಕರೆದು ಎಲ್ಲರಿಗೂ ತಿಳಿಯುವಂತೆ ನರೇಂದ್ರ ಜಗತ್ತಿಗೆ ಶಿಕ್ಷಣ ಕೊಡುತ್ತಾನೆ ಎಂದು ಹೇಳಿದರಲ್ಲದೇ ಅದನ್ನು ಬರೆದರೂ ಕೂಡ. ಅಂದರೆ ಅವತಾರ ಪುರುಷನೊಬ್ಬ ನರೇಂದ್ರ ಮುಂದೇನು ಮಾಡಬೇಕು ಎಂಬುದನ್ನು ಸ್ಪಷ್ಟವಾಗಿ ಸೂಚಿಸಿದ್ದಲ್ಲದೇ ಕಳೆದು ಹೋಗುತ್ತಿರುವ ಭಾರತದ ಭಾಗ್ಯವನ್ನು ಪುನರ್ ರೂಪಿಸುವ ಹೊಣೆಯನ್ನು ಹೆಗಲಿಗೇರಿಸಿದರು. ಸ್ವಾಮಿ ವಿವೇಕಾನಂದರು ಗುರುವಿನ ಈ ವಾಕ್ಯ ಸುಳ್ಳಾಗಲು ಬಿಡಲಿಲ್ಲ. ಗುರುಗಳು ಅದಕ್ಕೆ ಪೂರಕವಾಗಿಯೇ ಶಿಷ್ಯನ ಅಂತರಂಗದಲ್ಲಿ ಇಚ್ಛೆ ಜಾಗೃತಗೊಳಿಸಿದರು.

ವಿವೇಕಾನಂದರಂಥವರ ಇಚ್ಛಾಶಕ್ತಿ ಸುಖಾಸುಮ್ಮನೆ ಕಳೆದುಹೋಗುವಂಥದ್ದಲ್ಲ. ಒಂದೊಮ್ಮೆ ರಾಮಕೃಷ್ಣರೇ ಹೇಳಿದ್ದರು, ‘ನನ್ನೊಂದಿಗೆ ಬಂದಿದ್ದಾನೆ ಎಂಬ ಕಾರಣಕ್ಕಾಗಿಯೇ ನರೇಂದ್ರನ ಪ್ರಭೆ ಇಷ್ಟು ಮಸುಕಾಗಿದೆ. ಪ್ರತ್ಯೇಕವಾಗಿ ಬಂದಿದ್ದರೆ ಒಂದು ಮತವನ್ನೇ ಸ್ಥಾಪಿಸಿಬಿಡಬಲ್ಲಷ್ಟು ಸಾಮರ್ಥ್ಯ ಅವನದ್ದು’ ಎಂದು! ವಿವೇಕಾನಂದರ ಒಟ್ಟಾರೆ ಬದುಕು ಎಲ್ಲ ಮತಗಳ ಸಮನ್ವಯಕ್ಕೆ ಮೀಸಲಾಗಿದ್ದು. ಜಗತ್ತಿನ ವೇದಿಕೆಯ ಮೇಲೆ ಭಾರತವನ್ನು ಸಮರ್ಥಿಸಿಕೊಳ್ಳುವಾಗ ಅವರಿಗೆ ಎಷ್ಟು ಆನಂದವಿತ್ತೋ ಹಿಂದೂಧರ್ಮದ ಸಮಸ್ಯೆಗಳನ್ನು ಅವಲೋಕಿಸುವಾಗ ಅಷ್ಟೇ ದುಃಖವಾಗುತ್ತಿತ್ತು. ಬೆಂಗಳೂರಿನಲ್ಲಿ ಕೇರಳದ ಡಾ. ಪಲ್ಪು ಅವರನ್ನು ಭೇಟಿ ಮಾಡಿದಾಗ ಅವರು ‘ನೀವೆಲ್ಲ ಬ್ರಾಹ್ಮಣರ ಹಿಂದೆ ಅಂಗಲಾಚಿಕೊಂಡು ಹೋಗುವುದೇಕೆ? ನಿಮ್ಮಲ್ಲೇ ಉನ್ನತಮಟ್ಟದ ಯೋಗ್ಯವ್ಯಕ್ತಿಯೊಬ್ಬನನ್ನು ನಾಯಕನನ್ನಾಗಿ ಮಾಡಿಕೊಂಡು ಎಲ್ಲರೂ ಅನುಸರಿಸಿ. ಆಗ ನಿಮ್ಮ ಸಮಸ್ಯೆಗಳು ಪರಿಹಾರಗೊಳ್ಳುವುವು’ ಎಂದಿದ್ದರು. ಈ ಒಂದು ಮಾತು ಪಲ್ಪು ಅವರ ಬದುಕನ್ನಷ್ಟೇ ಅಲ್ಲ, ಅವರ ಇಡೀ ಸಮುದಾಯದ ಬದುಕಿಗೆ ದಿಕ್ಸೂಚಿಯಾಯ್ತು. ಸ್ವಾಮೀಜಿಯವರ ಮಾತುಗಳನ್ನು ತೀವ್ರವಾಗಿ ಮನಸ್ಸಿನ ಮೇಲೆ ಆವಾಹಿಸಿಕೊಂಡ ಡಾ. ಪಲ್ಪು ತಮ್ಮ ಸಮಾಜದ ಉನ್ನತ ವ್ಯಕ್ತಿಯ ಹುಡುಕಾಟಕ್ಕೆ ಸಜ್ಜಾದರು. ಆಗಲೇ ಅವರಿಗೆ ನಾರಾಯಣ ಗುರುಗಳ ಪರಿಚಯವಾಗಿದ್ದು. ಮುಂದೆ ಶ್ರೀ ನಾರಾಯಣ ಗುರುಗಳು ನಾಡಿಗೆ ಬೆಳಕಾಗಿ ನಿಂದ ರೀತಿ ಎಂಥದ್ದೆಂಬುದನ್ನು ಪ್ರತ್ಯೇಕವಾಗಿ ವಿವರಿಸಬೇಕಿಲ್ಲ.

ಹಾಗಂತ ಅವರು ಬ್ರಾಹ್ಮಣ ವಿರೋಧಿ ಎಂದು ನೀವು ಭಾವಿಸಿಬಿಟ್ಟರೆ ನೀವು ಮೂರ್ಖರಾಗಿಬಿಡುವಿರಿ. ಚೆನ್ನೈನಲ್ಲಿ ಮಿಥ್ಯಾಚರಗಳನ್ನು ಬಿಟ್ಟಿದ್ದೇನೆ ಎಂದು ಹೇಳಿಕೊಂಡ ಬ್ರಾಹ್ಮಣನೊಬ್ಬನನ್ನು ಅವರು ಝಾಡಿಸಿದ ರೀತಿ ಕಂಡರೆ ನೀವು ಗಾಬರಿಯಾಗಿಬಿಡುತ್ತೀರಿ. ‘ಉಪನಿಷತ್ತುಗಳನ್ನೇ ಸೃಜಿಸಿದ ಋಷಿಗಳಿಗೆ ಈ ಆಚರಣೆಗಳಿಗೆಲ್ಲ ಸಮಯವಿತ್ತು. ನಿಮಗೆ ಇಲ್ಲ ಎಂದು ಹೇಳಲು ನಾಚಿಕೆಯಾಗುವುದಿಲ್ಲವೇ?’ ಎಂದು ಬಾಯ್ತುಂಬ ಉಗುಳಿದ್ದರು. ಆಗಲೇ ಹೇಳಲಿಲ್ಲವೇ? ಅಪಾರವಾದ ಗೌರವ ಇಟ್ಟುಕೊಂಡೇ ಅವರ ನ್ಯೂನತೆಗಳನ್ನು ತಿದ್ದಬಲ್ಲ ಸಾಮರ್ಥ್ಯ ಇದ್ದವರು ಸ್ವಾಮಿ ವಿವೇಕಾನಂದರು. 

ಹಾಗಂತ ಅವರ ಈ ತೀವ್ರ ವಿಚಾರಧಾರೆ ಸಾಮಾನ್ಯ ಜನರಿಗಾಗಿ ಮಾತ್ರ ಎಂದೇನೂ ಅಲ್ಲ. ಅನೇಕ ದಿವಾನರುಗಳು, ಮಹಾರಾಜರುಗಳು ಇವರ ಪ್ರಭಾವಲಯದ ಭಾಗವಾಗಿದ್ದರು. ಮೈಸೂರಿನ ಮಹಾರಾಜರಂತೂ ವಿವೇಕಾನಂದರ ಮಾತುಗಳಿಂದ ಅದೆಷ್ಟು ಪ್ರಭಾವಿತರಾಗಿದ್ದರೆಂದರೆ ‘ನಿಮಗಾಗಿ ಏನು ಮಾಡಲಿ?’ ಎಂದು ಪ್ರಶ್ನಿಸಿದ್ದರು. ಈ ಪ್ರಶ್ನೆಗೆ ಸುದೀರ್ಘ ಉತ್ತರ ನೀಡುತ್ತಾ, ‘ನಮ್ಮ ಭರತಭೂಮಿಯು ಅನಾದಿಯಿಂದ ಪಡೆದುಕೊಂಡು ಬಂದ ಆಸ್ತಿ ಎಂದರೆ ಉನ್ನತ ತಾತ್ವಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳು ಮಾತ್ರ. ಈಗ ಅದಕ್ಕೆ ಆಧುನಿಕ ವಿಜ್ಞಾನದ ಜೋಡಣೆಯಾಗಬೇಕು. ಈಗ ಭಾರತದಲ್ಲಿ ಅಡಿಯಿಂದ ಮುಡಿಯವರೆಗೆ ರಚನಾತ್ಮಕ ಬದಲಾವಣೆ ತರಬೇಕಾಗಿದೆ’ ಎಂದರು. ವಿಕಾಸದ ಹಾದಿಯಲ್ಲಿ ಸದಾ ಮುಂಚೂಣಿಯಲ್ಲಿದ್ದ ಮಹಾರಾಜರಿಗೆ ಈ ಮಾತು ವೇದವಾಕ್ಯವೇ ಆಯ್ತು. ಬಹುಶಃ ಕರ್ನಾಟಕದ ವಿಕಾಸಕ್ಕೆ ಮೂಲಪ್ರೇರಣೆ ಅಲ್ಲಿಂದಲೇ ದೊರೆತದ್ದು ಎನಿಸುತ್ತದೆ. ವಿಜ್ಞಾನದ ಮೇಲಿನ ಮಹಾರಾಜರ ಆಸಕ್ತಿ ಅಲ್ಲಿಂದಾಚೆಗೆ ನೂರ್ಮಡಿಯಾಗಿರಲು ಸಾಕು. ಮುಂದೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ಗೆ ಜಾಗ ಹುಡುಕುವಾಗ ಜಮ್ಶೆಡ್‌‌ಜಿ ಟಾಟಾ ಇಲ್ಲವೆನ್ನಲಾಗದಷ್ಟು ಜಾಗವನ್ನು, ಸಹಕಾರವನ್ನು ಮಹಾರಾಜರು ಕೊಡುವುದರ ಹಿಂದೆ ಈ ಪ್ರೇರಣೆ ನಿಸ್ಸಂಶಯವಾಗಿಯೂ ಇದೆ! 

ಇವಿಷ್ಟನ್ನೂ ಮತ್ತೆ ಏಕೆ ನೆನಪಿಸಿಕೊಳ್ಳಬೇಕಾಯ್ತೆಂದರೆ ಹತಾಷವಾಗುತ್ತಿದ್ದೇವೆ ಎನಿಸಿದಾಗಲೆಲ್ಲ, ಯುದ್ಧವನ್ನು ಕಳೆದುಕೊಂಡೇಬಿಡುತ್ತೇವೆ ಎಂದೆನಿಸಿದಾಗಲೆಲ್ಲ ಒಮ್ಮೆ ವಿವೇಕಾನಂದರಿಗೆ ನಮ್ಮ ನಾವು ತೆರೆದುಕೊಳ್ಳಬೇಕು. ಮೇಲ್ನೋಟಕ್ಕೆ ಅವರು ಹತ್ತೊಂಭತ್ತನೇ ಶತಮಾನದ ಕೊನೆಯ ಭಾಗದಲ್ಲಿ ಜೀವಿಸಿದ್ದ ಒಬ್ಬ ವ್ಯಕ್ತಿ ಮಾತ್ರ. ಆದರೆ ಅವರ ಬದುಕನ್ನು ಸೂಕ್ಷ್ಮವಾಗಿ ಗಮನಿಸಿದರೆ, ಮಾತುಗಳನ್ನು ಆಲಿಸಿದರೆ ಮುಂದಿನ ಹತ್ತೊಂಭತ್ತು ಶತಮಾನಗಳವರೆಗೆ ಅವರು ಜೀವಿಸಿಯೇ ಇರುತ್ತಾರೆ. ಡಿಸೆಂಬರ್ 25 ಬಂದಾಗಲೆಲ್ಲ ಒಮ್ಮೆ ಅವರ ಸಂಕಲ್ಪಶಕ್ತಿಯ ಸಾಮರ್ಥ್ಯ ಕಣ್ಮುಂದೆ ಹಾದುಹೋಗಿಬಿಡುತ್ತದೆ. ಅವರ ಮಾರ್ಗದಲ್ಲಿ ಹೆಜ್ಜೆ ಹಾಕುವ ತರುಣರು ಹೆಚ್ಚಾದಷ್ಟು ನಮ್ಮ ಶಕ್ತಿ ವೃದ್ಧಿಯಾಗುತ್ತದೆ. 

ಸುಳ್ಳು ಹೇಳಿಯಾದರೂ ದ್ವೇಷ ಹಬ್ಬಿಸುವ ಧಾವಂತ!

ಸುಳ್ಳು ಹೇಳಿಯಾದರೂ ದ್ವೇಷ ಹಬ್ಬಿಸುವ ಧಾವಂತ!

ಕೆಲವು ದಿನಗಳ ಹಿಂದೆ ವಾಟ್ಸಪ್ ನಲ್ಲಿ ಬಂದ ಸಂಘದ ಎರಡನೇ ಸರಸಂಘ ಚಾಲಕ ಗೊಳ್ವಲ್ಕರ್‌ರ ಕುರಿತಂತಹ ಒಂದು ಹೇಳಿಕೆಯನ್ನು ಸಂತರೊಬ್ಬರು ಕಳಿಸಿ ಇದು ಸತ್ಯವೇ ಎಂದು ಕೇಳಿದ್ದರು. ಬ್ರಾಹ್ಮಣರನ್ನು ಹೊಗಳುತ್ತಾ ಇತರೆ ಜಾತಿಯವರನ್ನು ಅತ್ಯಂತ ತುಚ್ಛವಾಗಿ ಕಾಣುವಂತಹ ಹೇಳಿಕೆ ಅದು. ಮೇಲ್ನೋಟಕ್ಕೆ ಗೊಳ್ವಲ್ಕರ್‌ರು ಹಾಗೆ ಹೇಳುವುದು ಸಾಧ್ಯವೇ ಇಲ್ಲವೆಂದೆನಿಸಿದರೂ ಅವರ ಚಿಂತನಗಂಗಾ ಪುಸ್ತಕವನ್ನು ಜಾಲಾಡಿ ನೋಡಿದಾಗಲೂ ದೂರ-ದೂರಕ್ಕೂ ಇಂತಹ ಹೇಳಿಕೆಗಳು ಕಂಡು ಬರಲಿಲ್ಲ. ದೇಶ ಗುರೂಜಿ ಎಂದೇ ಗೌರವಿಸಿದ ಗೊಳ್ವಲ್ಕರ್‌ರು ಬದುಕಿದ ರೀತಿ-ನೀತಿಯನ್ನು ಕಂಡವರೆಂದೂ ಅವರು ಹೀಗೆ ಹೇಳಿರಬಹುದೆಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇದಕ್ಕೆ ಪ್ರತಿಯಾಗಿ ಲಾಹೋರ್ ಪ್ರವಾಸದಲ್ಲಿದ್ದಾಗ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಅವರು ಮಾತನಾಡುವ ಅಗತ್ಯವಿಲ್ಲದಿದ್ದರೂ ಅವರ ದಾಡಿಯನ್ನು, ವ್ಯಕ್ತಿತ್ವವನ್ನೂ ಕಂಡ ಅಲ್ಲಿನ ಮುಖ್ಯೋಪಾಧ್ಯಾಯರು ಮಾತನಾಡುವಂತೆ ಒತ್ತಡ ಹಾಕಿದರು. ಧರ್ಮದ  ಬಗ್ಗೆ ಇವರು ತುಂಬ ತಿಳಿದುಕೊಂಡಿರಬಹುದು ಎಂಬುದು ಅವರ ಸಹಜ ಅಭಿಮತ. ಗುರೂಜಿ 15 ನಿಮಿಷಗಳಲ್ಲಿ ವಿಸ್ತಾರವಾಗಿ ಧರ್ಮದ ಪರಿಕಲ್ಪನೆಯನ್ನು ಮುಂದಿಟ್ಟು ಇಂದಿನ ಹಿಂದೂ ಧರ್ಮದ ಅಗತ್ಯತೆಯನ್ನು ಸುಂದರವಾಗಿ ಕಟ್ಟಿಕೊಟ್ಟರು. ‘ನಾವಾರೂ ಬ್ರಾಹ್ಮಣರಲ್ಲ. ಬದಲಾಗಿ ಚಾಂಡಾಲರು. ಕಾರಣವೇನು ಗೊತ್ತೇ? ನಮ್ಮ ಧರ್ಮಶಾಸ್ತ್ರಗಳಲ್ಲಿ ಮೂರು ದಿನಗಳ ಕಾಲ ಮ್ಲೇಚ್ಛರ ಮನೆಯಲ್ಲಿದ್ದವನು ಚಾಂಡಾಲನಾಗುತ್ತಾನೆ ಎಂದು ಹೇಳಲಾಗಿದೆ’ ಎಂದರು. ಮ್ಲೇಚ್ಛರ ಆಳ್ವಿಕೆಯಲ್ಲಿ ಕೆಲವು ಕಾಲ ಕಳೆದು ಈಗ ಬ್ರಾಹ್ಮಣತ್ವದ ಹೆಸರಿನಲ್ಲಿ ತಮ್ಮ ಸರ್ವೋತ್ಕೃಷ್ಟತೆಯನ್ನು ಸಾರುವುದು ಅವರ ಮನಸ್ಸಿಗೆ ಒಪ್ಪುವ ಸಂಗತಿಯಾಗಿರಲಿಲ್ಲ. ಹೀಗಾಗಿಯೇ ಸಂಪ್ರದಾಯವಾದಿಗಳ ಮುಂದೆ ಹೀಗೆ ತಮ್ಮ ಅನಿಸಿಕೆಯನ್ನು ಅವರು ಬಿಚ್ಚಿಟ್ಟಿದ್ದು. ಮಾತಿನ ಕೊನೆಯಲ್ಲಿ ನಾವೆಲ್ಲರೂ ಈಗ ಕ್ಷತ್ರಿಯ ಧರ್ಮವನ್ನು ಪಾಲಿಸಬೇಕಾಗಿದೆ ಎಂದು ಹೇಳುವುದನ್ನು ಅವರು ಮರೆಯಲಿಲ್ಲ. 

ಸಂಘದ ಅಂದಿನ ನಾಯಕರ ವೈಶಿಷ್ಟ್ಯತೆಯೇ ಅದು. ಡಾಕ್ಟರ್‌ಜಿಯವರಿರಲಿ, ಗುರೂಜಿಯವರೇ ಇರಲಿ ಮಾಡಬೇಕಾದ ಕೆಲಸಗಳ, ಸಾಗಬೇಕಾದ ಹಾದಿಯ ನಿಚ್ಚಳ ಅರಿವು ಅವರಿಗಿತ್ತು. ಅನಾರೋಗ್ಯಪೀಡಿತರಾಗಿದ್ದ ಡಾಕ್ಟರ್‌ಜಿಯವರನ್ನು ಗುರೂಜಿ ನೋಡಿಕೊಳ್ಳುವ ಸಂದರ್ಭ ಬಂದಿತ್ತಲ್ಲ ಆಗ ದೈಹಿಕ ಪ್ರಜ್ಞೆ ಕಳೆದುಕೊಂಡಿರುವ ಹೊತ್ತಿನಲ್ಲೂ ಡಾಕ್ಟರ್‌ಜಿ ಒಮ್ಮೆಯಾದರೂ ಹಾಂ! ಹೂಂ! ಎಂದು ನರಳಲಿಲ್ಲ. ಅವರ ಉದ್ಗಾರಗಳು ಸಂಘ, ಶಾಖೆ, ಸ್ವಯಂಸೇವಕರು, ವ್ಯವಸ್ಥೆ, ಕಾರ್ಯಕ್ರಮಕ್ಕೆ ತಡವಾಯ್ತು, ಕಾರ್ಯ ಇನ್ನೂ ಅಪೇಕ್ಷೆಯಂತೆ ಬೆಳೆಯಲಿಲ್ಲ, ಸ್ವರಾಜ್ಯ ಪ್ರಾಪ್ತಿ ತಡವಾಗುತ್ತಿರುವುದಕ್ಕೆ ಮನದ ತಲ್ಲಣ ಇವುಗಳ ಕುರಿತಂತೆ ಇರುತ್ತಿತ್ತು. ಗುರೂಜಿಯವರೇನು ಕಡಿಮೆಯಲ್ಲ. ಒಂದೆಡೆ ತಮಗೆ ಆದರ್ಶದ ಮಾರ್ಗವನ್ನು ಹಾಕಿಕೊಟ್ಟ ಡಾಕ್ಟರ್‌ಜಿಯವರು ಈ ವ್ಯಕ್ತಿತ್ವವನ್ನು ಪ್ರದರ್ಶಿಸಿದವರಾದರೆ, ಮತ್ತೊಂದೆಡೆ ಅವರಿಗೆ ದೀಕ್ಷೆ ಕೊಟ್ಟ ಅಖಂಡಾನಂದರ ಬದುಕು ‘ನಾನಲ್ಲ, ನೀನು’ ಎಂಬ ಶ್ರೇಷ್ಠ ಆದರ್ಶದ ಮೇಲೆ ನಿಂತಿದ್ದರಿಂದ ಅವರೂ ಕೂಡ ಹೀಗೆ ಇತರರಿಗಾಗಿಯೇ ಬದುಕುವ ಚಿಂತನೆಯನ್ನು ರೂಢಿಸಿಕೊಂಡುಬಿಟ್ಟಿದ್ದರು. ಡಾಕ್ಟರ್‌ಜಿ ಅನಾರೋಗ್ಯ ಪೀಡಿತರಾಗಿ ಸಾವು-ಬದುಕಿನ ನಡುವೆ ತೀವ್ರ ಹೋರಾಟ ನಡೆಸುತ್ತಿರುವಾಗ ಸರಕಾರ್ಯವಾಹ ಜವಾಬ್ದಾರಿಯನ್ನು ಹೊತ್ತಿದ್ದ ಗುರೂಜಿಯವರೇ ಎಲ್ಲರಿಗೂ ಮಾಹಿತಿ ಮುಟ್ಟಿಸಬೇಕಾದ ಮತ್ತು ಬಂದ ಪತ್ರಗಳಿಗೆ ಉತ್ತರಿಸಬೇಕಾದ ಜವಾಬ್ದಾರಿ ಹೊತ್ತಿದ್ದರು. ಸಾಧಾರಣವಾಗಿ ಇಂತಹ ಸಂದರ್ಭದಲ್ಲಿ ನೋವು-ದುಃಖವನ್ನು ವ್ಯಕ್ತಪಡಿಸುವುದು ಸಹಜ. ಆದರೆ ಗುರೂಜಿ ಹಾಗಲ್ಲ. ಪ್ರತಿಯೊಬ್ಬರಿಗೂ ಡಾಕ್ಟರ್‌ಜಿಯವರ ಸಂಬಂಧ ಹೇಗಿತ್ತು ಎಂಬುದನ್ನು ಗ್ರಹಿಸಿ ಅದಕ್ಕೆ ತಕ್ಕಂತೆ ಆತ್ಮಸಮರ್ಪಣೆಯ ಪ್ರೇರಣೆಯನ್ನೂ ಹೆಚ್ಚಿನ ಸಹಕಾರಕ್ಕಾಗಿ ವಿನಂತಿಯನ್ನೂ ಮಾಡುತ್ತಾ ಪತ್ರ ಬರೆಯುತ್ತಿದ್ದರು. ಹಿರಿಯ ಕಾರ್ಯಕರ್ತರೊಬ್ಬರಿಗೆ ಬರೆದ ಪತ್ರದಲ್ಲಿ ‘ನಮ್ಮೀ ಸಂಘಕಾರ್ಯವನ್ನು ಇನ್ನಷ್ಟು ಬೆಳೆಸುವುದು ಪರಮಪೂಜನೀಯ ಡಾಕ್ಟರ್‌ಜಿಯವರಿಗೆ ನಾವು ಸಲ್ಲಿಸಬಹುದಾದ ಶಾಶ್ವತವಾದ ಸ್ಮಾರಕವಾಗಲಿದೆ. ಈಗ ಇನ್ನುಳಿದಿರುವುದು ಆ ಕೆಲಸ ಮಾತ್ರ. ಅವರು ಬದುಕಿದ್ದಾಗ ನಾವು ಸಾಧಿಸಲಾಗದಿದ್ದ ಕೆಲಸವನ್ನು ಈಗ ಅವರ ಪುಣ್ಯಸ್ಮರಣೆಯನ್ನು ಸಾಕ್ಷಿಯಾಗಿ ಇರಿಸಿಕೊಂಡು ನಮ್ಮ ಕರ್ತೃತ್ವ ಮತ್ತು ತ್ಯಾಗದಿಂದ ಪೂರ್ಣಗೊಳಿಸುವ ಪ್ರತಿಜ್ಞೆ ಧರಿಸಿ ಅದರಲ್ಲಿ ಸಫಲರಾಗೋಣ. ಎಲ್ಲರನ್ನೂ ಉತ್ಸಾಹ ಸಹಿತ ಮತ್ತು ಸ್ಪರ್ಧಾತ್ಮಕ ಮನೋಭಾವದಿಂದ ಕಾರ್ಯಕ್ಷೇತ್ರದಲ್ಲಿ ದುಡಿಯಲು ಪ್ರೇರೇಪಿಸೋಣ’ ಎಂದಿದ್ದರು. ಡಾಕ್ಟರ್‌ಜಿಯ ನಿಧನದ ನಂತರ ಅವರು ಶಾಖೆಗಳಿಗೆ ಕಳಿಸಿದ ಸುತ್ತೋಲೆಯಲ್ಲಿ ಮೊದಲ ಪ್ಯಾರಾದಲ್ಲಿ ಸಾವಿಗೆ ಸಂಬಂಧ ಮಾಹಿತಿಯನ್ನು ಕೊಟ್ಟರೆ ಎರಡನೇ ಪ್ಯಾರಾದಲ್ಲಿ ಸಾಂತ್ವನದ ಮಾತುಗಳಿದ್ದವು. ಮೂರನೇ ಪ್ಯಾರಾದಲ್ಲಿ 13ನೆಯ ದಿನದ ಆಚರಣೆಯನ್ನು ಹೇಗೆ ಮಾಡಬೇಕು ಎಂಬುದರ ವಿವರವಲ್ಲದೇ ಇಡಿಯ ಸಮಾಜಕ್ಕೆ ಅದೊಂದು ಹೇಗೆ ಆದರ್ಶವಾಗಬೇಕು ಎಂಬುದರ ಕುರಿತಂತೆ ಸೂಕ್ತ ಸಂದೇಶಗಳೂ ಇದ್ದವು. ಕೆಲಸವನ್ನು ಬಿಟ್ಟು ಮತ್ತೊಂದನ್ನು ಅವರು ಯೋಚಿಸಿದ್ದೇ ಇಲ್ಲ. 

ಈ ಒಬ್ಬ ವ್ಯಕ್ತಿ ಇಷ್ಟು ಕರ್ಮಠರಾದದ್ದಾದರೂ ಹೇಗೆ? ಅದು ಅವರ ಬಾಲ್ಯದಲ್ಲೇ ಅಡಗಿರುವಂಥದ್ದು. ಅವರಿಗೆ ಬಾಲ್ಯದಲ್ಲಿ ಸಿಕ್ಕ ಸಂಸ್ಕಾರ, ಯೌವ್ವನದಲ್ಲಿ ತಮ್ಮ ಬದುಕಿನ ಉದ್ದೇಶವನ್ನು ಅವರು ಗುರುತಿಸಿಕೊಂಡ ರೀತಿ, ಮತ್ತು ವೈರಾಗ್ಯದಲ್ಲಿ ಅವರಿಗಿದ್ದ ತುಡಿತ ಇವೆಲ್ಲವೂ ಅವರನ್ನು ಸಾಕ್ಷಾತ್ ಗುರೂಜಿಯಾಗಿಸಿತು. ತಾಯಿ ಮಗನಿಗೆ ಒತ್ತಾಯ ಹಾಕಿ ಮದುವೆಯಾಗಲೇಬೇಕೆಂದು ಹಠ ಹಿಡಿದು, ತಾನೇ ಹುಡುಗಿಯೊಂದನ್ನು ನೋಡಿ ಸಂಬಂಧಿಕರೊಡನೆ ಪ್ರೀತಿಯ ಮಧುವನ್ನು ಕಳಿಸಿದರು. ಮರಳಿ ಬಂದೊಡನೆ ಸಹಜವಾಗಿ ಕಾತರತೆಯಿಂದ ಹುಡುಗಿಯನ್ನು ನೋಡಿದೆಯಾ ಎಂದು ಕೇಳಿದರೆ, ಆಳೆತ್ತರ ಬೆಳೆದಿದ್ದ ಈ ಹುಡುಗ ‘ಇಲ್ಲವಲ್ಲ, ನಾನು ಕಣ್ಣುಮುಚ್ಚಿಕೊಂಡಿದ್ದೆ’ ಎಂದುಬಿಟ್ಟರು. ಆನಂತರ ತಾಯಿ ಈ ಕುರಿತಂತೆ ಮಾತು ಕಡಿಮೆ ಮಾಡಿದರು. ಒಮ್ಮೆ ಮಾತ್ರ ಆತ ಮದುವೆಯಾಗದಿದ್ದರೆ ವಂಶ ಮುಂದುವರೆಯುವುದಿಲ್ಲ ಎಂಬ ತಾಯಿಯ ಹೇಳಿಕೆಗೆ ‘ವಂಶ ಕೊನೆಗೊಳ್ಳುವ ಬಗ್ಗೆ ನನಗೆ ಹೇಳಬೇಡಿ. ನಮ್ಮ ಸಮಾಜವನ್ನು ಸಕ್ಷಮ, ಸುಭದ್ರವಾಗಿ ಉಳಿಸಬೇಕಾದ್ದಲ್ಲಿ ನಮ್ಮ ವಂಶವಷ್ಟೇ ಅಲ್ಲ, ಇನ್ನೂ ಅನೇಕ ವಂಶಗಳು ಕೊನೆಗೊಳ್ಳುವುದು ಅನಿವಾರ್ಯವಾಗಬಹುದು. ನನಗದರಿಂದ ಕೂದಲೆಳೆಯಷ್ಟೂ ದುಃಖವಾಗದು’ ಎಂದುಬಿಟ್ಟರು. ಸಹಜವಾಗಿಯೇ ಅವರ ಈ ತುಡಿತಕ್ಕೆ ವಿವೇಕಾನಂದರ ಚಿಂತನೆಯ ಪ್ರಭಾವವಿತ್ತು. ಅವರು ರಾಮಕೃಷ್ಣಾಶ್ರಮದೆಡೆಗೆ ವಿಶೇಷವಾಗಿ ಸೆಳೆಯಲ್ಪಟ್ಟು ಅಲ್ಲಿನ ಅಧ್ಯಕ್ಷರಾಗಿದ್ದ ಸ್ವಾಮಿ ಅಖಂಡಾನಂದಜಿಯವರ ಶಿಷ್ಯತ್ವ ಬಯಸಿ ಸಾರಗಾಛಿಗೆ ಹೋದರು. ಸ್ವಾಮಿ ಅಖಂಡಾನಂದರು ವಿವೇಕಾನಂದರ ಸೋದರ ಸನ್ಯಾಸಿಯಾಗಿದ್ದು ಅಖಂಡವಾಗಿ ಕರ್ಮಮಾರ್ಗದಲ್ಲಿ ದೇಹವನ್ನು ಸವೆಸಿದವರು. ಇಂಥವರ ಶಿಷ್ಯತ್ವವನ್ನು ಪಡೆದುಕೊಂಡ ಮಾಧವರಾವ್ ಗೊಳ್ವಲ್ಕರ್‌ರು ಗುರುಗಳ ಸೇವೆಯನ್ನು ಮನತುಂಬುವಷ್ಟು ಮಾಡಿದರು. ದೇಹ ತೊರೆಯುವ ಮುನ್ನ ಗುರುಗಳು ಈ ತರುಣನನ್ನು ಬಳಿಗೆ ಕರೆದು ‘ನನ್ನಲ್ಲಿರುವ ಎಲ್ಲ ಒಳ್ಳೆಯ ಸಂಗತಿಗಳನ್ನು ನಿನಗೆ ನೀಡುತ್ತಿರುವೆ. ನನ್ನ ಹಿತಕ್ಕಾಗಿ ಇರುವುದೆಲ್ಲವೂ ನಿನಗೆ ಲಭಿಸಲಿ. ನಿನ್ನಲ್ಲಿರುವ ಎಲ್ಲ ಕೆಟ್ಟ ಸಂಗತಿಗಳನ್ನು ನನಗೆ ಕೊಡು. ನಿನ್ನ ಸ್ವಂತದ ಅಹಿತಕಾರಿ ಸಂಗತಿಗಳನ್ನು ನನಗೆ ಒಪ್ಪಿಸು’ ಎಂದು ಹೇಳಿದರಲ್ಲದೇ ‘ನಿನಗೆ ಆತ್ಮದರ್ಶನವಾಗಲಿ. ಇದೇ ರಾಮಕೃಷ್ಣರ ಬಳಿ ನಾನು ಸಲ್ಲಿಸುವ ಪ್ರಾರ್ಥನೆ’ ಎಂದುಬಿಟ್ಟರು. ಗುರುವಿನ ಮಹಾಸಮಾಧಿಯ ನಂತರ ಅವರ ನೆನಪಿನ ಕೆಲವು ವಸ್ತುಗಳೊಂದಿಗೆ ಅಲ್ಲಿಂದ ಮರಳಿ ಬಂದ ತರುಣನ ಸಾಮರ್ಥ್ಯವನ್ನು ಗುರುತಿಸಿದ್ದು ಡಾಕ್ಟರ್ ಜಿ. ಮುಂದೊಮ್ಮೆ ಗುರೂಜಿಯವರೇ ಹೇಳಿದ್ದುಂಟು ‘ನಾನೊಮ್ಮೆ ರಸ್ತೆಯಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಡಾಕ್ಟರ್ ಜಿ ನನ್ನನ್ನು ನೋಡಿ ಹತ್ತಿರ ಬಂದು ಪರಿಚಯ ಮಾಡಿಕೊಂಡರು ಮತ್ತು ಬೆಕ್ಕು ಇಲಿಯನ್ನು ಹಿಡಿದಂತೆ ನನ್ನನ್ನೂ ಹಿಡಿದುಕೊಂಡರು’ ಎಂದು. ಮಾತಿನಲ್ಲಿ ಹಾಸ್ಯದ ಲೇಪವಿದ್ದರೂ ಡಾಕ್ಟರ್‌ಜಿಯವರ ಗುಣಗ್ರಾಹಿತನದ ನಯವಾದ ವರ್ಣನೆಯೇ ಆಗಿತ್ತು ಅದು. ತಮ್ಮ ನಿಷ್ಕಾಮ ಕರ್ಮದಿಂದಲೇ ಡಾಕ್ಟರ್ಜಿಯವರ ಮನಸ್ಸನ್ನು ಸೆಳೆದುಕೊಂಡ ಈ ತರುಣ ಡಾಕ್ಟರ್‌ಜಿಯವರ ನಂತರದ ಸ್ಥಾನಕ್ಕೆ ಸಹಜವಾದ ಆಯ್ಕೆಯಾಗಿ ಹೊರಹೊಮ್ಮಿದರು. ಅನಾರೋಗ್ಯ ಪೀಡಿತರಾಗಿ ಹಾಸಿಗೆ ಹಿಡಿದಿದ್ದ ಡಾಕ್ಟರ್‌ಜಿ ಗೊಳ್ವಲ್ಕರ್‌ರನ್ನು ಕರೆದು ‘ನನ್ನ ನಂತರದ ಜವಾಬ್ದಾರಿ ನಿಮ್ಮದ್ದೇ ಎಂದಾಗ ಅವರು ಸ್ಥಿತಪ್ರಜ್ಞರಂತೆ ಅದನ್ನು ಸ್ವೀಕರಿಸಿದ್ದರು. ಮುಂದೆ ಸರಸಂಘಚಾಲಕರಾಗಿ ಮೊದಲ ಭಾಷಣ ಮಾಡುವಾಗ ‘ನನ್ನ ಊಹೆಗೂ ಮೀರಿದ್ದ ಮಹತ್ವವುಳ್ಳ ಹೊಣೆಯನ್ನು ಡಾಕ್ಟರ್ ಜಿ ನನಗೆ ಒಪ್ಪಿಸಿದ್ದಾರೆ. ಆದರೆ ಇದು ವಿಕ್ರಮಾದಿತ್ಯನ ಸಿಂಹಾಸನ. ಇದರ ಮೇಲೆ ಕೂರುವ ವ್ಯಕ್ತಿ ಕುರಿ ಮೇಯಿಸುವ ಬಾಲಕನೇ ಆದರೂ ಸರಿಯಾದ ತೀರ್ಮಾನವನ್ನೇ ನೀಡುತ್ತಾನೆ. ಅಂತೆಯೇ ಡಾಕ್ಟರ್‌ಜಿಯವರು ನನ್ನ ಮುಖದಿಂದಲೂ ಸರಿಯಾದ ಸಂಗತಿಯನ್ನೇ ಹೇಳಿಸುವವರಿದ್ದಾರೆ. ಅವರ ಪುಣ್ಯದ ಫಲವಾಗಿ ನನ್ನ ಕೈಗಳಿಂದಲೂ ಯೋಗ್ಯವಾದ ಕೆಲಸಗಳೇ ಆದಾವು ಎಂಬ ಬಗ್ಗೆ ಸಂದೇಹವೆ ಬೇಡ’ ಎಂದಿದ್ದರು. 

ಅನೇಕ ಬಾರಿ ನನಗನಿಸುವುದುಂಟು. ಡಾಕ್ಟರ್ಜಿಯವರು ಸಂಘವನ್ನು ನಿರ್ಮಾಣ ಮಾಡಿ ಅದಕ್ಕೊಂದು ತಾತ್ವಿಕ ನೆಲೆಕಟ್ಟನ್ನು ಒದಗಿಸಿಕೊಟ್ಟರೆ ಗುರೂಜಿಯವರು ಸಂಘಟನೆ ದೀರ್ಘವಾಗಿ ಇರಲು ಬೇಕಾದ ಆಧ್ಯಾತ್ಮಿಕ ಆಳವನ್ನು ಒದಗಿಸಿಕೊಟ್ಟರು. ಆನಂತರದ ದಿನಗಳಲ್ಲಿ ಈ ಅಡಿಪಾಯದ ಮೇಲೆ ಬೆಳೆದುಬಂದದ್ದು ಸಂಘ. ನೂರನೇ ವರ್ಷದ ಆಚರಣೆಯ ಹೊಸ್ತಿಲಲ್ಲಿ ಇವೆಲ್ಲವೂ ಸ್ಮರಿಸಿಕೊಳ್ಳಲು ಯೋಗ್ಯವಾದ್ದೇ. ರಂಗಾಹರಿಯವರು ಹಿಂದಿಯಲ್ಲಿ ಬರೆದ ರಾಷ್ಟ್ರ ತಪಸ್ವಿ ಶ್ರೀ ಗುರೂಜಿ ಎನ್ನುವ ಕೃತಿಯನ್ನು ಸಂಘದ ಪ್ರಚಾರಕರೇ ಆಗಿದ್ದ ಚಂದ್ರಶೇಖರ್ ಭಂಡಾರಿಯವರು ಕನ್ನಡಕ್ಕೆ ತಂದಿದ್ದಾರೆ. ಸಾಹಿತ್ಯ ಸಿಂಧು ಪ್ರಕಾಶಿಸಿರುವ ಈ ಕೃತಿ ಸಂಘವನ್ನು ಪ್ರೀತಿಸುವವರು ಮತ್ತು ವಿರೋಧಿಸುವವರೂ ಕೂಡ ಓದಲೇಬೇಕಾದಂಥದ್ದು. ಅನವಶ್ಯಕವಾಗಿ ಗುರೂಜಿಯವರ ಮೇಲೆ ಆಪಾದನೆಗಳನ್ನು ಮಾಡುವ, ಸುಳ್ಳು ಹೇಳುವ ಮಂದಿಯನ್ನು ಕಂಡಾಗ ಪಿಚ್ಚೆನಿಸುತ್ತದೆ. ಗುರೂಜಿಯವರ ವ್ಯಕ್ತಿತ್ವವನ್ನು ಒಮ್ಮೆ ಅರಿತರೆ ಇನ್ನು ಇಂತಹ ಮಾತುಗಳನ್ನಾಡುವ ಧೈರ್ಯ ಬರಲಾರದು. ಅನುವಾದಕರಾದ ಚಂದ್ರಶೇಖರ್ ಭಂಡಾರಿಯವರು ಅನೇಕ ಸ್ವತಂತ್ರ ಕೃತಿಗಳನ್ನು ರಚಿಸಿದ್ದಾರೆ, ಅನುವಾದಗಳನ್ನು ಮಾಡಿದ್ದಾರೆ. ಆದರೆ ಈ ಕೃತಿ ಅವರ ಬದುಕಿನ ಕೊನೆಯ ಕೃತಿ. ಇತ್ತೀಚೆಗಷ್ಟೆ ದೇಹತ್ಯಾಗ ಮಾಡಿದ ಅವರು ಕನ್ನಡಿಗರಿಗೆ ಹಬ್ಬದ ಊಟವನ್ನೇ ಉಣಬಡಿಸಿದ್ದಾರೆ. ಗುರೂಜಿಯವರ ಕುರಿತಂತೆ ಓದುತ್ತಾ ಹೋದಂತೆಲ್ಲ ಒಂದು ಸಂಘಟನೆ ಆಳಕ್ಕೆ ಬೇರುಬಿಡಲು ಇರಬಹುದಾಗಿರುವ ಮಹತ್ವದ ಸಂಗತಿಗಳೇನೆಂಬುದು ಅರಿವಾಗುತ್ತದೆ. ಪ್ರತಿಯೊಬ್ಬ ಸಂಘಟನಕಾರನೂ ಈ ತ್ಯಾಗ ಮತ್ತು ಸೇವೆಯ ಮಹತ್ವವನ್ನು ರೂಢಿಸಿಕೊಂಡಾಗ ಮಾತ್ರ ಆತ ಕಟ್ಟಿದ ಸಂಘಟನೆ ನಿಸ್ವಾರ್ಥವಾಗಿ ಸುದೀರ್ಘಕಾಲ ಕೆಲಸ ಮಾಡಬಲ್ಲದು. ಆ ಕಾರಣಕ್ಕೂ ಇದೊಂದು ಅಧ್ಯಯನ ಯೋಗ್ಯ ಕೃತಿ. 

ಗುರೂಜಿಯವರಂತೂ ಬದುಕಿನುದ್ದಕ್ಕೂ ಒಮ್ಮೆಯೂ ಸುಮ್ಮನೆ ಕುಳಿತವರಲ್ಲ. 33 ವರ್ಷಗಳಲ್ಲಿ ಸುಮಾರು 60 ಬಾರಿ ಅವಿಶ್ರಾಂತವಾಗಿ ದಣಿವಿಲ್ಲದಂತೆ ಅವರು ದೇಶ ಸುತ್ತಿದ್ದಾರೆ. ಅವರೇ ಹೇಳುತ್ತಿದ್ದಂತೆ ‘ಮಲಗಿದ್ದಾಗ ಕಲಿ, ಎಚ್ಚರಗೊಂಡಾಗ ದ್ವಾಪರ, ಎದ್ದುನಿಂತರೆ ತ್ರೇತ, ನಡೆದರೆ ಕೃತ. ಯುಗಗಳು ಉರುಳುವುದು ಹೀಗೆಯೇ’.ಈ ಹಿನ್ನೆಲೆಯಲ್ಲೇ ಅವರು ಬದುಕಿದ ಕಾಲ ಬಹುತೇಕ ಕೃತಯುಗದ್ದೇ ಆಗಿತ್ತೆನಿಸುತ್ತದೆ. ತಮಾಷೆಗೆ ‘ನನ್ನ ಮನೆ ರೈಲುಗಾಡಿ’ ಎಂದು ಅವರು ಹೇಳುತ್ತಿದ್ದರಾದರೂ ಅದು ಸತ್ಯವೇ ಆಗಿತ್ತು. ಸಂಘದ ಪ್ರಚಾರಕರು ಮನೆಗಳಲ್ಲೇ ಉಳಿದುಕೊಳ್ಳುವ ಪಾರಿವಾರಿಕ ರೀತಿಯ ಕಾರ್ಯಶೈಲಿಯನ್ನೇ ಡಾಕ್ಟರ್‌ಜಿಯವರಿಂದ ಬಳುವಳಿಯಾಗಿ ಪಡೆದ ಗುರೂಜಿಯವರು ಅದನ್ನು ಇನ್ನಷ್ಟು ವ್ಯವಸ್ಥಿತ ಮತ್ತು ವಿಸ್ತೃತಗೊಳಿಸಿದರು. ವಿಮಾನದಿಂದ ಮೊದಲುಗೊಂಡು ಸೈಕಲ್, ಎತ್ತಿನಬಂಡಿಯವರೆಗೆ ಎಲ್ಲ ವಾಹನಗಳಲ್ಲೂ ಪಯಣಿಸಿದ ಅವರು ಅಂದಿನ ದಿನಗಳ ರಿಕ್ಷಾದಲ್ಲಿ ಮಾತ್ರ ಓಡಾಡುತ್ತಿರಲಿಲ್ಲ. ಅದನ್ನು ಮನುಷ್ಯರು ಎಳೆಯುತ್ತಾರೆ ಎಂಬ ಒಂದೇ ಕಾರಣಕ್ಕೆ. ಒಮ್ಮೆ ಹೀಗೆ ರಿಕ್ಷಾವೊಂದನ್ನು ತರಿಸಿಬಿಟ್ಟಿದ್ದಾಗ ಗುರೂಜಿ ನಾಲ್ಕು ಕಿ.ಮೀ ನಡೆದು ಹೊರಟರೆ ಹೊರತು ಎಂದಿಗೂ ರಿಕ್ಷಾ ಏರಲಿಲ್ಲ. 

ಮಿತ್ರರೊಬ್ಬರು ಪರಾನ್ನ ಊಟ ಮಾಡುವುದಿಲ್ಲವೆಂದಾಗ ಗುರೂಜಿ ನಗುತ್ತಾ ‘ನಾನು ಕೂಡ ಪರಾನ್ನ ತಿನ್ನುವುದಿಲ್ಲ’ ಎಂದುಬಿಟ್ಟರಂತೆ. ಉಳಿದವರೆಲ್ಲ ಹುಬ್ಬೇರಿಸಿ ಕಾರ್ಯಕರ್ತರ ಮನೆಯಲ್ಲಿ ಉಣ್ಣುವಿರಲ್ಲ, ಎಂದಿದ್ದಕ್ಕೆ ‘ಅವರು ನನಗೆ ಎಂದಿಗೂ ಪರ ಅಲ್ಲ, ನನ್ನ ಪರಿವಾರ’ ಎಂದವರು ಗುರೂಜಿ. ಸಂಘಟನೆಯ ವಿಚಾರದಲ್ಲಷ್ಟೇ ಅಲ್ಲ. ರಾಷ್ಟ್ರ ಕಟ್ಟವು ವಿಚಾರದಲ್ಲೂ ಅವರು ಅಗ್ರಣಿಯೇ. ಪಾಕಿಸ್ತಾನದಿಂದ ಬಂದ ನಿರಾಶ್ರಿತರಿಗೆ ಸಹಾಯ ಮಾಡುವಲ್ಲಿ, ಗಾಂಧೀಜಿಯವರನ್ನು ಮುಸಲ್ಮಾನ್ ಗುಂಡಾಗಳಿಂದ ರಕ್ಷಿಸುವಲ್ಲಿ ಸಂಘದ ಸ್ವಯಂ ಸೇವಕರಿಗೆ ಜವಾಬ್ದಾರಿ ನೀಡಲು ಎಂದೂ ಹಿಂದೇಟು ಹಾಕಲಿಲ್ಲ. ಇಡಿಯ ಕೃತಿಯಲ್ಲಿ ಅಂತಹ ನೂರಾರು ಘಟನೆಗಳ ಉಲ್ಲೇಖವಿದೆ. ನಿಸ್ಸಂಶಯವಾಗಿ ಗುರೂಜಿ ನಮ್ಮ ಹೃದಯವನ್ನು ಆವರಿಸಿಕೊಂಡುಬಿಡುತ್ತಾರೆ.

ಅಫ್ಘಾನಿಸ್ತಾನ: ಎದ್ದೆದ್ದು ಕುಣಿಯುತ್ತಿದೆ ಪಾಕಿಸ್ತಾನ!

ಅಫ್ಘಾನಿಸ್ತಾನ: ಎದ್ದೆದ್ದು ಕುಣಿಯುತ್ತಿದೆ ಪಾಕಿಸ್ತಾನ!


ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನಿಜಕ್ಕೂ ಆತಂಕಕಾರಿ. ಡೊನಾಲ್ಡ್ ಟ್ರಂಪ್ ಅಫ್ಘಾನಿಸ್ತಾನದಲ್ಲಿರುವ ಅಮೇರಿಕಾದ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಮಾತನಾಡಿದಾಗಲೇ ಆತಂಕದ ಗೆರೆಗಳು ಮೂಡಿದ್ದವಾದರೂ ಟ್ರಂಪ್ ತಾಲಿಬಾನಿಗೆ ಹಾಕಿದ ನಿಯಮಗಳು ಸ್ವಲ್ಪ ಸಮಾಧಾನ ಕೊಡುವಂತಿದ್ದವು. ಆದರೀಗ ಹಾಗಿಲ್ಲ. ಹೊಸ ಅಧ್ಯಕ್ಷ ಬೈಡನ್ ಮುಲಾಜಿಲ್ಲದೇ ಅಮೇರಿಕಾ ಮತ್ತು ನ್ಯಾಟೊದ ಸೇನೆಯನ್ನು ಮರಳಿ ಕರೆಸಿಕೊಂಡಿದ್ದಾನೆ. ಸಪ್ಟೆಂಬರ್ 11ರ ವೇಳೆಗೆ ಅಮೇರಿಕಾದ ಸೇನೆಯನ್ನು ಸಂಪೂರ್ಣ ಹಿಂದಕ್ಕೆ ಕರೆಸಿಕೊಳ್ಳಲಾಗುವುದು ಎಂಬ ಅವನ ಹೇಳಿಕೆಯಿಂದ ಅನೇಕ ರಾಷ್ಟ್ರಗಳು ಕಂಗಾಲಾಗಿವೆ. ಭಾರತವೂ ಕೂಡ ಇದಕ್ಕೆ ಹೊರತಲ್ಲ!


ಅಮೇರಿಕಾದ ವಲ್ಡರ್್ ಟ್ರೇಡ್ ಸೆಂಟರ್ನ ಕಟ್ಟಡದ ಮೇಲೆ ಸಪ್ಟೆಂಬರ್ 2001ರಲ್ಲಿ ದಾಳಿಯಾದ ನಂತರ ಅಮೇರಿಕಾ ಅಫ್ಘಾನಿಸ್ತಾನವನ್ನು ನಿಯಂತ್ರಿಸುವ ನಿಶ್ಚಯ ಮಾಡಿತ್ತು. ಇವೆಲ್ಲವೂ ನೆಪವಷ್ಟೆ. ವಾಸ್ತವವಾಗಿ ಮಧ್ಯಪ್ರಾಚ್ಯ ಏಷ್ಯಾದ ಮೇಲೆ ತನ್ನ ಬಲವನ್ನು ಅಧಿಕೃತವಾಗಿ ಸ್ಥಾಪಿಸುವ ಬಯಕೆ ಅದಕ್ಕಿತ್ತು. ಹೀಗಾಗಿಯೇ ಎಲ್ಲ ನೆಪಗಳನ್ನು ಮುಂದೆಮಾಡಿ ಅಫ್ಘಾನಿಸ್ತಾನಕ್ಕೆ ಸೇನೆ ಕಳಿಸಲಾಯ್ತು. ಕಳೆದ ಸುಮಾರು 20 ವರ್ಷಗಳಲ್ಲಿ ಅಮೇರಿಕಾ ಈ ಸೇನೆಯನ್ನು ನಿರ್ವಹಿಸಲು ಮತ್ತು ಅಫ್ಘಾನಿಸ್ತಾನದ ಬೆಳವಣಿಗೆಯ ನೆಪವನ್ನು ಮುಂದೆ ಮಾಡಿ 144 ಬಿಲಿಯನ್ ಡಾಲರ್ಗಳನ್ನು ವ್ಯಯಿಸಿದೆ. ಸುಮಾರು ಎರಡೂವರೆ ಸಾವಿರದಷ್ಟು ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. 22 ಸಾವಿರಕ್ಕೂ ಹೆಚ್ಚು ಸೈನಿಕರು ಏಟು ತಿಂದು ದೇಶಕ್ಕೆ ಮರಳಿದ್ದಾರೆ. ಆದರೆ ಇವಿಷ್ಟರೊಂದಿಗೆ ಏಷ್ಯಾದ ಬಹುಭಾಗದ ಮೇಲೆ ಅಮೇರಿಕಾ ಎರಡು ದಶಕಗಳಿಂದ ನಿವರ್ಿವಾದಿತವಾದ ಸಾರ್ವಭೌಮತ್ವವನ್ನು ಅನುಭವಿಸುತ್ತಾ ಬಂದಿದೆ. ತಾಲಿಬಾನಿಗಳನ್ನು ಮಟ್ಟಹಾಕುವ ನೆಪದಿಂದ ತನ್ನ ಆಶಯವನ್ನು ಈಡೇರಿಸಿಕೊಂಡ ಅಮೇರಿಕಾ ಒಂದು ಕಾಲದಲ್ಲಿ ಇದೇ ತಾಲಿಬಾನಿಗಳ ಬೆನ್ನಹಿಂದೆ ನಿಂತಿತ್ತು ಎಂಬುದನ್ನೂ ಮರೆಯುವಂತಿಲ್ಲ. ತನ್ನ ಶತ್ರುಗಳನ್ನು ಮಟ್ಟಹಾಕಲು ಹೊಸಬರನ್ನು ಹುಟ್ಟುಹಾಕಿ, ಕೊನೆಗೆ ಆತನನ್ನೂ ಮಟ್ಟಹಾಕುವ ಅಮೇರಿಕಾದ ಈ ಚಾಳಿ ಹೊಸತೇನೂ ಅಲ್ಲ. ಆದರೆ ಟ್ರಂಪ್ ಅಮೇರಿಕಾಕ್ಕಾಗುತ್ತಿರುವ ನಷ್ಟವನ್ನು ತಡೆಯಬೇಕೆಂದು ನಿಶ್ಚಯಿಸಿ ಸೈನ್ಯವನ್ನು ಹಿಂದಕ್ಕೆ ಕರೆದುಕೊಳ್ಳುವ ಆಲೋಚನೆಗೆ ಜೀವ ತುಂಬಿದ. ಈ ಹಿಂದೆ ಬರಾಕ್ ಒಬಾಮಾ ಕೂಡ ಇದೇ ರೀತಿ ಆಲೋಚಿಸಿದ್ದನಾದರೂ ಮುಂದಡಿಯಿಟ್ಟಿರಲಿಲ್ಲ. ಟ್ರಂಪ್, ಯಾವ ತಾಲಿಬಾನಿಗಳ ವಿರುದ್ಧ ಅಮೇರಿಕಾದ ಹೋರಾಟ ನಡೆದಿತ್ತೋ 2020ರ ಫೆಬ್ರವರಿಯಲ್ಲಿ ಅದೇ ತಾಲಿಬಾನಿಗಳನ್ನು ಮಾತುಕತೆಗೆ ಆಹ್ವಾನಿಸಿ ಒಪ್ಪಂದ ಮಾಡಿಕೊಂಡುಬಿಟ್ಟ. ಈ ಒಪ್ಪಂದದಲ್ಲಿ ಅಮೇರಿಕಾದ ಸ್ನೇಹಿತರ ವಿರುದ್ಧ ಭಯೋತ್ಪಾದನೆ ನಡೆಸಲು ಅಫ್ಘಾನಿಸ್ತಾನ ತನ್ನ ನೆಲ ಬಿಟ್ಟು ಕೊಡಬಾರದೆಂಬ ನಿಯಮ ಹಾಕಲು ಮರೆಯಲಿಲ್ಲ. ತಾಲಿಬಾನ್ ಒಪ್ಪಿಕೊಂಡಿತು. ಅಚ್ಚರಿ ಎಂದರೆ ಮಾತು ಪಡೆದವನಿಗೂ ಮಾತು ಕೊಟ್ಟವನಿಗೂ ಇದನ್ನು ಉಳಿಸಿಕೊಳ್ಳುವ ಭರವಸೆ ಇರಲಿಲ್ಲ. ಆದರೆ ಟ್ರಂಪ್ನ ಪ್ರಭಾವದಿಂದಾಗಿ ಅದೇ ವರ್ಷದ ಸಪ್ಟೆಂಬರ್ ತಿಂಗಳಲ್ಲಿ ಅಫ್ಘನ್ ಸಕರ್ಾರ ಮತ್ತು ತಾಲಿಬಾನಿಗಳ ಪ್ರಮುಖ ನಾಯಕರು ಕತಾರ್ನ ದೋಹಾದಲ್ಲಿ ಭೇಟಿಯಾಗಿ ‘ಇಂಟ್ರಾ ಅಫ್ಘನ್’ ಮಾತುಕತೆ ನಡೆಸಲಾಯ್ತು. ಈ ಸಂದರ್ಭದಲ್ಲಿ ತಾಲಿಬಾನಿ ನಾಯಕ ಮುಲ್ಲಾ ಅಬ್ದುಲ್ಗನಿ ಬರಾದಾರ್ ಮಾತನಾಡಿ ‘ಸ್ವತಂತ್ರ, ಸಾರ್ವಭೌಮ, ಸಂಘಟಿತ, ಅಭಿವೃದ್ಧಿ ಹೊಂದಿದ ಮತ್ತು ಇಸ್ಲಾಮಿನ ವ್ಯವಸ್ಥೆಗಳ ಅಡಿಯಲ್ಲಿರುವ ಮುಕ್ತ ಅಫ್ಘಾನಿಸ್ತಾನ ನಮಗೆ ಬೇಕು’ ಎಂದಿದ್ದ. ಇಲ್ಲಿ ಬೇರೆಲ್ಲವೂ ಒಪ್ಪಿಕೊಳ್ಳಬೇಕಾದ್ದೇ. ಆದರೆ ಇಸ್ಲಾಮಿನ ವ್ಯವಸ್ಥೆ ಎಂಬುದರ ವ್ಯಾಖ್ಯೆಯನ್ನು ಅರಿತುಕೊಳ್ಳುವುದು ಕಷ್ಟ ಅಷ್ಟೆ. ಯಾರು ಏನೇ ಹೇಳಿದರೂ ಅಮೇರಿಕನ್ ಸೇನೆ ಅಫ್ಘಾನಿಸ್ತಾನಕ್ಕೆ ಕಾಲಿಟ್ಟ ನಂತರ ಅಲ್ಲಿ ಚುನಾವಣೆ ನಡೆದು ಪ್ರಜಾಪ್ರಭುತ್ವ ಮಾದರಿಯ ಸಕರ್ಾರ ಅಧಿಕಾರಕ್ಕೆ ಬಂದಿತ್ತು. ಹೆಣ್ಣುಮಕ್ಕಳು ಶಾಲೆಗೆ ಹೋಗಲಾರಂಭಿಸಿದ್ದರು. ಅವರ ಬದುಕು ಮುಕ್ತವಾದ ವಾತಾವರಣದಲ್ಲಿ ಚೆನ್ನಾಗಿಯೇ ನಡೆದಿತ್ತು. ಒಂದು ರೀತಿ ಎರಡು ದಶಕಗಳ ಕಾಲ ಅಫ್ಘನ್ನಿನ ಸಾಮಾನ್ಯ ಜನ ಉಸಿರಾಡುತ್ತಿದ್ದರು. ಈ ಸಂದರ್ಭದಲ್ಲಿಯೇ ಭಾರತವೂ ಈ ಪ್ರದೇಶದ ಬೆಳವಣಿಗೆಗೆ ತನ್ನ ಸಹಕಾರ ಹಸ್ತವನ್ನು ಚಾಚಿತು. ಅಣೆಕಟ್ಟುಗಳ ನಿಮರ್ಾಣ ಮಾಡಿಕೊಟ್ಟು ನೀರಾವರಿ ವ್ಯವಸ್ಥೆಯತ್ತ ಗಮನಹರಿಸಿ, ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸುವಲ್ಲಿ ಭಾರತದ ಪಾತ್ರ ಬಲುದೊಡ್ಡದ್ದು. ಶಿಕ್ಷಣ ಕ್ಷೇತ್ರದಲ್ಲಿ ಸಹಕಾರಿಯಾಗಿ ನಿಂತ ಭಾರತ ಕಟ್ಟಿಕೊಟ್ಟ ಗ್ರಂಥಾಲಯಗಳ ಕುರಿತಂತೆ ಈಗಲೂ ಅಲ್ಲಿಯ ಜನ ಗೌರವದ ಮಾತುಗಳನ್ನಾಡುತ್ತಾರೆ. ಅಣೆಕಟ್ಟಿನ ಉದ್ಘಾಟನೆಗೆ ನರೇಂದ್ರಮೋದಿ ಅಫ್ಘಾನಿಸ್ತಾನಕ್ಕೆ ಹೋಗಿದ್ದಾಗ ಅಲ್ಲಿನ ಜನ ತಿರಂಗಾ ಹಿಡಿದು ಗೌರವದಿಂದ ಸ್ವಾಗತಿಸಿದ್ದನ್ನು ಮರೆಯುವಂತಿಲ್ಲ. ನಮ್ಮ ಬಾಂಧವ್ಯ ಎಷ್ಟು ಬಲವಾಗಿತ್ತೆಂದರೆ ಕೊವಿಡ್ ಲಸಿಕೆಗಳನ್ನು ಭಾರತ ಮೊತ್ತಮೊದಲು ಕಳಿಸಿದ್ದು ಅಫ್ಘಾನಿಸ್ತಾನಕ್ಕೇ. ಇವಿಷ್ಟನ್ನೂ ಈಗ ಸ್ಮರಿಸಿಕೊಳ್ಳುತ್ತಿರುವುದೇಕೆಂದರೆ ಅಲ್ಲಿನ ಜನರ ಜೀವನ ಉನ್ನತ ಸ್ತರಕ್ಕೇರಲಾರಂಭಿಸಿತ್ತು. ತಾಲಿಬಾನಿಗಳ ಕಟ್ಟರ್ ಇಸ್ಲಾಮೀಯತೆಯ ಕಪಿಮುಷ್ಟಿಯಿಂದ ಹೊರಬಂದಿದ್ದ ಈ ಜನ ಈಗ ತಮ್ಮ ಬದುಕಿನ ಆನಂದವನ್ನು ಗುರುತಿಸಿಕೊಳ್ಳಲಾರಂಭಿಸಿದ್ದರು. ಟ್ರಂಪ್ ತನ್ನ ಸೇನೆಯನ್ನು ಮರಳಿ ಕರೆಸಿಕೊಳ್ಳುವ ಮಾತುಗಳನ್ನಾಡುತ್ತಿರುವಂತೆಯೇ ಅಫ್ಘಾನಿಸ್ತಾನಿಯರ ಕನಸುಗಳು ಚೂರುಚೂರಾಗಿಬಿಟ್ಟವು. ತಾಲಿಬಾನಿಯರ ದುಷ್ಟ ಆಡಳಿತದ ಕರಾಳ ಛಾಯೆ ಮತ್ತೊಮ್ಮೆ ವ್ಯಾಪಿಸಿಕೊಂಡಿತು!


ಟ್ರಂಪ್ ಅಧಿಕಾರ ಕಳೆದುಕೊಳ್ಳುವುದರೊಂದಿಗೆ ಈ ವಿಚಾರ ಮೂಲೆಗುಂಪಾಯ್ತು ಎಂದುಕೊಂಡರೆ ಬೈಡನ್ ಟ್ರಂಪ್ಗಿಂತ ವೇಗವಾಗಿ ಅಮೇರಿಕನ್ ಸೇನೆಯನ್ನು ಮರಳಿ ಕರೆಸಿಕೊಳ್ಳುವ ಚಟುವಟಿಕೆ ಆರಂಭಿಸಿಬಿಟ್ಟ. ಈಗ ಈ ಪ್ರಕ್ರಿಯೆಯಿಂದ ಎದ್ದೆದ್ದು ಕುಣಿಯುತ್ತಿರುವ ರಾಷ್ಟ್ರಗಳು ಎರಡೇ. ಒಂದು ಪಾಕಿಸ್ತಾನ ಮತ್ತೊಂದು ಚೀನಾ. ಇಬ್ಬರ ಉದ್ದೇಶವೂ ಬಲು ಸರಳ. ದುರ್ಬಲವಾದ ಭಯೋತ್ಪಾದನೆಗೆ ಸೂಕ್ತವಾದ, ತಮ್ಮ ಮಜರ್ಿಯಲ್ಲೇ ಬಿದ್ದಿರುವ ಅಫ್ಘಾನಿಸ್ತಾನ ಭಾರತಕ್ಕೆ ತೊಂದರೆಯುಂಟುಮಾಡಬಲ್ಲದು. ಇದು ಭಾರತದ ಕನಸುಗಳನ್ನು, ಆಕಾಂಕ್ಷೆಗಳನ್ನು ಸರ್ವನಾಶ ಮಾಡಿಬಿಡಬಲ್ಲದೆಂಬುದು ಇವರಿಗೆ ಚೆನ್ನಾಗಿ ಗೊತ್ತಿದೆ. ಅದಕ್ಕೆ ಅವರಿಬ್ಬರ ಆನಂದಕ್ಕೆ ಪಾರವೇ ಇಲ್ಲ. ಸೇನೆಯನ್ನು ಮರಳಿ ಕರೆಸಿಕೊಳ್ಳುವ ಮುನ್ನ ಟ್ರಂಪ್ ವಿಧಿಸಿದ್ದ ಶರತ್ತನ್ನು ಬೈಡನ್ ಮುಂದಿಟ್ಟಿಲ್ಲ. ಅದರರ್ಥ ಭಾರತ ವಿರೋಧಿಯಾದ ಯಾವ ಚಟುವಟಿಕೆಗಾದರೂ ತನ್ನ ನೆಲವನ್ನು ಅಫ್ಘಾನಿಸ್ತಾನ ಬಳಸಿಕೊಳ್ಳಬಹುದು ಎಂಬುದೇ ಆಗಿದ್ದರೆ ಅದು ಮದಿರೆ ಕುಡಿದ ಹುಚ್ಚು ಮಂಗನಿಗೆ ಚೇಳು ಕಡಿದಂತೆಯೇ ಸರಿ.


ಪಾಕಿಸ್ತಾನ ಮತ್ತು ತಾಲಿಬಾನಿಗಳ ನಂಟು ಹೊಸತೇನು ಅಲ್ಲ. ಅಲ್ಲಿನ ಹಕ್ಕಾನಿ ಗುಂಪು ತಾಲಿಬಾನಿಗಳ ಮೇಲೆ ಸಾಕಷ್ಟು ಪ್ರಭಾವ ಹೊಂದಿದೆ. ಡೊನಾಲ್ಡ್ ಟ್ರಂಪ್ ತಾಲಿಬಾನಿಗಳ ಜೊತೆಗೆ ಮಾತುಕತೆ ನಡೆಸಬೇಕೆಂಬ ಪ್ರಯತ್ನ ಆರಂಭಿಸಿದಾಗ ಆತ ಮೊದಲು ಮಾತನಾಡಬೇಕಾದ ಅನಿವಾರ್ಯತೆ ಒದಗಿದ್ದು ಪಾಕಿಸ್ತಾನಿಯರೊಂದಿಗೆ ಎಂಬುದೇ ಅವರೀರ್ವರ ಸಂಬಂಧದ ವ್ಯಾಪ್ತಿಯನ್ನು ತಿಳಿಸಬಲ್ಲದು. ಭಾರತ ತನ್ನ ವ್ಯಾಪ್ತಿಯನ್ನು ಅಫ್ಘಾನಿಸ್ತಾನದಲ್ಲಿ ಇಂಚಿಂಚು ಹೆಚ್ಚಿಸಿಕೊಳ್ಳುತ್ತಿರುವಂತೆ ಪಾಕಿಸ್ತಾನದ ಎದೆ ಢವಗುಟ್ಟಲಾರಂಭಿಸಿತ್ತು. ಚೀನಾ ಶ್ರೀಲಂಕಾದಲ್ಲಿ ಬಂದರು ಅಭಿವೃದ್ಧಿಗೊಳಿಸಿ ತನ್ನ ನೌಕೆಯನ್ನು ನಿಲ್ಲಿಸುತ್ತದೆ ಎಂಬ ವಿಚಾರ ನಮಗೆಷ್ಟು ಗಾಬರಿ ಹುಟ್ಟಿಸುವಂಥದ್ದೋ, ಅಫ್ಘಾನಿಸ್ತಾನದೊಂದಿಗಿನ ನಮ್ಮ ಸ್ನೇಹ ಸಂಬಂಧ ಪಾಕಿಸ್ತಾನಕ್ಕೂ ಅಷ್ಟೇ ಗಾಬರಿ ಹುಟ್ಟಿಸುವಂಥದ್ದು. ಭಾರತ ಪಾಕಿಸ್ತಾನವನ್ನು ಸೈನ್ಯದ ಮೂಲಕ ಸುತ್ತುವರೆಯುವ ಕ್ರಮ ಇದು ಎಂದು ಅದು ಭಾವಿಸುತ್ತದೆ. ಆದರೆ ಭಾರತ ಎಂದಿಗೂ ಅಫ್ಘಾನಿಸ್ತಾನವನ್ನು ಈ ದಿಕ್ಕಿನಲ್ಲಿ ಬಳಸಿಕೊಳ್ಳುವ ಪ್ರಯತ್ನ ಮಾಡಲೇ ಇಲ್ಲ. ಈಗ ಅಮೇರಿಕಾದ ಸೇನೆ ಕಾಲ್ಕೀಳುತ್ತಿರುವಂತೆ ಪಾಕಿಸ್ತಾನಕ್ಕೆ ಆನೆಬಲ ಬಂದಂತಾಗಿದೆ. ಅವರೆಷ್ಟು ದುಷ್ಟರೆಂದರೆ ಇತ್ತೀಚೆಗೆ ಪಾಕಿಸ್ತಾನೀಯನೊಬ್ಬ ಅಫ್ಘಾನಿಸ್ತಾನದಲ್ಲಿ ಭಾರತ ಕಟ್ಟುಕೊಟ್ಟಿರುವ ಅಣೆಕಟ್ಟನ್ನು ಹೊಡೆದುರುಳಿಸಲು ಪ್ರಯತ್ನಪಟ್ಟು ಸಿಕ್ಕುಬಿದ್ದಿದ್ದ. ಎಷ್ಟು ವಿಚಿತ್ರ ನೋಡಿ, ಮುಸಲ್ಮಾನರೇ ಇರುವ ರಾಷ್ಟ್ರವೊಂದಕ್ಕೆ ಹಿಂದುಗಳ ರಾಷ್ಟ್ರವೊಂದು ನೀರು ಕೊಟ್ಟರೆ, ಮತ್ತೊಂದು ಮುಸ್ಲೀಂ ರಾಷ್ಟ್ರ ಅದನ್ನು ಕಸಿಯುವ ಧಾವಂತದಲ್ಲಿದೆ. ಅಲ್ಲಾಹ್ ಯಾರನ್ನು ಮೆಚ್ಚುತ್ತಾನೆಂಬುದು ಈಗ ಬಲುದೊಡ್ಡ ಪ್ರಶ್ನೆ! ಅಮೇರಿಕಾದ ಸೇನೆ ಮರಳುವ ಪ್ರಕ್ರಿಯೆ ಆರಂಭವಾಗುವುದರೊಂದಿಗೆ ಪಾಕಿಸ್ತಾನದ ಶಕ್ತಿ ಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಲೇ ಸಾಗಿದೆ. ಕನಿಷ್ಠಪಕ್ಷ 10 ಸಾವಿರ ಜನ ಪಾಕೀ ಸೈನಿಕರು ಅಲ್ಲೀಗ ತಾಲಿಬಾನಿಗಳ ಪರವಾಗಿ ದುಡಿಯುತ್ತಿದ್ದಾರೆ. ತನ್ನ ಗಡಿಗೆ ಹೊಂದಿಕೊಂಡಂತೆ ತಾಲಿಬಾನಿಗಳು ಅಡಗಿರುವ ಸ್ಥಳದಲ್ಲಿ ಅಫ್ಘಾನಿಸ್ತಾನ ವಾಯುದಾಳಿ ನಡೆಸಿದ್ದೇ ಆದರೆ ಅಫ್ಘನ್ ಸೇನೆಯ ವಿರುದ್ಧ ಪಾಕಿಸ್ತಾನ ದಾಳಿ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಿದೆ. ಇತ್ತೀಚೆಗೆ ಲಾಂಗ್ವಾರ್ ಜರ್ನಲ್ನ ಡಿಫೆನ್ಸ್ ಆಫ್ ಡೆಮಾಕ್ರಸೀಸ್ ನಡೆಸಿದ ಸಂಶೋಧನೆಯ ಪ್ರಕಾರ ಅಫ್ಘಾನಿಸ್ತಾನದ 325 ಜಿಲ್ಲೆಗಳಲ್ಲಿ ತಾಲಿಬಾನಿಗಳ ಹಿಡಿತ 76ರಲ್ಲಿದ್ದರೆ ಅಫ್ಘನ್ ಸಕರ್ಾರದ ತಾಕತ್ತು 127ರಲ್ಲಿದೆ. ಉಳಿದ 122 ಜಿಲ್ಲೆಗಳಲ್ಲಿ ಸಮಬಲವೆನಿಸಿದರೂ ಪಾಕಿಸ್ತಾನಿಗಳ ಸಹಕಾರ ಪಡೆದುಕೊಂಡ ತಾಲಿಬಾನಿಗಳು ಈ ಭಾಗದ ಮೇಲೆ ಹಿಡಿತವನ್ನು ಸಾಧಿಸುವುದು ಅಸಾಧ್ಯವಲ್ಲ. ಇವರನ್ನು ಹಿಡಿತದಲ್ಲಿಟ್ಟುಕೊಳ್ಳಲು ಇರುವ ಅಫ್ಘಾನಿಸ್ತಾನ್ ನ್ಯಾಷನಲ್ ಡಿಫೆನ್ಸ್ ಅಂಡ್ ಸೆಕ್ಯುರಿಟಿ ಫೋರ್ಸಸ್ ಕೆಲವು ಲಕ್ಷ ಸೈನಿಕರನ್ನು ಹೊಂದಿರುವುದಾದರೂ ಸೈನ್ಯ ನಿರ್ವಹಣೆಗೆ ಮತ್ತೆ ಅಮೇರಿಕಾದಿಂದಲೇ ಹಣ ಬರಬೇಕು. ಇದಕ್ಕೆ ಪ್ರತಿಯಾಗಿ ಮತೀಯ ಆವೇಶದಿಂದ ಹುಚ್ಚಾಗಿರುವ ತಾಲಿಬಾನಿಗಳಿಗೆ ಚೀನಾದಂತಹ ರಾಷ್ಟ್ರಗಳು ಸಾಕಷ್ಟು ಹಣ ಸುರಿಯುತ್ತಿವೆ. ಸಹಜವಾಗಿಯೇ ಈ ಆವೇಶದಿಂದ ನುಗ್ಗುತ್ತಿರುವ ಈ ಮಂದಿ ಇಡಿಯ ಅಫ್ಘಾನಿಸ್ತಾನವನ್ನು ತೆಕ್ಕೆಗೆ ತೆಗೆದುಕೊಂಡುಬಿಡುತ್ತಾರೆ. ಮುಂದೆ ಲಷ್ಕರ್-ಎ-ತೈಯ್ಬಾ, ಜೈಶ್-ಎ-ಮೊಹಮ್ಮದ್ನಂತಹ ಉಗ್ರಗಾಮಿ ಸಂಘಟನೆಗಳಿಗೆ ಇದು ನಿಸ್ಸಂಶಯವಾಗಿ ಶಕ್ತಿ ಮತ್ತು ಪ್ರೇರಣೆಯಾಗಲಿದೆ. ನಾವು ಅದರ ಫಲವನ್ನು ಉಣ್ಣಬೇಕಾಗುವುದು ನಿಶ್ಚಿತ. ಹೀಗಾಗಿಯೇ ಭಾರತ ಎಚ್ಚರಿಕೆಯ ಹೆಜ್ಜೆಯನ್ನು ಇಡುತ್ತಿದೆ. ಕಳೆದ ತಿಂಗಳು ಭಾರತ ತಾಲಿಬಾನಿನ ಪ್ರಮುಖರೊಂದಿಗೆ ಮಾತುಕತೆ ಆರಂಭಿಸಿ ತನಗೆ ಬೇಕಾದ್ದನ್ನು ಪಡೆದುಕೊಳ್ಳುವ ಆಲೋಚನೆಯನ್ನು ಮಾಡಿಬಿಟ್ಟಿದೆ. ತಾಲಿಬಾನಿ ಮುಖಂಡರು ಹಿಂದೆಂದಿಗಿಂತಲೂ ಎಚ್ಚರಿಕೆಯಿಂದ ಈಗ ವ್ಯವಹರಿಸುತ್ತಿದ್ದಾರೆ. ಇತ್ತ ಕಾಶ್ಮೀರದ 370ನೇ ವಿಧಿ ರದ್ದುಗೊಳಿಸಿದ ಪ್ರಕ್ರಿಯೆಯನ್ನು ಭಾರತದ ಆಂತರಿಕ ವಿಚಾರವೆಂದಿದ್ದಾರಲ್ಲದೇ ಉಯ್ಘುರ್ ಮುಸಲ್ಮಾನರ ತಗಾದೆಯನ್ನು ಚೀನಾದ ಆಂತರಿಕ ವಿಚಾರ ಎಂದು ಕರೆದಿದ್ದಾರೆ. ಇದು ಈ ಹೊತ್ತಿನಲ್ಲಿ ಅಫ್ಘಾನಿಸ್ತಾನಿ ಸಕರ್ಾರಕ್ಕೆ ಸಿಗಬಹುದಾದ ನಮ್ಮ ಸಹಕಾರವನ್ನು ತಡೆಯುವ ಉಪಾಯವಿದ್ದರೂ ಇರಬಹುದು. ಇದರ ಹಿಂದು-ಹಿಂದೆಯೇ ಅಫ್ಘನ್ ಸಕರ್ಾರದ ಮಂತ್ರಿಯೊಬ್ಬರು ತಾಲಿಬಾನಿಗಳನ್ನೆದುರಿಸುವಲ್ಲಿ ಭಾರತದ ಸಹಕಾರವನ್ನು ಕೋರಿರುವುದಲ್ಲದೇ ಭಾರತಕ್ಕೆ ಬಂದು ಈ ಕುರಿತಂತೆ ಮಾತುಕತೆ ನಡೆಸುವ ಉತ್ಸುಕತೆಯಲ್ಲೂ ಇದ್ದಾರೆ. ನಮ್ಮ ವಿದೇಶಾಂಗ ನೀತಿಗೆ ಈಗಿನದ್ದು ಬಲುದೊಡ್ಡ ಸವಾಲು. ಅಲ್ಲಿನ ಸಕರ್ಾರಕ್ಕೆ ಸಹಕಾರ ಮಾಡಿದರೆ ಭವಿಷ್ಯದುದ್ದಕ್ಕೂ ಭಯೋತ್ಪಾದನೆಯ ಭೀತಿ. ಸಹಕರಿಸದಿದ್ದರೆ ನ್ಯಾಯದ ಪರವಾಗಿ ನಿಂತಿಲ್ಲವೆಂಬ ಕೊರಗು. ಬಲು ಎಚ್ಚರಿಕೆಯಿಂದ ಹೆಜ್ಜೆಯಿಡುತ್ತಿರುವ ಮೋದಿ ಸಕರ್ಾರ ಈ ಅವಧಿಯಲ್ಲೇ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಹುಡು-ಹುಡುಕಿ ಕೊಲ್ಲುತ್ತಿದೆ. ಕಳೆದ ಹದಿನೈದಿಪ್ಪತ್ತು ದಿನಗಳಲ್ಲಿಯಂತೂ ಕೆಲವು ಪ್ರಮುಖ ಭಯೋತ್ಪಾದಕ ನಾಯಕರೂ ಸೇರಿದಂತೆ ಅನೇಕರನ್ನು ಯಮಪುರಿಗಟ್ಟಿದೆ.


ಅಮೇರಿಕಾಕ್ಕೆ ಅಂದುಕೊಂಡಷ್ಟು ಸುಲಭವಿಲ್ಲ. ಮಧ್ಯಪ್ರಾಚ್ಯದಲ್ಲಿ ತನ್ನ ಮೂಗುತೂರಿಸುವಿಕೆಯನ್ನು ಕಡಿಮೆ ಮಾಡಿಕೊಂಡು ಅದೀಗ ಇಂಡೊ-ಪೆಸಿಫಿಕ್ ಪ್ರದೇಶಗಳತ್ತ ತಿರುಗಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾ ಬೆಳೆಯುತ್ತಿರುವ ಪರಿಯನ್ನು ನಿಯಂತ್ರಿಸಬೇಕಾಗಿರುವುದು ಸದ್ಯಕ್ಕೆ ಅದರ ಅಗತ್ಯ. ಅದಾಗಲೇ ಚೀನಾ ತನ್ನ ನೌಕಾಸೈನ್ಯವನ್ನು ವಿಸ್ತರಿಸಿಕೊಂಡಿರುವ ರೀತಿಯಿಂದಾಗಿ ಅದೀಗ ಅಮೇರಿಕಾವನ್ನೇ ಹಿಂದಿಕ್ಕಿ ಜಗತ್ತಿನ ನಂಬರ್ ಒನ್ ಆಗಿ ಬೆಳೆದಿದೆ. ದಕ್ಷಿಣ ಚೀನಾ ಸಮುದ್ರದ ಮೂಲಕ ಅದು ನಡೆಸುತ್ತಿರುವ ವ್ಯಾಪಾರ-ವಹಿವಾಟು ಅಮೇರಿಕಾವನ್ನು ಆತಂಕಕ್ಕೆ ಬೀಳಿಸುವಷ್ಟು. ಭಾರತವನ್ನು ತುಳಿಯುವ ಪ್ರಯತ್ನದಲ್ಲಿ ಅಮೇರಿಕಾ ಮುಂದಡಿಯಿಡ ಹೋದರೆ ತನ್ನ ಕಾಲಮೇಲೆ ಕುಠಾರಾಘಾತ ಮಾಡಿಕೊಳ್ಳುವುದು ನಿಶ್ಚಿತ. ಹೀಗಾಗಿ ಸದ್ಯಕ್ಕೆ ತೀರಾ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲವಾದರೂ ನಮ್ಮ ಎಚ್ಚರಿಕೆಯಲ್ಲಿ ನಾವಿದ್ದು ಭಾರತ ಮತ್ತು ಪಾಕಿಸ್ತಾನಗಳ ನಡುವೆ ಪಾಕ್ ಆಕ್ರಮಿತ ಕಾಶ್ಮೀರವೆಂಬ ಸ್ವಾಯತ್ತ ರಾಷ್ಟ್ರವೊಂದು ನಿಮರ್ಾಣವಾಗುವಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ. ಏನಾಗುವುದೆಂದು ಕಾದು ನೋಡೋಣ..

ಆಫ್ರಿಕಾದಲ್ಲಿ ಭಾರತೀಯರ ಲೂಟಿ; ನಮಗೇನು ಪಾಠ?

ಆಫ್ರಿಕಾದಲ್ಲಿ ಭಾರತೀಯರ ಲೂಟಿ; ನಮಗೇನು ಪಾಠ?


ದಕ್ಷಿಣ ಆಫ್ರಿಕಾದಲ್ಲಿ ಭಾರತೀಯರ ವಿರುದ್ಧ ಬಲುದೊಡ್ಡ ದಂಗೆಯೇ ನಡೆಯುತ್ತಿದೆ. ಕಳೆದೆರಡು ದಿನಗಳ ಹಿಂದಿನ ವರದಿಯ ಪ್ರಕಾರ ನೂರಕ್ಕೂ ಹೆಚ್ಚು ಭಾರತೀಯರು ಈ ದಂಗೆಕೋರರಿಗೆ ಆಹುತಿಯಾಗಿದ್ದಾರೆ. ಅಂಗಡಿಗಳು ಲೂಟಿಯಾಗಿವೆ. ಭಾರತೀಯರ ವಿರುದ್ಧದ ಜನಾಂಗೀಯ ದ್ವೇಷ ಹಿಂದೆಂದಿಗಿಂತಲೂ ಹೆಚ್ಚು ಅಲ್ಲೀಗ ಗೋಚರವಾಗುತ್ತಿದೆ. ಇದ್ದಕ್ಕಿದ್ದಂತೆ ಏನಾಯ್ತು? ಬ್ರಿಟೀಷರ ಕಾಲದಲ್ಲಿಯೇ ಕಬ್ಬಿನ ಗದ್ದೆಗಳಲ್ಲಿ ಕೆಲಸ ಮಾಡಲು ದಕ್ಷಿಣ ಆಫ್ರಿಕಾಕ್ಕೆ ಹೋದವರು ಇಲ್ಲಿನ ಭಾರತೀಯರು. ಬಹುತೇಕರಿಗೆ ತಾವು ದಕ್ಷಿಣ ಆಫ್ರಿಕಾಕ್ಕೆ ಹೋಗುತ್ತಿದ್ದೇವೆ ಎಂಬುದೂ ಗೊತ್ತಿರಲಿಲ್ಲ. ಬಡತನದಿಂದ ಬೆಂದು ಬಸವಳಿದಿದ್ದ ಅವರು ಹೊಟ್ಟೆ ತುಂಬಿಸಿಕೊಳ್ಳಲೊಂದು ಉದ್ಯೋಗ ಸಿಗುವುದೆಂದು ಭಾವಿಸಿ ಹಡಗು ಹತ್ತಿದರು. ಹಡಗು ದಡ ಸೇರಿದ್ದು ದಕ್ಷಿಣ ಆಫ್ರಿಕಾದ್ದು. ಮರಳಿ ಭಾರತಕ್ಕೆ ಬರುವ ಭರವಸೆಯನ್ನೇ ಅವರು ಬಿಟ್ಟುಬಿಟ್ಟರು. ಗಬ್ಬಿನ ಗದ್ದೆಗಳಲ್ಲಿ ಕೆಲಸ ಮಾಡುವಾಗ ಹೆದರಿಕೆಯಾಗುತ್ತಿತ್ತು. ಒಬ್ಬೊಬ್ಬರೇ ಕಣ್ಣೀರಿಡುತ್ತಿದ್ದರು. ಆದರೇನು? ಬದುಕಲೇಬೇಕಲ್ಲ. ಇಂಥವರ ರಕ್ಷಣೆಗೆ ಸದಾ ಆಂಜನೇಯ ಬರುತ್ತಾನೆ ಎಂಬುದು ಅವರ ಮನಸ್ಸಿನ ಭಾವನೆ. ಹೀಗಾಗಿಯೇ ಮಾರುತಿಯನ್ನು ಬಲವಾಗಿ ಹಿಡಿದುಕೊಂಡರು. ಎಲ್ಲವನ್ನೂ ಕಳೆದುಕೊಂಡ ನಂತರವೂ ಮಾರುತಿಯೊಬ್ಬ ಉಳಿದುಬಿಟ್ಟ. ಹೀಗಾಗಿಯೇ ಇಂದೂ ದಕ್ಷಿಣ ಆಫ್ರಿಕಾದಲ್ಲಿ ಆಂಜನೇಯನ ಎತ್ತರೆತ್ತರದ ವಿಗ್ರಹಗಳು ಮತ್ತು ಅಪಾರ ಭಕ್ತಸಮೂಹ ಕಾಣಸಿಗುತ್ತದೆ. ಭಾರತದಲ್ಲಿ ಹಿಂದೂಗಳಲ್ಲೇ ಕೆಲವರು ಧರ್ಮ ಕಳೆದುಕೊಂಡು ಚಚರ್ಿಗೆ ಶರಣಾಗತರಾಗಿರುವಾಗ ದಕ್ಷಿಣ ಆಫ್ರಿಕಾದಲ್ಲಿ ಹಿಂದೂಗಳಾಗಿ ಉಳಿದಿರುವುದು ಸಾಹಸವೇ ಸರಿ. ಹಾಗಂತ ಅವರು ಅಲ್ಲಿನ ನಿವಾಸಿಗಳಿಂದ ಪ್ರತ್ಯೇಕವಾಗಿ ಉಳಿಯಲಿಲ್ಲ. ಅಲ್ಲಿಯೇ ಮನೆ ಕಟ್ಟಿಕೊಂಡರು, ಪರಿವಾರ ನಿಮರ್ಾಣವಾಯ್ತು, ದಕ್ಷಿಣ ಆಫ್ರಿಕಾದೊಂದಿಗೆ ಏಕರಸವಾಗಿ ಬೆರೆತುಬಿಟ್ಟರೂ ಕೂಡ. ಇಂದು ಆಫ್ರಿಕಾದ ಬೆಳವಣಿಗೆಯಲ್ಲಿ ಸ್ಥಳೀಯ ಭಾರತೀಯರ ಪಾತ್ರ ಬಲುದೊಡ್ಡದಾಗಿದೆ. ಒಂದು ಹಂತದಲ್ಲಂತೂ ಬ್ರಿಟೀಷರು ನೀಡುತ್ತಿದ್ದ ಕಿರುಕುಳವನ್ನು ಸ್ಥಳೀಯರೊಂದಿಗೆ ಭಾರತೀಯರೂ ವಿರೋಧಿಸಲು ನಿಂತಿದ್ದರು. ಮೋಹನ್ದಾಸ್ ಕರಮಚಂದ್ ಗಾಂಧಿ ಸಾಮಾನ್ಯವಾದ ದಾವೆಯೊಂದನ್ನು ಹೂಡಲು ಹೋಗಿ ಅಲ್ಲಿನ ಜನಸಮೂಹದ ಪ್ರತಿನಿಧಿಯಾಗಿ ನಿಂತು ಹೋರಾಟ ಮಾಡಿದ್ದು ಈಗ ಇತಿಹಾಸ. ಹಾಗೆ ನೋಡಿದರೆ ಮೋಹನದಾಸ ಕರಮಚಂದ ಗಾಂಧಿ ಮಹಾತ್ಮಾ ಆಗುವುದರಲ್ಲಿ ದಕ್ಷಿಣ ಆಫ್ರಿಕಾದ ಪಾಲು ಬಲುದೊಡ್ಡದ್ದು. ಕರಿಯರ ಹೋರಾಟದ ನೇತೃತ್ವ ವಹಿಸಿದ್ದ ನೆಲ್ಸನ್ ಮಂಡೇಲಾಗೂ ಭಾರತದ ಸಹಕಾರವೇನೂ ಕಡಿಮೆಯಿರಲಿಲ್ಲ. ಒಂದೇ ಮಾತಿನಲ್ಲಿ ಹೇಳಬೇಕೆಂದರೆ ಭಾರತೀಯರು ಎಂದಿಗೂ ಆಫ್ರಿಕಾಕ್ಕೆ ಹೊರಗಿನವರಾಗಲೇ ಇಲ್ಲ. ಅಚ್ಚರಿ ಎಂದರೆ ದಕ್ಷಿಣ ಆಫ್ರಿಕಾದಲ್ಲಿರುವ ಬಹುತೇಕ ಭಾರತೀಯರು ಭಾರತವನ್ನು ಆರಾಧಿಸುತ್ತಾರೆ ನಿಜ. ಆದರೆ ಈ ದೇಶವನ್ನು ನೋಡಿಯೇ ಇಲ್ಲ.


ಸಹಜವಾಗಿಯೇ ಹೊರ ದೇಶದಲ್ಲಿರುವ ಭಾರತೀಯರು ಮೈಮುರಿದು ದುಡಿಯುತ್ತಾರೆ. ಇತರರಿಗಿಂತ ಹೆಚ್ಚು ಕೆಲಸ ಮಾಡುತ್ತಾರೆ ಹೀಗಾಗಿಯೇ ಅವರು ಸಾಕಷ್ಟು ಹಣಗಳಿಸಿ ಸ್ಥಿತಿವಂತರೂ ಆಗಿರುತ್ತಾರೆ. ಇಂಗ್ಲೆಂಡು ಅಮೇರಿಕಾ ಮತ್ತಿತರ ಪಶ್ಚಿಮ ದೇಶಗಳಲ್ಲಿ ಹೇಗೆ ಭಾರತೀಯರು ಸ್ಥಳೀಯರಿಗಿಂತ ಸಮೃದ್ಧರಾಗಿದ್ದಾರೋ ದಕ್ಷಿಣ ಆಫ್ರಿಕಾದಲ್ಲೂ ಭಾರತೀಯರ ಸಮೃದ್ಧಿ ಕಣ್ಣು ಕುಕ್ಕುವಂಥದ್ದೆ. ಡರ್ಬನ್, ಜೋಹಾನ್ಸ್ಬಗರ್್ಗಳಂತಹ ನಗರಗಳಲ್ಲಿ ಯಾವ ದೊಡ್ಡ ಅಂಗಡಿಯನ್ನು ಪ್ರವೇಶಿಸಿದರೂ ಅಲ್ಲಿ ಭಾರತೀಯರೇ ಕಂಡು ಬರುತ್ತಾರೆ. ಇದು ಸ್ಥಳೀಯರಿಗೆ ಸುದೀರ್ಘಕಾಲದ ಎದೆನೋವು. ಅದಕ್ಕೆ ಸರಿಯಾಗಿ 1993ರಲ್ಲಿ ಆಫ್ರಿಕಾಕ್ಕೆ ಸ್ಥಳಾಂತರವಾದ ಉತ್ತರ ಪ್ರದೇಶದ ಸಹರನ್ಪುರದ ಗುಪ್ತ ಸಹೋದರರು ಇಪ್ಪತ್ತೇ ವರ್ಷಗಳಲ್ಲಿ ಕಂಡು ಕೇಳರಿಯದಷ್ಟು ಸಂಪತ್ತನ್ನು ಗಳಿಸಿ ಆಫ್ರಿಕನ್ನರ ಕೆಂಗಣ್ಣಿಗೆ ಗುರಿಯಾಗಿದ್ದರು. ಅಜಯ್, ಅತುಲ್ ಮತ್ತು ರಾಜೇಶ್ ಎಂಬ ಈ ಗುಪ್ತ ಸಹೋದರರು ತಮ್ಮ ಬೇರೆ ಬೇರೆ ಪರಿವಾರದ ಪ್ರಮುಖರನ್ನು ಸೇರಿಕೊಂಡು, ಆಫ್ರಿಕಾದ ರಾಜಕಾರಣಿಗಳನ್ನು ಬುಟ್ಟಿಗೆ ಹಾಕಿಕೊಂಡು, ಸಂಪತ್ತು ಕ್ರೋಢೀಕರಿಸುವ ಕೆಲಸಕ್ಕೆ ಕೈ ಹಾಕಿದರು. ಸಹರಾ ಕಂಪ್ಯೂಟಸರ್್ನಿಂದ ಆರಂಭವಾದ ಅವರ ಪರಿವಾರ ವ್ಯಾಪಾರ ಮುಂದೆ ಗಣಿ, ಮಾಧ್ಯಮ ಮತ್ತಿತರ ಕ್ಷೇತ್ರಗಳಿಗೆ ವಿಸ್ತಾರಗೊಂಡಿತು. ಅವರ ಇಂದಿನ ಆಸ್ತಿ ಸರಿಸುಮಾರು 10 ಬಿಲಿಯನ್ ಡಾಲರ್ಗಳಷ್ಟು. ದಕ್ಷಿಣ ಆಫ್ರಿಕಾದ ಅಧ್ಯಕ್ಷನಾಗಿದ್ದ ಜ್ಯಾಕೋಬ್ ಜುಮಾ ಇವರೊಂದಿಗೆ ಬಲವಾಗಿ ನಿಂತಿದ್ದ. ಹೀಗಾಗಿಯೇ ವ್ಯಾಪಾರ-ವಹಿವಾಟಿನಲ್ಲಷ್ಟೇ ಅಲ್ಲದೇ ರಾಜಕೀಯ ನಿರ್ಣಯಗಳಲ್ಲೂ ಗುಪ್ತ ಸಹೋದರರ ಬಲುದೊಡ್ಡ ಪಾಲಿತ್ತು. ದಕ್ಷಿಣ ಆಫ್ರಿಕಾದಲ್ಲಿ ಮೊದಲೆಲ್ಲ ಭಾರತವೆಂದರೆ ಗಾಂಧೀಜಿ ಎನ್ನುತ್ತಿದ್ದರಲ್ಲ, ಕಳೆದ ಒಂದು ದಶಕದಿಂದೀಚೆಗೆ ಭಾರತವೆಂದರೆ ಗುಪ್ತ ಸಹೋದರರು ಎನ್ನಲಾಗುತ್ತಿತ್ತು. ಒಂದೇ ಬೇಸರದ ಸಂಗತಿ ಎಂದರೆ ಗಾಂಧೀಜಿಯವರ ಹೆಸರನ್ನು ಹೇಳುವಾಗ ಗೌರವದಿಂದ ಭಾರತದ ಕಡೆ ನೋಡುತ್ತಿದ್ದ ಜನ ಗುಪ್ತ ಎನ್ನುವ ಹೆಸರು ಬಂದಾಗ ಅಸಹ್ಯದಿಂದ ಕೆಕ್ಕರಿಸಿ ನೋಡುತ್ತಿದ್ದರು ಅಷ್ಟೇ!


ಎಲ್ಲವೂ ಚೆನ್ನಾಗಿಯೇ ನಡೆದಿತ್ತು. ಆದರೆ ಜ್ಯಾಕೋಬ್ ಜುಮಾನ ಈ ಭ್ರಷ್ಟಾಚಾರದ ಪ್ರಕರಣಗಳು ಕೋಟರ್ಿನ ಮೆಟ್ಟಿಲೇರಿದಾಗ ಆತ ವಿಚಾರಣೆಯಿಂದ ತಪ್ಪಿಸಿಕೊಂಡು ತಿರುಗಾಡಲಾರಂಭಿಸಿದ. ತನ್ನ ಪಕ್ಷವೇ ವಿರೋಧಿಸಿದಾಗ ಅನಿವಾರ್ಯವಾಗಿ ರಾಜಿನಾಮೆ ಕೊಟ್ಟನಾದರೂ ನ್ಯಾಯಾಲಯದ ಎದುರು ನಿಂತುಕೊಳ್ಳಲು ಒಪ್ಪಲಿಲ್ಲ. ದಕ್ಷಿಣ ಆಫ್ರಿಕಾದ ಜುಲು ಎಂಬ ಬಲುದೊಡ್ಡ ಪಂಗಡಕ್ಕೆ ಸೇರಿದ ಆತ ಸಹಜವಾಗಿಯೇ ಇದನ್ನು ಟ್ರಂಪ್ಕಾಡರ್್ ಆಗಿ ಬಳಸುತ್ತಿದ್ದ. ಹೇಗೆ ಭಾರತದಲ್ಲಿ ಜಾತಿ ಕೆಲಸ ಮಾಡುತ್ತದೋ, ಅದರ ಆಧಾರದ ಮೇಲೆ ಮನಸ್ಸಿಗೆ ಬಂದಿದ್ದೆಲ್ಲವನ್ನೂ ಮಾಡಬಹುದೋ, ಹಾಗೆಯೇ ದಕ್ಷಿಣ ಆಫ್ರಿಕಾದಲ್ಲಿ ಕೂಡ. ಕಳೆದ ಕೆಲವು ದಿನಗಳ ಹಿಂದೆ ಆತ ಪದೇ ಪದೇ ವಿಚಾರಣೆಗೆ ತಪ್ಪಿಸಿಕೊಂಡು ನ್ಯಾಯಾಲಯದ ಆಜ್ಞೆಯನ್ನು ಉಲ್ಲಂಘಿಸುತ್ತಿರುವುದರಿಂದ ನ್ಯಾಯಾಲಯ ಅವನಿಗೆ 18 ತಿಂಗಳ ಶಿಕ್ಷೆ ಘೋಷಿಸಿತು. ಈಗ ಆತನನ್ನು ಬಂಧಿಸಿ ಜೈಲಿಗೆ ತಳ್ಳಲೇಬೇಕಾಯ್ತು. ಮೊದಲೆಲ್ಲ ತನ್ನ ಬಂಧನಕ್ಕೆ ಯಾರಾದರೂ ಬಂದರೆ ದಕ್ಷಿಣ ಆಫ್ರಿಕಾ ಹೊತ್ತಿ ಉರಿಯುತ್ತದೆ ಎನ್ನುತ್ತಿದ್ದ ಆತ ಕೊನೆಗೂ ಪೊಲೀಸರಿಗೆ ಶರಣಾಗಬೇಕಾಗಿ ಬಂತು. ಆದರೆ ಆತ ಶರಣಾಗುವುದರೊಂದಿಗೆ ಇಡಿಯ ಜುಲು ಜನಾಂಗ ಬಲವಾಗಿ ಎದ್ದುನಿಂತಿತು. ಜುಮಾನ ಮಗ ತಂದೆ ಜೈಲಿಗೆ ಹೋದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಉಗ್ರ ಭಾಷೆಯಲ್ಲಿಯೇ ಟ್ವಿಟರ್ ಸಂದೇಶ ಹಂಚಿಕೊಂಡ. ಟ್ವಿಟರ್ ಅವನ ಖಾತೆಯನ್ನು ಪ್ರತಿಬಂಧಿಸಿತಾದರೂ ಸಂದೇಶ ಜನರಿಗೆ ಸಿಕ್ಕಾಗಿತ್ತು. ಜುಲು ಜನ ಬೀದಿಗಿಳಿದರು. ತಮ್ಮ ಹಳೆಯ ದ್ವೇಷವನ್ನೆಲ್ಲ ತೀರಿಸಿಕೊಳ್ಳಲು ಅವರಿಗೆ ಇದಕ್ಕಿಂತ ಒಳ್ಳೆಯ ಅವಕಾಶವಿರಲಿಲ್ಲ. ರಸ್ತೆಯಲ್ಲಿ ಓಡಾಡುತ್ತಿದ್ದ ದೊಡ್ಡ ದೊಡ್ಡ ಟ್ರಂಕುಗಳಿಗೆ ಬೆಂಕಿ ಹಚ್ಚಿದರು. ವಾಸ್ತವವಾಗಿ ಅವರಿಗೆ ಕೋಪವಿದ್ದುದ್ದು ಮಾಲ್ಡೀವ್ಸ್ನಿಂದ ಬರುವ ಲಾರಿ ಚಾಲಕರುಗಳ ಮೇಲೆ. ತಮ್ಮ ಅನ್ನ ಕಸಿಯುವ ಈ ಜನಕ್ಕೆ ಬುದ್ಧಿ ಕಲಿಸಬೇಕೆಂಬ ಅವರ ಹಠ ಆಕ್ರೋಶವಾಗಿ ಟ್ರಕ್ಕುಗಳ ಮೇಲೆ ಬೆಂಕಿಯಾಗಿ ಬಿದ್ದಿತ್ತು. ಸಹಜವಾಗಿಯೇ ಅವರ ದೃಷ್ಟಿ ತಿರುಗಿದ್ದು ಸಂಪದ್ಭರಿತ ಭಾರತೀಯರ ಮೇಲೆ. ದೊಡ್ಡ ದೊಡ್ಡ ಅಂಗಡಿಗಳ ಮೇಲೆ ದಾಳಿ ಮಾಡಿದ ಈ ಜನ ಒಂದೂ ವಸ್ತು ಉಳಿಸದಂತೆ ಅಂಗಡಿಗಳನ್ನು ಖಾಲಿ ಮಾಡಿದರು. ಶೋಕೇಸ್ಗಳನ್ನು ಒಡೆದು ಬಿಸಾಡಿದರು. ತೃಪ್ತರಾಗದೇ ಬೆಂಕಿಯನ್ನೂ ಹಚ್ಚಿದರು. ಟ್ವಿಟರ್ನಲ್ಲಿ ಇವರ ಯುದ್ಧವೇ ನಡೆದುಹೋಯ್ತು. ಭಾರತೀಯರು ತಮ್ಮ ಮೂಲಸ್ಥಾನಕ್ಕೆ ಮರಳಿದರೆ ಒಳಿತು ಎಂದು ಎಚ್ಚರಿಕೆ ಕೊಡುವ ಸಂದೇಶಗಳು ಗುಪ್ತ ಸಹೋದರರ ಚಿತ್ರಗಳೊಂದಿಗೆ ಹಂಚಿಕೊಳ್ಳಲ್ಪಟ್ಟವು. ಅನೇಕ ಕಡೆಗಳಲ್ಲಿ ದಂಗೆಕೋರರು ಪೊಲೀಸರಿಗಿಂತ ಬಲುದೊಡ್ಡ ಸಂಖ್ಯೆಯಲ್ಲಿದ್ದುದರಿಂದ ಪೊಲೀಸರು ಕೈಚೆಲ್ಲಿ ಕುಳಿತುಕೊಳ್ಳಬೇಕಾಯ್ತು. ಇನ್ನೂ ಕೆಲವು ಕಡೆಗಳಲ್ಲಿ ಈ ಅವಕಾಶವನ್ನು ಪೊಲೀಸರು ಬಳಸಿಕೊಂಡು ಲೂಟಿ ಮಾಡಿಬಿಟ್ಟರು. ಕೆಲವು ದಿನಗಳ ಕಾಲ ಈ ದೌರ್ಜನ್ಯದ ಅಟ್ಟಹಾಸವನ್ನು ಗಮನಿಸಿದ ಭಾರತೀಯರು ತಮ್ಮದ್ದೇ ಆದ ಪುಟ್ಟ ಸೇನೆಯೊಂದನ್ನು ಕಟ್ಟಿಕೊಂಡು ಪ್ರತಿಭಟನೆಗೆ ನಿಂತುಬಿಟ್ಟರು. ಶಸ್ತ್ರಗಳನ್ನು ಹಿಡಿದು ತಮ್ಮ ಅಂಗಡಿಗಳನ್ನೂ ಜನರನ್ನೂ ರಕ್ಷಿಸಿಕೊಳ್ಳುವ ಪ್ರಯತ್ನ ಮಾಡುವುದಾಗಿ ಘೋಷಿಸಿದರು. ಆನಂತರವೇ ಸ್ವಲ್ಪ ದಂಗೆ ಹತೋಟಿಗೆ ಬಂದಿತೆನಿಸಿತು.


ಆದರೆ ಈಗಿರುವ ಪ್ರಶ್ನೆ ಅವರು ಭಾರತೀಯರನ್ನೇ ಗುರಿಯಾಗಿಸಿಕೊಳ್ಳಲು ಕಾರಣವೇನು? ನಿಮಗೆ ನೆನಪಿರುವುದಾದರೆ ಫಿಜಿ ದ್ವೀಪದಲ್ಲಿ ಕೆಲವು ವರ್ಷಗಳ ಹಿಂದೆ ಭಾರತೀಯರ ವಿರುದ್ಧ ಇದೇ ರೀತಿಯ ಘಟನೆಗಳು ನಡೆದಿದ್ದವು. ನರಹಂತಕ ಈದೀ ಅಮೀನ್ ಉಗಾಂಡದಿಂದ ಭಾರತೀಯರನ್ನು ಈ ರೀತಿಯೇ ಓಡಿಸಿದ್ದು ನಿಮಗೆ ನೆನಪಿರಬಹದು. ಈಗ ಈ ಘಟನೆ. ಹೀಗೇಕೆ? ಎಂಬ ಪ್ರಶ್ನೆಗೆ ಉತ್ತರ ಹುಡುಕುವುದು ಬಲು ಕಷ್ಟವೇನೂ ಅಲ್ಲ. ಮೊದಲನೆಯದ್ದು, ಜನಾಂಗ ದ್ವೇಷ ದೊಡ್ಡ ಸಂಖ್ಯೆಯ ಜನರ ಸಂಘಟನೆಗೆ ಅವಕಾಶ ಮಾಡಿಕೊಡುತ್ತದೆ. ಅದರಲ್ಲೂ ದ್ವೇಷಿಸಬೇಕಾಗಿರುವವರ ಸಂಖ್ಯೆ ಚಿಕ್ಕದ್ದಾಗಿಬಿಟ್ಟಿದ್ದರಂತೂ ಗೆಲುವು ಬಲು ಸುಲಭ. ಇತ್ತೀಚೆಗೆ ಬ್ರಾಹ್ಮಣ್ಯದ ವಿಚಾರದಲ್ಲಿ ಜನರನ್ನು ಭಡಕಾಯಿಸುವ ಪ್ರಯತ್ನವಾಯ್ತಲ್ಲ, ಅದು ಇದಕ್ಕೆ ಸಣ್ಣ ಉದಾಹರಣೆಯಷ್ಟೇ. ಬ್ರಾಹ್ಮಣರ ಸಂಖ್ಯೆ ಚಿಕ್ಕದ್ದಿದೆ. ಅವರ ದ್ವೇಷಿಸುವ ಭರದಲ್ಲಿ ದೊಡ್ಡ ಸಮೂಹವೊಂದರ ನಿಮರ್ಾಣ ಮಾಡಿಕೊಳ್ಳಬಹುದು ಎಂಬ ಪ್ರಯತ್ನ ಅದು. ಜಗತ್ತಿನಾದ್ಯಂತ ಭಾರತೀಯರು ಸಣ್ಣ ಸಂಖ್ಯೆಯಲ್ಲಿದ್ದು ಸಹಜವಾಗಿಯೇ ಸುಲಭದ ತುತ್ತಾಗುವ ಅವಕಾಶವಿದೆ. ಎರಡನೆಯದಾಗಿ, ಈ ರೀತಿ ಆಯ್ಕೆ ಮಾಡಿಕೊಳ್ಳುವ ಜನಾಂಗ ಎಲ್ಲರಿಗೂ ಗೊತ್ತಿರುವಂಥದ್ದಾದರೆ ಸ್ವಲ್ಪ ಹೆಚ್ಚು ಶಕ್ತಿ ಬರುತ್ತದೆ. ಬಲಾಢ್ಯವಾಗಿರುವ ಫ್ರಾನ್ಸ್, ಜರ್ಮನಿಗಳಂತಹ ರಾಷ್ಟ್ರಗಳ ಜನರನ್ನು ಮುಟ್ಟುವುದು ಕಷ್ಟ. ತೀರಾ ಜನಕ್ಕೆ ಪರಿಚಯವೇ ಇಲ್ಲದ ಬಾಂಗ್ಲಾದೇಶದಂತಹ ಜನರನ್ನು ಬಡಿದರೆ ಉಪಯೋಗವಿಲ್ಲ. ಆದರೆ ಹೆಚ್ಚು-ಕಡಿಮೆ ಎಲ್ಲರಿಗೂ ಪರಿಚಯವಿರುವ, ಆದರೆ ಪೂರ್ಣಪ್ರಮಾಣದಲ್ಲಿ ಏನೂ ಗೊತ್ತಿಲ್ಲದಿರುವ ಭಾರತೀಯ ಜನಾಂಗವನ್ನು ಅಡ್ಡ ಹಾಕಿಕೊಂಡು ಬಡಿಯುವುದು ಎಲ್ಲರಿಗೂ ಸುಲಭವೇ. ಮೊದಲೆಲ್ಲ ಯಹೂದ್ಯರೊಂದಿಗೆ ಹೀಗೆ ನಡೆಯುತ್ತಿದ್ದುದು ನಿಮಗೆ ನೆನಪಿರಬೇಕು. ಇನ್ನು ಮೂರನೆಯದ್ದು ಜಗತ್ತಿನ ಪ್ರಬಲ ಶಕ್ತಿಗಳಿಗೆ ಭಾರತ ತಮ್ಮ ಸಮಸಮಕ್ಕೆ ನಿಲ್ಲುತ್ತಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಜಗತ್ತಿನ ಐದನೇ ದೊಡ್ಡ ಆಥರ್ಿಕ ಶಕ್ತಿಯಾಗಿ ಬೆಳೆದು ನಿಂತಮೇಲಂತೂ ಅನೇಕರು ಅಂಡು ಸುಟ್ಟ ಬೆಕ್ಕಿನಂತಾಗಿದ್ದಾರೆ! ಕರೋನಾದ ನೆಪದಲ್ಲಿ ವ್ಯಾಕ್ಸಿನ್ಗಳನ್ನು ಮಾರಾಟಮಾಡಿ ಲೂಟಿ ಮಾಡಬಹುದೆಂದು ಭಾವಿಸಿದ್ದ ಅನೇಕರಿಗೆ ಭಾರತವೇ ವ್ಯಾಕ್ಸಿನ್ ಉತ್ಪಾದಕ ರಾಷ್ಟ್ರವಾಗಿ ಜಗತ್ತಿಗೆ ಮಾರಾಟ ಮಾಡುತ್ತಿರುವುದನ್ನೂ ಸಹಿಸಿಕೊಳ್ಳಲಾಗುತ್ತಿಲ್ಲ. ಭಾರತ ಬಡ, ದರಿದ್ರ, ಕೃಪಣ ರಾಷ್ಟ್ರವಾಗಿ ತಮ್ಮ ಮುಂದೆ ಸದಾ ನಿಂತಿರಬೇಕೆಂದು ಅವರು ಸದಾ ಬಯಸುತ್ತಾರೆ. ಅವರ ಆಶಯಕ್ಕೆ ತಕ್ಕಂತಿಲ್ಲದೇ ಮೀರಿ ಬೆಳೆಯುತ್ತಿರುವ ಭಾರತವನ್ನು ಕಂಡ-ಕಂಡಲ್ಲಿ ಮಟ್ಟಹಾಕುವ ಯೋಚನೆ ಇದ್ದೇ ಇದೆ.


ಇದು ಆಫ್ರಿಕಾದ ಘಟನೆಗೆ ನಿಲ್ಲುವುದಿಲ್ಲ. ಜಗತ್ತಿನ ಬೇರೆ-ಬೇರೆ ಭಾಗಗಳಿಗೆ ನಿಸ್ಸಂಶಯವಾಗಿ ವಿಸ್ತಾರಗೊಳ್ಳಲಿದೆ. ಅದಕ್ಕೊಂದು ಸಣ್ಣ ಕಾರಣವೂ ಅವರಿಗೆ ಸಾಕು. ನಮ್ಮ ಸ್ವಸ್ತಿಕ್ ಗುರುತನ್ನು ಮುಂದಿಟ್ಟುಕೊಂಡು ನಾಜಿಗಳೊಂದಿಗೆ ಸಮೀಕರಿಸುವ ಪ್ರಯತ್ನ ಮಾಡಿದ್ದು ಇನ್ನೂ ಹಸಿಯಾಗಿದೆ. ಹಿಂದೂಗಳನ್ನು ಗೋಮೂತ್ರ ಕುಡಿಯುವವರೆಂದು ಹಂಗಿಸುತ್ತಾ ಒಂಟೆಮೂತ್ರ ಕುಡಿಯುವವರು ಅಪಹಾಸ್ಯ ಮಾಡುವುದನ್ನು ನಾವು ನೋಡಿದ್ದೇವೆ. ಇವೆಲ್ಲವೂ ತಯಾರಿ ಅಷ್ಟೇ. ಸಣ್ಣ-ಪುಟ್ಟ ಕಾರಣಗಳನ್ನು ಮುಂದಿಟ್ಟುಕೊಂಡು ಭಾರತೀಯರ ಅಂತಃಶಕ್ತಿಯನ್ನು ನಾಶಮಾಡುವ ಪ್ರಯತ್ನ ಖಂಡಿತವಾಗಿಯೂ ಹೆಚ್ಚಲಿದೆ.


ಈ ಕದನಗಳು ಭಾರತವನ್ನು ಬಿಡಲಾರವು. 2024ರ ಚುನಾವಣೆಗೆ ಮುನ್ನ ಅನೇಕ ದಂಗೆಗಳಿಗೆ ತಯಾರಿ ನಡೆಸಲಾಗುತ್ತದೆ. ರೈತರ ಕದನ ಒಂದು ಪ್ರಯೋಗವಷ್ಟೇ. ಇನ್ನು ಮುಂದೆ ಬ್ರಾಹ್ಮಣರ ವಿರುದ್ಧ ದಲಿತರನ್ನು ಎತ್ತಿಕಟ್ಟುವ, ಹಿಂದೂ-ಮುಸಲ್ಮಾನರನ್ನು ಬಡಿದಾಡಿಸುವ, ಉತ್ತರ ಮತ್ತು ದಕ್ಷಿಣ ಭಾರತದ ನಡುವೆ ಬೆಂಕಿ ಹಚ್ಚುವ, ದಕ್ಷಿಣದಲ್ಲಿಯೇ ಹಿಂದುತ್ವದ ವಿರೋಧಿ ಅಲೆಯನ್ನು ಸೃಷ್ಟಿಸುವ ದೊಡ್ಡ ದೊಡ್ಡ ಪ್ರಯತ್ನಗಳು ನಡೆಯಲಿವೆ. ಪ್ರತಿ ಬಾರಿಯೂ ದಂಗೆಕೋರರ ಮತ್ತು ಪೊಲೀಸರ ಕಾಳಗ ವರ್ಣರಂಜಿತವಾಗಿ ಬಿಂಬಿಸಲ್ಪಡಲಿದೆ. ಇದನ್ನೆದುರಿಸುವುದು ನಿಸ್ಸಂಶಯವಾಗಿ ಒಂದು ಸವಾಲೇ. ತಯಾರಿ ಜೋರಾಗಿಯೇ ಆಗಬೇಕಾಗಿದೆ!